bangalore
ಮದುವೆಯಾಗುವಂತೆ ಕೇಳಿದ ಪ್ರೇಯಸಿಯನ್ನು ಪೆಟ್ರೋಲ್ ಸುರಿದು ಕೊಲೆಗೈದ ಬಾಯ್ಫ್ರೆಂಡ್
ಬೆಂಗಳೂರು: ತನ್ನ ಪ್ರಿಯಕರನಲ್ಲಿ ಮದುವೆಯಾಗುವಂತೆ ಕೇಳಿದ ಯುವತಿಗೆ ಪ್ರೇಯಸನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಕೊಲೆ ಮಾಡಲು ಯತ್ನಿಸಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಗರದಲ್ಲಿ ನಡೆದಿದೆ.
ಈ ಘಟನೆ ಎರಡು ದಿನಗಳ ಹಿಂದೆ ತಡವಾಗಿ ಬೆಳಕಿಗೆ ಬಂದಿದ್ದು, ದಾನೇಶ್ವರಿ ಎಂಬ ಯುವತಿಯ ಮೇಲೆ ಶಿವಕುಮಾರ್ ಎಂಬ ಯುವಕ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಕೊಲೆ ಮಾಡಲು ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದು ಮದುವೆಯ ವಿಚಾರದಲ್ಲಿ ಪ್ರಸ್ತಾಪ ನಡೆದಿತ್ತು. ಈ ಸಂದರ್ಭ ಇಬ್ಬರ ನಡುವೆ ಗಲಾಟೆಯಾಗಿತ್ತು. ಶಿವಕುಮಾರ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ದಾನೇಶ್ವರಿ ಬಂದಿದ್ದಳು. ಈ ವೇಳೆ ಮದುವೆ ವಿಚಾರದಲ್ಲಿ ಇದ್ದ ಜಗಳ ಅತಿರೇಕಕ್ಕೇರಿತ್ತು.
ಈ ವೇಳೆ ಕೋಪಗೊಂಡ ಶಿವಕುಮಾರ್ ಬಾಟಲ್ನಲ್ಲಿ ಪೆಟ್ರೋಲ್ ತಂದು ದಾನೇಶ್ವರಿ ಮೇಲೆ ಎರಚಿ ಬೆಂಕಿ ಹಚ್ಚಿದ್ದಾನೆ.
ಗಾಯಾಳು ಯುವತಿಯನ್ನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ಚಿಕಿತ್ಸೆ ಫಲಕಾರಿಯಾಗದೆ ದಾನೇಶ್ವರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಳು.
ಈ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಶಿವಕುಮಾರ್ ವಿರುದ್ಧ IPC 302 ಮತ್ತು SC -ST ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ.
bangalore
ಶೋಭಾ ಕರಂದ್ಲಾಜೆ ಕಾರಿಗೆ ಸಿಕ್ಕಿ ಯುವಕನ ದುರ್ಮ*ರಣ..!
ಬೆಂಗಳೂರು : ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದ ಶೋಭಾ ಕರಂದ್ಲಾಜೆ ಅವರ ಕಾರಿಗೆ ಡಿಕ್ಕಿ ಹೊಡೆದು ಬೈಕ್ ಸವಾರನೊಬ್ಬ ಅಸು ನೀಗಿದ್ದಾನೆ.
ಟಿಸಿ ಪಾಳ್ಯ ನಿವಾಸಿ ಪ್ರಕಾಶ್( 35 ) ಎಂಬವರು ಅಸುನೀಗಿದ ದುರ್ದೈವಿ. ಬೆಂಗಳೂರಿನ ಕೆ.ಆರ್.ಪುರಂ ಸಮೀಪ ಈ ಅಪ*ಘಾತ ಸಂಭವಿಸಿದ್ದು, ಕೆ.ಆರ್.ಪುರಂ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ಕಾರು ನಿಲ್ಲಿಸಿದ ಕಾರಿನಿಂದ ಸಡನ್ ಆಗಿ ಬಾಗಿಲು ತೆರೆದು ಈ ದುರ್ಘಟನೆ ನಡೆದಿದೆ. ಕಾರಿನ ಡೋರ್ ತೆಗೆದಾಗ ಹಿಂಬಂದಿಯಿಂದ ಬಂದಿದ್ದ ಬೈಕ್ ಸವಾರ ಕಾರಿನ ಡೋರ್ಗೆ ತಾಗಿ ಕೆಳಗೆ ಬಿದ್ದಿದ್ದಾನೆ.
ತಲೆಗೆ ಗಂ*ಭೀರ ಗಾಯಗೊಂಡಿದ್ದ ಬೈಕ್ ಸವಾರ ಪ್ರಕಾಶ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಪ್ರಕಾಶ್ ಇಹಲೋಕ ತ್ಯಜಿಸಿದ್ದಾರೆ.
ಇದನ್ನೂ ಓದಿ : ಬೇಸಿಗೆಯ ಬಿಸಿ ತಡೆಯಲಾರದೆ 14 ಲಕ್ಷ ವೆಚ್ಚದಲ್ಲಿ ಕೂಲ್ ಹೋಮ್ ನಿರ್ಮಾಣ ಮಾಡಿದ ಯುವ ಇಂಜಿನಿಯರ್
bangalore
ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರು ದಿಢೀರ್ ಅಸ್ವ*ಸ್ಥ..!! ಆಸ್ಪತ್ರೆ ದಾಖಲು
ಬೆಂಗಳೂರು: 47 ವಿದ್ಯಾರ್ಥಿನಿಯರು ಅಸ್ವ*ಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಂಗಳೂರಿನ ಹಾಸ್ಟೆಲ್ನಲ್ಲಿ ನಡೆದಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ(BMCRI) ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವ*ಸ್ಥಗೊಂಡಿದ್ದು ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು, 28 ವಿದ್ಯಾರ್ಥಿನಿಯರಿಗೆ ಟ್ರಾಮಾ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐವರಿಗೆ ಹೆಚ್ ಬ್ಲಾಕ್ ಹಾಗೂ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ವಿದ್ಯಾರ್ಥಿಗಳು ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ಅಷ್ಟಕ್ಕೂ ವಿದ್ಯಾರ್ಥಿನಿಯರು ಅಸ್ವ*ಸ್ಥಗೊಳ್ಳಲು ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಬಿಎಂಸಿಆರ್ಐ ಮುಖ್ಯಸ್ಥ ಮತ್ತು ನಿರ್ದೇಶಕ ಡಾ.ರಮೇಶ್ ಕೃಷ್ಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕಾಲರ ಭೀತಿ ಶುರುವಾಗಿದ್ದು, ಈ ಮಧ್ಯೆ ಹಾಸ್ಟೆಲ್ ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಅಸ್ವಸ್ಥಗೊಂಡಿರುವುದು ಆತಂಕಕ್ಕೆ ಎಡೆ ಮಾಡಿದೆ.
ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿರುವುದಕ್ಕೆ ನೈಜ ಕಾರಣವೇನು ಅನ್ನೋದು ತನಿಖೆ ಬಳಿಕವಷ್ಟೇ ತಿಳಿಯಬೇಕಿದೆ.
bangalore
ಧಗಧಗನೇ ಹೊ*ತ್ತಿ ಉ*ರಿದ ಖಾಸಗಿ ಕಂಪನಿಯ ಕಟ್ಟಡ!
ಬೆಂಗಳೂರು : ಶುಕ್ರವಾರ ಮಧ್ಯಾಹ್ನ 1:50ರ ಸುಮಾರಿಗೆ ಬೆಂಗಳೂರಿನ ಆರ್.ಟಿ ನಗರದ 80 ಅಡಿ ರಸ್ತೆಯಲ್ಲಿರುವ ಮಿರಾಕಲ್ ಡ್ರಿಂಕ್ಸ್ ಕಟ್ಟಡದ ಕೆಳ ಮಹಡಿಯಲ್ಲಿ ಬೆಂ*ಕಿ ಅವಘ*ಡ ಸಂಭವಿಸಿದೆ.
ಕೂಡಲೇ ಘಟನಾ ಸ್ಥಳಕ್ಕೆ ಎರಡು ಅ*ಗ್ನಿಶಾಮಕ ವಾಹನ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಬೆಂಕಿ ಅವಘ*ಡ ಸಂಭವಿಸಿದಾಗ ಕೆಲ ಉದ್ಯೋಗಿಗಳು ಕಟ್ಟಡದಲ್ಲಿ ಸಿಲುಕಿದ್ದರು. ಕೂಡಲೇ ಸ್ಥಳಕ್ಕೆ ಮೂರು ಅಗ್ನಿಶಾಮಕ ವಾಹನಗಳು, RT ನಗರ ಪೊಲೀಸರು ದೌಡಾಯಿಸಿ ರಕ್ಷಣಾ ಕಾರ್ಯ ಆರಂಭಿಸಿದರು.
ಅ*ಗ್ನಿಶಾಮಕ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದು, ಸದ್ಯ ಯಾರಿಗೂ ಪ್ರಾಣಾಪಾಯವಿಲ್ಲ. ಲಕ್ಷಾಂತರ ಮೌಲ್ಯದ ಆಯುರ್ವೇದಿಕ್ ಮೆಡಿಸಿನ್ ಅ*ಗ್ನಿಗೆ ಆ*ಹುತಿಯಾಗಿದೆ. ಅ*ಗ್ನಿ ಅ*ನಾಹುತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.