Connect with us

LATEST NEWS

ಎಪ್ರಿಲ್ 1ರಿಂದ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪುನರ್‌ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ

Published

on

ಉಡುಪಿ: ಉಚ್ಚಿಲದ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಪುನರ್‌ ಪ್ರತಿಷ್ಠೆ, ಬ್ರಹ್ಮಕಲಶ ಪುಣ್ಯೋತ್ಸವ, ರಥೋತ್ಸವ, ಚತುಃಪವಿತ್ರ ನಾಗಮಂಡಲೋತ್ಸವ ಕಾರ್ಯಕ್ರಮಗಳು ಏಪ್ರಿಲ್‌ 1 ರ ಶುಕ್ರವಾರದಿಂದ 15 ನೇ ತಾರೀಕಿನವರೆಗೆ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹಾಗೂ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ನಾಡೋಜ ಡಾ. ಜಿ ಶಂಕರ್‌ ಹೇಳಿದರು.

 

ಅವರು ಗುರುವಾರ ಉಚ್ಚಿಲ ಮೊಗವೀರ ಭವನದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದ.ಕ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಮಹಾಲಕ್ಷ್ಮೀ ದೇವಸ್ಥಾನವು 1957 ರಲ್ಲಿ ಮೊಗವೀರ ಕುಲಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲರವರ ನೇತೃತ್ವದಲ್ಲಿ ದಿವಂಗತ ಸದಿಯ ಸಾಹುಕಾರರು ದಾನವಾಗಿ ನೀಡಿದ ಜಾಗದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿದೆ.

ಹಲವಾರು ವರ್ಷಗಳಿಂದ ಶ್ರೀ ಮಹಾಲಕ್ಷ್ಮೀ ದೇವಸ್ಥಾನವನ್ನು ಸಮಗ್ರವಾಗಿ ಜೀರ್ಣೋದ್ಧಾರ ಮಾಡಿ ಶ್ರೀ ಮಹಾಲಕ್ಷ್ಮೀ ದೇವಿಯನ್ನು ಹತ್ತಿರದಲ್ಲಿ ನೋಡಬೇಕೆನ್ನುವ ಹಂಬಲವನ್ನು ಸ್ಥಳೀಯ ಹಾಗೂ ಮುಂಬಯಿಯ ಭಕ್ತಾಧಿಗಳು ಸಮಾಜದ ಮುಖಂಡರಾದ ನಾಡೋಜ ಡಾ ಜಿ ಶಂಕರ್ ಹಾಗೂ ದ.ಕ ಮೊಗವೀರ ಮಹಾಜನ ಸಂಘದ ಪದಾಧಿಕಾರಿಗಳ ಜೊತೆ ವ್ಯಕ್ತಪಡಿಸಿದಾಗ ತಾವೆಲ್ಲರೂ ಸೇರಿ ಶ್ರದ್ಧಾಭಕ್ತಿಯಿಂದ ಈ ಕೆಲಸ ಮಾಡೋಣ ಎಂದು ತಿಳಿಸಿ ಮಹಾಜನ ಸಂಘದ ನೇತೃತ್ವದಲ್ಲಿ ಕೇರಳದ ಜ್ಯೋತಿಷ್ಯ ವಿದ್ವಾನ್ ಶ್ರೀ ಮಾಧವನ್ ಪುದುವಾಳರವರ ಮೂಲಕ ಅಷ್ಟಮಂಗಲ ಪ್ರಶ್ನೆಯಲ್ಲಿ ವಿಚಾರ ವಿನಿಮಯ ಮಾಡಲಾಯಿತು.

ಅಷ್ಟಮಂಗಲ ಪ್ರಶ್ನೆಯಲ್ಲಿ ದೇವಸ್ಥಾನದ ಬಗ್ಗೆ ಅನೇಕ ಪ್ರಶ್ನೆಗಳು ಮೂಡಿ ಬಂದಿದ್ದು ಅವುಗಳಿಗೆಲ್ಲಾ ಪ್ರಾಯಶ್ಚಿತ್ತಾದಿ ಸತ್ಕರ್ಮಗಳನ್ನು ನೆರವೇರಿಸಿ ನಾಡೋಜ ಡಾ. ಜಿ ಶಂಕರ್ ನೇತೃತ್ವದಲ್ಲಿ ಜೀರ್ಣೋದ್ಧಾರ ಕಾರ್ಯಕ್ರಮ ಕೈಗೊಳ್ಳುವುದೆಂದು ನಿರ್ದಾರ ಕೈಗೊಳ್ಳಲಾಯಿತು.
ದ.ಕ ಮೊಗವೀರ ಮಹಾಜನ ಸಂಘದ ಸಭೆಯಲ್ಲಿ ಡಾ. ಜಿ ಶಂಕರ್‍ರವರ ಗೌರವಾಧ್ಯಕ್ಷತೆ , ಶ್ರೀ ಗುಂಡು ಬಿ ಅಮೀನ್‍ರವರ ಅಧ್ಯಕ್ಷತೆಯಲ್ಲಿ ಜೀರ್ಣೋದ್ಧಾರ ಸಮಿತಿ ರಚಿಸಲಾಯಿತು.

ವಾಸ್ತು ತಜ್ಞ ವಿದ್ವಾನ್ ಶ್ರೀ ಸುಬ್ರಹ್ಮಣ್ಯ ಭಟ್ ಗುಂಡಿಬೈಲು, ಕ್ಷೇತ್ರ ತಂತ್ರಿಗಳಾದ ಶ್ರೀ ರಾಘವೇಂದ್ರ ತಂತ್ರಿ ಕುಕ್ಕಿಕಟ್ಟೆಯವರ ಮಾರ್ಗದರ್ಶನದಲ್ಲಿ ಶಿಲಾಮಯ ಗರ್ಭ ಗುಡಿ , ಶಿಲಾಮಯ ಶ್ರೀ ಭದ್ರಕಾಳಿ ಗುಡಿ , ಶಿಲಾಮಯ ಶ್ರೀ ಪ್ರಸನ್ನ ಗಣಪತಿ ಗುಡಿ , ಶ್ರೀ ನಾಗದೇವರ ಗುಡಿ, ಸುತ್ತುಪೌಳಿ, ಗುರುಪೀಠ, ರಾಜಗೋಪುರ, ಯಾಗಶಾಲೆ, ವಸಂತ ಮಂಟಪ , ರಥಬೀಧಿ, ಸುತ್ತು ಆವರಣ ಗೋಡೆ, ಬಯಲು ರಂಗ ಮಂಟಪ , ಒಳಚರಂಡಿ ವ್ಯವಸ್ಥೆ, ನೆಲಹಾಸು(ಇಂಟರ್‍ಲಾಕ್) ಅಳವಡಿಕೆ ಹಾಗೂ ಪುಷ್ಕರಣಿಗಳನ್ನೊಳಗೊಂಡ ರೂಪಾಯಿ 32 ಕೋಟಿ ಅಂದಾಜು ಮೊತ್ತದ ಸಮಗ್ರ ಜೀರ್ಣೋದ್ಧಾರ ಕಾರ್ಯಕೈಗೊಳ್ಳಲಾಯಿತು.

ಮೊಗವೀರ ಭವನ: ಮಂಗಳೂರು ರಿಪೈನರೀಸ್ ಆಂಡ್ ಪೆಟ್ರೋಕೆಮಿಕಲ್ ಲಿಮಿಟೆಡ್‌ನ ಸಿ ಎಸ್ ಆರ್ ನಿಧಿಯಿಂದ ಕೊಡಮಾಡಿದ ಅನುದಾನದೊಂದಿಗೆ ಹಾಗೂ ಮಹಾಜನ ಸಂಘದ ಮೊತ್ತವನ್ನು ಸೇರಿಸಿ ಸುಮಾರು 15 ಕೋಟಿ ವೆಚ್ಚದ ಎರಡು ಸಭಾಂಗಣಗಳನ್ನೊಳಗೊಂಡ “ಮೊಗವೀರ ಭವನ” ನಿರ್ಮಿಸಲಾಗಿದೆ.

ಇದೀಗ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರದ ಕಾರ್ಯಗಳು ಸಂಪನ್ನಗೊಂಡಿದ್ದು ಶಿಲೆದಾರು ಶಿಲ್ಪಗಳಿಂದ ಕೂಡಿದ ದೇವಾಲಯದಲ್ಲಿ ಶ್ರೀ ಪ್ರಸನ್ನ ಗಣಪತಿ, ಶ್ರೀ ಭದ್ರಕಾಳಿ, ಶ್ರೀ ನಾಗದೇವರ ಸಹಿತ ಶ್ರೀ ಮಹಾಲಕ್ಷ್ಮೀ ದೇವಿಯ ಬಿಂಬ ಪುನರ್ ಪ್ರತಿಷ್ಠಾಪನೆ, ಅಷ್ಟಬಂಧ ಬ್ರಹ್ಮಕಲಶೋತ್ಸವ, ರಥೋತ್ಸವ, ಚತುಃಪವಿತ್ರ ನಾಗಮಂಡಲೋತ್ಸವಗಳನ್ನೊಳಗೊಂಡ ವೈಧಿಕ ವಿಧಿ ವಿಧಾನಗಳನ್ನು ಇದೇ ಬರುವ ಎಪ್ರಿಲ್ 1 ರಿಂದ ಎಪ್ರಿಲ್ 15 ರವರೆಗೆ ಕ್ಷೇತ್ರದ ತಂತ್ರಿಗಳಾದ ವಿದ್ವಾನ್ ಶ್ರೀ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿಗಳ ನೇತೃತ್ವದಲ್ಲಿ, ಹಿರಿಯ ಅರ್ಚಕರಾದ ವೆಂಕಟನರಸಿಂಹ ಉಪಾಧ್ಯಾಯ ಹಾಗೂ ರಾಘವೇಂದ್ರ ಉಪಾಧ್ಯಾಯರ ಉಪಸ್ಥಿತಿಯಲ್ಲಿ ಮತ್ತು ಯತಿವರೇಣ್ಯರ ಶುಭಾಶೀರ್ವಾದಗಳೊಂದಿಗೆ ವೈಭವೋಪೇತವಾಗಿ ನಡೆಸಲು ಸಂಕಲ್ಪಿಸಲಾಗಿದೆ ಎಂದರು.

ಪ್ರಮುಖ ಧಾರ್ಮೀಕ ಕಾರ್ಯಕ್ರಮಗಳು:
ಹೊರೆಕಾಣಿಕೆ: ರಾಜ್ಯ ಹಾಗೂ ಹೊರರಾಜ್ಯಗಳಿಂದ 2 ರಿಂದ 3 ಲಕ್ಷದಷ್ಟು ಭಕ್ತಾಧಿಗಳು ಆಗಮಿಸುವ ನಿರೀಕ್ಷೆಯಿದ್ದು ಆಗಮಿಸುವ ಎಲ್ಲಾ ಭಕ್ತಾಧಿಗಳಿಗೂ ದಿನಂಪ್ರತಿ ಮಧ್ಯಾಹ್ನ ಹಾಗೂ ರಾತ್ರಿ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಪ್ರಯುಕ್ತ ಮಾರ್ಚ್ 27 ಕ್ಕೆ ಅವಿಭಜಿತ ದ. ಕ ಜಿಲ್ಲೆಯ ಪ್ರಸಿದ್ಧ ದೇವಸ್ಥಾನಗಳಿಂದ ಪ್ರಸಾದದ ರೂಪದಲ್ಲಿ ಹೊರೆಕಾಣಿಕೆಯು ಕ್ಷೇತ್ರವನ್ನು ತಲುಪಲಿದೆ.

ಈಗಾಗಲೇ ಹೈದ್ರಾಬಾದ್ ಕರ್ನಾಟಕ ಸೇರಿದಂತೆ ರಾಜ್ಯದ ಇತರ ಭಾಗಗಳಿಂದ ಹೊರೆಕಾಣಿಕೆಗಳು ದೇವಸ್ಥಾನಕ್ಕೆ ತಲುಪಿದೆ. ಕರಾವಳಿ ಭಾಗದ ಭಕ್ತಾಧಿಗಳ ಹೊರಕಾಣಿಕೆಯು 2000ಕ್ಕೂ ಮಿಕ್ಕಿದ ವಾಹನಗಳ ಮೂಲಕ ದೇವಸ್ಥಾನದ ಉತ್ತರ ಭಾಗದ ಮೆರವಣಿಗೆಯು ಮೂಳೂರಿನಿಂದ ಹಾಗೂ ದಕ್ಷಿಣ ಭಾಗದ ಮೆರವಣಿಗೆಯು ತೆಂಕ ಎರ್ಮಾಳ್‍ನಿಂದ ಹೊರಟು ವಿವಿಧ ರೀತಿಯ ಟ್ಯಾಬ್ಲೋ, ಚೆಂಡೆ, ಭಜನಾಕುಣಿತ ಮುಂತಾದ ಬಿರುದಾವಳಿಗಳೊಂದಿಗೆ ದೇವಸ್ಥಾನ ತಲುಪಲಿದೆ.

ಅನ್ನ ಛತ್ರ ಹಾಗೂ ಪಾರ್ಕಿಂಗ್: ಕ್ಷೇತ್ರಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ನೂಕು ನುಗ್ಗಲಾಗದಂತೆ ಸುಮಾರು 1 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ಅನ್ನಛತ್ರದ ಚಪ್ಪರ ನಿರ್ಮಿಸಿ ಎಲೆ ಊಟ ಮತ್ತು ಬಫೆ ಊಟಕ್ಕೆ ಅನುಕೂಲವಾಗುವಂತೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಹಾಗೂ ಕ್ಷೇತ್ರಕ್ಕೆ ಆಗಮಿಸುವ ಭಕ್ತಾಧಿಗಳ ವಾಹನ ನಿಲುಗಡೆಗೆ ಬೇಕಾಗುವಷ್ಟು ಪಾರ್ಕಿಂಗ್ ಜಾಗದ ಸಿದ್ದತೆ ಮಾಡಿಕೊಳ್ಳಲಾಗಿದೆ.

ರಾಜಗೋಪುರ ಹಾಗೂ ಲಕ್ಷ್ಮೀ ತೀರ್ಥ ಕೆರೆ ಉದ್ಘಾಟನೆ ಎಪ್ರಿಲ್ 1: ನೂತನವಾಗಿ ನಿರ್ಮಾಣಗೊಂಡ ಭವ್ಯ ರಾಜಗೋಪುರ ಹಾಗೂ ಸರಕಾರದ ಅನುಧಾನದೊಂದಿಗೆ ನಿರ್ಮಾಣಗೊಂಡ ಲಕ್ಷ್ಮೀತೀರ್ಥ ಕೆರೆಯು ಎಪ್ರಿಲ್ 1ರ ಸಂಜೆ 5 ಗಂಟೆಗೆ ಉದ್ಘಾಟನೆಗೊಳ್ಳಲಿದೆ.

ದಿನಂಪ್ರತಿ ಕುಂಕುಮಾರ್ಚನೆಯೊಂದಿಗೆ ಮಹಾಮಂಗಳಾರತಿ : ಎಪ್ರಿಲ್ 2ರಿಂದ ಎಪ್ರಿಲ್ 15ರತನಕ ಪ್ರತೀದಿನ ಸಂಜೆ ಗಂಟೆ 4 ರಿಂದ 5ರವರೆಗೆ ಸಾವಿರ ಸುಮಂಗಲೆಯರಿಂದ ಕುಂಕುಮಾರ್ಚನೆಯೊಂದಿಗೆ ಮಹಾಮಂಗಳಾರತಿ ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸಲಾಗಿದೆ.

ಮಹಾಲಕ್ಷ್ಮೀ ದೇವಿಯ ಬಿಂಬ ಪ್ರತಿಷ್ಠೆ , ಸ್ವರ್ಣಕಲಶ ಪ್ರತಿಷ್ಠೆ ಹಾಗೂ ಮಹಾಅನ್ನಸಂತರ್ಪಣೆ ಎಪ್ರಿಲ್ 6ರಂದು ನಡೆಯಲಿದೆ.
ವಾರ್ಷಿಕ ರಥೋತ್ಸವ :ವರ್ಷಂಪ್ರತಿ ನಡೆಯುವ ಶ್ರೀಮಹಾಲಕ್ಷ್ಮೀ ರಥೋತ್ಸವ ಹಾಗೂ ಮಹಾಅನ್ನಸಂತರ್ಪಣೆಯು ಎಪ್ರಿಲ್ 13ರಂದು ನಡೆಯಲಿದೆ.

ಚತುಃಪವಿತ್ರ ನಾಗಮಂಡಲ ಸೇವೆ : ಎಪ್ರಿಲ್ 15ರ ರಾತ್ರಿ ಗಂಟೆ 8.00ಕ್ಕೆ ಹಾಲಿಟ್ಟು ಸೇವೆ ರಾತ್ರಿ 9.00ರಿಂದ ಚತುಃಪವಿತ್ರ ನಾಗಮಂಡಲೋತ್ಸವ ನಡೆಯಲಿದೆ. ಎಪ್ರಿಲ್ 16ರ ಬೆಳಗ್ಗೆ ಸಂಪೆÇೀಕ್ಷಣೆ, ಮಂತ್ರಾಕ್ಷತೆಯೊಂದಿಗೆ ಪುನಃ ಪ್ರತಿಷ್ಠೆ ಧಾರ್ಮಿಕ ವಿಧಿವಿಧಾನಗಳು ಶುಭಾಂತ್ಯವಾಗಲಿದೆ.

ನಿರಂತರ 15 ದಿನಗಳ ಪರ್ಯಂತ ಧಾರ್ಮಿಕ ಸಭಾಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ, ಶ್ರೀ ಸಿದ್ಧರಾಮಯ್ಯ, ಶ್ರೀ ಹೆ ಚ್ ಡಿ ಕುಮಾರಸ್ವಾಮಿ, ಸಂಸದರುಗಳಾದ ಶ್ರೀನಳಿನ್ ಕುಮಾರ್ ಕಟೀಲ್ , ಶೋಭಾಕರಂದ್ಲಾಜೆ , ರಾಜ್ಯದ ಹಾಲಿ ಹಾಗೂ ಮಾಜಿ ಸಚಿವರು, ಹಾಲಿ ಹಾಗೂ ಮಾಜಿ ಶಾಸಕರು, ರಾಜಕೀಯ ಮುಖಂಡರುಗಳು ಭಾಗವಹಿಸಲಿದ್ದಾರೆ.

ವಿವಿಧ ಮಠಾಧೀಶರುಗಳು ಮತ್ತು ಧಾರ್ಮಿಕ ಮುಖಂಡರುಗಳು ಆಶೀರ್ವಚನ ನೀಡಲಿದ್ದಾರೆ.
ಸಾಂಸ್ಕ್ರತಿಕ ಕಾರ್ಯಕ್ರಮದ ಅಂಗವಾಗಿ ಭಾರತ ಸರಕಾರ ಪ್ರಸ್ತುತ ಪಡಿಸುವ ದಕ್ಷಿಣ ವಲಯ ಸಾಂಸ್ಕ್ರತಿಕ ಕೇಂದ್ರ ತಾಂಜವೂರು ಇವರು ಸಾದರ ಪಡಿಸುವ 20 ರಾಜ್ಯಗಳ ಕಲಾವಿದರುಗಳ ಸಾಂಸ್ಕ್ರತಿಕ ಉತ್ಸವ ಏರ್ಪಡಿಸಲಾಗಿದೆ.

ರಾಜ್ಯದ ಹಾಗೂ ಸ್ಥಳೀಯ ಕಲಾವಿದರುಗಳಿಂದ ಪ್ರತೀ ದಿನ ಸಂಜೆ ನೃತ್ಯ ವೈವಿಧ್ಯ, ಯಕ್ಷಗಾನ , ನಾಟಕ ಮುಂತಾದ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ ಮತ್ತು ಖ್ಯಾತ ಗಾಯಕರೂ , ಸಂಗೀತ ನಿರ್ದೇಶಕರೂ ಆದ ಗಾನಗಂಧರ್ವ ವಿಜಯ ಪ್ರಕಾಶರವರಿಂದ ಸಾಂಸ್ಕ್ರತಿಕ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.

ಪ್ರತೀದಿನ ಪೂರ್ವಾಹ್ನ ಗಂಟೆ 11.30 ರಿಂದ ರಾಜ್ಯದ ಖ್ಯಾತ ಕಲಾವಿದರುಗಳಿಂದ ಭಕ್ತಿ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ.

ಸುದ್ದಿಗೋಷ್ಠೀಯಲ್ಲಿ ದ.ಕ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ ಕೋಟ್ಯಾನ್, ಜಿರ್ಣೋದ್ಧಾರ ಸಮಿತಿಯ ಅಧ್ಯ್ಷರಾದ ಗುಂಡು ಬಿ ಅಮೀನ್, ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ವಾಸುದೇವ ಸಾಲ್ಯಾನ್, ಸುಧಾಕರ ಕುಂದರ್, ವಾಸುದೇವ ಸಾಲ್ಯಾನ್, ಮೋಹನ್ ಕರ್ಕೇರಾ, ಭರತ್ ಎರ್ಮಾಳ್, ವಿನಯ್ ಕರ್ಕೇರಾ, ಶಂಕರ್ ಸಾಲ್ಯಾನ್ ಹಾಗೂ ಇತರರು ಉಪಸ್ಥಿರಿದ್ದರು.

Click to comment

Leave a Reply

Your email address will not be published. Required fields are marked *

FILM

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ‘ಸ್ಯಾಂಡಲ್ ವುಡ್ ಸಲಗ’

Published

on

ಬೈಂದೂರು : ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ರಾಜಕೀಯ ಮುಖಂಡರು, ನಟ ನಟಿಯರು ಭೇಟಿ ನೀಡುತ್ತಿರುತ್ತಾರೆ. ಇದೀಗ ದುನಿಯಾ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮೂಕಾಂಬಿಕೆ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ತಮ್ಮ ಸ್ನೇಹಿತರೊಂದಿಗೆ ದುನಿಯಾ ವಿಜಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭ ಅವರ ಅಭಿಮಾನಿಗಳು ಅವರೊಂದಿಗೆ ಫೋಟೋ ತೆಗೆಸಿಕೊಂಡರು.

ಕಾಲ್ನಡಿಗೆಯಲ್ಲಿ ನಂಜನಗೂಡು ಕ್ಷೇತ್ರಕ್ಕೆ ಹೋಗಿದ್ದ ನಟ:

ದುನಿಯಾ ವಿಜಿ ಇತ್ತೀಚೆಗೆ ಬೆಂಗಳೂರಿನಿಂದ ಕಾಲ್ನಡಿಗೆಯಲ್ಲಿ ಹೊರಟು ನಂಜನಗೂಡಿನ ನಂಜುಂಡೇಶ್ವರ ದರ್ಶನ ಪಡೆದಿದ್ದರು. ಸತತ ಐದು ದಿನಗಳ ಕಾಲ ತಮ್ಮ ಸಂಗಡಿಗರ ಜೊತೆ ನಡೆದುಕೊಂಡೇ ನಂಜನಗೂಡು ತಲುಪಿದ್ದರು. ಹಗಲು ರಾತ್ರಿ ಲೆಕ್ಕಿಸದೇ ಪಾದಯಾತ್ರೆ ಮಾಡಿದ್ದರು.

ಸಿನಿಮಾಗಳಲ್ಲಿ ಬ್ಯುಸಿ :

ದುನಿಯಾ ವಿಜಯ್ ಸಾಲು ಸಾಲು ಸಿನಿಮಾಗಳಲ್ಲಿ ಬಿಝಿಯಾಗಿದ್ದಾರೆ. ನಟನೆಯ ಜೊತೆಗೆ ನಿರ್ದೇಶಕನ ಕ್ಯಾಪ್ ಕೂಡ ಅವರು ಹಾಕಿದ್ದಾರೆ.’ಸಲಗ’ ಚಿತ್ರದ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದಿದ್ದ ಅವರು, ‘ಭೀಮ’ ಸಿನಿಮಾವನ್ನು ನಿರ್ದೇಶಿಸುತ್ತಿದ್ದಾರೆ. ನಿಖಿಲ್ ಕುಮಾರ್ ಸಿನಿಮಾದಲ್ಲೂ ದುನಿಯಾ ವಿಜಯ್ ನಟಿಸುತ್ತಿದ್ದಾರೆ.

ಇದನ್ನೂ ಓದಿ : ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!

ಚಿತ್ರರಂಗಕ್ಕೆ ವಿಜಿ ಮಗಳು ಎಂಟ್ರಿ :

ದುನಿಯಾ ವಿಜಯ್ ತಮ್ಮ ಮಗ ಸಾಮ್ರಾಟ್ ನನ್ನು ಈಗಾಗಲೇ ಭೀಮ ಚಿತ್ರದ ಮೂಲಕ ಪರಿಚಯಿಸುವ ತಯಾರಿಯಲ್ಲಿದ್ದಾರೆ. ಇದೀಗ ಮಗಳನ್ನೂ ಚಿತ್ರರಂಗಕ್ಕೆ ಕರೆತರುತ್ತಿದ್ದಾರೆ. ಕಾಟೇರ ಚಿತ್ರಕ್ಕೆ ಕಥೆ ಬರೆದಿದ್ದ ಜಡೇಶ್ ಹಂಪಿ ನಿರ್ದೇಶನದಲ್ಲಿ ಮೂಡಿ ಬರಲಿರುವ ಹೊಸ ಸಿನಿಮಾದಲ್ಲಿ ತಂದೆ – ಮಗಳು ಇಬ್ಬರೂ ಕಾಣಿಸಿಕೊಳ್ಳುತ್ತಿದ್ದಾರೆ.


‘ಜಾನಿ ಮೇರಾ ನಾಮ್ ಪ್ರೀತಿ ಮೇರಾ ಕಾಮ್’ ಚಿತ್ರದಲ್ಲಿ ಜೊತೆಯಾಗಿದ್ದ ದುನಿಯಾ ವಿಜಯ್ ಮತ್ತು ರಚಿತಾ ರಾಮ್ ಮತ್ತೆ ಈ ಚಿತ್ರದ ಮೂಲಕ ಒಂದಾಗುತ್ತಿದ್ದಾರೆ. ಇದರಲ್ಲಿ ವಿಜಿ ಮಗಳು ಮೋನಿಕಾ/ರಿತನ್ಯಾ ನಟಿಸುತ್ತಿದ್ದಾರೆ. ಇದು ದುನಿಯಾ ವಿಜಯ್ ಅವರ 29 ನೇ ಸಿನಿಮಾ.

Continue Reading

DAKSHINA KANNADA

ವೈರಲ್ ವಿಡಿಯೋ: ಕಲ್ಲಂಗಡಿ ಚಿಕನ್ ಬಿರಿಯಾನಿ ತಿಂದಿದ್ದೀರಾ?

Published

on

ಮಂಗಳೂರು(ವೈರಲ್ ವಿಡಿಯೋ): ಬಿರಿಯಾನಿ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬಹುಜನರ ಬೇಡಿಕೆಯ ಖಾದ್ಯವಾದ ಬಿರಿಯಾನಿ ಹಲವು ಮಾದರಿಗಳಲ್ಲಿ ಸಿಗುತ್ತದೆ. ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ ತಿನ್ನಲು ಜನರಂತೂ ದೂರ ಸರಿಯುದೇ ಇಲ್ಲ. ಆದರೆ ಈಗ ಬಿರಿಯಾನಿ ಹೊಸ ಹೊಸ ಮಾದರಿಯಲ್ಲಿ ತುಂಬಾ ವೈರಟಿ ಆಗಿ ಸಿಗುತ್ತಾ ಇದೆ. ಬಾರ್ಬಿ ಬಿರಿಯಾನಿ ವೈರಲ್ ಆದ ಬಳಿಕ ಇದೀಗ ಇನ್ನೊಂದು ಹೊಸ ಬಿರಿಯಾನಿ ವೈರಲ್ ಆಗ್ತಾ ಇದೆ.

ಕಲ್ಲಂಗಡಿ ಚಿಕನ್ ಬಿರಿಯಾನಿ

ಹೌದು, ಈ ಬಿರಿಯಾನಿಯ ಹೆಸರು ಕಲ್ಲಂಗಡಿ ಚಿಕನ್ ಬಿರಿಯಾನಿ. ಇದು ವಿಚಿತ್ರವಾದರೂ ಸತ್ಯ. ಕಲ್ಲಂಗಡಿ ಹಾಕಿ ಮಾಡಿರುವ ಈ ಚಿಕನ್ ಬಿರಿಯಾನಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಾ ಇದೆ. ಇನ್ಸ್ಟಾಗ್ರಾಮ್‌ನ villagefoodchannel_official ಪೇಜ್‌ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಈ ವಿಚಿತ್ರ ಬಿರಿಯಾನಿ ವೈರಲ್ ಆಗಿದೆ.

ಕಲ್ಲಂಗಡಿ ಬಿಕನ್ ಬಿರಿಯಾನಿ ತಯಾರಿಸುವ ವಿಧಾನ

ಮೊದಲಿಗೆ ಇಬ್ಬರು ಕಲ್ಲಂಗಡಿ ಹಣ್ಣನ್ನು ತುಂಡು ಮಾಡುವ ಮೂಲಕ ವಿಡಿಯೋ ಆರಂಭವಾಗುತ್ತದೆ. ಬಳಿಕ ಹಣ್ಣಿನ ತುಂಡುಗಳನ್ನು ದೊಡ್ಡ ಪಾತ್ರೆಗೆ ಹಾಕಿ ಅದರಲ್ಲಿ ಗುದ್ದಿ ರಸವನ್ನು ತೆಗೆಯುತ್ತಾರೆ. ಬಳಿಕ ಮತ್ತೊಂದು ಪಾತ್ರೆಯಲ್ಲಿ ಚಿಕನ್ ಬಿರಿಯಾನಿ ತಯಾರಿಸಲು ಪ್ರಾರಂಭಿಸುತ್ತಾರೆ.

ದೊಡ್ಡ ಪಾತ್ರೆಯನ್ನು ಇಟ್ಟು ಅದಕ್ಕೆ ಎಣ್ಣೆ, ನೀರುಳ್ಳಿ, ಬೆಳ್ಳುಳ್ಳಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಮಸಾಲೆಗಳು, ಗರಂ ಮಸಾಲೆ ಹಾಕಿ ಮಸಾಲೆ ತಯಾರಿಸುತ್ತಾರೆ. ಬಳಿಕ ಅದಕ್ಕೆ ಶುಚಿಗೊಳಿಸಿದ ಕೋಳಿ ತುಂಡುಗಳನ್ನು ಹಾಕಿ ಮಿಕ್ಸ್ ಮಾಡಿ ಬೇಯಿಸುತ್ತಾರೆ.

ಕೋಳಿ ಮಾಂಸ ಬೆಂದ ನಂತರ ಅದಕ್ಕೆ ಪ್ರಮುಖ ಅಂಶವಾದ ಕಲ್ಲಂಗಡಿ ಹಣ್ಣಿನ ರಸವನ್ನು ಸೇರಿಸುತ್ತಾರೆ. ನಂತರ ಅದಕ್ಕೆ ಬಾಸುಮತಿ ಅಕ್ಕಿ ಹಾಕಿ ಮತ್ತೆ ಬೇಯಿಸುತ್ತಾರೆ. ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಮೇಲಿಗೆ ಹಾಕಿ ಮುಚ್ಚಿಡುತ್ತಾರೆ. ಈ ರೀತಿ ಮಾಡಿದಾಗ ಕಲ್ಲಂಗಡಿ ಚಿಕನ್ ಬಿರಿಯಾನಿ ತಯಾರಾಗುತ್ತದೆ.

ಈ ವಿಡಿಯೋ ಬಾರಿ ವೈರಲ್ ಆಗಿದ್ದು, ಇದುವರೆಗೆ ಆರು ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಹಾಗೆಯೇ 21 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಕಲ್ಲಂಗಡಿ ಚಿಕನ್ ಬಿರಿಯಾನಿಯ ಈ ವಿಶಿಷ್ಟ ಸಂಯೋಜನೆಯನ್ನು ವೀಕ್ಷಿಸಿದ ಹಲವಾರು ಜನರು ತಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮಾಡಿದ್ದಾರೆ.

Continue Reading

Ancient Mangaluru

ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!

Published

on

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇನ್ನು ಮುಂದೆ ನಿಶ್ಶಬ್ದ ವಲಯವಾಗಿರಲಿದೆ. ಹೌದು, ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ ಏರ್‌ಲೈನರ್‌ಗಳಿಂದ ಯಾವುದೇ ಪ್ರಯಾಣಿಕರ ಮಾಹಿತಿ ಕುರಿತ ಅನೌನ್ಸ್ ಮೆಂಟ್‌ ಇರುವುದಿಲ್ಲ. ಪ್ರಯಾಣಿಕರು ಫ್ಲೈಟ್‌ ಇನ್ಫಾರ್ಮೇಶನ್‌ ಡಿಸ್‌ಪ್ಲೇ ಸಿಸ್ಟಂ ಫಲಕಗಳನ್ನು ನೋಡಿ ಮಾಹಿತಿ ಪಡೆದುಕೊಳ್ಳ ಬೇಕಾಗಿದೆ ಎಂದು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಸಹಾಯಕ್ಕಾಗಿ ಯಾರನ್ನು ಸಂಪರ್ಕಿಸಬೇಕು?

ವಿಮಾನ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಕಿರಿಕಿರಿಯಾಗುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ. ಇನ್ನು ಮುಂದೆ ವಿಮಾನಗಳ ಹಾರಾಟದ ಮಾಹಿತಿಗಳು ಫ್ಲೈಟ್‌ ಇನ್ಫಾರ್ಮೇಶನ್‌ ಡಿಸ್‌ಪ್ಲೇ ಸಿಸ್ಟಂ ಫಲಕಗಳಲ್ಲಿ ಅನಾವರಣಗೊಳ್ಳಲಿದೆ. ವಿಮಾನ ನಿಲ್ದಾಣದ ಹಲವು ಕಡೆಗಳಲ್ಲಿ ಈ ಡಿಸ್‌ಪ್ಲೇಗಳನ್ನು ಇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


ಇದಲ್ಲದೆ, ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ‘ಮೇ ಐ ಹೆಲ್ಪ್ ಯು’ ಡೆಸ್ಕ್ ನಿರ್ವಹಿಸುವ ಸಿಬಂದಿ, ಗ್ರಾಹಕ ಸೇವೆ ಮತ್ತು ಅತಿಥಿ ಸಂಬಂಧಗಳ ಕಾರ್ಯನಿರ್ವಾಹಕರು, ಪ್ರಣಾಮ್ ಸಿಬಂದಿ ಕೂಡಾ ಮಾಹಿತಿಯೊಂದಿಗೆ ಪ್ರಯಾಣಿಕರಿಗೆ ಸಹಾಯ ಮಾಡಲು ಸಿದ್ಧರಿರುತ್ತಾರೆ.

ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?

ಎಸ್.ಎಂ.ಎಸ್ ಮೂಲಕ ಮಾಹಿತಿ :

ಎಲ್ಲಾ ಏರ್‌ಲೈನ್ ಚೆಕ್-ಇನ್ ಕೌಂಟರ್‌ಗಳು, ಬೋರ್ಡಿಂಗ್ ಗೇಟ್‌ಗಳಲ್ಲಿ ವಿಮಾನದ ಮಾಹಿತಿಯನ್ನು ವೀಕ್ಷಿಸ ಬಹುದು. ಬೋರ್ಡಿಂಗ್ ಗೇಟ್ ಬದಲಾವಣೆಗಳು/ ವಿಮಾನ ಮರು ವೇಳಾಪಟ್ಟಿ ವಿವರಗಳನ್ನು ಎಸ್.ಎಂ.ಎಸ್. ಮೂಲಕ ಪ್ರಯಾಣಿಕರ ನೋಂದಾಯಿತ ಇಮೇಲ್ ಮತ್ತು ಮೊಬೈಲ್ ಸಂಖ್ಯೆಯಲ್ಲೂ ಕೂಡಾ ಏರ್‌ಲೈನ್ ಹಂಚಿಕೊಳ್ಳಲಿದೆ ಎಂದು ವಿವರಿಸಿದ್ದಾರೆ.

Continue Reading

LATEST NEWS

Trending