Connect with us

DAKSHINA KANNADA

ಕಾರಣೀಕ ಕ್ಷೇತ್ರ ಕೆಮ್ಮಲೆಯಲ್ಲಿ ಸಂಭ್ರಮದ ಬ್ರಹ್ಮಕಲಶೋತ್ಸವ..!

Published

on

ಕಾರಣೀಕ ಕ್ಷೇತ್ರ ಕೆಮ್ಮಲೆಯಲ್ಲಿ ಸಂಭ್ರಮದ ಬ್ರಹ್ಮಕಲಶೋತ್ಸವ..!

ಮಂಗಳೂರು:  ಕರಾವಳಿಯಲ್ಲಿ ಅದೆಷ್ಟೋ ಧಾರ್ಮಿಕ ಪುಣ್ಯ ಕ್ಷೇತ್ರಗಳಿವೆ. ಅವುಗಳಿಗೆ ಕಾರಣೀಕ ಐತಿಹ್ಯವಿದೆ. ಅಂತಹ ಪುರಾಣ ಪ್ರಸಿದ್ದ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಎಣ್ಮೂರು ಗ್ರಾಮದ ಕೆಮ್ಮಲೆ ಹೇಮಳದಲ್ಲಿರುವ ಪುರಾತನ  ನಾಗಬ್ರಹ್ಮ ದೈವಸ್ಥಾನವೂ ಒಂದು.ಕೆಮ್ಮಲೆ ಬ್ರಹ್ಮರ ಮೂಲಸ್ಥಾನ ಹಾಗೂ ಉಳ್ಳಾಕುಲು, ಪರಿವಾರ ದೈವಗಳ ದೈವಸ್ಥಾನ. ಈ ಪುಣ್ಯಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವದ ಸಂಭ್ರಮ।

ಸಾಯಂಕಾಲ ಬ್ರಹ್ಮಕಲಶ ಪೂಜೆ, ಅಧಿವಾಸ ಹೋಮ,ಕಲಶಾಧಿವಾಸ, ಪ್ರಸಾದಾಧಿವಾಸ ದಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಬಳಿಕ ಭಜನಾ ಕಾರ್ಯಕ್ರಮ ನಡೆಯಿತು.ಜನವರಿ 16ರ ಶನಿವಾರದಂದು  ಧಾರ್ಮಿಕ ವೈಧಿಕ ಕಾರ್ಯಕ್ರಮಗಳು  ಮೊದಲ್ಗೊಂಡು ,  ಕ್ಷೇತ್ರದಲ್ಲಿ ಬೆಳಗ್ಗೆ ಮಹಾಗಣಪತಿ ಹೋಮ, ಸ್ಥಳ ಶುದ್ದಿ , ಬಿಂಬ ಶುದ್ದಿ, ಪವಮಾನ ಹೋಮ, ಆಶ್ಲೇಷಾ ಬಲಿ, ಮಂಗಳಾರತಿ ನಡೆಯಿತು.ಸಂಜೆ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸಭಾ ಕಾರ್ಯಕ್ರಮ ನಡೆಯಿತು. ಬ್ರಹ್ಮ ಶ್ರೀ ನಾಗೇಶ ತಂತ್ರಿಗಳ ಉಪಸ್ಥಿತಿಯಲ್ಲಿ ಸೇರಿದ್ದ ಗಣ್ಯರೆಲ್ಲರೂ ಸಭಾ ಕಾರ್ಯಕ್ರಮವನ್ನು   ಉದ್ಘಾಟಿಸಿದರು.

ಜಾನಪದ ವಿಧ್ವಾಂಸರಾದ ಡಾ.ಗಣೇಶ್ ಅಮೀನ್ ಸಂಕಮಾರ್ ಧಾರ್ಮಿಕ ಉಪನ್ಯಾಸ ನೀಡಿ, ತುಳುನಾಡಿನ ದೈವಶಕ್ತಿಗಳು ಸರ್ವ ಧರ್ಮಕ್ಕೆ ಸೇರಿರುವ ಶಕ್ತಿಗಳು. ಯಾರು ಈ ಮಣ್ಣಿನಲ್ಲಿ ಹುಟ್ಟಿ ಬಾಳಿದ್ದಾರೋ ಅವರಿಗೆಲ್ಲರಿಗೂ ಈಶಕ್ತಿಯ ಆರಾಧನೆಇದೆ ಎಂದರು.

ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷೆ, ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಬಲ್ಲಾಳರ ಕಾಲದವರು ಕೋಟಿಚೆನ್ನಯರು. ಆ ಕಾಲದಲ್ಲಿ ದೊಡ್ಡ ದೊಡ್ಡ ಕಾಡುಗಳಲ್ಲಿ ದೈವಸ್ಥಾನಗಳು ಇದ್ದು, ಕಾಲಾಂತರದಲ್ಲಿ ನಾಶವಾಗಿವೆ.

ನಂತರ ಬೇರೆ ಬೇರೆ ನಾಡಿನಿಂದ ಕೃಷಿ ಅರಸುತ್ತಾ ಬಂದು ನೆಲೆಯಾದವರಲ್ಲಿ ಗೌಡ ಜನಾಂಗವು ಇದೆ. ನಮ್ಮ ಹಿರಿಯರು ಆ ರೀತಿ ಬಂದು ನೆಲೆಸಿದ್ದಾರೆ ಎಂದರು.ಈ ಸಂದರ್ಭದಲ್ಲಿ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು, ಕಂಕನಾಡಿ ಗರಡಿ ಕ್ಷೇತ್ರದ ಅಧ್ಯಕ್ಷರಾದ ಚಿತ್ತರಂಜನ ಕಂಕನಾಡಿ ದಂಪತಿ ಹಾಗೂ ಕ್ಷೇತ್ರದಲ್ಲಿ ಸತತ ಸೇವೆಗೈದ ಸಮಿತಿಯ ಅಧ್ಯಕ್ಷರಾದ ಗಂಗಾಧರ ಹೇಮಳ ಇಡ್ಯಪೆ ಹಾಗೂ ಸಮಿತಿಯ ಸದಸ್ಯರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷರಾದ ಜಯಂತ ನಡುಬೈಲು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ಸಂತೋಷ ಕುಮಾರ್ ರೈ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಸರ್ವಸದಸ್ಯರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

BELTHANGADY

ಸೈಕಲ್ ರಿಪೇರಿ ವಿಚಾರಕ್ಕೆ ಜೀ*ವಾಂತ್ಯಗೊಳಿಸಿದ ಬಾಲಕ..!

Published

on

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ 8 ನೇ ತರಗತಿ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ಏ.19ರಂದು ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ ತರಗತಿ ವಿದ್ಯಾರ್ಥಿಯಾಗಿದ್ದ ನಂದನ್ (13) ಎಂಬಾತ ಆತ್ಮಹತ್ಯೆಗೆ ಶರಣಾದ ಬಾಲಕ.

Read More..; ನಗರ ಸಭೆ ಉಪಾಧ್ಯಕ್ಷೆ ಮಗ ಸೇರಿ ನಾಲ್ವರ ಹ*ತ್ಯೆ! ಹಂ*ತಕರ ಪತ್ತೆಗೆ ವಿಶೇಷ ತಂಡ ರಚನೆ

ಪಂಜದ ದಿವಂಗತ ರೋಹಿತ್ ಗೌಡ ಎಂಬವರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ಮಾವನ ಮನೆಯಲ್ಲಿದ್ದ. ಅಲ್ಲಿಂದಲೆ ಉಪ್ಪಿನಂಗಡಿಯ ಖಾಸಗಿ ಶಾಲೆಗೆ ಹೋಗುತ್ತಿದ್ದ. ಈತ ಈ ಬಾರಿ ಏಳನೇ ತರಗತಿ ಉತ್ತೀರ್ಣನಾಗಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ 8 ನೇ ತರಗತಿಗೆ ತೇರ್ಗಡೆ ಹೊಂದಿದ್ದ. ಏ.19ರಂದು ತನ್ನ ಕೆಟ್ಟು ಹೋಗಿದ್ದ ಸೈಕಲ್ ಅನ್ನು ರಿಪೇರಿ ಮಾಡಿಕೊಡಬೇಕೆಂದು ಮನೆಯಲ್ಲಿ ಒತ್ತಾಯಿಸಿದ್ದ. ಮನೆಯ ಇನ್ವಾರ್ಟರ್ ರಿಪೇರಿಗೆ ಬಂದಿರುವುದರಿಂದ ಇವತ್ತು ಬೇಡ ನಾಳೆ ಸೈಕಲ್ ರಿಪೇರಿ ಮಾಡಿಕೊಡಲಾಗುವುದೆಂದು ಮನೆಯವರು ಹೇಳಿದ್ದಾರೆ ಎನ್ನಲಾಗಿದೆ. ಇದೇ ನೆಪವನ್ನು ಇಟ್ಟುಕೊಂಡು ಮನನೊಂದ ಬಾಲಕ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಎಲ್ಲಾ ವಿಚಾರವನ್ನು ಮನೆಯವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಸದ್ಯ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Continue Reading

DAKSHINA KANNADA

ತ್ರಿಶೂರ್ ಪೂರಂ..! ದೇಶದ ಹೆಮ್ಮೆಯ ಉತ್ಸವ..!

Published

on

ವಿವಿಧತೆಯಲ್ಲಿ ಏಕತೆ ಕಾಣುವ ನಮ್ಮ ದೇಶ ಹಲವು ಸಂಸ್ಕೃತಿ, ಕಲೆ, ಆಚರಣೆ, ಭಾಷೆ, ಜಾತಿ, ಧರ್ಮದ ಮೂಲಕ ವಿಶ್ವದ ಗಮನ ಸೆಳೆದಿದೆ. ದಿಪಾವಳಿ, ಹೋಳಿ, ಈದ್ , ಕ್ರಿಸ್ಮಸ್‌, ಹೀಗೆ ಹಲವು ಹಬ್ಬಗಳು ರಾಷ್ಟ್ರೀಯ ಮಟ್ಟದಲ್ಲಿ ಆಚರಣೆ ಆದ್ರೆ, ಇನ್ನೂ ಕೆಲವು ಹಬ್ಬಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆ ಬೇರೆಯಾಗಿದೆ. ಅದರಲ್ಲಿ ವಿಶೇಷ ಹಬ್ಬವಾಗಿ ಕೇರಳದಲ್ಲಿ ಆಚರಿಸುವ ತ್ರಿಶೂರ್ ಪೂರಂ ಸದ್ಯ ಏಷ್ಯಾದಲ್ಲೇ ಅತೀ ಹೆಚ್ಚು ಜನರು ಭಾಗವಹಿಸುವ ಉತ್ಸವವಾಗಿ ಜಗತ್ಪ್ರಸಿದ್ದಿಯನ್ನು ಪಡೆದುಕೊಂಡಿದೆ.

ಏನಿದು ತ್ರಿಶೂರ್ ಪೂರಂ ಹಬ್ಬ

ತ್ರಿಶೂರ್ ಪೂರಂ ಅನ್ನೋದು ತ್ರಿಶೂರಿನ ಶಿವ ದೇವಾಲಯದಲ್ಲಿ ನಡೆಯುವ ವಾರ್ಷಿಕ ಜಾತ್ರೋತ್ಸವ. ಮಲೆಯಾಳಂ ಕ್ಯಾಲೆಂಡರ್ ಪ್ರಕಾರ ಪೂರಂ ನಕ್ಷತ್ರದಲ್ಲಿ ಚಂದ್ರೋದಯದ ವೇಳೆಯಲ್ಲಿ ನಡೆಯುವ ಉತ್ಸವ ಇದು. ತ್ರಿಶೂರ್ ನಲ್ಲಿರೋ ವಡಕ್ಕುನಾಥನ್‌ ಅರ್ಥಾತ್ ಶಿವ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರೆ ಇದು. ಆನೆಗಳ ಮೂಲಕ ದೇವರನ್ನು ಹೊತ್ತುಕೊಂಡು ದೇವಸ್ಥಾನದ ಬಾಗಿಲು ಪ್ರವೇಶ ಮಾಡೋದು ಈ ಉತ್ಸವದ ವಿಶೇಷ. ಹೀಗಾಗಿ  ಸಾವಿರಾರು ವಿದೇಶಿಗರು ಉತ್ಸವ ನೋಡಲು ಆಗಮಿಸ್ತಾರೆ ಅನ್ನೋದೇ ವಿಶೇಷ.

ತ್ರಿಶೂರ್ ಪೂರಂ ಹಬ್ಬದ ಹಿನ್ನೆಲೆ

ರಾಮವರ್ಮ ಕುಂಞಿಪಿಳ್ಳೆ ಎಂಬ ಕೊಚ್ಚಿನ್ ಮಹಾರಾಜ 17 ನೇ ಶತಮಾನದಲ್ಲಿ ಅರುಟ್ಟುಪುಳ ಪೂರಂ ಎಂಬ ಉತ್ಸವವನ್ನು ನಡೆಸಿಕೊಂಡು ಬಂದಿದ್ದರು. ಅರುಟ್ಟುಪುಳ ಪೂರಂ ಎಂಬ ಒಂದು ದಿನದ ಉತ್ಸವಕ್ಕೆ ತ್ರಿಶೂರು ಸೇರಿದಂತೆ ಸುತ್ತಮುತ್ತಲಿನ ದೇವಸ್ತಾನಗಳು ಇದರಲ್ಲಿ ಭಾಗಿ ಆಗುತ್ತಿದ್ದವು. 1796 ರಲ್ಲಿ ಮಳೆಯ ಕಾರಣಿದಿಂದ ತ್ರಿಶೂರ್‌ನಿಂದ ಹೊರಟಿದ್ದ ದೇವಾಲಯ ತಂಡಗಳಿಗೆ ಅರುಟ್ಟುಪುಳ ಪೂರಂ ಉತ್ಸವದಲ್ಲಿ ಭಾಗವಹಿಸಲು ಅವಕಾಶ ನಿರಾಕರಿಸಲಾಗಿತ್ತು. ಇದರಿಂದ ಕೋಪಗೊಂಡಿದ್ದ ತ್ರಿಶೂರಿನ ರಾಜ ಶಕ್ತನ್ 1796 ರಲ್ಲೇ ತ್ರಿಶೂರಿನಲ್ಲೇ ಈ ಪೂರಂ ಉತ್ಸವ ಆರಂಭಿಸಿದ್ರು ಅನ್ನೋ ಐತಿಹಾಸಿಕ ಕಥೆ ಇದೆ. ಅಂದಿನಿಂದ ತ್ರಿಶೂರಿನ ಹತ್ತು ದೇವಾಲಯಗಳು ಒಟ್ಟಾಗಿ ತ್ರಿಶೂರ್ ಪೂರಂ ಆಚರಿಸಲು ಆರಂಭವಾಯ್ತು ಅನ್ನೋ ದಾಖಲೆಗಳು ಸಿಗುತ್ತದೆ.

ಧರ್ಮಾತೀತವಾಗಿ ನಡೆಯುವ ಪೂರಂ ಉತ್ಸವ

ತ್ರಿಶೂರ್ ಪೂರಂ ಅಂದ ತಕ್ಷಣ ನೆನಪಾಗುವುದು ಅಲ್ಲಿ ಕಾಣಸಿಗುವ ಸರ್ವಧರ್ಮ ಸಮನ್ವಯತೆ. ಇಂತಹ ದೃಶ್ಯ  ಬಹುಶಃ  ದೇಶದ ಬೇರೆಲ್ಲೂ ಕಾಣಲು ಸಿಗಲಾರದು. ತ್ರಿಶೂರ್ ಪೂರಂ ಉತ್ಸವದಲ್ಲಿ ಪ್ರತಿ ವರ್ಷ ಹೊಸ ಕೊಡೆಗಳನ್ನು ತಯಾರಿಸಲಾಗುತ್ತದೆ. ಕುಡವಟ್ಟಂ ಎಂದು ಕರೆಯುವ ಈ ಕೊಡೆಗಳ ವಿಶೇಷ ಆಕರ್ಷಣೆಗೆ ಕ್ರೈಸ್ತ ಸಮೂದಾಯದವರ ಕೊಡುಗೆ ಇದ್ರೆ, ಪೂರಂಗೆ ಬೇಕಾದ ಪೆಂಡಾಲ್ ಹಾಕೋದು ಇಲ್ಲಿನ ಮುಸ್ಲಿಂ ಸಮೂದಾಯದವರು. ಇನ್ನು ಉತ್ಸವ ನೋಡಲು ಹಿಂದೂ ಮುಸ್ಲಿಂ ಕ್ರೈಸ್ತ ಹೀಗೆ ಎಲ್ಲಾ ಧರ್ಮದವರೂ ಆಗಮಿಸುವುದು ಇಲ್ಲಿನ ವಿಶೇಷ. ಇದೇ ಕಾರಣಕ್ಕೆ ಈ ತ್ರಿಶೂರ್ ಪೂರಂ ಇಂದು ಜಗತ್ಪ್ರಸಿದ್ಧಿಯನ್ನು ಪಡೆದುಕೊಂಡಿದೆ.

ತ್ರಿಶೂರ್ ಪೂರಂ ಹಬ್ಬ ಹೇಗೆ ನಡೆಯುತ್ತದೆ

ತ್ರಿಶೂರು ಹಾಗೂ ಸುತ್ತಮುತ್ತಲಿನ ಹತ್ತು ದೇವಲಾಯಗಳಿಂದ ಆನೆಯ ಮೂಲಕ ದೇವರನ್ನು ಹೊತ್ತು ಶಿವ ದೇವಾಲಯಕ್ಕೆ ತರಲಾಗುತ್ತದೆ. ಒಂದೊಂದು ದೇವಸ್ಥಾನದಿಂದ ದೇವರನ್ನು ಹೊತ್ತು ಬಾಗಿಲು ದಾಟಿ ಬರುವ ಆನೆಗಳನ್ನು ನೋಡಲು ಸಾವಿರಾರು ಭಕ್ತರು ಕಾತರದಿಂದ ಕಾಯುತ್ತಿರುತ್ತಾರೆ. ಈ ವೇಳೆ ಮೊಳಗುವ ಪಂಚ ವಾದ್ಯಗಳನ್ನು ಕೇಳಲೆಂದೇ ಕೆಲವರು ಬರುವುದಿದೆ. ಕಣಿಮಂಗಲಂ ಶಾಸ್ತಾವು ದೇವಾಲಯದಿಂದ ಆರಂಭವಾಗುವ ಈ ಉತ್ಸವ ಬಳಿಕ ಒಂದೊಂದೆ ದೇವಸ್ಥಾನದಿಂದ ಬರಲು ಆರಂಭವಾಗುತ್ತದೆ. ಚಂಡೆ, ಮದ್ದಳೆ, ಕಹಳೆ,ತಾಳ ಹಾಗೂ ಎಡಕ್ಕ ಹೀಗೆ ಪಂಚವಾದ್ಯದ ಮೆರವಣಿಗೆ ನಡೆಯುತ್ತದೆ. ಹತ್ತು ಆನೆಗಳು ದೇವಾಲಯದ ಮುಂದೆ ನಿಂತಿದ್ದರೆ , ಐವತ್ತಕ್ಕೂ ಹೆಚ್ಚು ಆನೆಗಳು ಉತ್ಸವದಲ್ಲಿ ಭಾಗಿಯಾಗುತ್ತದೆ. ಚಿನ್ನದ ಹಣೆಪಟ್ಟಿ, ಚಿನ್ನದ ಪ್ರಭಾವಳಿಯನ್ನು ಹಿಡಿದು , ಪಾರೆಮೆಕ್ಕಾವು ಮತ್ತು ತಿರುವಂಬಾಡಿ ಎಂಬ ಎರಡು ತಂಡಗಳು ಪೂರಂ ನಡೆಯುವ ಸ್ಥಳದಲ್ಲಿ ಮುಖಾಮುಖಿಯಾಗಿ ನಿಂತು ಛತ್ರಿ ವಿನಿಯಮ ಮಾಡಿಕೊಳ್ಳುವ ದೃಶ್ಯ ಪೂರಂನಲ್ಲಿ ವಿಶೇಷ ಅನುಭವ ನೀಡುವ ದೃಶ್ಯ ಕೂಡಾ ಹೌದು. ಕುಡಮಟ್ಟಂ ಅಂತ ಇದನ್ನು ಕರೆಯಲಾಗುತ್ತಿದ್ದು ಶಿವದೇವಲಾಯದ ಪಶ್ಚಿಮ ಗೋಪುರದ ಬಳಿ ಇದು ಸಂಪನ್ನಗೊಳ್ಳುತ್ತದೆ.

 

Continue Reading

DAKSHINA KANNADA

MANGALURU : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟು; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿ ಅನಾಹುತ

Published

on

ಮಂಗಳೂರು : ಪೆಟ್ರೋಲ್ ಬಂಕ್ ಸಿಬ್ಬಂದಿ ಎಡವಟ್ಟಿನಿಂದ ಕಾರಿಗೆ ಪೆಟ್ರೋಲ್ ತುಂಬಿಸುವ ಬದಲು ಡೀಸೆಲ್ ತುಂಬಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಪರಿಣಾಮ ಕಾರು ಇಂಜಿನ್ ಸಂಪೂರ್ಣ ಹಾಳಾಗಿ ಲಕ್ಷಾಂತರ ರೂ.ನಷ್ಟವಾಗಿದೆ ಎಂದು ಕಾರು ಮಾಲಕ ಆರೋಪಿಸಿದ್ದಾರೆ.

ಹೊಟೇಲ್ ಉದ್ಯಮಿ ಜೀವನ್ ಶೆಟ್ಟಿ ಎಂಬವರು ತಮ್ಮ ಹುಂಡೈ ಐ 10 ಗ್ರ್ಯಾಂಡ್ ಕಾರ್ ಗೆ ಪೆಟ್ರೋಲ್ ತುಂಬಿಸುವ ಸಲುವಾಗಿ, ಎಪ್ರಿಲ್ 5 ರಂದು ಮಧ್ಯಾಹ್ನ 12 ರ ಸುಮಾರಿಗೆ ಬಲ್ಮಠದ ಜ್ಯೂಸ್ ಜಂಕ್ಷನ್ ಮುಂಭಾಗದ ಹೆಚ್ ಪಿ ಪೆಟ್ರೋಲ್ ಬಂಕ್ ಗೆ ಬಂದಿದ್ದರು. ಕ್ಯಾಪ್ ಮೇಲೆ ಪೆಟ್ರೋಲ್ ಎಂದು ಬರೆದಿದ್ದರೂ, ಸಿಬ್ಬಂದಿ ಮಾತ್ರ ಕಾರಿಗೆ ಡೀಸೆಲ್ ತುಂಬಿಸಿದ್ದಾರೆ.

 

ಪರಿಣಾಮ ಕಾರು ಕೆಲವೇ ಕಿಲೋ ಮೀಟರ್ ಸಂಚರಿಸಿ ಮುಂದಕ್ಕೆ ಹೋಗದೆ ನಿಂತಿದೆ. ಪರಿಶೀಲಿಸಿದಾಗ ಬಂಕ್ ಸಿಬ್ಬಂದಿ ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ತುಂಬಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಪ್ರಶ್ನಿಸಿದಾಗ ಪೆಟ್ರೋಲ್ ಬಂಕ್ ಮ್ಯಾನೇಜರ್ ತಮಗೂ ಇದಕ್ಕೂ ಸಂಬಂಧವೇ ಇಲ್ಲ ಎಂದು ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾರು ಇಂಜಿನ್ ದುರಸ್ಥಿಗೆ 2 ಲಕ್ಷಕ್ಕೂ ಅಧಿಕ ಖರ್ಚು ಆಗಲಿದೆ. ಆದರೆ, ಪೆಟ್ರೋಲ್ ಬಂಕ್ ಮಾಲಕ ಬರೀ 30 ಸಾವಿರ ಕೊಟ್ಟು ಸುಮ್ಮನಾಗಿದ್ದಾರೆ ಎಂದು ಜೀವನ್ ಶೆಟ್ಟಿ ದೂರಿದ್ದಾರೆ. ಕಡಿಮೆ ಸಂಬಳಕ್ಕೆ ಅನುಭವವಿಲ್ಲದ ಕಾರ್ಮಿಕರನ್ನು ನೇಮಿಸುತ್ತಾರೆ. ಇಂತಹ ಸಮಸ್ಯೆಯಾದಾಗ ತಮ್ಮ ಇನ್ಶೂರೆನ್ಸ್ ನಲ್ಲಿ ಪರಿಹಾರ ನೀಡುವ ಅವಕಾಶವಿದ್ದರೂ ಬಂಕ್ ಮಾಲಕರು ಮಾತ್ರ ಹಿಂದೇಟು ಹಾಕುತ್ತಿದ್ದಾರೆ. ಆದ್ದರಿಂದ ತಾನು ಪರಿಹಾರಕ್ಕಾಗಿ ಗ್ರಾಹಕ ನ್ಯಾಯಾಲಯದ ಮೊರೆ ಹೋಗುವುದಾಗಿ ಜೀವನ್ ಶೆಟ್ಟಿ ಹೇಳಿದ್ದಾರೆ.

Continue Reading

LATEST NEWS

Trending