DAKSHINA KANNADA
ಬ್ರೈನ್ ಹ್ಯಾಮರೇಜ್ : ಕಡಬ ಆಲಂಕಾರಿನ ಆಟೋ ಚಾಲಕ ಮೃತ್ಯು..!
ಮೂರು ದಿನದ ಹಿಂದೆ ಮಿದುಳು ರಕ್ತಸ್ರಾವ (ಬ್ರೈನ್ ಹ್ಯಾಮರೇಜ್)ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಡಬ ಆಲಂಕಾರಿನ ಆಟೋ ಚಾಲಕರೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ಕಡಬ : ಮೂರು ದಿನದ ಹಿಂದೆ ಮಿದುಳು ರಕ್ತಸ್ರಾವ (ಬ್ರೈನ್ ಹ್ಯಾಮರೇಜ್)ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಡಬ ಆಲಂಕಾರಿನ ಆಟೋ ಚಾಲಕರೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ.
ಕಡಬ ತಾಲೂಕಿನ ಆಲಂಕಾರು ಗ್ರಾಮದ ನೆಕ್ಕಿಲಾಡಿ ನಿವಾಸಿ, ಆಲಂಕಾರು ಆದರ್ಶ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಕಮಲಾಕ್ಷ ಗೌಡ(44ವ.)ಮೃತಪಟ್ಟವರಾಗಿದ್ದಾರೆ.
ಜೂ.20ರಂದು ಬೆಳಿಗ್ಗೆ ಮನೆಯಲ್ಲಿ ಕಮಲಾಕ್ಷರವರು ಬ್ರೈನ್ ಎಮರೇಜ್ಗೆ ತುತ್ತಾಗಿ ಏಕಾಏಕಿ ಅನಾರೋಗ್ಯಕ್ಕೆ ಒಳಗಾಗಿದ್ದರು.
ತಕ್ಷಣ ಅವರ ಸಹೋದರ ಆಲಂಕಾರಿನ ಕ್ಲಿನಿಕ್ಗೆ ಕರೆತಂದು ಬಳಿಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು.
ಅಲ್ಲಿನ ವೈದ್ಯರ ಸಲಹೆಯಂತೆ ಅದೇ ದಿನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.
ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಕಮಲಾಕ್ಷ ಗೌಡರವರು ಚಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ.
ಕಮಲಾಕ್ಷ ಗೌಡರವರು ಕಳೆದ 5 ವರ್ಷಗಳಿಂದ ಆಲಂಕಾರಿನಲ್ಲಿ ಬಾಡಿಗೆ ರಿಕ್ಷಾ ಓಡಾಟ ನಡೆಸುತ್ತಿದ್ದರು.
BANTWAL
ಬಯಲಾಯ್ತು ಅಕ್ರಮ ಸಂಬಂಧ; ನೇಣಿಗೆ ಶರಣಾದ ವಿವಾಹಿತ!
ಪುತ್ತೂರು : ವ್ಯಕ್ತಿಗಳು ಸಾಲಬಾಧೆಯಿಂದಲೋ, ಅನಾರೋಗ್ಯದಿಂದಲೋ ಅಥವಾ ಜೀವನದಲ್ಲಿ ಜಿಗುಪ್ಸೆ ಹೊಂದಿಯೋ ಜೀವಾಂತ್ಯಗೊಳಿಸುವುದನ್ನು ಕಾಣುತ್ತೇವೆ. ಆದರೆ, ಇಲ್ಲೊಬ್ಬ,
ಅಕ್ರಮ ಪ್ರೇಮ ಸಂಬಂಧದ ಹಿನ್ನಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪ ಶನಿವಾರ ಘಟನೆ ಸಂಭವಿಸಿದೆ.
ಈಶ್ವರಮಂಗಲ ಸಮೀಪದ ಕತ್ರಿಬೈಲುವಿನ ಪ್ರಶಾಂತ್ ಮುಖಾರಿ (೩೮) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ ತನ್ನ ಮನೆಯಿಂದ ಸುಮಾರು ಒಂದು ಕಿಲೋಮೀಟರ್ ಅಂತರದಲ್ಲಿರುವ ಚಿಮುಣಿಗುಡ್ಡೆ ಎಂಬಲ್ಲಿನ ಗುಡ್ಡದ ರಸ್ತೆ ಬದಿಯಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಇದನ್ನು ಓದಿ: ಈ ವೀಡಿಯೋವನ್ನು ವೈರಲ್ ಮಾಡುವ ಧೈರ್ಯ ನಿಮ್ಮಲ್ಲಿ ಇದ್ಯಾ ? ವೀಡಿಯೋವೊಂದನ್ನು ಹಂಚಿಕೊಂಡು ಸವಾಲೆಸೆದ ನಟಿ ಜ್ಯೋತಿ ರೈ
ಅಕ್ರಮ ಸಂಬಂಧ ಬಯಲು – ನೇಣಿಗೆ ಶರಣು :
ಪ್ರಶಾoತ್ ಮುಖಾರಿ ಅವರಿಗೆ ಪತ್ನಿ ಮತ್ತು ಎಳೆಯ ವಯಸ್ಸಿನ ಪುತ್ರನಿದ್ದಾನೆ. ಈ ನಡುವೆ ಇನ್ನೊಬ್ಬಳು ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ವಿಚಾರ ಬಹಿರಂಗಗೊಂಡಿದ್ದ ಹಿನ್ನೆಲೆಯಲ್ಲಿ ಅವರು ಅಪಮಾನಗೊಂಡು ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.
ಮೃತರ ಪತ್ನಿ ನೀಡಿರುವ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BANTWAL
ಕಡಬ : ಸಿಡಿಲು ಬಡಿದು ಓರ್ವ ಸಾವು; ಇಬ್ಬರಿಗೆ ಗಾಯ
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ವರುಣ ಕೃಪೆ ತೋರಿದ್ದಾನೆ. ಇನ್ನೊಂದೆಡೆ ಸಿಡಿಲಾರ್ಭಟಕ್ಕೆ ವ್ಯಕ್ತಿ ಬಲಿಯಾಗಿದ್ದಾರೆ.. ಕಡಬ ತಾಲೂಕಿನಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿವೆ. ಉತ್ತರ ಪ್ರದೇಶ,ಚೈನ್ಪುರ್ ಮೂಲದ ಶ್ರೀಕಿಶುನ್ ಮೃತ ವ್ಯಕ್ತಿ.
ಇದನ್ನು ಓದಿ:ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ!
ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ನದಿ ಬದಿಯ ಶೆಡ್ ನಲ್ಲಿದ್ದ ವೇಳೆ ಶೆಡ್ ಗೇ ಸಿಡಿಲು ಬಡಿದಿದೆ. ಪರಿಣಾಮ ಮರಳು ತೆಗೆಯುವ ಉತ್ತರ ಪ್ರದೇಶ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.
DAKSHINA KANNADA
ಅಕ್ಕಿಯಲ್ಲಿ ಕೀಟಗಳಿದ್ದರೆ ಅದನ್ನು ದೂರ ಮಾಡಲು ಹೀಗೆ ಮಾಡಿ…!
ಮಂಗಳೂರು: ಅಕ್ಕಿ ಹೆಚ್ಚಿನವರ ಆಹಾರ ಪದಾರ್ಥಗಳಲ್ಲಿ ಒಂದಾಗಿದೆ. ಹೀಗಾಗಿ ಅಕ್ಕಿಯಿಂದ ವಿವಿಧ ತಿಂಡಿ ತಿನಿಸುಗಳನ್ನು ತಯಾರಿಸಿ ಸೇವಿಸುತ್ತಾರೆ. ಆದರೆ ಈ ಅಕ್ಕಿಯನ್ನು ಹೆಚ್ಚು ದಿನಗಳವರೆಗೆ ಸಂಗ್ರಹಿಸಿಡುವುದು ಸ್ವಲ್ಪ ಕಷ್ಟವೇ. ಕೆಲವೊಮ್ಮೆ ಮಾಡುವ ಸಣ್ಣ ಪುಟ್ಟ ತಪ್ಪುಗಳಿಂದ ಅಕ್ಕಿಯಲ್ಲಿ ಹುಳಗಳು ಹಾಗೂ ಕೀಟಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ಮನೆಯಲ್ಲೇ ಸುಲಭವಾದ ವಿಧಾನವನ್ನು ಬಳಸಿ ಹುಳಗಳು ಹಾಗೂ ಕೀಟಗಳಿಂದ ಅಕ್ಕಿಯನ್ನು ದೀರ್ಘಕಾಲದವರೆಗೆ ಸಂಗ್ರಹಿಸಿಡಬಹುದಾಗಿದೆ.
ಅಕ್ಕಿಯಲ್ಲಿ ವಿವಿಧ ಜೀವಸತ್ವಗಳು ಮತ್ತು ಖನಿಜಗಳು ಹೇರಳವಾಗಿದ್ದು, ವಿಟಮಿನ್ ಡಿ, ಕ್ಯಾಲ್ಸಿಯಂ, ಫೈಬರ್, ಕಬ್ಬಿಣ, ಥಯಾಮಿನ್ ಮತ್ತು ರಿಬೋಫ್ಲಾವಿನ್ ಗಳಿವೆ. ಕೆಲವರು ಮನೆಯಲ್ಲಿ ಅಕ್ಕಯನ್ನ ಶೇಖರಿಸಿ ಇಟ್ಟರೂ ಕೀಟಗಳು ಹಾಗೂ ಹುಳಗಳ ಬಾಧೆ ತಪ್ಪಿದ್ದಲ್ಲ. ಅಕ್ಕಿಗೆ ಕೀಟಬಾಧೆ ಬಾರದಂತೆ ರಾಸಾಯನಿಕ ಮಿಶ್ರಿತ ಪೌಡರ್ ಬಳಸಿದರೆ ಅನೇಕ ಆರೋಗ್ಯ ಸಮಸ್ಯೆಗಳು ಉಂಟಾಗುತ್ತವೆ.
- ಅಕ್ಕಿಯನ್ನು ಸಂಗ್ರಹಿಸುವ ಪ್ರದೇಶವು ಶುಷ್ಕವಾಗಿಟ್ಟುಕೊಳ್ಳಿ. ಅಕ್ಕಿಯ ಚೀಲದಲ್ಲಿ ಮಸಾಲೆ ಪದಾರ್ಥಗಳನ್ನು ಇಟ್ಟರೆ ಕೀಟಗಳು ಬರುವುದಿಲ್ಲ. ಕರ್ಪೂರ, ಇಂಗು, ಲವಂಗ, ದಾಲ್ಚಿನ್ನಿ, ಬಿರಿಯಾನಿ ಎಲೆಗಳು ಮತ್ತು ನಕ್ಷತ್ರದ ಹೂವುಗಳನ್ನು ಕವರ್ನಲ್ಲಿ ಹಾಕಿ ಅಕ್ಕಿ ಚೀಲಗಳಲ್ಲಿ ಹಾಕಿಟ್ಟರೆ ದೀರ್ಘಕಾಲದವರೆಗೆ ಯಾವುದೇ ಕೀಟಗಳು ಬಾರದಂತೆ ಸಂರಕ್ಷಿಸಿಡಬಹುದು.
- ಅಕ್ಕಿಯನ್ನು ಕೀಟಗಳಿಂದ ಮುಕ್ತವಾಗಿಡುವಲ್ಲಿ ಬೇವು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದ್ದು, ಬಹಳಷ್ಟು ಪರಿಣಾಮಕಾರಿಯಾಗಿದೆ.
- ಅಕ್ಕಿ ಚೀಲಗಳಲ್ಲಿ ಬೆಳ್ಳುಳ್ಳಿ ಮತ್ತು ಉಪ್ಪನ್ನು ಹಾಕಿಟ್ಟರೆ ಅಕ್ಕಿಗೆ ಕೀಟಗಳು ಬರದಂತೆ ನೋಡಿಕೊಳ್ಳಬಹುದು. ಸಿಪ್ಪೆ ಸುಲಿದ ಬೆಳ್ಳುಳ್ಳಿ ಹಾಗೂ ಉಪ್ಪನ್ನು ಕವರ್ ನಲ್ಲಿಟ್ಟು ಅಕ್ಕಿಯ ಶೇಖರಣೆಯಲ್ಲಿಟ್ಟರೆ ಕೀಟಗಳು ಬರುವುದಿಲ್ಲ.
- ಅಕ್ಕಿ ಚೀಲದಲ್ಲಿ ತುಳಸಿ ಎಲೆಗಳನ್ನು ಇರಿಸಿದರೆ ಹುಳಗಳು ಬೇಗನೇ ಆಗುವುದಿಲ್ಲ.
- ಒಂದು ವೇಳೆ ಅಕ್ಕಿಯಲ್ಲಿ ಹುಳಗಳು ಆಗಿದ್ದರೆ ಆ ಅಕ್ಕಿಯನ್ನು ಗಾಳಿಯಾಡದ ಕವರ್ನಿಂದ ಹಾಕಿಟ್ಟು 3-4 ದಿನಗಳವರೆಗೆ ಫ್ರಿಜ್ನಲ್ಲಿ ಇಟ್ಟರೆ ಕೀಟಗಳು ಹಾಗೂ ಹುಳಗಳು ಸಾಯುತ್ತವೆ.
- LATEST NEWS5 days ago
ಐವರು ಮೆಡಿಕಲ್ ವಿದ್ಯಾರ್ಥಿಗಳು ನೀರುಪಾಲು…!
- FILM6 days ago
ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್ಗೆ ಏನಾಗಿದೆ? ಎಂದು ಹೇಳಿದ್ಯಾಕೆ?
- DAKSHINA KANNADA5 days ago
ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
- LATEST NEWS5 days ago
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ; ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ನಿರ್ಬಂಧ..!