Connect with us

LATEST NEWS

ಧಗಧಗನೆ ಹೊತ್ತಿ ಉರಿದ ಬೈಹುಲ್ಲು ಲಾರಿ: ಜೀವ ಪಣಕ್ಕಿಟ್ಟು ರಕ್ಷಿಸಿದ ಆಪತ್ಭಾಂಧವ

Published

on

ಕೊಚ್ಚಿ: ವ್ಯಕ್ತಿಯೊಬ್ಬರ ಸಮಯ ಪ್ರಜ್ಞೆಯಿಂದಾಗಿ ಕೇರಳದ ಕೊಡಂಚೇರಿ ಪಟ್ಟಣದನಅಮಲ್ಲಿ ದೊಡ್ಡ ದುರಂತವೊಂದು ತಪ್ಪಿದೆ.

ರವಿವಾರದಂದು ಭತ್ತದ ಹುಲ್ಲು ತುಂಬಿದ್ದ ಲಾರಿಗೆ ಓವರ್‌ಹೆಡ್ ವಿದ್ಯುತ್ ತಂತಿ ತಗಲಿದ ನಂತರ ಬೆಂಕಿ ಹೊತ್ತಿಕೊಂಡಿತ್ತು. ಲಾರಿಯ ಚಾಲಕ ತನ್ನ ವಾಹನವು ಬೆಂಕಿಯಲ್ಲಿ ಉರಿದುಹೋಗುತ್ತದೆ ಎಂದು ಖಚಿತವಾಗಿ ಅಸಹಾಯಕನಾಗಿ ನಿಂತಿದ್ದ.

ಆಗ ಆಪತ್ಬಾಂಧವನಂತೆ ಬಂದ ವ್ಯಕ್ತಿಯೊಬ್ಬ ಲಾರಿಯನ್ನು ಉಳಿಸಲು ಹಾಗೂ ದೊಡ್ಡ ದುರಂತವನ್ನು ತಪ್ಪಿಸಲು ಕಾರ್ಯಪ್ರವೃತ್ತನಾಗಿದ್ದ.

ರವಿವಾರ ಮಧ್ಯಾಹ್ನ 12.30ರ ಸುಮಾರಿಗೆ ಲಾರಿ ಚಾಲಕ ತನ್ನ ವಾಹನದಿಂದ ಜಿಗಿದಾಗ ಶಾಜಿ ವರ್ಗೀಸ್ ಎಂಬುವವರು ಆಗಮಿಸಿದರು. ವರ್ಗೀಸ್ ಆ ಪ್ರದೇಶವನ್ನು ಹಾಗೂ ಅಲ್ಲಿನ ನಿವಾಸಿಗಳನ್ನು ಸಂಭವನೀಯ ಸ್ಫೋಟದಿಂದ ರಕ್ಷಿಸುವ ಪ್ರಯತ್ನಕ್ಕೆ ಕೈಹಾಕಿದರು.

ಬೆಂಕಿಯಿಂದ ಉರಿಯುತ್ತಿದ್ದ ಲಾರಿಯನ್ನು ಏರಿದ ವರ್ಗೀಸ್ ಖಾಲಿ ಆಟದ ಮೈದಾನದತ್ತ ಅದನ್ನು ಓಡಿಸಿದರು. ಉರಿಯುತ್ತಿರುವ ವಾಹನವನ್ನೂ ಉಳಿಸುವಲ್ಲಿ ಯಶಸ್ವಿಯಾದರು.

ಸಾಧ್ಯವಾದಷ್ಟು ಹೆಚ್ಚು ಸುಡುವ ಲೋಡ್ ಅನ್ನು ಆಫ್‌ಲೋಡ್ ಮಾಡಲು ಲಾರಿಯನ್ನು ‘ಜಿಗ್‌ಜಾಗ್’ ರೀತಿಯಲ್ಲಿ ಓಡಿಸಿದ್ದ ವರ್ಗೀಸ್, ಇತರ ಸ್ವಯಂಸೇವಕರೊಂದಿಗೆ ವಾಹನವು ಸುಟ್ಟುಹೋಗದಂತೆ ತಡೆಯುವಲ್ಲಿ ಯಶಸ್ವಿಯಾದರು.

ಮತ್ತು ಅಗ್ನಿಶಾಮಕ ದಳದವರ ಆಗಮನದವರೆಗೆ ಪರಿಸ್ಥಿತಿಯನ್ನು ಸುರಕ್ಷಿತವಾಗಿ ನಿರ್ವಹಿಸಿದರು.
ವರ್ಗೀಸ್ ಅವರ ಧೈರ್ಯಶಾಲಿ ದೃಶ್ಯದ ತುಣುಕನ್ನು ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ.

ಈ ಬಗ್ಗೆ ಅಭಿಪ್ರಾಯವನ್ನು ಹಂಚಿಕೊಂಡ ವರ್ಗೀಸ್ “ನಾನು 25 ವರ್ಷಗಳಿಂದ ಹೆವಿ ಡ್ಯೂಟಿ ಮೋಟಾರು ಚಾಲಕನಾಗಿ ಕೆಲಸ ಮಾಡುತ್ತಿದ್ದೇನೆ. ನನ್ನ ಹಳ್ಳಿ ಮತ್ತು ವಿದೇಶಗಳಲ್ಲಿ ಇದೇ ರೀತಿಯ ಅಪಾಯಕಾರಿ ಸನ್ನಿವೇಶಗಳನ್ನು ನಿಭಾಯಿಸುವಲ್ಲಿ ನನ್ನ ಹಿಂದಿನ ಅನುಭವಗಳು ಈ ಸವಾಲನ್ನು ಎದುರಿಸಲು ನನಗೆ ಸಹಾಯ ಮಾಡಿದೆ ಎಂದು ನಾನು ಭಾವಿಸುತ್ತೇನೆ’’ ಎಂದು ಹೇಳಿದ್ದಾರೆ.

ಬೆಂಕಿ ಹೊತ್ತಿದ್ದ ಲಾರಿಯನ್ನು ಚಲಾಯಿಸಿದ್ದ ದೃಶ್ಯಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವುದರಿಂದ ಹಲವಾರು ಸಾರ್ವಜನಿಕ ಕಾರ್ಯಕ್ರಮಗಳಿಗೆ ವರ್ಗೀಸ್‌ರವರನ್ನು ಆಹ್ವಾನಿಸಲಾಗುತ್ತಿದೆ ಹಾಗೂ ಸ್ನೇಹಿತರು ಮತ್ತು ಕುಟುಂಬದಿಂದ ಭರಪೂರ ಪ್ರಶಂಸೆಗಳು ವ್ಯಕ್ತವಾಗುತ್ತಿದೆ.

LATEST NEWS

ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್‌ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!

Published

on

ರಾಯಚೂರು : ಪತ್ನಿಗೆ ಮೆಸೇಜ್ ಮಾಡಿದ ಕಾರಣಕ್ಕೆ ಹನುಮ ಜಯಂತಿಯಂದು ಉಗ್ರ ರೂಪ ತಾಳಿದ ಆಂಜನೇಯ ಗುಡಿ ಪೂಜಾರಿ ಆ ಯುವಕನನ್ನು ಬರ್ಬರವಾಗಿ ಕೊ*ಲೆಗೈದಿರುವ ಘಟನೆ ರಾಯಚೂರಿನ ತುಗ್ಗಲದಿನ್ನಿ ಗ್ರಾಮದಲ್ಲಿ ನಡೆದಿದೆ.


ಖಾದರ್ ಭಾಷಾ (28) ಕೊ*ಲೆಯಾದ ವ್ಯಕ್ತಿ. ಮಾರುತಿ ಹ*ತ್ಯೆಗೈದ ಪೂಜಾರಿ. ಇಬ್ಬರೂ ಮಸ್ಕಿ ತಾಲೂಕಿನ ಬಳಗಾನೂರು ಗ್ರಾಮದ ನಿವಾಸಿಗಳು. ಆದರೆ, ಖಾದರ್ ಭಾಷಾ ಮಾರುತಿ ಪತ್ನಿ‌ ಮೇಲೆ ಕಣ್ಣು ಹಾಕಿದ್ದಾನೆ. ಹೀಗಾಗಿ ಮಾರುತಿ, ಖಾದರ್‌ ಭಾಷಾನ ಕಣ್ಣು ಕಿತ್ತು ಹಾಕಿ, ಮುಖದ ಗುರುತು ಸಿಗದಂತೆ ಕೊಚ್ಚಿ ಭೀ*ಭತ್ಸವಾಗಿ ಹ*ತ್ಯೆ ಮಾಡಿದ್ದಾನೆ.

ಕೊ*ಲೆಗೈದ ಮಾರುತಿ ಖುದ್ದಾಗಿ ಠಾಣೆಗೆ ಬಂದು ಶರಣಾಗಿದ್ದಾನೆ. ಈ ಕೊ*ಲೆಯಲ್ಲಿ ಇತರರೂ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ : ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬ್ಯಾಗ್ ಪರಿಶೀಲಿಸಿದ ಕಸ್ಟಮ್ಸ್ ಅಧಿಕಾರಿಗಳಿಗೆ ಶಾಕ್; ಅದರಲ್ಲಿತ್ತು 10 ಅನಕೊಂಡಾ!

Continue Reading

International news

4 ಸಾವಿರ ಕೋಟಿಯ ಮನೆ..8 ಖಾಸಗಿ ಜೆಟ್..700 ಹೈಎಂಡ್ ಕಾರುಗಳು..! ಯಾರು ಈ ಶ್ರೀಮಂತ..?

Published

on

ಮಂಗಳೂರು : ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳ ಸಾಲಿನಲ್ಲಿ ಎಲೋನ್ ಮಸ್ಕ್ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಎಲ್ಲರೂ ಹುಬ್ಬೇರುವಷ್ಟು ಆಸ್ತಿ, ಪಾಸ್ತಿ ಹೊಂದಿದ್ದಾರೆ. ಆದರೆ, ಅವರಿಗಿಂತಲೂ ಶ್ರೀಮಂತರಿದ್ದಾರೆ ಗೊತ್ತಾ!? ಅಬ್ಬಾ! ಹೌದಾ! ಹಾಗಾದರೆ ಅವರ ಬಳಿ ಎಷ್ಟು ಆಸ್ತಿ ಇದೆ ಎಂದು ನೀವು ಹುಬ್ಬೇರಿಸುತ್ತಿರಬಹುದು. ಇಲ್ಲಿದೆ ಆ ಕುಟುಂಬದ ಸಂಪೂರ್ಣ ವಿವರ.

ಬ್ಲೂಮ್‌ಬರ್ಗ್ ವರದಿ ಮಾಡಿರೋ ಶ್ರೀಮಂತರು

ಎಲೋನ್ ಮಸ್ಕ್ ಮನೆ ಬರೋಬ್ಬರಿ 4 ಸಾವಿರ ಕೋಟಿ ಬೆಲೆ ಬಾಳಿದ್ರೆ, ಈ ಕುಟುಂಬ 8 ಖಾಸಗಿ ಜೆಟ್ ಗಳನ್ನು ಹೊಂದಿದೆ. 700 ಹೈ ಎಂಡ್ ಕಾರುಗಳು ಇವರಲ್ಲಿದೆ. ಬ್ಲೂಮ್‌ ಬರ್ಗ್ ಇತ್ತೀಚಿಗೆ ಮಾಡಿದ ವರದಿಯಂತೆ ಜಗತ್ತಿನ ಶ್ರೀಮಂತ ವ್ಯಕ್ತಿ ಎಂದು ಕರೆಸಿಕೊಳ್ಳುವ ಎಲೋನ್ ಮಸ್ಕ್ ಆಸ್ತಿ 14,87,360 ಕೋಟಿ(ಹದಿನಾಲ್ಕು ಲಕ್ಷದ ಎಂಬತ್ತೇಳು ಸಾವಿರದ ಮುನ್ನೂರ ಅರುವತ್ತು ಕೋಟಿ)ಯಾಗಿದೆ.

ಆದ್ರೆ, ಆ ಕುಟುಂಬದ ಒಟ್ಟು ಆಸ್ತಿ ಕನಿಷ್ಟ ಅಂದ್ರೂ 25,33,113 ಕೋಟಿ (ಇಪ್ಪತೈದು ಲಕ್ಷದ ಮೂವತ್ತಮೂರು ಸಾವಿರದ ನೂರ ಹದಿಮೂರು ಕೋಟಿ) ಎಂದು ಅಂದಾಜಿಸಿದೆ. ಆದ್ರೆ, ಎಲೋನ್ ಮಸ್ಕ್ ಆಸ್ತಿ ವೈಯಕ್ತಿಕವಾಗಿದ್ದರೆ, ಇವರದ್ದು ಕುಟುಂಬದ ಆಸ್ತಿಯಾಗಿದೆ. ಆದ್ರೆ ಜಗತ್ತಿನಲ್ಲೇ ಅತ್ಯಂತ ಐಶಾರಾಮಿ ಜೀವನ ನಡೆಸ್ತಾ ಇದೆ ಈ ಕುಟುಂಬ.

ಯಾವುದು ಆ ಕುಟುಂಬ?


ಅಂದಹಾಗೆ ಅತ್ಯಂತ ಐಷಾರಾಮಿ ಜೀವನ ಸಾಗಿಸುತ್ತಿರುವ ಆ ಕುಟುಂಬ  ‘ಅಬುಧಾಬಿಯ ರಾಜಮನೆತನ‘. ಇದನ್ನು ಅಲ್‌-ನಯನ್ ಕುಟುಂಬ ಎಂದೂ ಕೂಡಾ ಕರೆಯಲಾಗುತ್ತದೆ. ಸದ್ಯದ ಮಟ್ಟಿಗೆ ಜಗತ್ತಿನಲ್ಲಿ ಇವರೇ ಅತ್ಯಂತ ಐಶಾರಾಮಿ ಜೀವನ ಸಾಗಿಸುತ್ತಿರುವ ಕುಟುಂಬ. ಇವರು ವಾಸವಾಗಿರುವ ಅರಮನೆಯ ಅಂದಾಜು ಮೌಲ್ಯ 4000 ಕೋಟಿಯದ್ದಾಗಿದೆ. ಇನ್ನು 700 ಐಶಾರಾಮಿ ಕಾರುಗಳು, ಗಾಲ್ಫ್ ಆಡಬಹುದಾದ ದೊಡ್ಡದಾದ ವಿಹಾರ ನೌಕೆ, ಇನ್ನು ತಿರುಗಾಡಲು 8 ಖಾಸಗಿ ಜೆಟ್‌ಗಳು ಇವರ ಬಳಿ ಇದೆ.

ಜಗತ್ತಿನಾದ್ಯಂತ ಸಾವಿರಾರು ಕೋಟಿ ಹೂಡಿಕೆ


ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಅಧ್ಯಕ್ಷ ಮತ್ತು ಮುಖ್ಯಸ್ಥ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಯಾನ್ ಅವರ ಕುಟುಂಬವು ಪ್ರಪಂಚದಾದ್ಯಂತ ಸಾವಿರಾರು ಹೂಡಿಕೆಗಳನ್ನು ಹೊಂದಿದೆ. ಅಲ್ಲದೇ, ಜಗತ್ತಿನಾದ್ಯಂತ ಸಾಕಷ್ಟು ಆಸ್ತಿಗಳನ್ನು ಈ ಕುಟುಂಬ ಖರೀದಿಸಿದೆ. ಪ್ಯಾರಿಸ್‌ನಲ್ಲಿರುವ ಚಟೌ ಡಿ ಬೈಲೊ ಮತ್ತು ಯುಕೆಯಲ್ಲಿನ ಅನೇಕ ಆಸ್ತಿಗಳ ಮಾಲೀಕತ್ವದ ಕಾರಣ ಶೇಖ್ ಖಲೀಫಾ ಅವರನ್ನು ಲಂಡನ್‌ನ ಜಮೀನುದಾರ ಎಂದು ಕರೆಯಲಾಗುತ್ತದೆ. ಈ ಕುಟುಂಬವು ಪ್ರಪಂಚದಾದ್ಯಂತ ಲೆಕ್ಕವಿಲ್ಲದಷ್ಟು ಹೂಡಿಕೆ ಮಾಡಿದೆ. ಇದು ಎಲೋನ್ ಮಸ್ಕ್ ಅವರ ಕಂಪನಿ ಸ್ಪೇಸ್‌ ಎಕ್ಸ್ ಮತ್ತು ರಿಹಾನ್ನಾ ಅವರ ಐಷಾರಾಮಿ ಕಂಪನಿ ಸ್ಯಾವೇಜ್ ಎಕ್ಸ್‌ನ ಹೆಸರುಗಳನ್ನು ಸಹ ಒಳಗೊಂಡಿದೆ.

ಇದನ್ನೂ ಓದಿ : ಅಂಬಾನಿ ಪುತ್ರನ ಮದುವೆ ಎಲ್ಲಿ ನಡೆಯುತ್ತೆ ಗೊತ್ತಾ…!! ಹೇಗಿದೆ ಅದ್ಧೂರಿ ತಯಾರಿ?

ರಾಯಲ್ ವಿಹಾರ ನೌಕೆ :


ರಾಯಲ್ ಫ್ಯಾಮಿಲಿ ಅಂದ್ರೆ ಕೇಳ್ಬೇಕಾ..! ಎಲ್ಲವೂ ರಾಯಲ್ ಆಗೇ ಇರುತ್ತದೆ. ಈ ಕುಟುಂಬ ಪ್ರಪಂಚದ ಅತಿದೊಡ್ಡ ವಿಹಾರ ನೌಕೆಯನ್ನು ಹೊಂದಿದೆ, ಅದರ ಮೇಲೆ ಗಾಲ್ಫ್ ಕೋರ್ಸ್ ಅನ್ನು ನಿರ್ಮಿಸಲಾಗಿದೆ. ನೀಲಿ ಸೂಪರ್‌ಯಾಚ್‌ನ ಉದ್ದವು ಸುಮಾರು 591 ಅಡಿಗಳು, ಇದರ ಬೆಲೆ ಸುಮಾರು 4,991 ಕೋಟಿ ರೂ. ಜೊತೆಗೆ ಹಲವು ಐಶಾರಾಮಿ ಕಾರುಗಳೂ ಇವೆ. ಬುಗಾಟಿ, ಫೆರಾರಿ, ಮೆಕ್ಲಾರೆನ್, ಮರ್ಸಿಡಿಸ್-ಬೆನ್ಜ್ ಮತ್ತು ಲಂಬೋರ್ಘಿನಿ ಸೇರಿದಂತೆ ಹಲವು ಕಾರುಗಳಿವೆ.

Continue Reading

LATEST NEWS

ಕೇರಳದಲ್ಲಿ ಬಹಿರಂಗವಾಗಿ ಕಾಣಿಸಿದ ನಕ್ಸಲರ ತಂಡ; ಚುನಾವಣೆ ಬಹಿಷ್ಕಾರಕ್ಕೆ ಕರೆ

Published

on

ಕೇರಳ : ವಯನಾಡು ಜಿಲ್ಲೆಯ ಕಂಬಮಲೆ ಅರಣ್ಯ ಹಾಗೂ ಮಕ್ಕಿಮಲೆ ಅರಣ್ಯದಲ್ಲಿ ನಕ್ಸಲರು ಇದ್ದಾರೆ ಅನ್ನೋ ಅನುಮಾನ ಬಲವಾಗಿತ್ತು. ಹೀಗಾಗಿ ಕೇರಳದ ನಕ್ಸಲ್ ನಿಗ್ರಹ ತಂಡ ನಿರಂತರ ಕೂಂಬಿಂಗ್ ನಡೆಸಿತ್ತು. ಆದ್ರೆ, ನಕ್ಸಲರ ಸುಳಿವು ಪತ್ತೆಯಾಗದ ಕಾರಣ ಕೂಂಬಿಂಗ್ ನಿಲ್ಲಿಸಲಾಗಿತ್ತು. ಆದ್ರೆ, ಇದೀಗ ಲೋಕಸಭಾ ಚುನಾವಣೆ ವೇಳೆ ಮತ್ತೆ ನಕ್ಸಲರು ಗ್ರಾಮದಲ್ಲಿ ಕಾಣಿಸಿಕೊಂಡಿದ್ದಾರೆ.


ಚುನಾವಣೆ ಬಹಿಷ್ಕರಿಸಲು ಸೂಚನೆ :

ಮಾವೋವಿಸ್ಟ್ ಜಿಂದಾಬಾದ್ ಎಂಬ ಘೋಷಣೆ ಕೂಗಿ ಗ್ರಾಮಕ್ಕೆ ಎಂಟ್ರಿ ಕೊಟ್ಟು ನಾಲ್ವರ ತಂಡ ಚುನಾವಣೆಗೆ ಬಹಿಷ್ಕಾರ ಮಾಡುವಂತೆ ಕರೆ ನೀಡಿದ್ದಾರೆ. ಗ್ರಾಮಸ್ಥರ ಜೊತೆ ಮಾತನಾಡಿ ಕಳೆದ ನಲುವತ್ತು ವರ್ಷದಿಂದ ಕಂಬಮಲೆ ಅರಣ್ಯ ತಪ್ಪಲಿನ ಜನರ ಸಮಸ್ಯೆಯನ್ನು ಸರ್ಕಾರ ಗಮನಿಸಿಲ್ಲ. ಇಲ್ಲಿ ವಾಸವಾಗಿರುವ ಕೂಲಿ ಕಾರ್ಮಿಕರ ಕಷ್ಟ ಸರ್ಕಾರ ಅರ್ಥ ಮಾಡಿಕೊಂಡಿಲ್ಲ. ಹೀಗಾಗಿ ಎಲ್ಲರೂ ಚುನಾವಣೆ ಬಹಿಷ್ಕಾರ ಮಾಡಿ ಎಂದು ಕರೆ ನೀಡಿದ್ದಾರೆ.

ಈ ತಂಡದಲ್ಲಿ ಕೇರಳ ರಾಜ್ಯಕ್ಕೆ ಬಹಳಷ್ಟು ವರ್ಷಗಳಿಂದ ತಲೆ ಮರೆಸಿಕೊಂಡಿರುವ ನಕ್ಸಲರು ಇದ್ದರು ಅನ್ನೋ ಮಾಹಿತಿಯನ್ನು ಸ್ಥಳೀಯರು ನೀಡಿದ್ದಾರೆ. ಕಂಬಮಲೆ ಎಂಬ ಪ್ರದೇಶದಲ್ಲಿ ಟೀ ಎಸ್ಟೇಟ್ ಇದ್ದು, ಇಲ್ಲಿನ ಕೂಲಿ ಕಾರ್ಮಿಕರ ಜೊತೆ ನಕ್ಸಲರು ಮಾತುಕತೆ ನಡಿಸಿದ ವಿಡಿಯೋ ಈಗ ಪೊಲೀಸರಿಗೆ ಲಭ್ಯವಾಗಿದೆ.

ಇದನ್ನೂ ಓದಿ : ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!

ವಿಡಿಯೋ ಮಾಡುತ್ತಿರುವುದು ಗಮನಕ್ಕೆ ಬಂದರೂ ಏನೂ ಮಾತನಾಡದೆ ಶಸಸ್ತ್ರರಾಗಿದ್ದ ನಕ್ಸಲರು ಮಕ್ಕಿಮಲೆ ಕಾಡಿನೊಳಗೆ ಹೋಗಿ ಕಣ್ಮರೆ ಆಗಿದ್ದಾರೆ.

 

Continue Reading

LATEST NEWS

Trending