LATEST NEWS
ಪತ್ನಿಯ ಅಗಲುವಿಕೆಗೆ ಜೀವಾಂತ್ಯಗೊಳಿಸಿದ ಶೌರ್ಯ ಪ್ರಶಸ್ತಿ ವಿಜೇತ ಐಪಿಎಸ್ ಅಧಿಕಾರಿ ..!
ಗುವಾಹಟಿ: ಪತ್ನಿಯ ಸಾ*ವಿನಿಂದ ಮನನೊಂದ 44 ವರ್ಷದ ಐಪಿಎಸ್ ಅಧಿಕಾರಿ ಪತ್ನಿಯ ದೇಹದ ಬಳಿಯಲ್ಲೇ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಅಸ್ಸಾಂ ಗೃಹ ಮತ್ತು ರಾಜಕೀಯ ಕಾರ್ಯದರ್ಶಿ ಹಾಗೂ ರಾಷ್ಟ್ರಪತಿಗಳ ಶೌರ್ಯ ಪದಕ ವಿಜೇತ ಶಿಲಾದಿತ್ಯ ಚೇಟಿಯಾ ಆತ್ಮಹ*ತ್ಯೆ ಮಾಡಿಕೊಂಡ ಅಧಿಕಾರಿಯಾಗಿದ್ದಾರೆ.
ಚೇಟಿಯಾ ಅವರ ಪತ್ನಿ ಅಗಮೊನಿ ಬೋರ್ಬರುವಾ(40) ಗುವಾಹಾಟಿಯ ನೇಮಕೇರ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ನಿಂದಾಗಿ ಇಹಲೋಕ ತ್ಯಜಿಸಿದ್ದರು. ಜೂನ್ 18 ರ ಸಂಜೆ 4.25 ರ ಸುಮಾರಿಗೆ ಅವರು ಮೃ*ತಪಟ್ಟ ಬಗ್ಗೆ ವೈದ್ಯರು ಖಚಿತಪಡಿಸಿದ್ದರು. ಹತ್ತು ನಿಮಿಷದ ಬಳಿಕ ಐಸಿಯು ಪ್ರವೇಶಿಸಿದ ಶಿಲಾದಿತ್ಯ ಚೇಟಿಯಾ ಅವರು ಪತ್ನಿಯ ದೇಹದ ಬಳಿ ಹತ್ತು ನಿಮಿಷ ಪ್ರಾರ್ಥಿಸಲು ಏಕಾಂಗಿಯಾಗಿ ಬಿಡುವಂತೆ ಆಸ್ಪತ್ರೆಯ ಸಿಬ್ಬಂದಿಯಲ್ಲಿ ವಿನಂತಿಸಿಕೊಂಡಿದ್ದರು.
ಶಿಲಾದಿತ್ಯ ಚೇಟಿಯಾ ಅವರ ಮನವಿಯಂತೆ ಎಲ್ಲರೂ ಹೊರಗೆ ಬಂದ ಸಮಯದಲ್ಲಿ ತನ್ನ ಸರ್ವಿಸ್ ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಗುಂಡಿನ ಶಬ್ದ ಕೇಳಿ ಧಾವಿಸಿ ಬಂದ ವೈದ್ಯಕೀಯ ಸಿಬ್ಬಂದಿ ಪತ್ನಿಯ ದೇಹದ ಬಳಿ ಐಪಿಎಸ್ ಅಧಿಕಾರಿ ಶಿಲಾದಿತ್ಯ ಚೇಟಿಯಾ ಅವರು ಬಿದ್ದಿರುವುದು ಗಮನಿಸಿದ್ದಾರೆ. ಚಿಕಿತ್ಸೆ ನೀಡಲು ಸಮಯ ನೀಡದೆ ಅವರು ಜೀವಾಂತ್ಯಗೊಳಿಸಿದ್ದು ಕಂಡು ಬಂದಿದೆ.
2013 ರಲ್ಲಿ ವಿವಾಹವಾಗಿದ್ದ ದಂಪತಿಗೆ ಮಕ್ಕಳಾಗಿರಲಿಲ್ಲ. ಈ ನಡುವೆ ಎರಡು ತಿಂಗಳಿನಿಂದ ಪತ್ನಿ ಅಗಮೋನಿ ಕ್ಯಾನ್ಸರ್ ಕಾಯಿಲೆ ಉಲ್ಬಣಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಸ್ಥಿತಿಯ ಬಗ್ಗೆ ಶಿಲಾದಿತ್ಯ ಚೇಟಿಯಾ ಅವರಿಗೆ ವಿವರಿಸಿ ಅರ್ಥ ಮಾಡಿಸಿದ್ದರೂ ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ಆಸ್ಪತ್ರೆಯ ನಿರ್ದೇಶಕ ಹಿತೇಶ್ ಬರುವಾ ಹೇಳಿದ್ದಾರೆ.
ಇದನ್ನೂ ಓದಿ : 16 ವರ್ಷದ ಬಾಲಕನೊಂದಿಗೆ 28 ವರ್ಷದ ವಿವಾಹಿತೆ ಎಸ್ಕೇಪ್!
ಶಿಲಾದಿತ್ಯ ಚೇಟಿಯಾ ಅವರು ಡೆರಿಂಗ್-ಡುಗೆ ಹೆಸರುವಾಸಿಯಾದ ಕ್ರಿಮಿನಲ್ ಮತ್ತು ಭಯೋತ್ಪಾದಕ ಸಂಘಟನೆಗಳ ವಿರುದ್ಧ ಅನೇಕ ಕಾರ್ಯಾಚರಣೆಗಳನ್ನು ನಡೆಸಿದರು, ಇದಕ್ಕಾಗಿ ಅವರು 2015 ರಲ್ಲಿ ಸ್ವಾತಂತ್ರ್ಯ ದಿನದಂದು ಶೌರ್ಯಕ್ಕಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು ಪಡೆದಿದ್ದರು.
ಪತ್ನಿ ಅಗಾಮೋನಿ ಕೂಡ ಒಬ್ಬ ಸಾಧಕರಾಗಿದ್ದರು. ಅವರು ತೇಜ್ಪುರ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳನ್ನು ಅಧ್ಯಯನ ಮಾಡಿದ ಟಾಪರ್ ವಿದ್ಯಾರ್ಥಿನಿಯಾಗಿದ್ದರು.
LATEST NEWS
ಚಿಕ್ಕ ಪುಟ್ಟ ಮಕ್ಕಳನ್ನು ಕಾಡುತ್ತಿದೆ ವೈರಲ್ ಫಿವರ್..! 200ಕ್ಕೂ ಅಧಿಕ ಮಕ್ಕಳು ಆಸ್ಪತ್ರೆಗೆ
ಬಾಗಲಕೋಟೆ/ಮಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ಖಾಯಿಲೆಗಳು ವಕ್ಕರಿಸಿಕೊಳ್ಳುತ್ತದೆ. ವಾತಾವರಣ ಹೆಚ್ಚಳದಿಂದ ವೈರಲ್ ಫಿವರ್ ಹಾವಳಿ ಕೂಡಾ ಹೆಚ್ಚಾಗುತ್ತಿದೆ. ಒಂದು ಕಡೆ ಡೆಂಗ್ಯೂ ಆಂತಕವಾದ್ರೆ ಇದೀಗ ವೈರಲ್ ಫಿವರ್ ಕಾಟ ಚಿಕ್ಕ ಪುಟ್ಟ ಮಕ್ಕಳ ಜೀವ ಹಿಂಡುತ್ತಿದೆ.
ಈ ಮಧ್ಯೆ ಬಾಗಲಕೋಟೆ ಜಿಲ್ಲೆಯ ಆಸ್ಪತ್ರೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಹೌದು, ಜಿಲ್ಲೆಯಲ್ಲಿ ಪುಟಾಣಿ ಮಕ್ಕಳು ವೈರಲ್ ಫೀವರ್ನಿಂದ ಬಳಲುತ್ತಿದ್ದಾರೆ. ಶೀತ, ಕೆಮ್ಮು, ನೆಗಡಿ ಹಾಗೂ ಉಸಿರಾಟ ತೊಂದರೆಯಿಂದ ಮಕ್ಕಳು ಹೈರಾಣಾಗುತ್ತಿದ್ದಾರೆ.
ಡೆಂಗ್ಯೂ ಜ್ವರದಿಂದ ಮಗುವಿನ ಜೀವಾಂ*ತ್ಯ..! ಸರ್ಕಾರಿ ಆಸ್ಪತ್ರೆ ಅಭಿವೃದ್ದಿಗೆ ತಂದೆಯ ಮನವಿ..!
ಜಿಲ್ಲೆಯಲ್ಲಿ ಪ್ರತಿ ದಿನ 200ಕ್ಕೂ ಅಧಿಕ ಮಕ್ಕಳು ವೈರಲ್ ಫಿವರ್ ಗೆ ತುತ್ತಾಗಿ, ಜಿಲ್ಲೆಯ ಸರಕಾರಿ, ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗುತ್ತಿದ್ದಾರೆ. ವೈರಲ್ ಫೀವರ್ ಹರಡುವುದರಿಂದ ಪೋಷಕರು ಮಕ್ಕಳ ಬಗ್ಗೆ ಭಯಭೀತರಾಗಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ. ಶಾಲೆಗೆ ಕಳುಹಿಸುವುದಕ್ಕಿಂತ ಮನೆಯಲ್ಲಿ ಇರುವುದು ಒಳ್ಳೆಯದು ಅಂತ ಅನ್ನಿಸುತ್ತಿದೆ ಎಂದು ಪೋಷಕರು ಹೇಳುತ್ತಿದ್ದಾರೆ.
ಇನ್ನು ಮಕ್ಕಳಿಗೆ ಚಳಿಯಾಗದಂತೆ, ಬಿಸಿಲಿಗೆ ಹೆಚ್ಚಾಗಿ ಓಡಾಡದಂತೆ ತಡೆಯಬೇಕು. ಮಕ್ಕಳ ಬಗ್ಗೆ ಹೆಚ್ಚು ಮುಂಜಾಗೃತಾ ಕ್ರಮ ಕೈಗೊಳ್ಳಬೇಕು. ಹಾಗಿದ್ದಲ್ಲಿ ಮಾತ್ರ ವೈರಲ್ ಫೀವರ್ ತಡೆಯಲು ಸಾಧ್ಯ ಎಂದು ವೈದ್ಯರು ಹೇಳಿದ್ದಾರೆ.
ಒಟ್ಟಿನಲ್ಲಿ ಮಕ್ಕಳು ಮತ್ತು ವೃದ್ಧರು ಈ ವೈರಲ್ ಫೀವರ್ಗೆ ಹೈರಾಣಾಗುತ್ತಿದ್ದಾರೆ. ಜ್ವರ ಬರುವ ಮೊದಲೇ ಮುಂಜಾಗೃತಾ ಕ್ರಮ ಕೈಗೊಂಡರೆ ಇದರಿಂದ ಪಾರಾಗಬಹುದಾಗಿದೆ.
DAKSHINA KANNADA
ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಭೇಟಿ ಮಾಡಿದ ಸಂಸದ ಚೌಟ
ಮಂಗಳೂರು : ಕರಾವಳಿ ಕಂಡ ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಶೀರ್ವಾದ ಪಡೆದು ಪಡೆದು ವಿದ್ಯಮಾನಗಳ ಕುರಿತು ಮಾತನಾಡಿದರು.
ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ, ಗೋವಿಂದ ಪ್ರಭು, ಜಿಲ್ಲಾ ಉಪಾಧ್ಯಕ್ಷ ದಿನೇಶ್ ಅಮ್ಟೂರು ಮತ್ತು ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
LATEST NEWS
ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮಾತೃ ವಿಯೋಗ
ಕೋಟ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ ವಯೋಸಹಜ ಅಸೌಖ್ಯದಿಂದ ನಿನ್ನೆ(ಜೂ.30) ನಿಧ*ನರಾದರು. ಅವರಿಗೆ 97 ವರ್ಷ ವಯಸ್ಸಾಗಿತ್ತು.
ಮೃ*ತರು ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅವರ ನಿಧ*ನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ : ‘ಎಲ್ಲಾ ಹಣೆಬರಹ..ನಾವೇನು ಮಾಡೋಕ್ಕಾಗಲ್ಲ…’ ದರ್ಶನ್ ಕೊಲೆ ಪ್ರಕರಣದ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
- LATEST NEWS6 days ago
ಪ್ರೀತಂ ಗೌಡ ಸೇರಿ ನಾಲ್ವರ ಮೇಲೆ ಎಫ್ಐಆರ್..! ಪ್ರಜ್ವಲ್ ಗೆ ಮತ್ತೊಂದು ಸಂಕಷ್ಟ
- DAKSHINA KANNADA7 days ago
ಕರಾವಳಿಯಲ್ಲಿ ಬಿರುಸು ಪಡೆದುಕೊಂಡ ಮಳೆ; ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ
- DAKSHINA KANNADA7 days ago
ಯಕ್ಷಗಾನದ ಖ್ಯಾತ ಹಾಸ್ಯ ಕಲಾವಿದ ದಿನೇಶ್ ಕೋಡಪದವು ಅವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ
- DAKSHINA KANNADA3 days ago
ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬ*ಲಿ; ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾ*ವು
Pingback: ಮೆಗಾಸ್ಟಾರ್ ಚಿರಂಜೀವಿಯ ಮಾಜಿ ಅಳಿಯ ಹಠಾತ್ ನಿಧ*ನ - NAMMAKUDLA NEWS - ನಮ್ಮಕುಡ್ಲ ನ್ಯೂಸ್