Connect with us

    BELTHANGADY

    ಬೆಳ್ತಂಗಡಿಯಲ್ಲಿ ಲಂಚಕ್ಕೆ ಬೇಡಿಕೆ ಪ್ರಕರಣ: ಗ್ರಾಮ ಕರಣಿಕ ಮತ್ತು ಸಹಾಯಕನಿಗೆ ಜೈಲು ಶಿಕ್ಷೆ

    Published

    on

    ಬೆಳ್ತಂಗಡಿ: ಲಂಚಕ್ಕೆ ಬೇಡಿಕೆ ಇಟ್ಟ ಗ್ರಾಮ ಕರಣಿಕ ಮತ್ತು ಗ್ರಾಮ ಸಹಾಯಕನಿಗೆ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಸಜೆ ಹಾಗೂ ದಂಡ ವಿಧಿಸಿ ಶಿಕ್ಷೆ ನೀಡಿದೆ.

    ಶಿಕ್ಷೆಗೊಳಗಾದವರನ್ನು ಪುತ್ತಿಲ ಗ್ರಾಮದ ಗ್ರಾಮ ಕರಣಿಕನಾಗಿದ್ದ ಎನ್‌. ಶೇಷಾದ್ರಿ ಮತ್ತು ಗ್ರಾಮ ಸಹಾಯಕನಾಗಿದ್ದ ತಿಮ್ಮಪ್ಪ ಪೂಜಾರಿ ಎಂದು ಗುರುತಿಸಲಾಗಿದೆ.


    2014ರ ಜೂ. 24ರಂದು ಈ ಘಟನೆ ನಡೆದಿದ್ದು ವ್ಯಕ್ತಿಯೋರ್ವರು ತಮ್ಮ ವಾಸದ ಮನೆಯನ್ನು ಸಕ್ರಮಗೊಳಿಸುವ ಸಂಬಂಧ ಬೆಳ್ತಂಗಡಿ ತಾಲೂಕಿನ ಮೂರುಗೋಳಿ ಗ್ರಾ.ಪಂ. ಕಚೇರಿಗೆ ತೆರಳಿ ಅರ್ಜಿ ಸಲ್ಲಿಸಿದ್ದರು.
    ಆಗ ತೆಕ್ಕಾರು ಬಾರ್ಯ ಪುತ್ತಿಲ ಗ್ರಾಮದ ಗ್ರಾಮ ಕರಣಿಕರಾಗಿದ್ದ ಎನ್‌. ಶೇಷಾದ್ರಿ ಮತ್ತು ಗ್ರಾಮ ಸಹಾಯಕನಾಗಿದ್ದ ತಿಮ್ಮಪ್ಪ ಪೂಜಾರಿ 15,000 ರೂ. ಲಂಚ ನೀಡುವಂತೆ ಒತ್ತಾಯಿಸಿದ್ದರು.

    ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.
    ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ವಿಚಾರಣೆ ನಡೆಸಿ ನಿನ್ನೆ ಅಂತಿಮ ತೀರ್ಪು ನೀಡಿ ಆರೋಪಿಗಳಿಗೆ ಕಲಂ 235 ಸಿಆರ್‌ಪಿಸಿ ಅಡಿಯಲ್ಲಿ

    ಪಿಸಿ ಕಾಯಿದೆ 1988 ಕಲಂ 7ರಂತೆ 3 ವರ್ಷಗಳ ಸಾದಾ ಸಜೆ ಮತ್ತು 20,000 ರೂ. ದಂಡ ವಿಧಿಸಿದ್ದಾರೆ. ಆರೋಪಿಗಳು ದಂಡ ಕಟ್ಟಲು ವಿಫ‌ಲವಾದರೆ ಹೆಚ್ಚುವರಿ 8 ತಿಂಗಳ ಸಾದಾ ಸಜೆ ವಿಧಿಸಿದ್ದಾರೆ.
    ಅಲ್ಲದೆ ಪಿಸಿ ಕಾಯಿದೆ 1988 ಕಲಂ 13 (1) (ಡಿ) ಜತೆಗೆ 13(2)ರಲ್ಲಿ 4 ವರ್ಷಗಳ ಸಾದಾ ಸಜೆ ಹಾಗೂ 30,000 ರೂ. ದಂಡ ವಿಧಿಸಿದ್ದಾರೆ.

    ದಂಡ ಕಟ್ಟಲು ವಿಫ‌ಲರಾದರೆ ಹೆಚ್ಚುವರಿಯಾಗಿ 8 ತಿಂಗಳ ಸಾದಾ ಸಜೆ ವಿಧಿಸಿ ತೀರ್ಪು ನೀಡಿದ್ದಾರೆ.

    ಲೋಕಾಯುಕ್ತ ಪೊಲೀಸ್‌ನಿರೀಕ್ಷಕ ಎಸ್‌. ವಿಜಯ ಪ್ರಸಾದ್‌ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಕರ್ನಾಟಕ ಲೋಕಾಯುಕ್ತ ಮಂಗಳೂರಿನ

    ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಸರಕಾರದ ಪರವಾಗಿ ವಾದ ಮಂಡಿಸಿದ್ದಾರೆ. ಆರೋಪಿಗಳು ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

    BELTHANGADY

    ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ

    Published

    on

    ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

    ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.

    ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.

    Continue Reading

    BELTHANGADY

    ಬೆಳ್ತಂಗಡಿ: ವಿದ್ಯುತ್‌ ತಗುಲಿ ಯುವಕ ಮೃ*ತ್ಯು

    Published

    on

    ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.

    ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.

    Continue Reading

    BELTHANGADY

    ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ

    Published

    on

    ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.

    ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್‌ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.

    ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.

    Continue Reading

    LATEST NEWS

    Trending