Connect with us

    ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಅಣ್ಣ- ತಂಗಿ ಆತ್ಮಹತ್ಯೆ: ಸಂಗಬೆಟ್ಟುವಿನಲ್ಲಿ ನಡೆಯಿತು ಧಾರುಣ ಘಟನೆ….

    Published

    on

    ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಅಣ್ಣತಂಗಿ ಆತ್ಮಹತ್ಯೆ: ಸಂಗಬೆಟ್ಟುವಿನಲ್ಲಿ ನಡೆಯಿತು ಧಾರುಣ ಘಟನೆ….

    ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದು ಅವಿವಾಹಿತ ಅಣ್ಣ- ತಂಗಿ ಇಬ್ಬರು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು,

    ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಸೋಮವಾರ (ಜೂನ್ 15) ರಾತ್ರಿ ಬಂಟ್ವಾಳ ತಾಲೂಕಿನ ಸಂಗಬೆಟ್ಟುವಿನಲ್ಲಿ ಸಂಭವಿಸಿದೆ.

     

    ಇಲ್ಲಿನ ನಿವಾಸಿಗಳಾದ ನೀಲಯ್ಯ ಶೆಟ್ಟಿಗಾರ್ (42) ಹಾಗೂ ಕೇಸರಿ (39) ಮೃತಪಟ್ಟ ದುರ್ದೈವಿಗಳು.

    ಇಬ್ಬರೂ ಅನಾರೋಗ್ಯ ದಿಂದ ಬಳಲುತ್ತಿದ್ದು, ರಾತ್ರಿ ಸುಮಾರು 11 ಗಂಟೆಯ ಬಳಿಕ ತಮ್ಮ ಮನೆಯ ಕೊಠಡಿಯಲ್ಲಿ ಕೃತ್ಯವೆಸಗಿದ್ದಾರೆ.

    ಮನೆಯಲ್ಲಿ ನೀಲಯ್ಯ ಅವರ ಸಹೋದರ ಮತ್ತು ಅವರ ಪತ್ನಿ, ಮಗ ವಾಸವಿದ್ದು, ಮತ್ತೊಂದು ಕೊಠಡಿಯಲ್ಲಿ ಮಲಗಿದ್ದರು.

    ನರಳಾಟದ ಶಬ್ದ ಕೇಳಿ ಬಂದಾಗ ಘಟನೆ ತಿಳಿದು ಬಂದಿತ್ತು.

    ಬಳಿಕ ಸ್ಥಳೀಯರು ಸೇರಿ ಗಂಭೀರ ಗಾಯಗೊಂಡ ಇಬ್ಬರನ್ನೂ ಬಂಟ್ವಾಳ ಸರಕಾರಿ ಆಸ್ಪತ್ರೆ ಗೆ ಸಾಗಿಸಿದರಾದರೂ ಅದಾಗಲೇ ಇಬ್ಬರೂ ಮೃತಪಟ್ಟಿದ್ದರು.

    ನೀಲಯ್ಯ ಅವರು ಈ ಹಿಂದೆ ಕೈ ಮಗ್ಗ ನಡೆಸುತ್ತಿದ್ದು, ಅನಾರೋಗ್ಯದ ಕಾರಣ ನಿಲ್ಲಿಸಿದ್ದರು.

    ಮಾಹಿತಿ ತಿಳಿದ ಬಂಟ್ವಾಳ ಗ್ರಾಮಾಂತರ ಎಸ್.ಐ. ಪ್ರಸನ್ನ ಮತ್ತು ಸಿಬಂದಿ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    LATEST NEWS

    ಪುತ್ತೂರು : ಆಂಬ್ಯುಲೆನ್ಸ್ – ಪಿಕಪ್ ನಡುವೆ ಅಪ*ಘಾತ

    Published

    on

    ಪುತ್ತೂರು: ಆಂಬ್ಯುಲೆನ್ಸ್ ಹಾಗೂ ಪಿಕಪ್ ನಡುವೆ ಅಪ*ಘಾತತ ಸಂಭವಿಸಿ, ಚಾಲಕ ಹಾಗೂ ಆಂಬ್ಯುಲೆನ್ ನಲ್ಲಿದ್ದ ಮಗು ಗಾಯ*ಗೊಂಡಿರುವ ಘಟನೆ ಪುತ್ತೂರು ತಾಲೂಕಿನ ಮುರ ಎಂಬಲ್ಲಿ ನಡೆದಿದೆ.

    ಸುಳ್ಯ ಆಸ್ಪತ್ರೆಯಲ್ಲಿ ಜನಿಸಿದ ಮಗುವೊಂದನ್ನು ಉಸಿರಾಟದ ತೊಂದರೆಗೆ ಸಂಬಂಧಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಪಿಕಪ್ ಆಂಬ್ಯುಲೆನ್ಸ್ ಗೆ ಢಿ*ಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದಾಗಿ ಆಂಬ್ಯುಲೆನ್ಸ್ ನಲ್ಲಿದ್ದ ಮಗು ಹಾಗೂ ಚಾಲಕನಿಗೆ ಸಣ್ಣ- ಪುಟ್ಟ ಗಾಯಗಳಾಗಿವೆ. ಕೂಡಲೇ ಬೇರೆ ವಾಹನದಲ್ಲಿ ಮಗುವನ್ನು ಮತ್ತು ಮನೆಯವರನ್ನು ಮಂಗಳೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

    Continue Reading

    DAKSHINA KANNADA

    ಬಸ್‌ ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ..! ಧರ್ಮದೇಟು ತಿಂದ ಮುಸ್ಲಿಂ ಯುವಕ..!

    Published

    on

    ಮಂಗಳೂರು ( ಸುಳ್ಯ ) : ಬೆಂಗಳೂರಿನಿಂದ ಸುಬ್ರಹ್ಮಣ್ಯ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದ ಸರ್ಕಾರಿ ಬಸ್‌ನಲ್ಲಿ ಯುವಕನೊಬ್ಬ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾನೆ. ಈ ವಿಚಾರ ತಿಳಿದ ವಿದ್ಯಾರ್ಥಿನಿಯ ಸಹಪಾಠಿಗಳು ಯುವಕನನ್ನು ಹಿಡಿದು ಹಲ್ಲೆ ನಡೆಸಿದ ಘಟನೆ ಸುಳ್ಯದಲ್ಲಿ ನಡೆದಿದೆ.

    ಸುಬ್ರಹ್ಮಣ್ಯ ಸಮೀಪದ ಬಿಸಲೆ ಘಾಟ್‌ ಬಳಿ ವಿದ್ಯಾರ್ಥಿನಿ ಬೆಂಗಳೂರಿನಿಂದ ಬಂದಿದ್ದ ಬಸ್ ಹತ್ತಿದ್ದಳು. ಈ ವೇಳೆ ಯುವಕೊನೊಬ್ಬ ಕುಳಿತಿದ್ದ ಸೀಟ್‌ ಪಕ್ಕದ ಸೀಟ್ ಖಾಲಿ ಇದ್ದ ಕಾರಣ ಆಕೆ ಆತನ ಪಕ್ಕದಲ್ಲೇ ಕುಳಿತಿದ್ದಾಳೆ. ಆದ್ರೆ ವಿದ್ಯಾರ್ಥಿನಿ ಪಕ್ಕದಲ್ಲಿ ಕುಳಿತ ಸ್ವಲ್ಪ ಸಮಯದಲ್ಲೇ ಯುವಕ ಅನುಚಿತವಾಗಿ ವರ್ತಿಸಲು ಆರಂಭಿಸಿದ್ದಾನೆ. ಈ ವಿಚಾರವನ್ನು ಬಸ್ ನಿರ್ವಾಹಕನಿಗೆ ತಿಳಿಸಿದಾಗ ನಿರ್ವಾಹಕ ಹಾಗೂ ಬಸ್‌ ಪ್ರಯಾಣಿಕರು ಆರೋಪಿ ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ವಿದ್ಯಾರ್ಥಿನಿ ಈ ವಿಚಾರವನ್ನು ಸುಳ್ಯದ ತನ್ನ ಕಾಲೇಜು ಸಹಪಾಠಿಗಳ ಗಮನಕ್ಕೂ ತಂದಿದ್ದಾಳೆ. ಈ ನಡುವೆ ಯುವಕ ಸುಬ್ರಹ್ಮಣ್ಯದಲ್ಲಿ ಬಸ್‌ನಿಂದ ಇಳಿದು ಬೇರೆ ಬಸ್ ಮೂಲಕ ಸುಳ್ಯದತ್ತ ಪ್ರಯಾಣ ಮಾಡಿದ್ದಾನೆ. ಬೆಂಗಳೂರಿನ ಬಸ್‌ನಲ್ಲಿ ಪ್ರಯಾಣಿಸಿ ಸುಳ್ಯ ತಲುಪಿದ್ದ ವಿದ್ಯಾರ್ಥಿನಿ ಈ ವಿಚಾರವನ್ನು ತನ್ನ ಸಹಪಾಠಿಗಳಿಗೆ ತಿಳಿಸಿದ್ದಾಳೆ. ತಕ್ಷಣ ಸುಳ್ಯದ ಪೈಚಾರು ಎಂಬಲ್ಲಿಗೆ ಕಾರಿನಲ್ಲಿ ತೆರಳಿದ ವಿದ್ಯಾರ್ಥಿಗಳು ಅಲ್ಲಿ ಯುವಕ ಪ್ರಯಾಣಿಸುತ್ತಿದ್ದ ಬಸ್‌ನಿಂದ ಆತನನ್ನು ಇಳಿಸಿದ್ದಾರೆ. ಬಳಿಕ ಆತನನ್ನು ಕಾರಿನಲ್ಲಿ ಸುಳ್ಯ ಬಸ್ ನಿಲ್ದಾಣಕ್ಕೆ ಕರೆತಂದು ಬಸ್ ನಿಲ್ದಾಣದಲ್ಲಿ ಹಿಗ್ಗಾ ಮುಗ್ಗ ಥಳಿಸಿದ್ದಾರೆ.

    ವಿದ್ಯಾರ್ಥಿಗೆ ಕಿರುಕುಳ ನೀಡಿದ ಯುವಕ ಕೇರಳ ಮೂಲದವನಾಗಿದ್ದು, ಆತನ ಹೆಸರು ನಿಯಾಜ್‌ ಎಂದು ಗೊತ್ತಾಗಿದೆ. ಘಟನೆಯ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿದ್ಯಾರ್ಥಿಗಳಿಂದ ಹಲ್ಲೆಗೊಳಗಾದ ನಿಯಾಜ್‌ನನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಕೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ಮಾಹಿತಿ ಲಭ್ಯವಾಗಿದೆ.

    Continue Reading

    BIG BOSS

    Bigg Boss Kannada 11: ದೊಡ್ಮನೆಯಲ್ಲಿ ಸ್ವರ್ಗ, ನರಕ ಎನ್ನುವ ಎರಡು ಥೀಮ್

    Published

    on

    ‘ಬಿಗ್ ಬಾಸ್ ಕನ್ನಡ 11’ಕ್ಕೆ ಕೌಂಟ್ ಡೌನ್ ಶುರುವಾಗಿದೆ. ದೊಡ್ಮನೆ 2ನೇ ಪ್ರೋಮೋ ರಿಲೀಸ್ ಆಗಿ ಮೆಚ್ಚುಗೆ ಗಳಿಸಿತ್ತು. ಈ ಬಾರಿ ಬಿಗ್ ಬಾಸ್‌ನಲ್ಲಿ ಸ್ವರ್ಗ ಮತ್ತು ನರಕ ಎಂದು ಥೀಮ್ ಇರಲಿದೆ ಎಂದು ಸುದೀಪ್‌ ಇಂಟರೆಸ್ಟಿಂಗ್ ಮಾಹಿತಿ  ತಿಳಿಸಿದ್ದಾರೆ.

    ನಾವು ಮಾಡಿ ಕಳುಹಿಸಲಿಲ್ಲ ಅಂದರೆ ಒಳಗೆ ಹೋಗಿರುವ ಸ್ಪರ್ಧಿಗಳೇ ಟೀಮ್ ಮಾಡಿಕೊಳ್ಳುತ್ತಾರೆ. ಹಾಗಾಗಿ ಈ ಬಾರಿ ದೊಡ್ಮನೆಗೆ ಎಂಟ್ರಿ ಕೊಡುವಾಗಲೇ 2 ತಂಡ ಮಾಡುವುದೇ ಈ ಸೀಸನ್‌ನ ಸ್ಪೆಷಾಲಿಟಿ ಎಂದು ಸುದೀಪ್ ತಿಳಿಸಿದರು.

    ಕಳೆದ ಬಾರಿ ಬಿಗ್ ಬಾಸ್ ಸೀಸನ್ 10 ಪ್ರಾರಂಭವಾದ ವೇಳೆ, ಸ್ಪರ್ಧಿಗಳಿಗೆ ಸಮರ್ಥರು ಮತ್ತು ಅಸಮರ್ಥರು ಎಂದು ಪರಿಗಣಿಸಿ ತಂಡಗಳಾಗಿ ವಿಂಗಡಿಸಿದ್ದರು. ಅದರಂತೆಯೇ ಈ ಬಾರಿಯು ಕೂಡ ಹೊಸ ರೀತಿಯಲ್ಲಿ ಸ್ವರ್ಗ ಮತ್ತು ನರಕ ಎಂದು ಎರಡು ತಂಡ ಮಾಡಿ ಸ್ಪರ್ಧಿಗಳನ್ನು ಕಳುಹಿಸಲಾಗುತ್ತದೆ.

    ಸುದೀಪ್ ನಿರೂಪಣೆಯಲ್ಲಿ ಇದೇ ಸೆ.29ಕ್ಕೆ ಬಿಗ್ ಬಾಸ್ ಗ್ರ್ಯಾಂಡ್ ಆಗಿ ಲಾಂಚ್ ಆಗುತ್ತಿದೆ. ಪ್ರತಿದಿನ ರಾತ್ರಿ 9:30ಕ್ಕೆ ಶೋ ಪ್ರಸಾರವಾಗಲಿದೆ.

    Continue Reading

    LATEST NEWS

    Trending