BELTHANGADY
ಜೈನ ಮುನಿಯ ಅಮಾನುಷ ಹತ್ಯೆ- ಡಾ.ಡಿ ವೀರೇಂದ್ರ ಹೆಗ್ಗಡೆ ಖಂಡನೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಕೃತ್ಯವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಖಂಡಿಸಿದ್ದಾರೆ.
ಬೆಳ್ತಂಗಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಅವರನ್ನು ಭೀಕರವಾಗಿ ಹತ್ಯೆ ಮಾಡಿರುವ ಕೃತ್ಯವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಖಂಡಿಸಿದ್ದಾರೆ.
‘ಈ ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ. ದಿಗಂಬರ ಮುನಿಗಳ ಈ ರೀತಿಯ ಹತ್ಯೆ ಇತಿಹಾಸದಲ್ಲಿಯೇ ಪ್ರಥಮ.
ಜೈನ ಧರ್ಮದಲ್ಲಿ ಪೂರ್ವ ಜನ್ಮದ ತಪ್ಪು ಅಥವಾ ಈ ಜನ್ಮದ ತಪ್ಪುಗಳಿಗೆ ಉಪಸರ್ಗಗಳನ್ನು ಅನುಭವಿಸ ಬೇಕಾಗುತ್ತದೆ.
ಮುನಿಗಳಿಗೆ ಯಾವ ಕಾರಣಕ್ಕಾಗಿ ಈ ಉಪಸರ್ಗ ಎಂದು ಗೊತ್ತಿಲ್ಲ. ಕೃತ್ಯ ಎಸಗಿದವರ ಬಂಧನ ಆಗಿರುವ ಬಗ್ಗೆ ತಿಳಿದು ಬಂದಿದೆ.
ಇದಕ್ಕಾಗಿ ಸರಕಾರ ಮತ್ತು ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ. ತಪ್ಪಿತಸ್ಥರಿಗೆ ತಕ್ಷ ಶಿಕ್ಷೆಯಾಗ ಬೇಕು. ಮುನಿಗಳಿಗೆ ಸರಕಾರ ರಕ್ಷಣೆಯನ್ನು ಕೊಡಬೇಕಿದೆ’ ಎಂದು ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಒತ್ತಾಯಿಸಿದ್ದಾರೆ.
ಚಿಕ್ಕೋಡಿಯ ನಂದಿ ಪರ್ವತ ಆಶ್ರಮದ ಆಚಾರ್ಯ 108 ಕಾಮ ಕುಮಾರ ನಂದಿ ಮಹಾರಾಜ ಅವರನ್ನು ಕೊಲೆ ಮಾಡಿ ಮೃತ ದೇಹವನ್ನು ತುಂಡರಿಸಿ ಕೊಳವೆ ಬಾವಿಗೆ ಎಸೆದ ಘಟನೆ ನಿನ್ನೆ ಬೆಳಕಿಗೆ ಬಂದಿತ್ತು.
ಜು. 6 ರ ಬೆಳಗ್ಗೆಯಿಂದ ಮುನಿಗಳು ಆಶ್ರಮದಿಂದ ದಿಢೀರ್ ಕಾಣೆಯಾಗಿದ್ದರು. ಭಕ್ತರು ಎಲ್ಲೆಡೆ ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಹಾಗಾಗಿ ಶುಕ್ರವಾರ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ತನಿಖೆ ಆರಂಭಿಸಿದ ಪೊಲೀಸರು ಅದೇ ದಿನ ರಾತ್ರಿ ಇಬ್ಬರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು.
ಆರೋಪಿಗಳು ಜೈನ ಮುನಿಗಳ ಶವವನ್ನು ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದ ಹೊರ ವಲಯದ ಬಾವಿಗೆ ಎಸೆದಿರುವುದಾಗಿ ಮಾಹಿತಿ ನೀಡಿದ್ದರು.
ಹಾಗಾಗಿ ಪೊಲೀಸರು ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ಸುಮಾರು 20 ಅಡಿ ಆಳದಲ್ಲಿ ಶವದ ಭಾಗಗಳು ನಿನ್ನೆ ಪತ್ತೆಯಾಗಿವೆ.
ಆರೋಪಿಗಳಾದ ಹಿರೇಕೋಡಿ ಗ್ರಾಮದ ನಾರಾಯಣ ಮಾಳಿ ಮತ್ತು ಹುಸೇನ್ ಡಾಲಾಯತ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಹಣಕಾಸಿನ ವ್ಯವಹಾರಕ್ಕಾಗಿ ಜೈನ ಮುನಿಗಳನ್ನು ಕೊಲೆ ಮಾಡಲಾಗಿದೆ. ಆರೋಪಿಗಳು ಮುನಿಗಳಿಂದ ಹಣ ಪಡೆದಿದ್ದು, ಅದನ್ನು ವಾಪಸ್ ಕೇಳಿದ್ದಕ್ಕೆ ಮುನಿಗಳನ್ನು ಕೊಲೆ ಗೈಯಲಾಗಿದೆ ಎಂದು ಬೆಳಗಾವಿ ಎಸ್ಪಿ ಡಾ. ಸಜೀವ ಪಾಟೀಲ ತಿಳಿಸಿದ್ದಾರೆ.
ಮುನಿಗಳನ್ನು ಆಶ್ರಮದಲ್ಲಿಯೇ ವಿದ್ಯುತ್ ಶಾಕ್ ನೀಡಿ ಕೊಲೆ ಮಾಡಿದ ಆರೋಪಿಗಳು ಬಳಿಕ ದೇಹವನ್ನು ಕತ್ತರಿಸಿ ತುಂಡುಗಳನ್ನು ಬಟ್ಟೆಯಲ್ಲಿ ಕಟ್ಟಿ ತೆರೆದ ಕೊಳವೆ ಬಾವಿಯಲ್ಲಿ ಎಸೆದಿದ್ದರು ಎಂದು ವಿವರಿಸಿದ್ದಾರೆ.
BELTHANGADY
ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು- ಕಳ್ಳ ಅರೆಸ್ಟ್..!
ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಮೂಲದ ನಿವಾಸಿ ಉಮೇಶ್ ಬಳೇಗಾರ್(47) ಬಂಧಿತ ಆರೋಪಿ.
ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಅಜಿತ್ ನಗರ ಕೆಲ್ಲೆ ನಿವಾಸಿ ಫೆಲಿಕ್ಸ್ ರೋಡ್ರಿಗಸ್ ಎಂಬವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗಲು ಹೊತ್ತಿನಲ್ಲಿ ಮನೆಯ ಬಾಗಿಲು ಮುರಿದು ನುಗ್ಗಿ ಸುಮಾರು 7 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಆಗಿದೆ.
ಈ ಕೂಡಲೇ ಮನೆಯವರು ನೀಡಿದ ದೂರಿನಂತೆ ಬೆಳ್ತಂಗಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.
ಆರೋಪಿ ವಿರುದ್ಧ ತಮಿಳುನಾಡು, ಕೇರಳದ ವಿವಿಧ ಠಾಣೆಗಳಲ್ಲಿ ಕಳ್ಳತನದ ಪ್ರಕರಣಗಳು ದಾಖಲಿಸಲಾಗಿದೆ.
ಅಲ್ಲದೆ ಕರ್ನಾಟಕದ ಪುತ್ತೂರು, ಬಂಟ್ವಾಳ, ಮಂಗಳೂರು, ಮೂಡಬಿದ್ರೆ ಠಾಣೆಯಲ್ಲಿಯೂ ಹಲವಾರು ಪ್ರಕರಣಗಳ ಆರೋಪಿಯಾಗಿದ್ದಾನೆ.
ಈತನಿಗಾಗಿ ಮೂರೂ ರಾಜ್ಯಗಳ ಪೊಲೀಸರು ಹುಡುಕಾಟ ನಡೆಸುತ್ತಿರುವಾಗಲೇ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಈತನಿಂದ ಕಳ್ಳತನ ಮಾಡಲಾದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
BELTHANGADY
ಚಾರ್ಮಾಡಿ ಘಾಟ್ ನಲ್ಲಿ ನೂರು ಅಡಿ ಪ್ರಪಾತಕ್ಕೆ ಉರುಳಿದ ಲಾರಿ..!
ನೀರಿನ ಬಾಟಲ್ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ನೂರು ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಸೆ.15ರಂದು ನಡೆದಿದ್ದು, ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಚಾರ್ಮಾಡಿ: ನೀರಿನ ಬಾಟಲ್ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾರ್ಮಾಡಿ ಘಾಟಿಯ ಸೋಮನಕಾಡು ಬಳಿ ನೂರು ಅಡಿ ಪ್ರಪಾತಕ್ಕೆ ಉರುಳಿದ ಘಟನೆ ಸೆ.15ರಂದು ನಡೆದಿದ್ದು, ಅದೃಷ್ಟವಶಾತ್ ಲಾರಿ ಚಾಲಕ ಮತ್ತು ಕ್ಲೀನರ್ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಶುಕ್ರವಾರ ರಾತ್ರಿ ಪುತ್ತೂರಿನಿಂದ ಚಿತ್ರದುರ್ಗಕ್ಕೆ ನೀರಿನ ಬಾಟಲ್ ತುಂಬಿದ ಲಾರಿ ಚಾರ್ಮಾಡಿ ಘಾಟಿಯಲ್ಲಿ ಆವರಿಸಿದ ದಟ್ಟ ಮಂಜಿನಿಂದಾಗಿ ಚಾಲಕನಿಗೆ ದಾರಿ ಕಾಣದೆ ಪ್ರಪಾತಕ್ಕೆ ಬಿದ್ದಿದೆ.
ಲಾರಿ ಮೊದಲು ತಡೆಗೋಡೆಗೆ ಢಿಕ್ಕಿ ಹೊಡೆದು ಬಳಿಕ ನೂರು ಅಡಿ ಪ್ರಪಾತಕ್ಕೆ ಉರುಳಿದೆ.
ಈ ಸಂದರ್ಭದಲ್ಲಿ ಅಲ್ಲಿ ಇದ್ದ ಮರವೊಂದಕ್ಕೆ ಲಾರಿ ಸಿಲುಕಿಕೊಂಡ ಪರಿಣಾಮ ಸಂಭವನೀಯ ಅವಘಡ ತಪ್ಪಿದೆ ಹಾಗೂ ಈ ಮರ ಇಬ್ಬರ ಪ್ರಾಣ ಉಳಿಸಿದೆ.
ಒಂದು ವೇಳೆ ಲಾರಿ ಮರಕ್ಕೆ ಸಿಕ್ಕಿಕೊಳ್ಳದಿದ್ದಲ್ಲಿ ಸಾವಿರ ಅಡಿ ಪ್ರಪಾತಕ್ಕೆ ಹೋಗಿ ಬೀಳುವ ಸಾಧ್ಯತೆ ಇತ್ತು ಎನ್ನಲಾಗಿದೆ.
ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ಭಾಸ್ಕರ ನಾಯ್ಕ ಹಲ್ಲೆ ಪ್ರಕರಣ:ತಿಮರೋಡಿ ಮತ್ತವರ ಸಂಗಡಿರನ್ನು ಬಂಧಿಸಲು ಆಗ್ರಹ
ಮಂಗಳೂರು : ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪಾಣಿಯಾಲ್ ಎಂಬಲ್ಲಿ ದಲಿತ ಸಮುದಾಯದ ನಿವಾಸಿ ಭಾಸ್ಕರ ನಾಯ್ಕ ಅವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸಂಗಡಿಗರನ್ನು ಕೂಡಲೇ ಬಂಧಿಸ ಬೇಕೆಂದು ಭಾಸ್ಕರ ನಾಯ್ಕ ಅವರ ಪತ್ನಿ ಮಮತಾ, ಮಕ್ಕಳಾದ ವೈಷ್ಣವಿ, ವೈಭವಿ ಅವರು ಒತ್ತಾಯಿಸಿದ್ದಾರೆ.
ಮಮತಾ ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿ, ನನ್ನ ಗಂಡ ಭಾಸ್ಕರ ನಾಯ್ಕ ಅವರು ಸೆ. 2 ರಂದು ಖಾಸಗಿ ಮಾಧ್ಯಮವೊಂದರಲ್ಲಿ ವಿವರಣೆ ನೀಡಿ ಮರಳಿ ಹೋಗುತ್ತಿದ್ದಾಗ ಪಾಣಿಯಾಲ್ ಬಳಿ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಸಂಗಡಿಗರು ಕಾರನ್ನು ತಡೆದು ಹೊರಕ್ಕೆಳೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿದು ನಾನು ಮಕ್ಕಳ ಜತೆ ಸ್ಥಳಕ್ಕೆ ತೆರಳಿ ಬಿಡಿಸಲು ಯತ್ನಿಸಿದಾಗ ನನ್ನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಬಳಿಕ ನನ್ನ ಗಂಡನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದೇನೆ ಹಾಗೂ ಮಹೇಶ್ ತಿಮರೋಡಿ ಮತ್ತು ತಂಡದ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಿದ್ದೇನೆ. ಈ ಸಂದರ್ಭದಲ್ಲಿ ಆರೋಪಿಗಳನ್ನು ಬಂಧಿಸುವ ಭರವಸೆ ನೀಡಲಾಗಿತ್ತು. ಆದರೆ ಬಂಧಿಸಿರಲಿಲ್ಲ್ಲ. ಬಳಿಕ ಪೆರ್ಮುದೆ ಬಳಿ ಬಹಿರಂಗ ಸಭೆಯಲ್ಲಿ ತಿಮರೋಡಿ ಭಾಗವಹಿಸುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದಾಗ ನಾನು ಕೂಡಲೇ ಎಸ್.ಪಿ. ಅವರಿಗೆ ಫೋನ್ ಮಾಡಿ ಮಾಹಿತಿ ನೀಡಿದ್ದೇನೆ ಎಂದರು.
ಎಸ್.ಪಿ. ಅವರು ಆರೋಪಿಗಳನ್ನು ಬಂಧಿಸುವ ಭರವಸೆ ನೀಡಿದ್ದರು. ಆದರೆ ಬಂಧಿಸಿಲ್ಲ. ಮತ್ತೊಮ್ಮೆ ಎಸ್.ಪಿ. ಆವರಿಗೆ ಮನವಿ ಮಾಡಿದ್ದೇನೆ. ಇದುವರೆಗೆ ಏನೂ ಕ್ರಮ ಆಗಿಲ್ಲ. ಇದೀಗ ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಒದಗಿಸ ಬೇಕು. ಗಂಡ ಆಸ್ಪತ್ರೆಯಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದು, ಅವರ ಆರೋಗ್ಯವನ್ನು ನಾನು ನೋಡಿಕೊಳ್ಳುತ್ತಿದ್ದೇನೆ. ಮಕ್ಕಳು ಕೂಡಾ ಶಾಲೆಗೆ ಹೋಗದೆ ನನ್ನ ಜತೆ ಇದ್ದಾರೆ. ಆದ್ದರಿಂದ ಆರೋಪಿಗಳನ್ನು ಕೂಡಲೇ ಬಂಧಿಸ ಬೇಕು ಎಂದು ಒತ್ತಾಯಿಸಿದ್ದಾರೆ.
- bengaluru6 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA5 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA6 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ
- DAKSHINA KANNADA6 days ago
ಮಂಗಳೂರಿನ ಆಟೋಮ್ಯಾಟ್ರಿಕ್ಸ್ ಶೋ ರೂಮ್ ನಲ್ಲಿ ಟಾಟಾ ನೆಕ್ಸಾನ್, ಇ.ವಿ ಬಿಡುಗಡೆ