Connect with us

    LATEST NEWS

    ಟಿಪ್ಪುವಿನ ತಲವಾರಿನಿಂದ ಕಿರೆಂ ಚರ್ಚು- ಜನರನ್ನು ರಕ್ಷಿಸಿದ ಬಂಟ ಕುಟುಂಬ

    Published

    on

    ಕಿನ್ನಿಗೋಳಿ: ಅದು ಕ್ರೈಸ್ತರ ಚರ್ಚ್ ಒಂದರ ವಾರ್ಷಿಕ ಹಬ್ಬ, ಆ ಚರ್ಚ್ ನಲ್ಲಿ ವಾರ್ಷಿಕ ಹಬ್ಬಕ್ಕೆ ಸಂಬಂಧಪಟ್ಟಂತೆ ಮೂರು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳು ನಡೆಯುತ್ತವೆ.

    ಆದರೆ ಈ ಹಬ್ಬ ಮಹತ್ವ ಪಡೆಯುವುದು ಹಿಂದೂ ಕುಟುಂಬಗಳ ಮೂರು ಪ್ರತಿಷ್ಟಿತ ಮೂರು ಮನೆತನದವರಿಗೆ. ಅದೇನಂತೀರಾ ಈಸ್ಟೋರಿ ನೋಡಿ.


    ಟಿಪ್ಪು ಸುಲ್ತಾನ್ ಕರಾವಳಿಯಲ್ಲಿ ಪ್ರಾಬಲ್ಯ ಹೊಂದಿದ್ದ ಬ್ರೀಟಿಷರ ವಿರುದ್ದ ದಾಳಿಗಳನ್ನು ಸಂಘಟಿಸುತ್ತಿದ್ದು ಆಗಾಗ ತನ್ನ ಸೈನ್ಯದೊಂದಿಗೆ ದಂಡೆತ್ತಿ ಬರುತ್ತಿದ್ದನು.

    ಆಗ ಅನೇಕರ ಪ್ರಾಣಾಹುತಿ ನಡೆದಿತ್ತು. ಜೊತೆಗೆ ಇಲ್ಲಿನ ಕ್ರೈಸ್ತರ ಮತ್ತು ಅವರ ಚರ್ಚುಗಳ ಮೇಲೆ ಅತೀ ಹೆಚ್ಚಿನ ದಾಳಿಗಳು ನಡೆದಿದ್ದುವು.

    ಇಂತಹ ದಾಳಿಗೊಳಗಾದ ಸಂದರ್ಭ ತಮ್ಮನ್ನು ಹಾಗೂ ತಮ್ಮ ಚರ್ಚ್‌ ಅನ್ನು ರಕ್ಷಿಸಿದ ನೆನಪಿಗೊಸ್ಕರ ಪ್ರತೀ ವರ್ಷ ಪ್ರತಿಷ್ಠಿತ ಮೂರು ಕುಟುಂಬಗಳಿಗೆ ಕೈಸ್ತ ಬಾಂಧವರು

    ಗೌರವ ಸಲ್ಲಿಸುವ ಸಂಪ್ರದಾಯ ಇದೆ. ಇದು ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಸಮೀಪದ ದಾಮಸ್ ಕಟ್ಟೆಯ ಕಿರೆಂ ಚರ್ಚ್ ನಲ್ಲಿ ನಡೆಯುತ್ತಿದೆ.

    ಕಿನ್ನಿಗೋಳಿ ಸಮೀಪದ ಐಕಳ ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಮಸ್ಕಟ್ಟೆ ಕಿರೆಂ ರೆಮದಿ ಅಮ್ಮನವರ ಇಗರ್ಜಿ ಮಂಗಳೂರು ಡಯಾಸಿಸ್ ನ ಪ್ರಾಚೀನ ಚರ್ಚ್ ಗಳಲ್ಲಿ ಒಂದು.

    ದಾಮಸ್ಕಟ್ಟೆಯಲ್ಲಿರುವ ಕಿರೆಂ ರೆಮದಿ ಅಮ್ಮನವರ ಚರ್ಚ್ ಎಂದೇ ಪ್ರಸಿದ್ಧಿ ಹೊಂದಿರುವ ಈ ಚರ್ಚ್ ಸ್ಥಳೀಯ ಕ್ರೈಸ್ತರಿಂದ ನಿರ್ಮಾಣ ಆಗಿತ್ತು.

    ಟಿಪ್ಪು ಸುಲ್ತಾನ್ 1784 ರಲ್ಲಿ ಕಾರವಾರದಿಂದ ಕಾಸರಗೋಡಿನವರೆಗೆ ಕೆನರಾ ಕ್ರೈಸ್ತರ ಮೇಲೆ ದಾಳಿ ಮಾಡಿದ್ದ. 1784ರ ಫೆಬ್ರವರಿ 24 ರಂದು ಕಿರೆಂ ಚರ್ಚ್ ಅನ್ನು ನಾಶ ಪಡಿಸಲು ಮುಂದಾದಾಗ,

    ಸ್ಥಳೀಯ ಬಂಟ ಸಮುದಾಯದ ಮೂರು ಮನೆತನಗಳಾದ ಐಕಳ ಬಾವ, ತಾಳಿಪಾಡಿ ಗುತ್ತು ಹಾಗೂ ಏಳಿಂಜೆ ಅಂಗಡಿಗುತ್ತು ಕುಟುಂಬದವರು

    ಟಿಪ್ಪು ಸೈನಿಕರನ್ನು ತಡೆದು ಹಿಮ್ಮೆಟ್ಟಿಸುವಲ್ಲಿ ಯಶಸ್ಸಿಯಾದರು, ಅಲ್ಲದೆ ನೂರಾರು ಕೈಸ್ತ ಬಾಂಧವರನ್ನು ರಕ್ಷಿಸಿದ್ದರು.

    ಮಾತ್ರವಲ್ಲದೆ ಹಲವರನ್ನು ತಮ್ಮ ಮನೆಯಲ್ಲಿಟ್ಟುಕೊಂಡು, ತಮ್ಮ ಕುಟುಂಬದ ಸದಸ್ಯನಂತೆ ಕಿವಿಗೆ ಚಿನ್ನದ ಒಲೆಗಳನ್ನು ಹಾಕಿ ಶೆಟ್ಟಿ ಕುಟುಂಬದವನಂತೆ ಬಿಂಬಿಸಿದರು. ಸಾವಿರಾರು ಕ್ರೈಸ್ತರನ್ನು ಟಿಪ್ಪು ಶ್ರೀರಂಗಪಟ್ಟಣಕ್ಕೆ ಕರೆದೊಯ್ದು ಬಂಧನದಲ್ಲಿಟ್ಟಿದ್ದ.

    ಆ ನಂತರ ಹಲವಾರು ವರ್ಷಗಳ ಬಳಿಕ ಬಂಧ ಮುಕ್ತಗೊಂಡ ಕ್ರೈಸ್ತ ಕುಟುಂಬದ ಸದಸ್ಯರು ಹಿಂತಿರುಗಿದಾಗ ಅವರಿಗೆ ಅವರನ್ನು ಒಪ್ಪಿಸಲಾಗಿತ್ತು.

    ಈ ಎಲ್ಲಾ ಕಾರಣದಿಂದ ಪ್ರತೀ ವರ್ಷ ನವಂಬರ್ ಕೊನೆಯ ವಾರದಲ್ಲಿ ನಡೆಯುವ ಕಿರೆಂ ರೆಮದಿ ಚರ್ಚ್ ನ ವಾರ್ಷಿಕ ಹಬ್ಬದಂದು ಈ ಮೂರು ಬಂಟ ಮನೆತನದವರಿಗೆ ಬಾಳೆಹಣ್ಣು,

    ಅಡಿಕೆ ಗೊನೆ, ವೀಳ್ಯದೆಲೆ ನೀಡಿ ವಿಶೇಷ ಗೌರವ ನೀಡಲಾಗುತ್ತದೆ. 3 ಕುಟುಂಬಸ್ಥರನ್ನು ಸನ್ಮಾನಿಸಿ, ಹೊರೆ ಕಾಣಿಕೆ ಅರ್ಪಿಸಲಾಗುತ್ತೆ.
    ಮೂರು ಗುತ್ತು ಮನೆತನದವರಿಗೆ ಪ್ರತೀ ವರ್ಷದಂತೆ ಈ ಬಾರಿಯೂ ಬಾಳೆಗೊನೆ, ವೀಳ್ಯದೆಲೆ ನೀಡಿ ವಿಶೇಷ ಗೌರವ ನೀಡಲಾಯಿತು,

    ತಾಳಿಪಾಡಿ ಗುತ್ತು ದಿನೇಶ್ ಭಂಡ್ರಿಯಾಲ್, ಸುಕುಮಾರ್ ಶೆಟ್ಟಿ, ಏಳಿಂಜೆ ಅಂಗಡಿಗುತ್ತು ಗುತ್ತಿನಾರ್ ಬಾಲಕೃಷ್ಣ ಶೆಟ್ಟಿ,

    ಶಂಭು ಶೆಟ್ಟಿ, ಪ್ರಸಾದ್ ಶೆಟ್ಟಿ, ರಿಶಿತ್ ಶೆಟ್ಟಿ, ಐಕಳ ಬಾವ ಸುಕುಮಾರ್ ಭಂಡಾರಿ, ಜಯಪಾಲ ಶೆಟ್ಟಿ, ಭಾಸ್ಕರ್ ಶೆಟ್ಟಿ ಗೌರವ ಪಡೆದರೆ ಪಣಿರ್ ಚರ್ಚ್ ಪ್ರಧಾನ ಧರ್ಮಗುರುಗಳಾದ ವಿಕ್ಟೆರ್ ಡಿಮೆಲೋ,

    ಕಿರೆಂ ಚರ್ಚ್ ಪ್ರದಾನ ಧರ್ಮಗುರು ಓಸ್ವಾಲ್ಡ್ ಮಾಂತೆರೋ, ಸಹಾಯಕ ಧರ್ಮಗುರು ಸುನೀಲ್ ಡಿಸೋಜ, ಪಾದರ್ ಮ್ಯಾಕ್ಸಿಮ್ ನೊರೋಹ್ನ, ಎಸ್.ವಿ.ಡಿ ಮನೆಯ ಧರ್ಮಗುರುಗಳು, ಕಿನ್ನಿಗೋಳಿ ವಲಯ ಧರ್ಮಗುರುಗಳು,

    ಕಿರೆಂ ಚರ್ಚ್ ನ ಪಲನಾ ಮಂಡಳಿ ಉಪಾಧ್ಯಕ್ಷರ ಸ್ಟೀವನ್ ಡಿಕುನ್ನ,ಕಾರ್ಯದರ್ಶಿ ಮ್ಯಾಕ್ಸಿಮ್ ಪಿಂಟೋ, ಸರ್ವ ಸಮಿತಿ ಚಾಲಕರಾದ ಸಂತಾನ್ ಡಿಸೋಜ ಮತ್ತಿತರರು ಸಂಪ್ರದಾಯದಂತೆ ಗೌರವ ನೀಡಿದರು.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending