ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಾ. ಹೆದ್ದಾರಿಯಲ್ಲಿ ಪಲ್ಟಿಯಾದ ಘಟನೆ ಬಲಾಯಿಪಾದೆಯಲ್ಲಿ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆ ಬರುತ್ತಿದ್ದ ಖಾಸಗಿ ಬಸ್ ಬಲಾಯಿಪಾದೆ ರಾಷ್ಟ್ರೀಯ ಹೆದ್ದಾರಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ವೃತ್ತ ನಿರೀಕ್ಷಕ ಪ್ರಮೋದ್ ಹಾಗೂ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಲಾಗುತ್ತದೆ.