BANTWAL
ವಗ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬಸ್; ಹಲವರಿಗೆ ಗಾಯ
ಬಂಟ್ವಾಳ ತಾಲೂಕಿನ ವಗ್ಗದ ಸಮೀಪ ಕೊಪ್ಪಳ ಎಂಬಲ್ಲಿ ಸರ್ಕಾರಿ ಬಸ್ ಉರುಳಿ ಬಿದ್ದಿದ್ದು, ಹಲವರು ಗಾಯಗೊಂಡಿದ್ದಾರೆ.
ಧರ್ಮಸ್ಥಳ ಮಂಗಳೂರು ನಡುವೆ ಸಂಚರಿಸುವ ಸರ್ಕಾರಿ ಬಸ್ ಇದಾಗಿದ್ದು, ಕೊಪ್ಪಳ ಎಂಬಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ರಸ್ತೆಯ ಪಕ್ಕದ ಗುಂಡಿಗೆ ಬಸ್ ಉರುಳಿ ಬಿದ್ದಿದ್ದು ಬಸ್ನಲ್ಲಿದ್ದ ಹಲವರಿಗೆ ಗಾಯಗಳಾಗಿದೆ. ತಕ್ಷಣ ಸ್ಥಳೀಯ ಯುವಕರು ಸೇರಿ ಬಸ್ ಒಳಗಿದ್ದ ಪ್ರಯಾಣಿಕರನ್ನು ಬಸ್ ನಿಂದ ಹೊರ ತೆಗೆದಿದ್ದಾರೆ.
ಗಾಯಾಳುಗಳನ್ನು ಖಾಸಗಿ ವಾಹನಗಳ ಮೂಲಕ ಸಮೀಪದ ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದ್ದಾರೆ. ಬಸ್ ಬರುತ್ತಿರುವ ವೇಳೆ ಬೈಕ್ ಒಂದು ಅಡ್ಡ ಬಂದಿದ್ದು ಈ ವೇಳೆ ಬಸ್ ನಿಯಂತ್ರಿಸುವ ವೇಳೆ ರಸ್ತೆಯಿಂದ ಪಕ್ಕಕ್ಕೆ ಉರುಳಿದೆ ಎಂದು ಬಸ್ ಚಾಲಕ ಮಾಹಿತಿ ನೀಡಿದ್ದಾರೆ . ಆದರೆ ಸ್ಥಳಿಯರು ಇದನ್ನು ನಿರಾಕರಿಸಿದ್ದು ಬಸ್ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಿದ್ದಾರೆ.
ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದು, ಮಾಹಿತಿ ಪಡೆದುಕೊಂಡು ಘಟನೆಗೆ ಕಾರಣ ಏನು ಎಂಬ ಬಗ್ಗೆ ವಿಚಾರಣೆ ಮುಂದುವರೆಸಿದ್ದಾರೆ.
BANTWAL
VIDEO: ಕೆಸರುಗದ್ದೆಯಲ್ಲಿ ಜಿಲ್ಲಾಧಿಕಾರಿಯ ಪಿಲಿ ನಲಿಕೆ
ಬಂಟ್ವಾಳ: ತಾಲೂಕಿನ ಅನಂತಾಡಿ ಗ್ರಾಮದ ನವ ಭಾರತ್ ಯುವಕ ಸಂಘ ( ರಿ ) ಅನಂತಾಡಿ ವತಿಯಿಂದ ಪಡಿಪಿರೆ ಗದ್ದೆಯಲ್ಲಿ ಜರಗಿದ 6 ನೇ ವರ್ಷದ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಕಾರ್ಯಕ್ರಮ ಜರಗಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅನೀಶ್ ಅಶ್ವತ್ತಾಡಿ ವಹಿಸಿದ್ದರು.
ಕಾರ್ಯಕ್ರಮದ ಧ್ವಜಾರೋಹಣವನ್ನು ಡಾ.ರೂಪಲತಾ ಕೊಂಗಲಾಯಿ ನೆರವೇರಿಸಿ , ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಮಾಣಿ ವಲಯ ಅಧ್ಯಕ್ಷ ರಾಮ್ ಕಿಶಾನ್ ರೈ ನೆರವೇರಿಸಿದರು. ಕ್ರೀಡಾಕೂಟದ ಕೆಸರುಗದ್ದೆಯ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರ ಸಂಘದ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಹಾಗೂ ವಿಠಲ ಕೋಟ್ಯಾನ್ ಪೊಯ್ಯೇ ನೆರವೇರಿಸಿದರು.
ಕೆಸರು ಗದ್ದೆಯಲ್ಲಿ ಮಕ್ಕಳಿಗೆ, ಮಹಿಳೆಯರಿಗೆ, ಪುರುಷರಿಗೆ, ವಿವಿಧ ಕ್ರೀಡಾಕೂಟಗಳನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ನಮ್ಮ ತುಳುವ ಸಂಸ್ಕೃತಿಯ ಚಾಪೆ ಹೆಣೆಯುವುದು, ಬುಟ್ಟಿ ಹೆಣೆಯುವುದು, ಮುಟ್ಟಾಲೆ ಕಟ್ಟುವುದು, ತೆಂಗಿನಗರಿ ಹೆಣೆಯುವುದು, ಅಕ್ಕಿ ಮುಡಿ ಕಟ್ಟುವ ಪ್ರಾತ್ಯಕ್ಷತೆ ನಡೆಸಲಾಯಿತು.
ಕತ್ತಲು ಆವರಿಸಿದ ಬ್ರಹ್ಮಗಿರಿಯ ಪ್ರವಾಸಿತಾಣ..! ಮೆಸ್ಕಾಂ ಅಧಿಕಾರಿಗಳಿಂದ ವಿದ್ಯುತ್ ಕಡಿತ
ವೇದಿಕೆಯಲ್ಲಿ ಮಾಣಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ನಿವೃತ್ತ ಶಿಕ್ಷಕ ರಾಮಣ್ಣ ಗೌಡ ಕೋಂಗಲಾಯಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಾರ್ಶ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ನೇರಳಕಟ್ಟೆ, ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವಿನ ರಾಧಾಕೃಷ್ಣಮೂಲ್ಯ, ಮಲ್ಲರಾಯ ದೈವ ಪರಿಚರಕರುಗಳಾದ ರಾಮಣ್ಣ ಗೌಡ, ಬಾಲಪ್ಪ ಮಡಿವಾಳ, ಲಕ್ಷ್ಮಣ ಪೂಜಾರಿ ಬಾಕಿಲ, ಪದ್ಮನಾಭ ಪೂಜಾರಿ ಈಡೆಮುಂಡೆವು ಮೊದಲಾದವರು ಉಪಸ್ಥಿತರಿದ್ದರು.
ಮಕ್ಕಳೊಂದಿಗೆ ಹೆಜ್ಜೆ ಹಾಕಿದ ಜಿಲ್ಲಾಧಿಕಾರಿ
ಈಗಾಗಲೇ ಶಾಲಾ ಮಕ್ಕಳಿಗೆ ರಜೆ ನೀಡುವ ವಿಚಾರದಲ್ಲಿ ವಿದ್ಯಾರ್ಥಿಗಳಿಗೆ ಫೇವರೆಟ್ ಆಗಿರುವ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಅನಂತಾಡಿಯಲ್ಲಿ ಸಂಘಟನೆಯವರು ಆಯೋಜನೆ ಮಾಡಿದ್ದ ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಭಾಗವಹಿಸಿ, ಮಕ್ಕಳೊಂದಿಗೆ ಮಕ್ಕಳಾಗಿ ಕೆಸರಿನಲ್ಲಿ ಆಟವಾಡಿದ್ದಾರೆ. ಅಲ್ಲದೇ ಕರಾವಳಿಯ ಪಿಲಿ ನಲಿಕೆಗೆ ಹೆಜ್ಜೆ ಹಾಕಿ ಎಲ್ಲರ ಹುಬ್ಬೆರಗಾಗುವಂತೆ ಮಾಡಿದ್ದಾರೆ. ಮಕ್ಕಳ ಜೊತೆ ತಾನೂ ಮಗುವಾಗಿ ಮೈಮರೆತು ಹಾಡಿನ ನೃತ್ಯ ಮಾಡಿದ ಜಿಲ್ಲಾಧಿಕಾರಿಗಳ ನಡೆಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ. ಇದರ ಜೊತೆಗೆ ಯುವಕರ ಜೊತೆ ವಾಲಿಬಾಲ್ ಆಡುವ ಮೂಲಕವೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರವರು ಎಲ್ಲರ ಗಮನ ಸೆಳೆದಿದ್ದಾರೆ.
BANTWAL
ಪೊಲೀಸರ ರ್ಯಾಪಿಡ್ ಆಕ್ಷನ್ ಫೋರ್ಸ್ ಲಾರಿ ಪಲ್ಟಿ ; ಇಬ್ಬರಿಗೆ ಗಾಯ
ಪುಂಜಾಲಕಟ್ಟೆ; ಬಂಟ್ವಾಳ ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿ ಮೂರ್ಜೆ ಸಮೀಪದ ಕುದ್ರೋಟಿಕಟ್ಟೆಯಲ್ಲಿ ಪೊಲೀಸರ ರ್ಯಾಪಿಡ್ ಆಕ್ಷನ್ ಫೋರ್ಸ್ ಲಾರಿ ಮುಗುಚಿ ಕೆಳಗೆ ಬಿದ್ದಿದೆ.
ಚಾಲಕನ ನಿಯಂತ್ರಣ ತಪ್ಪಿದ ಕಾರಣದಿಂದಾಗಿ ಆರ್ಎಎಫ್ ನ ಲಗೇಜು ತುಂಬಿದ ಲಾರಿ ಭದ್ರಾವತಿಯಿಂದ ಬಿ.ಸಿ.ರೋಡ್ ಗೆ ಬರುತ್ತಿರುವಾಗ ಪಲ್ಟಿಯಾಗಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಹಾಗೂ ಮತ್ತೋರ್ವ ಸಿಬ್ಬಂದಿ ಸಾಂತಪ್ಪ ನಾಯಕ್ರನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
BANTWAL
ಬಂಟ್ವಾಳ: ಈದ್ ಮಿಲಾದ್ ಮೆರವಣಿಗೆಯಲ್ಲಿ ಸಿಹಿ ಹಂಚಿ ಸೌಹಾರ್ದತೆ ಮೆರೆದ ಹಿಂದೂ ಬಾಂಧವರು.!
ಬಂಟ್ವಾಳ: ಸಂಘಪರಿವಾರದ ವಿವಾದದ ನಡುವೆಯೂ ಹಿಂದೂ ಬಾಂಧವರು ಈದ್ ಮಿಲಾದ್ ಮೆರವಣಿಗೆಯಲ್ಲಿ ಸಾಗಿ ಬಂದು ಮುಸ್ಲಿಮರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆದ ಘಟನೆ ಬಂಟ್ವಾಳ ತಾಲೂಕಿನ ಮಾಣಿಯಲ್ಲಿ ನಡೆದಿದೆ.
ಸೋಮವಾರ ಕರ್ನಾಟಕದಾದ್ಯಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಅದ್ದೂರಿಯಾಗಿ ಆಚರಿಸಿದರು. ಪ್ರಚೋದನಕಾರಿ ಹೇಳಿಕೆಯಿಂದ ಸಂಘಪರಿವಾರದ ಕಾರ್ಯಕರ್ತರು ಬಿಸಿ ರೋಡಿನಲ್ಲಿ ಜಮಾಯಿಸಿ ಘೋಷಣೆಗಳನ್ನು ಕೂಗಿ ಪ್ರತಿಭಟನೆ ಮಾಡಿದರು. ಕೆಲಕಾಲ ಬಿಗುವಿನ ವಾತಾವರಣ ಕಂಡುಬಂತು.
ಇದೆಲ್ಲದರ ನಡುವೆ ಮಾಣಿಯಲ್ಲಿ ಹಿಂದೂ ಬಾಂಧವರು ಮೆರವಣಿಗೆಯಲ್ಲಿ ಸಾಗಿ ಬಂದ ಮಸ್ಲಿಮರಿಗೆ ಸಿಹಿತಿಂಡಿ ವಿತರಿಸಿ ಸೌಹಾರ್ದತೆಗೆ ಪಾತ್ರರಾದರು.
ಅಲ್ಲದೆ ಅಂತ್ಯದಿನದವರೆಗೂ ನಮ್ಮ ಊರಲ್ಲಿ ಶಾಂತಿ ಸೌಹಾರ್ದತೆ ನೆಲೆ ನಿಲ್ಲಲಿ ಎಂದು ಹಾರೈಸಿದರು.
- FILM5 days ago
ಬಿಗ್ ಬಾಸ್ ಕನ್ನಡ ಸೀಸನ್ -11 ರ ಸ್ಪರ್ಧಿಗಳ ಹೆಸರು ರಿವೀಲ್..?
- NATIONAL4 days ago
ಶ್ವಾನ ನೆಗೆದು ಗರ್ಭಪಾತ; ಮಾಲಿಕನಿಗೆ 10 ಲಕ್ಷ ದಂಡ
- NATIONAL4 days ago
ವಿಶ್ವದ ಶ್ರೀಮಂತ ಭಿಕ್ಷುಕ ಇವರೇ ನೋಡಿ ! ಭರತ್ ಜೈನ್ ಒಟ್ಟು ಆಸ್ತಿ ಎಷ್ಟು ಗೊತ್ತಾ ???
- LATEST NEWS4 days ago
ಟಾರ್ಗೆಟ್ ತಲುಪೋ ಭರದಲ್ಲಿ ರಾತ್ರಿ ಹಗಲೆನ್ನದೇ ಕೆಲಸ ಮಾಡಿ ಯುವತಿ ಸಾ*ವು