LATEST NEWS
ಬೆಂಗಳೂರು ಜೈಲು ಸೇರಿದ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಅಪರಾಧಿ..!
ಉಡುಪಿ : ರಾಜ್ಯದಲ್ಲೇ ಸಚಲನ ಮೂಡಿಸಿದ್ದ ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿ ರಾಜೇಶ್ವರಿ ಶೆಟ್ಟಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾಳೆ.
ಕೋವಿಡ್ ಹಿನ್ನೆಲೆಯಲ್ಲಿ ಆಕೆಗೆ ಜೈಲಿನ ಪ್ರತ್ಯೇಕ ಸೆಲ್ನಲ್ಲಿ 14 ದಿನಗಳ ಕಾಲ ಕ್ವಾರಂಟೈನ್ ವಿಧಿಸಲಾಗಿದೆ.
ಜೂನ್ 8ರಂದು ಉಡುಪಿ ನ್ಯಾಯಾಲಯ ಮೂವರು ಆರೋಪಿಗಳಿಗೆ ಜೀವಿತಾವಧಿ ಜೈಲುಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ಹಾಜರಿದ್ದ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಯನ್ನು ವಶಕ್ಕೆ ಪಡೆದು, ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿತ್ತು.
ಮೊದಲು ಆಕೆಯನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಫಿವರ್ ಕ್ಲಿನಿಕ್ನಲ್ಲಿ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿತ್ತು. ರಾಪಿಡ್ ಟೆಸ್ಟ್ ವರದಿಯಲ್ಲಿ ನೆಗೆಟಿವ್ ಬಂದಿದ್ದು, ಆ ಬಳಿಕ ಮಣಿಪಾಲ ಪೊಲೀಸರು, ಮಹಿಳಾ ಠಾಣೆಯ ಎಸ್ಐ, ಸಶಸ್ತ್ರ ಹೊಂದಿರುವ ಸಿಬ್ಬಂದಿಗಳೊಂದಿಗೆ ರಾಜೇಶ್ವರಿ ಶೆಟ್ಟಿಯನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿತ್ತು.
ಅದೇ ದಿನ ರಾತ್ರಿ 10ಗಂಟೆಗೆ ಬೆಂಗಳೂರು ತಲುಪಿರುವ ಆಕೆಯನ್ನು ಪೊಲೀಸರು ಅಲ್ಲಿ ಪರಪ್ಪನ ಅಗ್ರಹಾರಕ್ಕೆ ಹಸ್ತಾಂತರಿಸಿದರು.
ಜೈಲಿನಲ್ಲಿರುವ ಪ್ರತ್ಯೇಕ ಸೆಲ್ನಲ್ಲಿ 14 ದಿನಗಳ ಕ್ವಾರಂಟೈನ್ ಮುಗಿಸಿ ಶಿಕ್ಷೆ ಬಂಧಿಯಾಗಿರುವ ಸೆಲ್ನಲ್ಲಿ ಆಕೆಯನ್ನು ಹಾಕಲಾಗುತ್ತದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈಗಾಗಲೇ ರಾಜೇಶ್ವರಿ ಶೆಟ್ಟಿಯ ಮಗ ನವನೀತ್ ಶೆಟ್ಟಿ ಮತ್ತು ನಿರಂಜನ್ ಭಟ್ ಬೆಂಗಳೂರಿನ ಜೈಲಿನಲ್ಲಿದ್ದಾರೆ.
LATEST NEWS
ಚೀನಾ ಗಡಿ ಭಾಗದಲ್ಲಿ ನದಿ ದಾಟುವಾಗ ಟ್ಯಾಂಕ್ ಅಪ*ಘಾತ – ಐವರು ಭಾರತೀಯ ಯೋಧರು ಹುತಾ*ತ್ಮ
ನವದೆಹಲಿ: ಲೇಹ್ನ ದೌಲತ್ ಬೇಗ್ ಓಲ್ಡಿ ಪ್ರದೇಶದ ಎಲ್ಎಸಿ ಬಳಿ ನದಿ ದಾಟುವ ಅಭ್ಯಾಸದ ವೇಳೆ ಟ್ಯಾಂಕ್ ಅಪ*ಘಾತದಲ್ಲಿ ಭಾರತೀಯ ಸೇನೆಯ ಐವರು ಯೋಧರು ಹುತಾ*ತ್ಮರಾಗಿದ್ದಾರೆ.
ಶನಿವಾರ ಮುಂಜಾನೆ 1 ಗಂಟೆ ಸುಮಾರಿಗೆ ಸಂಭವಿಸಿದ ಅಪ*ಘಾತದಲ್ಲಿ ಹುತಾ*ತ್ಮರಾದ ಐವರಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ ಅಥವಾ ಜೆಸಿಒ ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೈನಿಕರು ತರಬೇತಿ ಕಾರ್ಯಾಚರಣೆಯಲ್ಲಿದ್ದರು. ಲೇಹ್ನಿಂದ 148 ಕಿಲೋಮೀಟರ್ ದೂರದಲ್ಲಿರುವ ಮಂದಿರ್ ಮೋರ್ ಬಳಿ ಬೋಧಿ ನದಿಯನ್ನು ತಮ್ಮ T-72 ಟ್ಯಾಂಕ್ ಮೂಲಕ ದಾಟುತ್ತಿದ್ದಾಗ ಇದ್ದಕ್ಕಿದ್ದಂತೆ ನೀರಿನ ಮಟ್ಟ ಏರಲು ಪ್ರಾರಂಭಿಸಿತು. ತಕ್ಷಣವೇ ಟ್ಯಾಂಕ್ನೊಂದಿಗೆ ಸೈನಿಕರು ಉಬ್ಬುವ ನದಿಯಲ್ಲಿ ಮುಳುಗಿ ಹೋದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಂತಾಪ ಸೂಚಿಸಿದ್ದಾರೆ. ‘ಲಡಾಖ್ನಲ್ಲಿ ಸಂಭವಿಸಿದ ದುರ*ದೃಷ್ಟಕರ ಅಪ*ಘಾತದಲ್ಲಿ ನಮ್ಮ ಐವರು ವೀರ ಭಾರತೀಯ ಸೇನೆಯ ಯೋಧರು ಪ್ರಾಣ ಕಳೆದುಕೊಂಡಿದ್ದಕ್ಕಾಗಿ ತೀವ್ರ ದುಃಖವಾಗಿದೆ. ನಾವು ಎಂದಿಗೂ ಆದರ್ಶಪ್ರಾಯವನ್ನು ಮರೆಯುವುದಿಲ್ಲ. ದೇಶಕ್ಕೆ ನಮ್ಮ ಧೀರ ಸೈನಿಕರ ಸೇವೆ ಅಪಾರ. ದುಃಖದ ಸಮಯದಲ್ಲಿ ಅವರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ಎಂದು ಎಕ್ಸ್ನಲ್ಲಿ ಸಚಿವರು ಪೋಸ್ಟ್ ಮಾಡಿದ್ದಾರೆ.
DAKSHINA KANNADA
ಶಿರಾಡಿಘಾಟ್ ನಲ್ಲಿ ಸರಣಿ ಅಪಘಾ*ತ; ರಾಜಹಂಸ, ಐರಾವತ ಬಸ್ ಮುಖಾಮುಖಿ ಡಿ*ಕ್ಕಿ
ಶಿರಾಡಿ : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ನಲ್ಲಿ ಸರಣಿ ಅಪಘಾ*ತ ಸಂಭವಿಸಿದೆ. ರಾಜಹಂಸ ಹಾಗೂ ಐರಾವತ ಬಸ್ ಮುಖಾಮುಖಿ ಡಿ*ಕ್ಕಿಯಾಗಿದೆ.
ಈ ವೇಳೆ ಅಪಘಾ*ತ ತಪ್ಪಿಸಲು ಹೋಗಿ ಟೆಂಪೋವೊಂದು ಚರಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ : ಜೀವ ಉಳಿಸಿದ ನಾಯಿಯ ನಿಯತ್ತು ಹಾಗೂ ಯುವಕನ ಸಮಯ ಪ್ರಜ್ಞೆ!
ಇನ್ನು ರಸ್ತೆ ಸಂಚಾರ ಬಂದ್ ಮಾಡಿ, ಬಸ್ ಗಳನ್ನು ತೆರವುಗೊಳಿಸುವ ಕಾರ್ಯ ಮಾಡಲಾಯಿತು.
LATEST NEWS
ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ..! ನಾಲ್ವರ ಸಾ*ವು..!
ತಮಿಳುನಾಡು: ಪಟಾಕಿತಯಾರಿಕಾ ಫ್ಯಾಕ್ಟರಿಯಲ್ಲಿ ಸ್ಫೋ*ಟ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವಿರುದನಗರ ಸತ್ತೂರಿನಲ್ಲಿ ನಡೆದಿದೆ.
ಖಾಸಗಿ ಒಡೆತನದ ಪಟಾಕಿ ಫ್ಯಾಕ್ಟರಿಯಲ್ಲಿ ಒಂದಕ್ಕಿಂತ ಹೆಚ್ಚು ರಸಾಯನಿಕಗಳನ್ನು ಬೆರೆಸಿದ ಪರಿಣಾಮ ಸ್ಫೋಟ ಸಂಭವಿಸಿದೆ ಎನ್ನಲಾಗಿದೆ. ಘಟನೆಯಿಂದಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಓರ್ವ ಗಂಭೀರ ಗಾಯಗೊಂಡಿದ್ದು ಆತನನ್ನು ವಿರುದನಗರ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ನೇ*ಣಿಗೆ ಶರಣಾದ ಪಾಗಲ್ ಪ್ರೇಮಿ..! ವ್ಯಾಟ್ಸಾಪ್ ಸ್ಟೇಟಸ್ ಹಾಕಿ ಜೀವಾಂ*ತ್ಯ..!!
ಪಟಾಕಿ ಸ್ಫೋಟಗೊಂಡಂತೆ ಬೆಂಕಿ ವ್ಯಾಪಿಸಿದೆ. ಘಟನೆಯಿಂದಾಗಿ ಕಾರ್ಖಾನೆಯ ಒಂದು ಭಾಗದ ಕಟ್ಟಡ ನೆಲಸಮವಾಗಿದೆ. ಅಕ್ಕಪಕ್ಕದ ಕಟ್ಟಡಗಳಿಗೂ ಹಾನಿಯುಂಟಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಭೆಟಿ ನೀಡಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಫೋಟಕ್ಕೆ ನಿಖರ ಮಾಹಿತಿ ಇನ್ನು ತಿಳಿದು ಬಂದಿಲ್ಲ. ಸಿಎಂ ಸ್ಟಾಲಿನ್ರವರು ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದು, ಸಂತ್ರಸ್ತ ಕುಟುಂಬಗಳಿಗೆ 3 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.
- LATEST NEWS4 days ago
ಪ್ರೀತಂ ಗೌಡ ಸೇರಿ ನಾಲ್ವರ ಮೇಲೆ ಎಫ್ಐಆರ್..! ಪ್ರಜ್ವಲ್ ಗೆ ಮತ್ತೊಂದು ಸಂಕಷ್ಟ
- DAKSHINA KANNADA5 days ago
ಕರಾವಳಿಯಲ್ಲಿ ಬಿರುಸು ಪಡೆದುಕೊಂಡ ಮಳೆ; ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ
- DAKSHINA KANNADA5 days ago
ಯಕ್ಷಗಾನದ ಖ್ಯಾತ ಹಾಸ್ಯ ಕಲಾವಿದ ದಿನೇಶ್ ಕೋಡಪದವು ಅವರಿಗೆ ಆರ್ಯಭಟ ಪ್ರಶಸ್ತಿ ಪ್ರದಾನ
- LATEST NEWS6 days ago
ನನ್ನದೂ ತಪ್ಪಿದೆ, ಯುವ ಹೇಳಿದ್ದಕ್ಕೆ ನಾನು ಮುಂದುವರೆದೆ…ಸಪ್ತಮಿ ಗೌಡ ಆಡಿಯೋ ವೈರಲ್!?