CAA ವಿರೋಧಿಸಿ ಅಡ್ಡೂರ್ ನಲ್ಲಿ ಬೃಹತ್ ಪ್ರತಿಭಟನೆ.
Published
5 years agoon
By
Adminಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಸಂವಿಧಾನ ಸಂಕ್ಷರಣಾ ಸಮಿತಿ ಅಡ್ಡೂರು ಇದರ ವತಿಯಿಂದ ಮಂಗಳೂರಿನ ಅಡ್ಡೂರು ಜಂಕ್ಷನ್ ಮೈದಾನದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.
ಪ್ರತಿಭಟನಾ ಸಭೆಯಲ್ಲಿ ವಿದ್ಯಾರ್ಥಿನಿ ಅಮೂಲ್ಯ ಮಾತನಾಡಿ, ರಾಷ್ಟ್ರಪ್ರೇಮವನ್ನು ಪೋಸ್ಟ್ ಕಾರ್ಡ್ ಅಥವಾ ಸಾಮಾಜಿಕ ಜಾಲತಾಣದಲ್ಲಿ ಪ್ರದರ್ಶಿಸುವುದಲ್ಲ. ಅದು ಹೃದಯದಲ್ಲಿರಬೇಕು. ಹೃದಯವೇ ಇಲ್ಲದ ಹಿಂದೂಗಳೆಂಬ ಮುಖವಾಡ ಹಾಕಿರುವವರು ಬಡ ಹಾಗೂ ಯುವ ಜನರಲ್ಲಿ ಗನ್ ಕೊಟ್ಟು, ಜಾತಿ ಮತ್ತು ದೇಶದ ಹೆಸರಲ್ಲಿ ಕಚ್ಚಾಡುವಂತೆ ಮಾಡುತ್ತಿದ್ದಾರೆ ಎಂದು ಸಂಘಪರಿವಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಕ್ರಾಂತಿ ಪ್ರತಿಯೊಬ್ಬರ ಮನೆಯಿಂದ ಆರಂಭವಾಗಬೇಕು. ಪ್ರತಿ ಮನೆಯಲ್ಲೂ ಗಾಂಧೀಜಿ, ಭಗತ್ ಸಿಂಗ್ ಕಾಣುವಂತಾಗಬೇಕು. ಜೈ ಶ್ರೀ ರಾಮ್ ಎನ್ನುವಾಗ ‘ಜೈ ಸಂವಿಧಾನ್, ಜೈ ಭೀಮ್’ ಎನ್ನುವ ಮಂದಿ ಹುಟ್ಟಿ ಬರಬೇಕು. ಹಿಂದುತ್ವದ ಹೆಸರಿನಲ್ಲಿ ದ್ವೇಷ ರಾಜಕಾರಣ ಮಾಡುವ ಇವರಲ್ಲಿ ಆರೆಸ್ಸೆಸ್ ಮನಸ್ಥಿತಿ ಕೆಲಸ ಮಾಡುತ್ತಿದೆ ಎಂದರು. ಕಾರ್ಯಕ್ರಮದಲ್ಲಿ ಭಾಸ್ಕರ್ ಪ್ರಸಾದ್, ವಿಲಿಯಂ ಮಾರ್ಟಿಸ್, ಸುಫ್ಯಾನ್ ಸಖಾಫಿ, ಅಶ್ರಫ್ ಮಾಚಾರ್ ಮತ್ತಿತ್ತರರು ಉಪಸ್ಥಿತರಿದ್ದರು.. ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿ ಎನ್ಆರ್ಸಿ, ಸಿಎಎ, ಎನ್ಪಿಆರ್ ವಿರುದ್ಧ ಘೋಷಣೆ ಕೂಗಿದರು.
ವಿಡಿಯೋಗಾಗಿ
You may like
LATEST NEWS
ಮಾಜಿ ಕ್ರಿಕೆಟಿಗ ಸೆಹ್ವಾಗ್-ಆರತಿ ದಾಂಪತ್ಯದಲ್ಲಿ ಬಿರುಕು ?
Published
27 minutes agoon
24/01/2025By
NEWS DESK3ಮಂಗಳೂರು/ಮುಂಬೈ : ಇತ್ತೀಚೆಗೆ ಕ್ರಿಕೆಟರ್ ಚಹಾಲ್-ಧನಶ್ರೀ ವಿಚ್ಛೇದನ ವದಂತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು.
ಆದರೆ ಇದೀಗ, ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹಾಗೂ ಅವರ ಪತ್ನಿ ಆರತಿ ಆಹ್ಲಾವತ್ ವಿಚ್ಛೇದನ ಪಡೆಯಲಿದ್ದು, ಇವರಿಬ್ಬರ 20 ವರ್ಷಗಳ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದೆ ಎಂದು ವರದಿಯಾಗಿದೆ.
ಸೆಹ್ವಾಗ್ ಮತ್ತು ಆರತಿ ದಂಪತಿ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರರನ್ನು ಅನ್ಫಾಲೋ ಮಾಡಿರುವುದು ವಿಚ್ಛೇದನ ವರದಿಗೆ ಹೆಚ್ಚಿನ ಬಲ ತುಂಬಿದೆ. ಜತೆಗೆ ಇವರಿಬ್ಬರು ಹಲವು ತಿಂಗಳುಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಮುಂದಿನ ದಿನಗಳಲ್ಲಿ ವಿಚ್ಛೇದನದ ಬಗ್ಗೆ ಅಧಿಕೃತವಾಗಿ ಘೋಷಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ನಾನು ಮತ್ತು ನನ್ನ ಕುಟುಂಬ ಸದಸ್ಯರು…ವಿಚ್ಛೇದನ ವದಂತಿ ಕುರಿತು ಕೊನೆಗೂ ಮೌನ ಮುರಿದ ಧನಶ್ರೀ ವರ್ಮಾ !
ಅಲ್ಲದೆ, ಇತ್ತೀಚೆಗೆ ಸೆಹ್ವಾಗ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿರುವ ಪೋಸ್ಟ್ಗಳಲ್ಲಿ ಪತ್ನಿ ಆರತಿ ಎಲ್ಲಿಯೂ ಕಂಡುಬಂದಿಲ್ಲ. ಜತೆಗೆ ಕಳೆದ ವರ್ಷ ದೀಪಾವಳಿ ಆಚರಣೆಯ ಸಂದರ್ಭದಲ್ಲಿ ಸೆಹ್ವಾಗ್, ಇಬ್ಬರು ಪುತ್ರರು ಮತ್ತು ತಾಯಿಯೊಂದಿಗಿನ ಫೋಟೋಗಳನ್ನು ಮಾತ್ರ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವುದು ವಿಚ್ಛೇದನ ವರದಿಗೆ ಮತ್ತಷ್ಟು ಪುಷ್ಟಿ ನೀಡಿತ್ತು.
ಸೆಹ್ವಾಗ್ ಮತ್ತು ಆರತಿ 2004ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇವರಿಗೆ ಆರ್ಯುವೀರ್, ವೇದಾಂತ್ ಎಂಬ ಇಬ್ಬರು ಗಂಡು ಮಕ್ಕಳು ಇದ್ದಾರೆ.
DAKSHINA KANNADA
ಬಂಟ್ವಾಳ : 108 ಆಂಬ್ಯುಲೆನ್ಸ್ ವಾಹನಕ್ಕೆ ಇನ್ನೋವಾ ಕಾರ್ ಡಿಕ್ಕಿ – ವಾಹನಗಳು ಜಖಂ
Published
1 hour agoon
24/01/2025By
NEWS DESK2ಬಂಟ್ವಾಳ: ರಸ್ತೆ ಬದಿಯಲ್ಲಿ ಖಾಲಿ ಜಾಗದಲ್ಲಿ ನಿಲ್ಲಿಸಿ ಟಯರ್ ಚೆಕ್ ಮಾಡುತ್ತಿದ್ದ ವೇಳೆ 108 ಆಂಬ್ಯುಲೆನ್ಸ್ ವಾಹನಕ್ಕೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದು ಎರಡು ವಾಹನಗಳು ಜಖಂಗೊಂಡಿದ್ದು ಅದೃಷ್ಟವಶಾತ್ ಯಾರಿಗೂ ಗಾಯವಿಲ್ಲದೆ ಪಾರಾಗಿರುವ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ.
ವಿಟ್ಲದಿಂದ ಮಂಗಳೂರಿಗೆ ರೋಗಿಯನ್ನು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿ ವಾಪಸು ವಿಟ್ಲಕ್ಕೆ ಬರುತ್ತಿದ್ದ 108 ಅಂಬ್ಯುಲೆನ್ಸ್ ವಾಹನಕ್ಕೆ ಇನ್ನೋವಾ ಕಾರು ಡಿಕ್ಕಿಯಾಗಿದೆ. ಕಡೆಗೋಳಿ ಎಂಬಲ್ಲಿ ಆಂಬ್ಯುಲೆನ್ಸ್ ವಾಹನದ ಚಕ್ರದಲ್ಲಿ ಶಬ್ದ ಬಂದಿದೆ ಎಂದು ರಸ್ತೆಯ ಬದಿಯಲ್ಲಿ ನಿಲ್ಲಿಸಿ ಚಾಲಕ ಕರುಣಾಕರ ಅವರು ಪರಿಶೀಲನೆ ಮಾಡುತ್ತಿದ್ದ ವೇಳೆ ಇನ್ನೋವ ಕಾರು ಚಾಲಕ ಶ್ರವಣ್ ಅಂಬ್ಯುಲೆನ್ಸ್ ವಾಹನದ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ.
ಘಟನೆಯಲ್ಲಿ ಯಾವುದೇ ಗಾಯವಾಗದಿದ್ದರೂ ಎರಡು ವಾಹನಗಳಿಗೆ ಹಾನಿಯಾಗಿದೆ. ಪಾಣೆಮಂಗಳೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಸಚಿವ ಉತ್ತಮ್ ಕುಮಾರ್ ರೆಡ್ಡಿ ಬೆಂಗಾವಲು ಪಡೆಯ 8 ಕಾರುಗಳ ಸರಣಿ ಅಪಘಾತ
Published
2 hours agoon
24/01/2025By
NEWS DESK3ಮಂಗಳೂರು/ಹೈದರಾಬಾದ್ : ತೆಲಂಗಾಣದ ನೀರಾವರಿ ಮತ್ತು ನಾಗರಿಕ ಪೂರೈಕೆ ಸಚಿವ ಉತ್ತಮ್ ಕುಮಾರ್ ರೆಡ್ಡಿ ಬೆಂಗಾವಲು ಪಡೆಯ 8 ಕಾರುಗಳು ಡಿಕ್ಕಿ ಹೊಡೆದಿವೆ.
ಸಚಿವರು ಹುಜೂರ್ ನಗರದಿಂದ, ಸೂರ್ಯಪೇಟೆ ಜಿಲ್ಲೆಯ ಜಾನ್ಪಹಾಡ್ ದರ್ಗಾಕ್ಕೆ ಹೋಗುತ್ತಿದ್ದ ವೇಳೆ, ಗರೀಡೆಪಲ್ಲಿ ಪಿಎಸ್ನಲ್ಲಿ ಈ ಘಟನೆ ಸಂಭವಿಸಿದೆ. ಈ ಘಟನೆಯಲ್ಲಿ ಯಾವುದೇ ಗಾಯಗಳು ವರದಿಯಾಗಿಲ್ಲ.
ಇದನ್ನೂ ಓದಿ: ನಿಶ್ಚಿತಾರ್ಥಗೊಂಡ ಯುವತಿಯ ಆ ಒಂದು ಪ್ರಶ್ನೆಗೆ ಆತ್ಮಹ*ತ್ಯೆ ಮಾಡಿಕೊಂಡ ಯುವಕ ?
ಅಷ್ಟಕ್ಕೂ ಆಗಿದ್ದೇನು?
ಸಚಿವರ ಆಗಮನದ ಮಾಹಿತಿ ತಿಳಿದ ಕಾರ್ಯಕರ್ತರು ರಸ್ತೆಯಲ್ಲಿ ನಿಂತು ಕಾಯುತ್ತಿದ್ದರು. ಈ ವೇಳೆ ಸಚಿವ ಉತ್ತಮ್ ಕುಮಾರ್ ರೆಡ್ಡಿ ಕಾರು ನಿಲ್ಲಿಸುವಂತೆ ಹೇಳಿದ್ದಾರೆ. ಇದರಿಂದ ಏಕಾಏಕಿ ಚಾಲಕ ಬ್ರೇಕ್ ಹಾಕಿದ್ದಾನೆ. ಇದರಿಂದ ಹಿಂದೆ ಬರುತ್ತಿದ್ದ ಬೆಂಗಾವಲು ಪಡೆಯ 8 ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿವೆ. ಅದೃಷ್ಟವಶಾತ್ ಈ ಘಟನೆಯಿಂದ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
LATEST NEWS
ಟಾಕ್ಸಿಕ್, ಕಾಂತಾರ ಎಫೆಕ್ಟ್; ಅರಣ್ಯದಲ್ಲಿ ಚಿತ್ರೀಕರಣಕ್ಕೆ ಹೊಸ ರೂಲ್ಸ್
ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ..? ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ
ನಿಶ್ಚಿತಾರ್ಥಗೊಂಡ ಯುವತಿಯ ಆ ಒಂದು ಪ್ರಶ್ನೆಗೆ ಆತ್ಮಹ*ತ್ಯೆ ಮಾಡಿಕೊಂಡ ಯುವಕ ?
ಈ ವಸ್ತುಗಳನ್ನು ತಪ್ಪಿಯೂ ನಿಮ್ಮ ಪ್ರೀತಿ ಪಾತ್ರರಿಗೆ ನೀಡಬೇಡಿ…
ತೆಂಗಿನೆಣ್ಣೆಯಲ್ಲಿ ಈ ಪುಡಿ ಮಿಕ್ಸ್ ಮಾಡಿ ಹಚ್ಚಿ, ನಿಮ್ಮ ತಲೆಯ ಮೇಲೆ ಒಂದೇ ಒಂದು ಬಿಳಿ ಕೂದಲು ಕಾಣಿಸೋದಿಲ್ಲ
ಉದ್ಯಮಿ ಮನೆಗೆ ಇಡಿ ಅಧಿಕಾರಿಗಳ ಸೋಗಿನಲ್ಲಿ ದಾಳಿ ಪ್ರಕರಣ : ಅಂತರಾಜ್ಯ ದರೋಡೆಕೋರ ಅರೆಸ್ಟ್
Trending
- BIG BOSS2 days ago
ಗೌತಮಿ-ಧನರಾಜ್ ಬೆನ್ನಲ್ಲೇ ಈ ವಾರ ಫಸ್ಟ್ ಎಲಿಮಿನೇಟ್ ಆಗೋದ್ಯಾರು ?
- BIG BOSS4 days ago
ಬಿಗ್ ಬಾಸ್ ತೊರೆಯುವ ಬಗ್ಗೆ ಮತ್ತೊಮ್ಮೆ ಘೋಷಣೆ ಮಾಡಿದ ಕಿಚ್ಚ
- BIG BOSS1 day ago
ಭಾವನೆಗಳ ಮಹಾಪೂರ ನೀನು, ಕನಸುಗಳ ಶಿಖರ ನೀನು: ಭವ್ಯಾಗೆ ತ್ರಿವಿಕ್ರಮ್ ಪ್ರಪೋಸ್
- BIG BOSS4 days ago
ಬಿಗ್ ಬಾಸ್ ಸೀಸನ್ 11ರ ವಿನ್ನರ್ ಒಬ್ಬರಲ್ಲ ಇಬ್ಬರು… ಅಷ್ಟಕ್ಕೂ ಟ್ರೋಫಿ ನೀಡಿದ ಸುಳಿವೇನು ?