Connect with us

BANTWAL

ಕಾಂಪ್ರಬೈಲು ಭಂಡಾರ ವಿವಾದ: ಕೋರ್ಟ್ ತೀರ್ಮಾನಕ್ಕೆ ನಾವು ಬದ್ಧ ಎಂದ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ

Published

on

ಮಂಗಳೂರು: ಬಂಟ್ವಾಳ ತಾಲೂಕಿನ ಕಾಂಪ್ರಬೈಲು ಶ್ರೀ ಉಳ್ಳಾಲ್ತಿ ಮತ್ತು ಅಜ್ಜರ ದೈವಗಳ ಭಂಡಾರವು ಮೂಲಮನೆಯಲ್ಲಿದೆ.

ಭಂಡಾರದ ಮನೆಗೆ 1500 ವರ್ಷಗಳ ಇತಿಹಾಸವಿದೆ. ಭಂಡಾರದ ರಕ್ಷಣೆಗಾಗಿ ನೂರಾರು ವರ್ಷಗಳ ಹಿಂದಿನ ಸೇಫ್ ಲಾಕರ್ ಈಗಲೂ ಇದೆ ಎಂದು ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ತಿಳಿಸಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯಾನಂದ ಆಚಾರ್ಯ, ಎರಡು ದಶಕದ ಹಿಂದೆ ಭಂಡಾರವಿಡಲು ಸುಸಜ್ಜಿತ ಭದ್ರತಾ ಕೊಠಡಿಯನ್ನು ಬೀಡು ಮನೆಯವರ ನೇತೃತ್ವದಲ್ಲಿಯೇ ನಿರ್ಮಿಸಲಾಗಿದೆ.

ದುರುದ್ದೇಶದಿಂದ ತಮ್ಮ ಮನೆಯೇ ಭಂಡಾರದ ಮನೆಯೆಂದು ತಪ್ಪು ಮಾಹಿತಿ ನೀಡಲಾಗುತ್ತಿದೆ ಎಂದು ಆರೋಪಿಸಿದರು.

ಭಂಡಾರಕ್ಕೆ ಸಂಬಂಧಿಸಿದಂತೆ ತಂತ್ರಿಗಳು, ವ್ಯವಸ್ಥಾಪನಾ ಸಮಿತಿ, ದೈವನರ್ತಕ, ಚಾಕರಿಯವರು, ಪಾತ್ರಿಗಳು, ಊರಿನ ಹಿರಿಯರು ಎಲ್ಲರೂ ಜತೆಯಾಗಿದ್ದು, ಬೀಡು ಮನೆಯವರು ಮಾತ್ರ ವಿರೋಧಿ ಸುತ್ತಿದ್ದಾರೆ.

ಕಾಂಪ್ರಬೈಲಿನ ವಿವಾದವನ್ನು ಜೈನ ಮನೆತನ ಹಾಗೂ ಗುತ್ತು ಮನೆತನಗಳ ವಿರುದ್ಧ ಎಂಬುದಾಗಿ ಬಿಂಬಿಸುವ ಪ್ರಯತ್ನದ ಜತೆಗೆ ರಾಜಕೀಯ ಪ್ರೇರಿತ ಎಂಬ ಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿದರು.

ಕಾಂಪ್ರಬೈಲಿನ ಜೈನಮನೆತನದ ಮನೆಯಲ್ಲಿದ್ದ ಭಂಡಾರವನ್ನು ವಾಪಸು ಕಳುಹಿಸದೇ ದೈವದ ಭಂಡಾರದ ಮನೆಯಲ್ಲಿ ಇರಿಸಿಕೊಳ್ಳುವಂತೆ ತಾಂಬೂಲ ಪ್ರಶ್ನೆಯಲ್ಲಿ ಬಂದ ಸಲಹೆಯಂತೆ ನಿರ್ಧಾರ ಕೈಗೊಳ್ಳಲಾಗಿತ್ತು.

ಕಾಂಪ್ರಬೈಲಿನಿಂದ ಭಂಡಾರ ತರುವ ವೇಳೆಯು ಅಸಮ್ಮತಿ ಸೂಚಿಸಿದ ಕಾಂಪ್ರಬೈಲಿನ ಜೈನಮನೆತನದವರು ದೈವದ ಎದುರಿನಲ್ಲಿ ತಂತ್ರಿಗಳು ಕಾಂಪ್ರಬೈಲಿಗೆ ಬಾರದಂತೆ ಪ್ರಮಾಣ ಮಾಡಿದ್ದಾರೆ ಎಂದರು.

ಹೈಕೋರ್ಟ್‌ನ ತಡೆಯಾಜ್ಞೆಯನ್ನು ಕೂಡ ವ್ಯವಸ್ಥಾಪನಾ ಸಮಿತಿ ಧಿಕ್ಕರಿಸಿದೆ ಎಂಬುದು ಸುಳ್ಳು, ಅಂತಹ ಯಾವುದೇ ಆದೇಶ ಪ್ರತಿಯನ್ನಾಗಲಿ ವ್ಯವಸ್ಥಾಪನಾ ಸಮಿತಿಗೆ ನೀಡಿಲ್ಲ ಅಥವಾ ತೋರಿಸಿಲ್ಲ. ಎಂದು ಕ್ಷೇತ್ರದ ತಂತ್ರಿ ಶ್ರೀಪತಿ ಭಟ್ ತಿಳಿಸಿದರು. ಈ ಸಂದರ್ಭ ಗೋಪಾಲ ಶೆಣೈ, ಚೆನ್ನಪ್ಪ ಆರ್. ಕೋಟ್ಯಾನ್, ಕಲ್ಲಡ್ಕ ಕೃಷ್ಣಪ್ಪ ಉಪಸ್ಥಿತರಿದ್ದರು.

BANTWAL

ಅನಾರೋಗ್ಯದ ನಡುವೆಯೂ ಮತ ಚಲಾಯಿಸಿ ಕೊ*ನೆಯುಸಿರೆಳೆದ ನಿವೃತ್ತ ಯೋಧ

Published

on

ಬಂಟ್ವಾಳ: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸೈನಿಕರೊಬ್ಬರು ಮತದಾನ ಪೂರೈಸಿ ಮರಳಿ ಅಸ್ಪತ್ರೆಗೆ ದಾಖಲಾಗಿದ್ದು, ಈಗ ಚಿಕಿತ್ಸೆಗೆ ಸ್ಪಂದಿಸದೆ ಮೃ*ತಪಟ್ಟಿದ್ದಾರೆ.

ಬಂಟ್ವಾಳ ವಗ್ಗ ನಿವಾಸಿ, ನಿವೃತ್ತ ಯೋಧ ಮಾಧವ ಪ್ರಭು (83) ಅನಾರೋಗ್ಯದ ನಡುವೆಯೂ ಪವಿತ್ರ ಮತದಾನ ಕರ್ತವ್ಯ ಪೂರೈಸಿದವರು.

ಮಾಧವ ಪ್ರಭುಗಳು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 85 ವರ್ಷ ಮತ್ತು ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುವ ಹಿನ್ನೆಲೆಯಲ್ಲಿ ಮಾಧವ ಪ್ರಭುಗಳು ವೈದ್ಯರ ಅನುಮತಿ ಪಡೆದು ನೇರವಾಗಿ ಮನೆಗೆ ತೆರಳಿ ಅಲ್ಪಿ ಏ.15 ರಂದು ಮತದಾನ ಕರ್ತವ್ಯ ಪೂರೈಸಿ ಆಸ್ಪತ್ರೆಗೆ ಮರಳಿದ್ದರು. ಮಾಧವ ಪ್ರಭುಗಳು ಆಸ್ಪತ್ರೆಯಲ್ಲಿ ಬುಧವಾರ ಮೃ*ತಪಟ್ಟಿದ್ದಾರೆ.

ಸೈನ್ಯಕ್ಕೆ ಸೇರುವ ಮೊದಲು ಮಲೇರಿಯಾ ನಿರ್ಮೂಲನಾ ವಿಭಾಗದ ಇನ್‌ಸ್ಪೆಕ್ಟರ್ ಆಗಿದ್ದರು. ಸೈನ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ ನಂತರ ಇವರು ಪೂರ್ಣಾನಂದ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷರಾಗಿದ್ದರು. ಮೃ*ತರು ಪತ್ನಿ ಹಾಗೂ ಇಬ್ಬರು ಪುತ್ರಿ ಮತ್ತು ಪುತ್ರರನ್ನು ಅ*ಗಲಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

BANTWAL

ಬಂಟ್ವಾಳ : ಬಾವಿಯೊಳಗೆ ರಿಂಗ್ ಅಳವಡಿಸಲು ಇಳಿದ ಇಬ್ಬರು ಸಾ*ವು

Published

on

ಬಂಟ್ವಾಳ : 30 ಅಡಿ ಇರುವ ಆಳದ ಬಾವಿಗೆ ರಿಂಗ್‌ ಅಳವಡಿಸಲು ಇಳಿದ ಇಬ್ಬರು ಕೂಲಿ ಕಾರ್ಮಿಕರು ಬಾವಿಯೊಳಗೆ ಆಕ್ಸಿಜನ್ ಸಿಗದೇ ಸಾ*ವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಪಡಿಬಾಗಿಲಿನಲ್ಲಿ ನಡೆದಿದೆ.


ಮೃ*ತರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ(40) ಹಾಗೂ ಮಲಾರ್ ನಿವಾಸಿ ಆಲಿ (24) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ : ಡಿವೈಡರ್ ಗೆ ಡಿ*ಕ್ಕಿ ಹೊಡೆದ ಬೈಕ್; ಸವಾರ ಸ್ಥಳದಲ್ಲೇ ಸಾ*ವು

ಮೃ*ತ ಇಬ್ರಾಹಿಂ ಎಂಬವರು ಸುಮಾರು 20 ವರ್ಷಗಳಿಂದ ಬಾವಿಗೆ ರಿಂಗ್ ಹಾಕುವಲ್ಲಿ ಪರಿಣಿತರಾಗಿದ್ದರು. ಮೃ*ತ ದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ.

Continue Reading

LATEST NEWS

Trending