Connect with us

LATEST NEWS

ಉಪ್ಪಳದಲ್ಲಿ ಕಾರು-ಬೈಕ್ ಢಿಕ್ಕಿ: ಪಿಯುಸಿ ವಿದ್ಯಾರ್ಥಿ ಸಾವು

Published

on

ಉಪ್ಪಳ: ಕಾರು-ಬೈಕ್ ಢಿಕ್ಕಿಯಾಗಿ ವಿದ್ಯಾರ್ಥಿ ಮೃತಪಟ್ಟ ಘಟನೆ ನಡೆದಿದೆ.
ಮೃತನನ್ನು ಉಪ್ಪಳದ ಅಬೂಬಕ್ಕರ್ ಇಶಾನ್ (19) ಎಂದು ಗುರುತಿಸಲಾಗಿದೆ.


ಉಪ್ಪಳ ಹಿದಾಯತ್ ನಗರ ಶೇಖ್ ಅಹಮದ್ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ.

ಇಶಾನ್ ಪ್ರಯಾಣಿಸುತ್ತಿದ್ದ ಬೈಕ್ ಎದುರುಗಡೆಯಿಂದ ಬರುತ್ತಿದ್ದ ಮಾರುತಿ ಬ್ರೆಝಾ ಕಾರಿಗೆ ಡಿಕ್ಕಿ ಹೊಡೆದಿದೆ.

ಗಾಯಗೊಂಡ ವಿದ್ಯಾರ್ಥಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಳೆದ 12ನೇ ತರಗತಿಯ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿದ್ದು, ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಲ್ಪಾಡಿ ತಾಲೂಕು ಆಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ.

LATEST NEWS

ಈ ದೇವಸ್ಥಾನದಲ್ಲಿ ಒಂದು ಲಿಂಬೆಹಣ್ಣಿಗೆ ಲಕ್ಷಾಂತರ ರೂ. ಬೇಡಿಕೆ..! ಅಂತದ್ದೇನಿದೆ ಈ ಲಿಂಬೆ ಹಣ್ಣಲ್ಲಿ?

Published

on

ತಮಿಳುನಾಡು: ತಮಿಳುನಾಡಿನಲ್ಲಿರುವ ದೇವಸ್ಥಾನದಲ್ಲಿ ಒಂದು ಲಿಂಬೆ ಹಣ್ಣಿಗೆ ಲಕ್ಷಾಂತರ ರೂಪಾಯಿ ಬೇಡಿಕೆ ಇದ್ದು, ಲಿಂಬೆಹಣ್ಣಿಗಾಗಿ ಜನ ಮುಗಿ ಬೀಳುತ್ತಿದ್ದಾರೆ.  ವಿಲ್ಲುಪುರಂ ಜಿಲ್ಲೆಯ ಮುರುಗನ್ ದೇವಸ್ಥಾನದ ಉತಿರಂ ಹಬ್ಬದ ಸಂದರ್ಭದಲ್ಲಿ ಒಟ್ಟು ಒಂಬತ್ತು ನಿಂಬೆ ಹಣ್ಣು ಬರೋಬ್ಬರಿ 2.36 ಲಕ್ಷ ರೂಪಾಯಿಗೆ ಹರಾಜಿನಲ್ಲಿ ಮಾರಾಟವಾಗಿದೆ. ಸಾಮಾನ್ಯವಾಗಿ ಅಂಗಡಿಗಳಲ್ಲಿ 10 ರೂಪಾಯಿಗೆ ಎರಡು ಮೂರು ನಿಂಬೆ ಹಣ್ಣು ಖರೀದಿಸಬಹುದು. ಆದ್ರೆ, ಇಲ್ಲಿನ ಲಿಂಬೆ ಹಣ್ಣು ಮಾತ್ರ ವಿಶೇಷವಾಗಿದೆ. ಹಾಗಾಗಿ ಭಾರೀ ಬೇಡಿಕೆ ಗಿಟ್ಟಿಸಿಕೊಂಡಿದೆ.

ಈ ಲಿಂಬೆಹಣ್ಣಿನಲ್ಲೇನಿದೆ?

ಮುರುಗನ್ ದೇವಸ್ಥಾನದಲ್ಲಿ ಪತ್ರೀ ವರ್ಷ ಅದ್ಧೂರಿಯಾಗಿ ಒಂಭತ್ತು ದಿನಗಳ ಕಾಲ ಉತಿರಂ ಹಬ್ಬವನ್ನು ಆಚರಿಸಲಾಗುತ್ತದೆ. ಒಂಭತ್ತು ದಿನಗಳ ದೇವರ ಪೂಜಾ ಸಮಯದಲ್ಲಿ ಒಂದೊಂದು ದಿನ ದೇವರ ತ್ರಿಶೂಲದ ಮೇಲೆ ಲಿಂಬೆ ಹಣ್ಣುಗಳನ್ನು ಇಟ್ಟು ಅರ್ಚಕರು ಪೂಜೆ ಸಲ್ಲಿಸುತ್ತಾರೆ.

ಈ ಲಿಂಬೆಹಣ್ಣಿನಲ್ಲಿ ವಿಶೇಷ ಶಕ್ತಿಯಿದೆ ಎಂದು ಸಾಕಷ್ಟು ವರ್ಷಗಳಿಂದ ಭಕ್ತರು ನಂಬಿಕೊಂಡು ಬಂದಿದ್ದಾರೆ. ಸಂತಾನದೋಷದಿಂದ ಬಳಲುತ್ತಿರುವ ದಂಪತಿಗಳಿಗೆ ಈ ಲಿಂಬೆಹಣ್ಣು ಸಿಕ್ಕಿದರೆ ಸಂತಾನ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ. ಈ ಲಿಂಬೆ ಹಣ್ಣನ್ನು ಪಡೆದವರಿಗೆ ಯಶಸ್ಸು ಹೆಗಲೇರಿ ಬರುತ್ತದೆ ಎಂಬ ಪ್ರತೀತಿ ಇದೆ.

Continue Reading

LATEST NEWS

ತ್ರಿಬಲ್ ಮರ್ಡ*ರ್ ಪ್ರಕರಣ: ಏಳು ದಿನಗಳ ಬಳಿಕ ಮನೆಗಳಿಗೆ ತಲುಪಿದ ಮೃ*ತದೇಹ

Published

on

ಬೆಳ್ತಂಗಡಿ: ತುಮಕೂರಿನಲ್ಲಿ ನಡೆದ ತ್ರಿಬಲ್ ಮರ್ಡ*ರ್‌ ಪ್ರಕರಣಕ್ಕೆ ಸಂಬಂಧಿಸಿ ಮೃ*ತಪಟ್ಟ ಮೂವರ ಮೃ*ತ ದೇಹವನ್ನು ಶುಕ್ರವಾರ (ಮಾ.29) ಮುಂಜಾನೆ ಬೆಳ್ತಂಗಡಿಗೆ ತರಲಾಗಿದೆ.

ನಿಧಿ ಆಸೆಗೆ ಮಾ.22ರಂದು ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಹಾಕಿ ಬೆಂಕಿ ಹಚ್ಚಿ ಸುಡಲಾಗಿತ್ತು. ತನಿಖೆ ಬಳಿಕ ಮೃತದೇಹವನ್ನು ಡಿಎನ್‌ಎ ಪರೀಕ್ಷೆ ಮೂಲಕ ಪತ್ತೆ ಹಚ್ಚಲಾಗಿದೆ. ಘಟನೆ ನಡೆದ ಏಳು ದಿನಗಳ ಬಳಿಕ ಸಂಬಂಧಪಟ್ಟವರಿಗೆ ಮೃತದೇಹವನ್ನು ತಲುಪಿಸಲಾಗಿದೆ.

ಮೃತಪಟ್ಟ ಶಾಹುಲ್ ಹಮೀದ್ ಹಾಗೂ ಇಸಾಕ್ ಅವರ ಮೃತದೇಹ ಮೊಯ್ಯುದ್ದೀನ್ ಜುಮಾ ಮಸೀದಿ ಹಳೆಪೇಟೆಗೆ ಮತ್ತು ಸಿದ್ದೀಕ್ ಅವರ ಮೃತದೇಹ ಶಿರ್ಲಾಲ್ ಮಸೀದಿಗೆ ತಲುಪಿದ್ದು, ಅಲ್ಲಿ ಅಂತಿಮ ದರ್ಶನ ಹಾಗೂ ವಿಧಿ ವಿಧಾನ ನೆರವೇರಲಿದೆ.

ಪ್ರಕರಣದ ಹಿನ್ನೆಲೆ:

ತುಮಕೂರು ಜಿಲ್ಲೆಯಲ್ಲಿ  ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮೂವರ ಶ*ವ ಪತ್ತೆಯಾಗಿತ್ತು. ಇದೊಂದು ವ್ಯವಸ್ಥಿತ ಕೊ*ಲೆ ಎಂಬುದು ತನಿಖೆಯಿಂದ ಹೊರಬಂದಿತ್ತು.  ಈಗಾಗಲೇ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಈ ಪ್ರಕರಣದ ತನಿಖೆ ನಡೆಸಿದ ಕೋರಾ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಮುಖ ಆರೋಪಿ ಪಾತರಾಜ ಹಾಗೂ ಗಂಗರಾಜು ಎಂಬವರನ್ನು ಬಂಧಿಸಲಾಗಿದೆ. ನಿಧಿಯ ಆಸೆಗೆ ತುಮಕೂರಿಗೆ ಹೋಗಿದ್ದ ಬೆಳ್ತಂಗಡಿಯ ಮೂವರನ್ನು ಕೊಲೆ ಮಾಡಿ ಕಾರಿನಲ್ಲಿ ಹಾಕಿ ಬೆಂಕಿ ಹಾಕಿ ಸುಡಲಾಗಿತ್ತು.

ಮೃತರಿಗೆ ಪಾತರಾಜ ಎಂಬಾತ ಆರು ತಿಂಗಳ ಹಿಂದೆ ಪರಿಚಿತವಾಗಿದ್ದು, ನಿಧಿ ವಿಚಾರವಾಗಿ ಮೃತರಿಂದ 6 ಲಕ್ಷ ಹಣ ಪಡೆದುಕೊಂಡಿದ್ದ. ಆದರೆ ಆರು ತಿಂಗಳಾದ್ರೂ ಹಣ ವಾಪಾಸು ನೀಡದ ಕಾರಣ ಮೂವರೂ ಕೂಡಾ ಆತನ ಹಿಂದೆ ಬಿದ್ದಿದ್ದರು. ಹೀಗಾಗಿ ಈ ಮೂವರನ್ನು ಮುಗಿಸಲು ಪ್ಲಾನ್ ರೂಪಿಸಿದ್ದ ಪಾತರಾಜ ಸತ್ಯಮಂಗಲ ನಿವಾಸಿ ಗಂಗರಾಜು ಎಂಬಾತನ ಸಹಾಯ ಪಡೆದಿದ್ದ. ಆತನಿಗೆ 3 ಕೆ.ಜಿ ಚಿನ್ನಕೊಡುವುದಾಗಿ ನಂಬಿಸಿ ತನ್ನ ಕೆಲಸ ಮಾಡಿಸಿದ್ದ.

ಗಂಗರಾಜು ಕೂಡಾ ಚಿನ್ನದ ಆಸೆಗೆ ತನ್ನ ಸಹಚರರ ಮೂಲಕ ಇಸಾಕ್, ಹಮೀದ್ ಹಾಗೂ ಸಿದ್ದಿಕ್ ಅವರನ್ನು ಕೊಲೆ ಮಾಡಿಸಿದ್ದ. ತುಮಕೂರಿನ ಬೀರನಕಲ್ಲು ಬೆಟ್ಟದ ಬಳಿ ಬರಲು ಹೇಳಿ ಅಲ್ಲಿ ಮಚ್ಚು ಲಾಂಗ್‌ನಿಂದ ಹಲ್ಲೆ ಮಾಡಿ ಮೂವರನ್ನು ಕೊಲೆ ಮಾಡಲಾಗಿತ್ತು. ಬಳಿಕ ಅಲ್ಲಿಂದ ಅವರದೇ ಕಾರಿನಲ್ಲಿ ಮೃತದೇಹ ಇರಿಸಿ ಕುಚ್ಚಂಗಿ ಕೆರೆ ಬಳಿ ತಂದು ಕಾರಿಗೆ ಬೆಂಕಿ ಹಚ್ಚಿದ್ದಾರೆ. ಇನ್ನು ಪ್ರಕರಣ ಸಂಬಂಧ ತಲೆ ಮರೆಸಿಕೊಂಡಿರುವ ಪ ಮಧುಸೂದನ್ ನವೀನ್,  ಕೃಷ್ಣ,  ಗಣೇಶ್,  ಕಿರಣ್,  ಸೈಮನ್ ಗಾಗಿ ಪೊಲೀಸರು ಬಲೆ ಬೀಸಿದ್ದಾರೆ..

Continue Reading

BELTHANGADY

ರಸ್ತೆ ದಾಟುವ ವೇಳೆ ದ್ವಿಚಕ್ರ ವಾಹನ ಡಿ*ಕ್ಕಿ..!! ಪಾದಾಚಾರಿ ಮೃ*ತ್ಯು

Published

on

ಬೆಳ್ತಂಗಡಿ: ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಮಾವ ಶೇಖರ್ ಬಂಗೇರ ಹೇರಾಜೆ(65 ವ) ಮೃ*ತಪಟ್ಟವರು.

ಗುರುವಾರ (ಮಾ.28) ರಾತ್ರಿ ಶೇಖರ್ ಬಂಗೇರ ರವರು ಹೋಟೆಲ್ ನಿಂದ ಪಾರ್ಸಲ್ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿ*ಕ್ಕಿ ಹೊಡೆದಿದೆ. ಪರಿಣಾಮ ಗಂಭೀ*ರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಬಂಟ್ವಾಳದಲ್ಲಿ ಅವರು ಸಾವನ್ನಪ್ಪಿದ್ದಾರೆ.  ಸ್ಕೂಟರ್ ನಲ್ಲಿದ್ದ ಬೆಳ್ತಂಗಡಿಯ ಗೇರುಕಟ್ಟೆ ನಿವಾಸಿ ಅನುಷಾ(19ವ) ಗಾಯಗೊಂಡಿದ್ದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಮೃತಪಟ್ಟ ಶೇಖರ್ ಬಂಗೇರ ಹೇರಾಜೆ ವಿಜಯ ಬ್ಯಾಂಕ್  ಮಾಜಿ ಉದ್ಯೋಗಿ, ಮುಗ್ಗ ಗುತ್ತು ಮನೆತನದ ಟ್ರಸ್ಟ್ ಕೋಶಾಧಿಕಾರಿ, ರಾಘವೇಂದ್ರ ಮಠದ ಕೋಶಾಧಿಕಾರಿ, ಗುರುನಾರಾಯಣ ಸಂಘದ ಮಾಜಿ ಉಪಾಧ್ಯಕ್ಷರಾಗಿದ್ದರು.

ಈ ಕುರಿತು ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

 

Continue Reading

LATEST NEWS

Trending