ಮಂಗಳೂರು: ರಸ್ತೆ ದಾಟುತ್ತಿದ್ದಾಗ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಹೊಟೇಲ್ ಉದ್ಯಮಿ ಸಾವನ್ನಪ್ಪಿರುವ ಘಟನೆ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿ 66 ಬಳಿ ಬುಧವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಪುನರೂರಿನ ಭಾಸ್ಕರ್ ಶೆಟ್ಟಿ (64) ಎಂದು ಗುರುತಿಸಲಾಗಿದ್ದು, ಇವರು ಮುಂಬೈನ ಹೋಟೆಲ್ ಉದ್ಯಮಿಯಾಗಿದ್ದರು.
ಕೆಲ ದಿನಗಳ ಹಿಂದೆ ಊರಿಗೆ ಬಂದಿದ್ದ ಭಾಸ್ಕರ ಶೆಟ್ಟಿ ಬುಧವಾರ ರಾತ್ರಿ ಹಳೆಯಂಗಡಿ ಜಂಕ್ಷನ್ ಬಳಿ ಹೊಟೇಲ್ನಲ್ಲಿ ಊಟ ಮಾಡಿ ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ವೇಗವಾಗಿ ಬಂದು ಇವರಿಗೆ ಡಿಕ್ಕಿ ಹೊಡೆದಿದ್ದು,
ತಕ್ಷಣವೇ ಹಳೆಯಂಗಡಿ ಸಮೀಪದ ಮುಕ್ಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಈ ಘಟನೆ ಸಂಬಂಧಿಸಿ ಮಂಗಳೂರು ಉತ್ತರ ಸಂಚಾರಿ ಠಾಣೆ ಪೊಲೀಸರು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.