LATEST NEWS
ಗದ್ದೆಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಹರಿದ ಕಾರು: ಚಾಲಕ ಸೇರಿ ಮೂವರ ಸಾವು
ಹಾವೇರಿ: ಚಾಲಕನ ಕಂಟ್ರೋಲ್ ತಪ್ಪಿದ ಕಾರು ಗದ್ದೆಗಿಳಿದು ಅಲ್ಲೇ ಆಟವಾಡುತ್ತಿದ್ದ ಇಬ್ಬರು ಮಕ್ಕಳ ಮೇಲೆ ಹರಿದು ಚಾಲಕ ಸೇರಿ ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ನಡೆದಿದೆ.
ಶಿಕ್ಷಕ ಪ್ರಕಾಶ (48), ಶಾಲಿನಿ (10) ಮತ್ತು ಯಶೋಧಾ (8) ಮೃತ ದುರ್ದೈವಿಗಳು.
ಮೃತ ಮಕ್ಕಳು ಹಿರೇಕರೂರು ತಾಲೂಕಿನ ಆಪಿನಕೊಪ್ಪ ಗ್ರಾಮದ ನಿವಾಸಿಗಳಾಗಿದ್ದರು. ಅವರು ಸಂಬಂಧಿಕರ ಮನೆಗೆ ಬಂದಿದ್ದರು.
ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಾಲಿನಿ ಮತ್ತು ಯಶೋಧಾ ಜಮೀನಿನಲ್ಲಿ ಕುಳಿತಿದ್ದ ವೇಳೆ ಚಾಲಕ ಪ್ರಕಾಶ್ ಅವರ ನಿಯಂತ್ರಣ ತಪ್ಪಿ ಮಕ್ಕಳಿಗೆ ಕಾರು ಡಿಕ್ಕಿ ಹೊಡೆದು ಈ ಆಕಸ್ಮಿಕ ಘಟನೆ ಸಂಭವಿಸಿದೆ.
ಮಕ್ಕಳಿಗೆ ಡಿಕ್ಕಿ ಹೊಡೆದ ಕಾರು ಮರುಕ್ಷಣವೇ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಕ್ಕಳನ್ನು ಹಿರೇಕರೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಂಸಭಾವಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಮಾಜಿ ಸಿಎಂ ಎಸ್.ಎಂ. ಕೃಷ್ಣರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ!
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ(91) ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ, ತೀವ್ರ ನಿಗಾ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಏಪ್ರಿಲ್ 21ರಂದು ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಚೇತರಿಸಿಕೊಂಡಿದ್ದ ಅವರು ಡಿಸ್ಚಾರ್ಜ್ ಆಗಿದ್ದರು.
ಮತ್ತೆ ಎಸ್.ಎಂ. ಕೃಷ್ಣ ಅವರನ್ನು ಏಪ್ರಿಲ್ 29 ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನು ಓದಿ:ಪ್ರತಿ ಮಹಿಳೆಗೆ ಸಿಗುತ್ತೆ 3 ಲಕ್ಷ ರೂಪಾಯಿ..! ಈ ಹಣ ಸಿಗಲು ಹೀಗೆ ಮಾಡಿ ಸಾಕು!
ಆಸ್ಪತ್ರೆ ಪ್ರಕಟಣೆ :
ಎಸ್ ಎಂ ಕೃಷ್ಣ ಅವರು ಐಸಿಯುನಲ್ಲಿದ್ದಾರೆ . ವಿಶೇಷ ನಿಗಾ ವಹಿಸಲಾಗುತ್ತಿದೆ. ಅವರಿಗೆ ಡಾ.ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
BANTWAL
ಬಯಲಾಯ್ತು ಅಕ್ರಮ ಸಂಬಂಧ; ನೇಣಿಗೆ ಶರಣಾದ ವಿವಾಹಿತ!
ಪುತ್ತೂರು : ವ್ಯಕ್ತಿಗಳು ಸಾಲಬಾಧೆಯಿಂದಲೋ, ಅನಾರೋಗ್ಯದಿಂದಲೋ ಅಥವಾ ಜೀವನದಲ್ಲಿ ಜಿಗುಪ್ಸೆ ಹೊಂದಿಯೋ ಜೀವಾಂತ್ಯಗೊಳಿಸುವುದನ್ನು ಕಾಣುತ್ತೇವೆ. ಆದರೆ, ಇಲ್ಲೊಬ್ಬ,
ಅಕ್ರಮ ಪ್ರೇಮ ಸಂಬಂಧದ ಹಿನ್ನಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಸಮೀಪ ಶನಿವಾರ ಘಟನೆ ಸಂಭವಿಸಿದೆ.
ಈಶ್ವರಮಂಗಲ ಸಮೀಪದ ಕತ್ರಿಬೈಲುವಿನ ಪ್ರಶಾಂತ್ ಮುಖಾರಿ (೩೮) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ ತನ್ನ ಮನೆಯಿಂದ ಸುಮಾರು ಒಂದು ಕಿಲೋಮೀಟರ್ ಅಂತರದಲ್ಲಿರುವ ಚಿಮುಣಿಗುಡ್ಡೆ ಎಂಬಲ್ಲಿನ ಗುಡ್ಡದ ರಸ್ತೆ ಬದಿಯಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಇದನ್ನು ಓದಿ: ಈ ವೀಡಿಯೋವನ್ನು ವೈರಲ್ ಮಾಡುವ ಧೈರ್ಯ ನಿಮ್ಮಲ್ಲಿ ಇದ್ಯಾ ? ವೀಡಿಯೋವೊಂದನ್ನು ಹಂಚಿಕೊಂಡು ಸವಾಲೆಸೆದ ನಟಿ ಜ್ಯೋತಿ ರೈ
ಅಕ್ರಮ ಸಂಬಂಧ ಬಯಲು – ನೇಣಿಗೆ ಶರಣು :
ಪ್ರಶಾoತ್ ಮುಖಾರಿ ಅವರಿಗೆ ಪತ್ನಿ ಮತ್ತು ಎಳೆಯ ವಯಸ್ಸಿನ ಪುತ್ರನಿದ್ದಾನೆ. ಈ ನಡುವೆ ಇನ್ನೊಬ್ಬಳು ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ವಿಚಾರ ಬಹಿರಂಗಗೊಂಡಿದ್ದ ಹಿನ್ನೆಲೆಯಲ್ಲಿ ಅವರು ಅಪಮಾನಗೊಂಡು ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ.
ಮೃತರ ಪತ್ನಿ ನೀಡಿರುವ ದೂರಿನಂತೆ ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BANTWAL
ಕಡಬ : ಸಿಡಿಲು ಬಡಿದು ಓರ್ವ ಸಾವು; ಇಬ್ಬರಿಗೆ ಗಾಯ
ಕಡಬ : ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ವರುಣ ಕೃಪೆ ತೋರಿದ್ದಾನೆ. ಇನ್ನೊಂದೆಡೆ ಸಿಡಿಲಾರ್ಭಟಕ್ಕೆ ವ್ಯಕ್ತಿ ಬಲಿಯಾಗಿದ್ದಾರೆ.. ಕಡಬ ತಾಲೂಕಿನಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಾಯಗಳಾಗಿವೆ. ಉತ್ತರ ಪ್ರದೇಶ,ಚೈನ್ಪುರ್ ಮೂಲದ ಶ್ರೀಕಿಶುನ್ ಮೃತ ವ್ಯಕ್ತಿ.
ಇದನ್ನು ಓದಿ:ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ!
ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ನದಿ ಬದಿಯ ಶೆಡ್ ನಲ್ಲಿದ್ದ ವೇಳೆ ಶೆಡ್ ಗೇ ಸಿಡಿಲು ಬಡಿದಿದೆ. ಪರಿಣಾಮ ಮರಳು ತೆಗೆಯುವ ಉತ್ತರ ಪ್ರದೇಶ ಮೂಲದ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.
- LATEST NEWS6 days ago
ಐವರು ಮೆಡಿಕಲ್ ವಿದ್ಯಾರ್ಥಿಗಳು ನೀರುಪಾಲು…!
- FILM7 days ago
ರಜನಿಕಾಂತ್-ಐಶ್ವರ್ಯ ರೈ ಸಂಬಂಧಪಟ್ಟ ವೀಡಿಯೋ ಈಗ ವೈರಲ್ ..!! ಅಮಿತಾಬಚನ್, ಅಭಿಷೇಕ್ಗೆ ಏನಾಗಿದೆ? ಎಂದು ಹೇಳಿದ್ಯಾಕೆ?
- DAKSHINA KANNADA5 days ago
ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
- LATEST NEWS6 days ago
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ; ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ನಿರ್ಬಂಧ..!