ಹಾಸನ : ಧರ್ಮಸ್ಥಳ ದೇವಸ್ಥಾನಕ್ಕೆ ಪ್ರವಾಸಕ್ಕೆ ಹೊರಟಿದ್ದ ಕುಟುಂಬವೊಂದರ ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ತಂದೆ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ಸಂಭವಿಸಿದೆ.
ತಮಿಳುನಾಡು ಮೂಲದ ತಂದೆ ಅಂಜನಪ್ಪ ಹಾಗೂ ಮಗ ಕಾರ್ತಿಕ್ ಮೃತಪಟ್ಟ ದುರ್ದೈವಿಗಳು.
ಧರ್ಮಸ್ಥಳ ಕ್ಷೇತ್ರಕ್ಕೆ ಹೊರಟಿದ್ದ ಕಾರಿನಲ್ಲಿ 10 ಜನ ಪ್ರಯಾಣಿಸುತ್ತಿದ್ದರು. ಅದರಲ್ಲಿ ಕೆಲವರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಆ ಕಾರಿನಲ್ಲಿನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಐದು ಮಂದಿಗೆ ಸಾಮಾನ್ಯ ಗಾಯಗಳಾಗಿವೆ ಎಂದು ತಿಳಿಯಲಾಗಿದೆ.