Sunday, March 26, 2023

ವಿವಾಹಿತ ಮಹಿಳೆಯ ಜೊತೆ ಅಕ್ರಮ ಸಂಬಂಧ ಆರೋಪ: ಒಂದೇ ಕುಟುಂಬದ ಮೂವರ ಮೇಲೆ ಹಲ್ಲೆ

ಮೈಸೂರು: ವಿವಾಹಿತ ಮಹಿಳೆಯ ಜತೆ ಅಕ್ರಮ ಸಂಬಂಧ ಆರೋಪ ಹಿನ್ನೆಲೆ ಬೈಕ್‌ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಮೂವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಡೆದಿದೆ.

ತಂದೆ, ಮಗನಿಗೆ ಗಾಯಗಳಾಗಿದ್ದು ಅದೃಷ್ಟವಶಾತ್ ಮಹಿಳೆ ಪಾರಾಗಿದ್ದಾರೆ. ಹಲ್ಲೆಯಲ್ಲಿ ಶಿವಪ್ಪ (45), ಶರತ್‌ (20)ಎಂಬವರಿಗೆ ಗಾಯಗಳಾಗಿವೆ.

ಲೋಹಿತ್‌ ಕುಮಾರ್, ಪರಶಿವಮೂರ್ತಿ ಎಂಬುವವರು ಹಲ್ಲೆ ನಡೆಸಿರುವುದಾಗಿ ತಿಳಿದು ಬಂದಿದೆ. ವಿವಾಹಿತ ಮಹಿಳೆ ಜೊತೆ ಹಲ್ಲೆಗೊಳಗಾದ ಶರತ್‌ಗೆ ಅಕ್ರಮ ಸಂಬಂಧವಿದೆ ಎಂದು ಹಲ್ಲೆ ನಡೆಸಿದ್ದಾರೆ.

ಹಲ್ಲೆಗೊಳಗಾದ ಶರತ್‌ಗೆ ಅದೇ ಗ್ರಾಮದ ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧವಿರುವ ಆರೋಪ ಕೇಳಿ ಬಂದಿದೆ.
ಈ ಹಿನ್ನೆಲೆಯಲ್ಲಿ ಹಲವು ಬಾರಿ ರಾಜಿ ಪಂಚಾಯಿತಿ ಆಗಿತ್ತು. ಆದರೆ ತಂದೆ, ಮಗ, ಮಹಿಳೆ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದಾಗ ಲೋಹಿತ್‌ ಕುಮಾರ್, ಪರಶಿವಮೂರ್ತಿ ಎಂಬುವವರು ಹಲ್ಲೆ ನಡೆಸಿದ್ದಾರೆ.

ಈ ವೇಳೆ ಮಚ್ಚಿನಿಂದ ಆರೋಪಿಗಳು ಹಲ್ಲೆ ಮಾಡಿರುವುದರಿಂದ ತಂದೆ, ಮಗನಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಹೆಚ್.ಡಿ.ಕೋಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹೆಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

LEAVE A REPLY

Please enter your comment!
Please enter your name here

Hot Topics

ಉಡುಪಿ ಪಡುಬಿದ್ರೆಯಲ್ಲಿ ಬೈಕಿಗೆ ಟ್ಯಾಂಕರ್ ಢಿಕ್ಕಿ; ಸವಾರರಿಬ್ಬರು ಮೃತ್ಯು..!

ಉಡುಪಿ : ಬೈಕ್‌ಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ ಉಚ್ಚಿಲದಲ್ಲಿ ಶನಿವಾರ ಸಂಜೆ ನಡೆದಿದೆ.ಮೃತರನ್ನು ಫಲಿಮಾರು ಅವರಾಲುಮಟ್ಟುವಿನ ಅಡ್ಕ ಸುಬ್ರಹ್ಮಣ್ಯ (30)...

ಬಂಟ್ವಾಳ: ಆಸ್ತಿಗಾಗಿ ಹೆತ್ತ ತಾಯಿಯ ಜುಟ್ಟು ಹಿಡಿದು ಮುಖಚಚ್ಚಿದ ಪಾಪಿ ಮಗ

ಬಂಟ್ವಾಳ: ಆಸ್ತಿಯಲ್ಲಿ ಪಾಲುಕೊಡುವಂತೆ ಹೆತ್ತ ತಾಯಿಗೆ ಬೆದರಿಸಿ ಗಾಯಗೊಳಿಸಿ ಮಗ ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಘಟನೆ ವಿವರ ಮಾ.24 ರಂದು ಇಡ್ಕಿದು ಗ್ರಾಮದ ನಾರಾಯಣ ಗೌಡ ಎಂಬುವವರ...

ಉಡುಪಿ: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 4 ಲಕ್ಷ ರೂ. ವಶ

ಉಡುಪಿ: ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 4 ಲಕ್ಷ ರೂ. ಹಣವನ್ನು ಪೊಲೀಸರು ನಿನ್ನೆ ವಶಪಡಿಸಿಕೊಂಡ ಘಟನೆ ಉಡುಪಿಯ ಮೂಡುತೋನ್ಸೆ ಗ್ರಾಮದ ನೇಜಾರು ಚೆಕ್ ಪೋಸ್ಟ್‌ನಲ್ಲಿ ನಡೆದಿದೆ.ಉಡುಪಿ ಪೊಲೀಸ್ ಠಾಣೆಯ ಪಿಎಸ್‌ಐ ಸುಷ್ಮಾ...