Connect with us

FILM

ರಿಯಾಲಿಟಿ ಶೋಗಳಲ್ಲೂ ಕಾಸ್ಟಿಂಗ್ ಕೌಚ್! ಡ್ಯಾನ್ಸಿಂಗ್ ಕ್ವೀನ್ ಬಿಚ್ಚಿಟ್ಟ ಸತ್ಯವೇನು?

Published

on

ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಬಗ್ಗೆ ಮಾತುಗಳು ಬಹಳ ಸಮಯದಿಂದ ಕೇಳಿ ಬರುತ್ತಿದೆ. ನಟಿಯರು ನಟರ ಬಗ್ಗೆ, ನಿರ್ಮಾಪಕರು, ನಿರ್ದೇಶಕರುಗಳ ಬಗ್ಗೆ ಆರೋಪಗಳನ್ನು ಮಾಡುವ ಸುದ್ದಿಗಳು ಹರಿದಾಡುತ್ತಿರುತ್ತಿವೆ. ಇದೀಗ ರಿಯಾಲಿಟಿ ಶೋ ಸರದಿ.

ಡ್ಯಾನ್ಸಿಂಗ್ ಕ್ವೀನ್ ಮನೀಶಾ ರಾಣಿ ಆರೋಪ:


ಸಿನಿ ಇಂಡಸ್ಟ್ರಿಯಲ್ಲಿದ್ದ ಕಾಸ್ಟಿಂಗ್ ಕೌಚ್‌ ಈಗ ಟಿವಿ ರಿಯಾಲಿಟಿ ಶೋಗಳಲ್ಲೂ ನಡಿತಾ ಇದೆಯಾ ? ಇಂತಹ ಒಂದು ಆರೋಪವನ್ನು ಡ್ಯಾನ್ಸಿಂಗ್ ರಿಯಾಲಿಟಿ ಶೋ ‘ಝಲಕ್ ದಿಖ್ಲಾಜಾ ‘ ಸೀಸನ್‌ 11 ಗೆದ್ದಿದ್ದ ಡ್ಯಾನ್ಸಿಂಗ್ ಕ್ವೀನ್ ಮನೀಶಾ ರಾಣಿ ಅವರು ಆರೋಪಿಸಿದ್ದಾರೆ.
ತನ್ನ ಡ್ಯಾನ್ಸ್ ಮೂವ್ಸ್ ಮತ್ತು ಎಲ್ಲರೊಂದಿಗೆ ಬೆರೆಯುವ ಸ್ವಭಾವದಿಂದ ಮನೀಶಾ ರಾಣಿ ಜನರ ಮನ ಗೆದ್ದಿದ್ದರು. ಇತ್ತೀಚೆಗೆ ಬಿಗ್‌ ಬಾಸ್ ಒಟಿಟಿ ಸೀಸನ್ 2 ನಲ್ಲೂ ಕಾಣಿಸಿಕೊಂಡಿದ್ದ ಮನೀಶಾ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದರು. ಈ ವೇಳೆ ಒಂದು ಸಂದರ್ಶನದಲ್ಲಿ ಕಾಸ್ಟಿಂಗ್ ಕೌಚ್‌ ಹೆಸರಿನಲ್ಲಿ ವ್ಯಕ್ತಿಯೊಬ್ಬ ತನ್ನನ್ನು ಮೋಸ ಮಾಡಿದ್ದಾಗಿ ಹೇಳಿದ್ದಾರೆ. ರಾತ್ರಿ 3 ಗಂಟೆಗೆ ಕರೆ ಮಾಡಿ ಮನೆಗೆ ಬರಲು ಹೇಳುತ್ತಿದ್ದ ಎಂದು ಆರೋಪಿಸಿದ್ದಾರೆ.

ಬಿಗ್‌ ಬಾಸ್ ತಂಡದ ಸದಸ್ಯನಿಂದ ಕರೆ :

ಸಂದರ್ಶನದಲ್ಲಿ ಮಾತನಾಡಿದ ಮನೀಶಾ ರಾಣಿ, “ನಾನು ಮುಂಬೈನಲ್ಲೂ ಕಾಸ್ಟಿಂಗ್ ಕೌಚ್ ಎದುರಿಸಿದ್ದೇನೆ. ನಾನೂ ಸಂಪೂರ್ಣವಾಗಿ ಅದಕ್ಕೆ ಬಲಿಯಾಗದೇ ಇದ್ರೂ ಬಿಗ್‌ ಬಾಸ್ ತಂಡದ ಸದಸ್ಯ ಎಂದು ಹೇಳಿಕೊಂಡಿದ್ದ ವ್ಯಕ್ತಿ ನನ್ನನ್ನು ಬೇರೆ ಬೇರೆ ಕಡೆಗಳಿಗೆ ಕರೆಸಿಕೊಂಡಿದ್ದ” ಎಂದು ಹೇಳಿದ್ದಾರೆ.

“ಮನೆಗೆ ವಾಪಾಸಾಗಿದ್ದ ಸಮಯದಲ್ಲಿ ಅಡಿಷನ್ ಪ್ರಾರಂಭವಾಗಿದೆ ಎಂದು ಮುಂಬೈಗೆ ಕರೆಸಿಕೊಂಡಿದ್ದ. ಹೀಗಾಗಿ ತರಾತುರಿಯಲ್ಲಿ ನಾನು ಮುಂಬೈಗೆ ಬಂದಿದ್ದೆ. ಆದ್ರೆ ರಾತ್ರಿ 3 ಗಂಟೆಗೆ ಕರೆ ಮಾಡಿ ಮನೆಗೆ ಬರುವಂತೆ ಹೇಳಿದ್ದು ಅದಕ್ಕೆ ನಾನು ನಿರಾಕರಿಸಿದ್ದೆ. ಅದಕ್ಕೆ ಆತನಿಗೆ ನನ್ನ ಮೇಲೆ ಕೋಪ ಬಂದಿತ್ತು” ಎಂದು ಹೇಳಿದ್ದಾರೆ.

‘ಝಲಕ್ ದಿಖ್ಲಾ ಜಾ’ ಕಾರ್ಯಕ್ರಮ ಮೂಲಕ ಸ್ಟಾರ್ ಪಟ್ಟ


ಮೂಲತಃ ಬಿಹಾರದ ನಿವಾಸಿ ಆಗಿರೋ ಮನೀಶಾ ರಾಣಿ ಅವರು ‘ಝಲಕ್ ದಿಖ್ಲಾಜಾ’ 11 ನೇ ಸೀಸನ್ ಗೆಲ್ಲುವ ಮೂಲಕ ಜನಮನ್ನಣೆ ಗಳಿಸಿದರು. ಮನೀಶಾ ರಾಣಿ ಈ ಪ್ರಶಸ್ತಿ ಗೆಲ್ಲುವುದಕ್ಕೂ ಮೊದಲು ಜೀವನದಲ್ಲಿ ಸಾಕಷ್ಟು ಸಂಘರ್ಷ ಅನುಭವಿಸಿದ್ದಾರೆ.
ತಾಯಿಯನ್ನು ಕಳೆದುಕೊಂಡು ತಂದೆಯ ನೆರಳಲ್ಲಿ ಬೆಳೆದ ಮನೀಶಾ ರಾಣಿ ಡ್ಯಾನ್ಸರ್ ಆಗಲು ಅಡ್ಡಿಯಾಗಿದ್ದೇ ಆಕೆಯ ತಂದೆ. ಹೀಗಾಗಿ 12 ನೇ ತರಗತಿಯಲ್ಲಿ ಮನೆ ಬಿಟ್ಟು ಕೊಲ್ಕತ್ತಾ ಸೇರಿದ ಮನಿಷಾ ಮದುವೆ ಸಮಾರಂಭದಲ್ಲಿ ಊಟ ಬಡಿಸುವ ಕೆಲಸ ಆರಂಭಿಸಿದ್ದರು. ಅಲ್ಲಿಂದ ಬಳಿಕ ಬ್ಯಾಗ್‌ರೌಂಡ್ ಡ್ಯಾನ್ಸರ್ ಆಗಿ ಕೆಲಸ ಆರಂಭಿಸಿದ ಮನೀಶಾ ಬಳಿಕ ಅದನ್ನೂ ಬಿಟ್ಟು ಟಿಕ್‌ಟಾಕ್ ಮೂಲಕ ತನ್ನ ನೃತ್ಯವನ್ನು ಜನರಿಗೆ ತೋರಿಸಲು ಆರಂಭಿಸಿದರು.

ಇದನ್ನೂ ಓದಿ : ಶೋಬಿತಾ ಜೊತೆ ಕಾಡಿನಲ್ಲಿ ಕಾಣಿಸಿಕೊಂಡ್ರ ನಾಗಚೈತನ್ಯ..! ಫ್ಯಾನ್ಸ್ ಏನಂದ್ರು..?

ಇದು ಗುಡಿಯಾ ಹಮಾರಿ ಸಭಿ ಪೆ ಭಾರಿ ತಯಾರಕರ ಗಮನಕ್ಕೆ ಬಂದು ಆಕೆಗೆ ಅವಕಾಶ ನೀಡಿದ್ರು. ಅಲ್ಲಿಂದ ಆರಂಭವಾದ ಮನೀಷಾ ರಾಣಿ ಜರ್ನಿ ಇಂದು ಆಕೆಯನ್ನು ಟಿವಿ ಲೋಕದ ಸ್ಟಾರ್ ಆಗಿ ಮಾಡಿದೆ. ಇನ್ನು ಸೋಷಿಯಲ್ ಮೀಡಿಯಾದಲ್ಲಿ ತುಂಬಾ ಫೇಮಸ್ ಆಗಿರೋ ಮನಿಷಾ 12.5 ಮಿಲಿಯನ್‌ಗಿಂತಲೂ ಹೆಚ್ಚು ಜನ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ.

FILM

ಬಾಲಿವುಡ್ ಜನಪ್ರಿಯ ನಿರೂಪಕಿ ಭಾರತಿ ಸಿಂಗ್ ಆಸ್ಪತ್ರೆ ದಾಖಲು..!

Published

on

ಮುಂಬೈ: ಬಾಲಿವುಡ್ ನಿರೂಪಕಿ, ಹಾಸ್ಯ ನಟಿ ಭಾರತಿ ಸಿಂಗ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಸ್ತುತ ಡ್ಯಾನ್ಸ್ ದೀವಾನೆ ಸೀಸನ್ 4 ಅನ್ನು ಹೋಸ್ಟ್ ಮಾಡುತ್ತಿರುವ ಖ್ಯಾತ ನಿರೂಪಕಿ ಭಾರತಿ ಸಿಂಗ್  ತೀವ್ರ ಹೊಟ್ಟೆ ನೋವಿನಿಂದ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

bharathi

‘ಕಳೆದ ಮೂರು ದಿನಗಳಿಂದ ತೀವ್ರವಾದ ಹೊಟ್ಟೆ ನೋವನ್ನು ಅನುಭವಿಸುತ್ತಿದ್ದೇನೆ’ ಎಂದು ತನ್ನ ವ್ಲಾಗ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಆರಂಭದಲ್ಲಿ ಅದನ್ನು ಗ್ಯಾಸ್ಟ್ರೊನಲ್ ಅಥವಾ ಆಮ್ಲೀಯ ಅಸ್ವಸ್ಥತೆ ಆಗಿರಬಹುದೆಂದು ಭಾವಿಸಿ ನಿರ್ಲಕ್ಷ ಮಾಡಿದ್ದರಂತೆ. ಆದರೆ, ನೋವು ತಡೆದುಕೊಳ್ಳಲಾಗದೆ ವೈದ್ಯಕೀಯ ಚಿಕಿತ್ಸೆ ಪಡೆಯಲು ನಿರ್ಧರಿಸಿ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ವ್ಲಾಗ್‌ನಲ್ಲಿ ಹೇಳಿದ್ದಾರೆ. ಇನ್ನು ವೈದ್ಯಕೀಯ ಪರೀಕ್ಷೆ ಬಳಿಕ ಭಾರತಿಗೆ ಪಿತ್ತಕೋಶದಲ್ಲಿ ಕಲ್ಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.  ಏನೂ ತಿನ್ನಲು ಆಗುತ್ತಿಲ್ಲ ತಿಂದರೂ ವಾಂತಿ ಆಗುತ್ತಿದೆ ಎಂದ ಹೇಳಿದ ಅವರು ಭಾವುಕರಾದರು.

ಮುಂದೆ ಓದಿ..;‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?

ಈ ನಡುವೆ ಭಾರತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವುದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಬೇಗ ಚೇತರಿಸಿಕೊಳ್ಳುವಂತೆ ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಕಮೆಂಟ್‌ಗಳನ್ನು ಹಾಕಿದ್ದಾರೆ.

 

Continue Reading

FILM

ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ‘ಗಬ್ಬರ್ ಸಿಂಗ್’ ತುಳು ಚಲನಚಿತ್ರ ಬಿಡುಗಡೆ

Published

on

ಉಡುಪಿ : ಬಹು ನಿರೀಕ್ಷಿತ ತುಳು ಚಿತ್ರ “ಗಬ್ಬರ್ ಸಿಂಗ್” ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಉಡುಪಿಯ ಕಲ್ಪನಾ ಚಿತ್ರಮಂದಿರದಲ್ಲಿ ಬಿಡುಗಡೆ ಸಮಾರಂಭವೂ ನಡೆಯಿತು.

ತೊಟ್ಟಂ ಚರ್ಚ್ ನ ಧರ್ಮಗುರು ಫಾದರ್ ಡೆನಿಸ್ ಡೆಸಾ, ಶಂಕರಪುರದ ಸಾಯಿ ಈಶ್ವರ ಗುರೂಜಿ, ಮಿಯಾರ್ ಮಸೀದಿಯ ಮೌಲ್ವಿ  ಅಬುಲ್ ಹಸನ್, ರಾಜಕೀಯ ಮುಖಂಡರಾದ ಗೀತಾಂಜಲಿ ಸುವರ್ಣ, ಬೈಕಾಡಿ ಸುಪ್ರಸಾದ್ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹರೀಶ್ ಕಿಣಿ, ಸರಳಾ ಕಾಂಚನ್, ಶಿಲ್ಪಾ ಭಟ್, ಉಡುಪಿ ಬಿಜೆಪಿ ಮಾಜಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕೃಷ್ಣಮೂರ್ತಿ ಆಚಾರ್ಯ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಚಿತ್ರದ ಕಲಾವಿದರಾದ ವೀಣಾ ಎಸ್ ಶೆಟ್ಟಿ, ಸಂದೀಪ್ ಭಕ್ತ, ಆದ್ಯ, ಚಂದ್ರಹಾಸ್ ಕಪ್ಪೆಟ್ಟು, ಕಿಶೂ ಎಂಟರ್‌ಪ್ರೈಸಸ್ ವ್ಯವಸ್ಥಾಪಕ ನಿರ್ದೇಶಕರಾದ ಕಿಶೋರ್ ಗೊನ್ಸಾಲ್ವಿಸ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾದರು.

ಇದನ್ನೂ ಓದಿ : ಕೋಸ್ಟಲ್ ವುಡ್ ಅಂಗಳದಲ್ಲಿ ‘ಗಬ್ಬರ್ ಸಿಂಗ್’ ಹವಾ ಶುರು

‘ಗಬ್ಬರ್ ಸಿಂಗ್’ ಚಿತ್ರವು ಕೌಟುಂಬಿಕ ಅಂಶಗಳನ್ನು ಒಳಗೊಂಡಿರುವ ಆಕ್ಷನ್ ಥ್ರಿಲ್ಲರ್ ಆಗಿದೆ. ಕಥೆ ಮತ್ತು ಚಿತ್ರಕಥೆಯನ್ನು ಸತೀಶ್ ಪೂಜಾರಿ ಬಾರ್ಕೂರು ರಚಿಸಿದ್ದು, ಪ್ರದೀಪ್ ನಿರ್ದೇಶನವಿದೆ. ತುಳು ಚಿತ್ರರಂಗದ ಹೆಸರಾಂತ ನಟರುಗಳು ಈ ಚಿತ್ರದಲ್ಲಿ ಪಾತ್ರವಾಗಿದ್ದಾರೆ.

Continue Reading

FILM

‘ಅರ್ಜುನ’ ಆನೆಯನ್ನು ನೆನೆದ ಡಿಬಾಸ್; ದರ್ಶನ್ ಕೋರಿಕೆ ಏನು?

Published

on

ಚಂದನವನ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅದ್ಭುತ ಕಲಾವಿದ ಜೊತೆಗೆ ಪ್ರಾಣಿ ಪ್ರಿಯರೂ ಹೌದು. ಅವರ ಪ್ರಾಣಿ ಪ್ರೇಮದ ಬಗ್ಗೆ ಹೇಳ್ಬೇಕಾ? ಹಲವಾರು ನಿದರ್ಶನಗಳನ್ನು ನಾವು ನೋಡಿದ್ದೇವೆ. ಇದೀಗ ದರ್ಶನ್ ‘ಅರ್ಜುನ’ ನ ಬಗ್ಗೆ ಮಾತನಾಡಿದ್ದಾರೆ.


ಕಾಡಾನೆ ಸೆರೆ ವೇಳೆ ನಡೆದಿದ್ದ ದುರಂ*ತ :

ಹಾಸನದ ಅರಣ್ಯದಲ್ಲಿ ಕಾಡಾನೆ ಸೆರೆ ಹಿಡಿದು, ರೇಡಿಯೋ ಕಾಲರ್ ಅಳವಡಿಸುವ ಕಾರ್ಯಾಚರಣೆ ವೇಳೆ ದಸರಾ ಆನೆ ಅರ್ಜುನ ಮೃ*ತಪಟ್ಟಿದ್ದ. ಅವರಿಗೆ 63 ವರ್ಷ ವಯಸ್ಸಾಗಿತ್ತು. 2023 ರ ಡಿಸೆಂಬರ್ ತಿಂಗಳಲ್ಲಿ ಈ ಘಟನೆ ನಡೆದಿತ್ತು. ಅರ್ಜುನ 8 ಬಾರಿ ಜಂಬೂ ಸವಾರಿಯಲ್ಲಿ ಅಂಬಾರಿ ಹೊತ್ತಿದ್ದ. ಆತನ ನಿಧ*ನ ಕನ್ನಡಿಗರನ್ನು ಶೋಕಸಾಗರದಲ್ಲಿ ಮುಳುಗಿಸಿತ್ತು.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿ ಮಾಡುತ್ತಿದ್ದಂತೆ, ಉಳಿದ ಮೂರು ಸಾಕಾನೆಗಳು ಓಡಿ ಹೋಗಿವೆ. ಕೊನೆಗೆ ಒಂಟಿಸಲಗದ ಜೊತೆ ಅರ್ಜುನ ಆನೆಯು ಒಂಟಿಯಾಗಿ ಹೋರಾಟ ನಡೆಸಿದೆ. ಈ ಕಾಳಗ ಆರಂಭವಾಗುತ್ತಿದ್ದಂತೆ ಅರ್ಜುನನ ಮೇಲಿನಿಂದ ಮಾವುತ ಇಳಿದು ಓಡಿದ್ದಾರೆ. ಅರ್ಜುನ ಇಹಲೋಕ ತ್ಯಜಿಸಿದ್ದ. ಈ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಜನ ಕಂಬನಿ ಮಿಡಿದಿದ್ದರು.

ಅಂದು ಡಿ ಬಾಸ್ ದರ್ಶನ್ ಕೂಡ ಸಂತಾಪ ಸೂಚಿಸಿದ್ದರು. ಇದೀಗ ಮತ್ತೆ ಡಿ ಬಾಸ್ ‘ಅರ್ಜುನ’ನನ್ನು ಸ್ಮರಿಸಿದ್ದಾರೆ.

ಏನಂದ್ರು ಡಿಬಾಸ್?

ದರ್ಶನ್ ಅರ್ಜುನ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಅರ್ಜುನನಿಗೆ ಸಲ್ಲಬೇಕಾದ ಗೌರವದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

‘ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ.

ಇದನ್ನೂ ಓದಿ : ತಿಮ್ಮಪ್ಪನ ಸನ್ನಿಧಾನದಲ್ಲಿ ಮಾಂಗಲ್ಯ ಮಾರಾಟ; ಮಾಂಗಲ್ಯ ಪಡೆಯುವುದು ಹೇಗೆ?

ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು ಎಂದು ಅವರು ಬರೆದುಕೊಂಡಿದ್ದಾರೆ.

Continue Reading

LATEST NEWS

Trending