ಸಿಮೆಂಟ್ ಕಿಕ್ ಬ್ಯಾಕ್ ಆರೋಪ : ಇದು ಕಾಂಗ್ರೆಸ್ ಸುಳ್ಳಿನ ಕಂತೆ- ತನಿಖೆಗೆ ಸಿದ್ದ ಶಾಸಕ ಸುನಿಲ್ ಕುಮಾರ್ ಸ್ಪಷ್ಟನೆ
ಸಿಮೆಂಟ್ ಕಿಕ್ ಬ್ಯಾಕ್ ಆರೋಪ : ಇದು ಕಾಂಗ್ರೆಸ್ ಸುಳ್ಳಿನ ಕಂತೆ- ತನಿಖೆಗೆ ಸಿದ್ದ ಶಾಸಕ ಸುನಿಲ್ ಕುಮಾರ್ ಸ್ಪಷ್ಟನೆ
ಉಡುಪಿ :ಕಾರ್ಕಳ ಶಾಸಕರಾದ ಸುನೀಲ್ ಕುಮಾರ್ ಸರ್ಕಾರಿ ಕಾಮಗಾರಿಯ ಗುತ್ತಿಗೆ ನೀಡಿರುವ ಕಾಂಟ್ರಾಕ್ಟರ್ ಗಳಿಂದ ನೂರಾರು ಗೋಣಿ ಸಿಮೆಂಟ್ ಪಡೆದು ತನ್ನ ಖಾಸಗಿ ಕಚೇರಿಯನ್ನು ನಿರ್ಮಾಣ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್ ಗೆ ಶಾಸಕರು ಪ್ರತಿಕ್ರೀಯಿಸಿದ್ದಾರೆ.
ಉಡುಪಿಯ ವೆಬ್ ಚಾನಲ್ ಒಂದು ತನ್ನ ಮೇಲೆ ನಿರಾಧಾರವಾದ ಆರೋಪ ಮಾಡಿದ್ದು, ಅದು ಯಾವುದೇ ದಾಖಲೆ ಇಲ್ಲದ ಸುಳ್ಳು ಕಂತೆ ಎಂದಿದ್ದಾರೆ.
ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಟ್ಟಡ ನಿರ್ಮಾಣ ಮತ್ತು ವಿನ್ಯಾಸವನ್ನು ವಾಸ್ತು ಶಿಲ್ಪಿ ಪ್ರಮಲ್ ಕುಮಾರ್ ರವರಿಗೆ ನೀಡಿದ್ದು, ಕಟ್ಟಡ ಆರಂಭದಿಂದ ಪೂರ್ಣವಾಗುವವರೆಗೆ ಅವರಿಗೆ ಉಸ್ತುವಾರಿಯನ್ನು ನೀಡಲಾಗಿದೆ.
ಈ ಕಟ್ಟಡವನ್ನು ಸೃಷ್ಟಿ ವೆಂಚರ್ಸ್ ಇಂಡಸ್ಟ್ರಿಯಲ್ ಏರಿಯಾ ನಂದಿಕೂರು ಅವರಿಗೆ ನೀಡಿ ನಿರ್ಮಾಣದ ಒಪ್ಪಂದವನ್ನು 2019 ರಲ್ಲಿ ಮಾಡಿಕೊಳ್ಳಲಾಗಿದೆ. ಸಿಮೆಂಟ್ ಉತ್ಪಾದನೆಯಲ್ಲಿ ಸರಕಾರದ ಕೆಲಸಕ್ಕೆ ಬೇರೆ ಸಿಮೆಂಟ್ ಮತ್ತು ಖಾಸಗಿ ಕೆಲಸಕ್ಕೆ ಬೇರೆ ಸಿಮೆಂಟ್ ಇದೆ ಎಂಬುವುದು ನನ್ನ ಅನುಭವಕ್ಕೆ ಬಂದಿಲ್ಲ.
ಒಪ್ಪಂದದಂತೆ ಕಟ್ಟಡದ ಪೂರ್ತಿ ನಿರ್ಮಾಣದ ಗುತ್ತಿಗೆಯನ್ನು ಸೃಷ್ಟಿ ವೆಂಚರ್ ರವರೇ ಮಾಡುತ್ತಿದ್ದು, ಖರೀದಿ, ಸಾಗಾಣಿಕೆ , ಮಾನವ ಸಂಪನ್ಮೂಲ ಸೇರಿದಂತೆ ಎಲ್ಲಾ ಜವಬ್ದಾರಿಯೂ ಅವರದ್ದೇ ಆಗಿದ್ದು, ಇದರಲ್ಲಿ ನನ್ನ ಜವಬ್ದಾರಿ ಇರುವುದಿಲ್ಲ ಅಂತ ತನ್ನ ಮೇಲಿನ ಆರೋಪವನ್ನು ತಳ್ಳಿಹಾಕಿದ್ದಾರೆ.
ನನ್ನ ವಿರುದ್ಧ ವಿರೋಧಿಗಳು ಹಾಗೂ ಕಾಂಗ್ರೆಸಿಗರು ಆರೋಪ ಮಾಡುತ್ತಿರುವುದು ಇದೇ ಮೊದಲೇನಲ್ಲ. ಇಲ್ಲಿಯವರೆಗೂ ಮಾಡಿರುವ ಯಾವ ಆರೋಪಗಳಿಗೂ ದಾಖಲೆಗಳಿಲ್ಲ.
ವೆಬ್ ಚಾನೆಲ್ ಮುಖೇನ ವಿರೋಧಿಗಳು ಈಗ ಮಾಡಿರುವ ನಿರಾಧಾರ ಆರೋಪಗಳ ಪಟ್ಟಿಗೆ ಮತ್ತೊಂದು ಸೇರ್ಪಡೆಯಷ್ಟೆ ಎಂದಿದ್ದಾರೆ. ಇನ್ನು ಈ ರೀತಿ ಯಾವುದೇ ಸ್ಪಷ್ಟತೆ , ದಾಖಲೆ ಇಲ್ಲದ ವಿಷಯವನ್ನಿಟ್ಟುಕೊಂಡು ಪತ್ರಕರ್ತರಂತೆ ಮುಖವಾಡ ಹಾಕಿರುವ ಕೆಲವರು ಇದನ್ನು ಮುಂದಿಟ್ಟುಕೊಂಡು ನನ್ನನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ.
ಇಂತಹ ಬ್ಲ್ಯಾಕ್ ಮೇಲ್ ಗಳಿಗೆ ನಾನಾಗಲಿ ನನ್ನ ಕುಟುಂಬವಾಗಲಿ ಭಯ ಪಡೋದಿಲ್ಲ. ಈ ರೀತಿಯಾಗಿ ಸಾರ್ವಜನಿಕವಾಗಿ ನನ್ನ ಮೇಲೆ ಸುಳ್ಳು ಆರೋಪ ಮಾಡಿರುವವರ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸುತ್ತೇನೆ. ಮತ್ತು ಈ ಬಗ್ಗೆ ತನಿಖೆಗೆ ಒತ್ತಾಯಿಸಿದರೂ ಎದುರಿಸಲು ನಾನು ಸಿದ್ದ ನಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಾರ್ಕಳ ನಗರಸಭೆಯ ಸದಸ್ಯ ಕಾಂಗ್ರೆಸ್ ನಾಯಕ ಶುಭದ ರಾವ್ ಶಾಸಕ ಸುನೀಲ್ ಕುಮಾರ್ ಆರೋಪವನ್ನು ಮಾಡಿದ್ದರು. ಕಾರ್ಕಳ ತಾಲೂಕು ಪಂಚಾಯತ್ ರಸ್ತೆಯಲ್ಲಿ ಸುನೀಲ್ ಕುಮಾರ್ ಅವರ ಖಾಸಗಿ ಜಮೀನಿನಲ್ಲಿ ಬಹು ಮಹಡಿಯ ಕಚೇರಿ ನಿರ್ಮಾಣ ಆಗುತ್ತಿದೆ.
ಕಟ್ಟಡ ನಿರ್ಮಾಣಕ್ಕೆ ಅಲ್ಟ್ರಾ ಟೆಕ್ ಕಂಪನಿಯ ನಾಟ್ ಫಾರ್ ಸೇಲ್ ಎಂದು ನಮೂದಿಸಿರುವ ಸಿಮೆಂಟ್ ಗಳನ್ನು ಬಳಸಲಾಗಿದೆ. ಗುತ್ತಿಗೆ ನೀಡಿದ ಕಾಂಟ್ರಾಕ್ಟ್ ಗಳಿಂದ ಶಾಸಕ ಸುನೀಲ್ ಕುಮಾರ್ ಸಿಮೆಂಟ್ ಚೀಲಗಳನ್ನು ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿದ್ದರು.
LATEST NEWS
ದಸರಾ ಆನೆಗಳ ಕಾದಾಟ..! ಬೆಚ್ಚಿಬಿದ್ದ ಜನರು, ಅಧಿಕಾರಿಗಳು..!!
ಮೈಸೂರು/ಮಂಗಳೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯ ಆನೆಗಳು ಶುಕ್ರವಾರ(ಸೆ.20) ರಾತ್ರಿ ದಿಢೀರ್ ಕಾದಾಟಕ್ಕೆ ಇಳಿದಿದ್ದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ದಸರಾ ಹಬ್ಬದ ಪ್ರಯುಕ್ತ ಆನೆಗಳಿಗೆ ತಾಲೀಮು ನಡೆಸಲಾಗುತ್ತಿದೆ. ಮಳೆಯಿರುವ ಕಾರಣ ಅರಮನೆ ಮೈದಾನದಲ್ಲೇ ಆನೆಗಳಿಗೆ ತಾಲೀಮನ್ನು ಕೈಗೊಳ್ಳಲಾಗಿತ್ತು. ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಧನುಂಜಯ್ ಹಾಗೂ ಕಂಜನ್ ಆನೆಗಳ ಮಧ್ಯೆ ಗುದ್ದಾಟ ಆಋಂಭವಾಗಿದೆ. ಊಟದ ಸಮಯದಲ್ಲಿ ಈ ಜಗಳ ಶುರುವಾಗಿದ್ದು ಧನುಂಜಯ್ ಆನೆ ಕಂಜನ್ನನ್ನು ಅರಮನೆಯಿಂದ ಹೊರಗೆ ಓಡಿಸಿಕೊಂಡು ಬಂದಿದೆ. ಈ ವೇಳೆ ಕಜನ್ ತನನ್ ಮಾವುತನನನ್ಉ ಕೆಳಗೆ ಬೀಳಿಸಿದೆ. ಧನುಂಜಯ್ ಆನೆ ಕಂಜನ್ನನ್ನು ಓಡಿಸಿಕೊಂಡು ಹೋಗಿದ್ದು ಜಯಮಾರ್ತಾಂಡ ದ್ವಾರದಿಂದ ಹೊರಗೆ ಬಂದಿದೆ. ಇದರಿಂದ ಕೆಲಕಾಲ ಜನ, ಮಾವುತರು, ಅಧಿಕಾರಿಗಳಲ್ಲಿ ಆತಂಕ ಸೃಷ್ಟಿಯಾಯಿತು. ಆನೆಗಳು ದೊಡ್ಡಕೆರೆ ಮೈದಾನ ಬಳಿ ಬ್ಯಾರಿಕೇಡ್ ತಳ್ಳಿಕೊಂಡು ರಸ್ತೆಗೆ ಪ್ರವೇಶಿಸುತ್ತಿದ್ದಂತೆ ಜನರು ಭಯದಿಂದ ದಿಕ್ಕಾಪಾಲಾಗಿ ಓಡಿಹೋದರು.
ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ : ಸಿಎಂ ಸಿದ್ಧರಾಮಯ್ಯ
ದೊಡ್ಡಕೆರೆ ಮೈದಾನದ ಬೆಂಗಳೂರು- ನೀಲಗಿರಿ ರಸ್ತೆಯಲ್ಲಿನ ವಾಹನಗಳನ್ನು ನೋಡುತ್ತಿದ್ದಂತೆ ಕಂಜನ್ ಬೆದರಿ ನಿಂತಿತು. ಮಾವುತರು ಕಾವಾಡಿಗರು ಸಮಾಧಾನ ಪಡಿಸಿದರು. ಯಾವುದೇ ಅನಾಹುತ ಸಂಭವಿಸಿಲ್ಲ. ಕಾವಾಡಿಗಳ ಚಾಣಾಕ್ಷತದಿಂದ ಆನೆಗಳ ಆಟೋಟಕ್ಕೆ ಬ್ರೇಕ್ ಬಿದ್ದಿದೆ. ಬಳಿಕ ಅರಮನೆಗೆ ಆನೆಗಳನ್ನು ಸಿಬ್ಬಂದಿ ಕರೆತಂದಿದ್ದಾರೆ. ಸದ್ಯ ಕೋಡಿಸೋಮೇಶ್ವರ ದೇವಸ್ಥಾನ ಸಮೀಪ ಇರುವ ಆನೆಗಳು ಬಿಡಾರ ಬಿಟ್ಟಿವೆ.
DAKSHINA KANNADA
ಮಂಗಳೂರು : ಬೈಕ್ಗೆ ಲಾರಿ ಡಿ*ಕ್ಕಿ; ವಿದ್ಯಾರ್ಥಿ ಸಾ*ವು
ಮಂಗಳೂರು : ಲಾರಿಯೊಂದು ಬೈಕ್ಗೆ ಡಿ*ಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃ*ತಪಟ್ಟ ಘಟನೆ ಕುಂಟಿಕಾನ ಪ್ಲೈಓವರ್ನ ಮೇಲೆ ಶುಕ್ರವಾರ(ಸೆ.21) ನಡೆದಿದೆ.
ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಿವಾಸಿ ಜಾಸಿಮ್ (18) ಮೃ*ತಪಟ್ಟ ವಿದ್ಯಾರ್ಥಿ. ನಗರ ಹೊರಲವಲಯದ ಕೂಳೂರಿನಲ್ಲಿರುವ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಎ ಓದುತ್ತಿದ್ದ ಜಾಸಿಮ್ ಶುಕ್ರವಾರ ಸಂಜೆ ಕೂಳೂರಿನಿಂದ ಕೆಪಿಟಿ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಲಾರಿಯೊಂದು ಡಿ*ಕ್ಕಿ ಹೊಡೆಯಿತು ಎನ್ನಲಾಗಿದೆ.
ಇದನ್ನೂ ಓದಿ : ನಾಲ್ಕನೇ ಮಗುವೂ ಹೆಣ್ಣಾಯಿತೆಂದು ಹಸುಗೂಸನ್ನು ನೆಲಕ್ಕೆ ಬಡಿದು ಕೊಂ*ದ ತಂದೆ
ಪರಿಣಾಮ ನಿಯಂತ್ರಣ ತಪ್ಪಿದ ಜಾಸಿಮ್ ರಸ್ತೆಗೆ ಬಿದ್ದಿದ್ದರು. ಇದರಿಂದ ಗಂಭೀ*ರ ಗಾ*ಯಗೊಂಡ ಅವರು ಮೃ*ತಪಟ್ಟಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ದತ್ತಿ ಇಲಾಖೆ ದೇವಸ್ಥಾನದಲ್ಲಿ ನಂದಿನಿ ತುಪ್ಪ ಬಳಕೆಗೆ ಸೂಚನೆ..!
ಮಂಗಳೂರು : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಕರ್ನಾಟಕದ ದತ್ತಿ ಇಲಾಖೆ ಫುಲ್ ಅರ್ಲರ್ಟ್ ಆಗಿದೆ. ಕರ್ನಾಟಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಕೆ ಮಾಡಬೇಕು ಎಂದು ಆದೇಶ ಹೊರಡಿಸಲಾಗಿದೆ.
ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ಅವರು ಈ ಬಗ್ಗೆ ಇಲಾಖೆಗೆ ಸೂಚನೆ ನೀಡಿದ್ದಾರೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ದತ್ತಿ ಇಲಾಖೆ ದೇವಸ್ಥಾನದ ಸೇವೆಗಳಿಗೆ , ದೀಪಗಳಿಗೆ, ಪ್ರಸಾದ ತಯಾರಿಗೆ ಮತ್ತು ಅನ್ನಛತ್ರದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚಿಸಿದೆ.
ತಿರುಪತಿ ದೇವಾಲಯದ ಲಡ್ಡು ತಯಾರಿಗೆ ಕರ್ನಾಟಕದ ನಂದಿನಿ ತುಪ್ಪವೇ ರವಾನೆ ಆಗುತ್ತಿದೆ. ಆದ್ರೆ ಜಗನ್ ರೆಡ್ಡಿಯ ಸರ್ಕಾರದ ನಾಲ್ಕು ವರ್ಷ ನಂದಿನಿ ತುಪ್ಪ ತಿರುಪತಿಗೆ ಪೂರೈಕೆ ಮಾಡಿರಲಿಲ್ಲ. ಹೀಗಾಗಿ ತಿರುಪತಿ ಲಡ್ಡುವಿಗೆ ಬಳಕೆ ಮಾಡಿದ ತುಪ್ಪಕ್ಕೂ ನಂದಿನಿ ತುಪ್ಪಕ್ಕೂ ಯಾವುದೇ ಸಂಭಂಧ ಇಲ್ಲ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ.