ಪೆಟ್ರೋಲ್, ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಗಣನೀಯ ಪ್ರಮಾಣದಲ್ಲಿ ಏರಿಸಿದ ಕೇಂದ್ರ ಸರ್ಕಾರ
ಪೆಟ್ರೋಲ್, ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಗಣನೀಯ ಪ್ರಮಾಣದಲ್ಲಿ ಏರಿಸಿದ ಕೇಂದ್ರ ಸರ್ಕಾರ
ನವದೆಹಲಿ: ಲಾಕ್ ಡೌನ್ ಸಂಕಷ್ಟದ ನಡುವೆಯೂ ಕೇಂದ್ರ ಸರಕಾರ ಪೆಟ್ರೋಲ್ ಹಾಗೂ ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು ಗಣನೀಯ ಪ್ರಮಾಣದಲ್ಲಿ ಏರಿಕೆ ಮಾಡಿ ಆದೇಶಿಸಿದೆ.
ಸದ್ಯ ಈ ಹೊರೆ ಗ್ರಾಹಕರ ಮೇಲೆ ಬೀಳುವುದಿಲ್ಲವಾದರೂ ತೈಲ ಕಂಪೆನಿಗಳಿಗೆ ಇದು ಸಂಕಷ್ಟ ತಂದೊಡ್ಡಿದೆ.
ಲಾಕ್ ಡೌನ್ ನ ನಡುವೆ ಆರ್ಥಿಕ ಸಂಕಷ್ಟ ಸಿಲುಕಿರುವ ಕೇಂದ್ರ ಸರಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಲೀಟರ್ ಗೆ 10 ರೂಪಾಯಿ ಮತ್ತು ಡೀಸೆಲ್ ಮೇಲಿನ ಸುಂಕ ಲೀಟರ್ ಗೆ 13 ರೂಪಾಯಿ ಏರಿಸಿದೆ.
ಆದರೆ ಮಾರಾಟ ದರದಲ್ಲಿ ಯಾವುದೇ ವ್ಯತ್ಯಾಸ ಆಗುವುದಿಲ್ಲ. ತೈಲ ಕಂಪನಿಗಳಿಗೆ ಮಾತ್ರ ಹೊರೆಯಾಗಲಿದೆ.
ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆ ಬ್ಯಾರೆಲ್ ಗೆ 30 ಡಾಲರ್ ಆಗಿದ್ದರೂ, ಭಾರತೀಯರು ಒಂದು ಲೀಟರ್ ಪೆಟ್ರೋಲ್ ಗೆ 70 ರೂಪಾಯಿ ಪಾವತಿ ಮಾಡುತ್ತಿದ್ದಾರೆ.
ಅಂದರೆ ಕಚ್ಛಾ ತೈಲ ಬೆಲೆ ಇಳಿಕೆಯಾದರೂ ಮುಂಬರುವ ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗುವುದಿಲ್ಲ.
ಅಬಕಾರಿ ಸುಂಕ ಏರಿಕೆಯಾಗಿದ್ದರೂ, ಪಂಪ್ ನಲ್ಲಿ ಮಾರಾಟವಾಗುವ ಇಂಧನ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ಸರ್ಕಾರ ಹೇಳಿದೆ.
ಆದರೆ ದೆಹಲಿ ಸರಕಾರ ಈಗಾಗಲೇ ಪೆಟ್ರೋಲ್ ಮತ್ತು ಡಿಸೆಲ್ ಮೇಲೆ ಭಾರಿ ಪ್ರಮಾಣದಲ್ಲಿ ಸುಂಕ ಏರಿಕೆ ಮಾಡಿದೆ.
ಪ್ರತಿ ಲೀಟರ್ ಗೆ ಪೆಟ್ರೋಲ್ 1.67, ಡಿಸೆಲ್ 7.10 ರೂಪಾಯಿ ಹೆಚ್ಚಳವಾಗಿದೆ. ಈ ಪರಿಣಾಮವಾಗಿ ದೆಹಲಿಯಲ್ಲಿ ಈಗ ಪೆಟ್ರೋಲ್ ದರ 69.59 ರೂಪಾಯಿಗಳಿಂದ 71.26 ರೂಪಾಯಿಗಳಿಗೆ ಏರಿಕೆಯಾಗಿದೆ.
ಡಿಸೆಲ್ ದರ ಈಗ 62.29 ರಿಂದ 69.39 ರೂಪಾಯಿಗೆ ಏರಿಕೆಯಾಗಿದೆ. ದೆಹಲಿ ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್ ನ್ನು ಶೇ.27 ರಿಂದ ಶೇ.30ಗೆ ಏರಿಕೆ ಮಾಡಿದೆ.
ಡೀಸೆಲ್ ಮೇಲಿನ ತೆರಿಗೆಯನ್ನು ಶೇ.16.75 ರಿಂದ ಶೇ.30 ರಷ್ಟು ಏರಿಕೆ ಮಾಡಲಾಗಿದೆ.
FILM
ಕಿರುತೆರೆಯಿಂದ ಹಿರಿತೆರೆಗೆ ಲಗ್ಗೆ ಇಟ್ಟ ‘ಪಾರು’ ಧಾರಾವಾಹಿ ನಟ ‘ಆದಿ’!
ಕನ್ನಡ ಕಿರುತೆರೆಯಲ್ಲಿ ಸದ್ದು ಮಾಡಿದ್ದ ಧಾರಾವಾಹಿಗಳಲ್ಲಿ ‘ಪಾರು’ ಕೂಡಾ ಒಂದು. ಆದಿ – ಪಾರು ಪ್ರೇಮಕಥೆ, ಅಖಿಲಾಂಡೇಶ್ವರಿ ಎಂಬ ಹಿರಿಮೆ ಎಲ್ಲವೂ ಧಾರಾವಾಹಿಯ ಜೀವಾಳವಾಗಿತ್ತು. ಈ ಧಾರಾವಾಹಿಗೆ ಸಿಕ್ಕಾಪಟ್ಟೆ ಅಭಿಮಾನಿಗಳು ಇದ್ದಾರೆ.
ಕಿರುತೆರೆಯಲ್ಲಿ ಸುಮಾರು ಆರು ವರ್ಷಗಳ ಈ ಧಾರಾವಾಹಿ ಪ್ರಸಾರವಾಗಿದೆ. ಈ ಧಾರಾವಾಹಿಯಲ್ಲಿ ಪಾರು ಪಾತ್ರದಿಂದ ಮೋಕ್ಷಿತಾ ಪೈ ತಮ್ಮ ಸಹಜ ಅಭಿನಯದಿಂದ ಗಮನ ಸೆಳೆದಿದ್ದರು. ಹಾಗೆಯೇ ಆದಿ ಪಾತ್ರದಿಂದ ನಟ ಶರತ್ ಪದ್ಮನಾಭ್ ಕೂಡ ಅಭಿಮಾನಿಗಳನ್ನು ಗಳಿಸಿದ್ದಾರೆ.
ಜೀ ಕನ್ನಡದಲ್ಲಿ ಬರುತ್ತಿದ್ದ ಪಾರು ಸೀರಿಯಲ್ ಈಗ ಅಂತ್ಯ ಕಂಡಿದೆ. ಈ ಧಾರಾವಾಹಿ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ ಆದಿ ಅಂದರೆ ಶರತ್ ಪದ್ಮನಾಭ್ ಹಿರಿತೆರೆ ಅಂಗಳದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.
ಬೆಳ್ಳಿಪರದೆ ಮೇಲೆ ‘ಆದಿ’
ಹೌದು, ನಟ ಶರತ್ ಪದ್ಮನಾಭ್ ನಾಯಕನಾಗಿ ಬೆಳ್ಳಿ ಪರದೆಯ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ಹೆಸರು ‘ಅನಿಮಾ’. ಈ ಹಿಂದೆ ರೈತರ ಕುರಿತ ಹೊನ್ನು ಬಿತ್ಯಾರು ಎಂಬ ಕಿರುಚಿತ್ರ ಮಾಡಿದ್ದ ನಿರ್ದೇಶಕ ವರ್ಧನ್ ಎಂ ಎಚ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ‘ಅನಿಮಾ’ ಎಂದರೆ ಪ್ರತಿಬಿಂಬ ಕಾಣದ ಕನ್ನಡಿ ಎಂದರ್ಥ.
ಎ ಡ್ರೀಮರ್ಸ್ ಸ್ಟುಡಿಯೋ ಬ್ಯಾನರ್ ನಡಿ ಚಿತ್ರ ನಿರ್ಮಾಣವಾಗುತ್ತಿದ್ದು, ಅನಿಮಾ ಸಿನಿಮಾದ ಚಿತ್ರೀಕರಣ ಕೊನೆ ಹಂತದಲ್ಲಿದೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ ಎನ್ನಲಾಗಿದೆ. ಬೆಂಗಳೂರು, ಸಕಲೇಶಪುರ, ಮಡಿಕೇರಿ, ಹುಲಿಯೂರು ದುರ್ಗ ಸುತ್ತಮುತ್ತ ಈಗಾಗಲೇ ಶೂಟಿಂಗ್ ನಡೆಸಲಾಗುತ್ತಿದೆ.
ಈಗಾಗಲೇ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಪೋಸ್ಟರ್ ವಿಭಿನ್ನವಾಗಿದ್ದು, ದಟ್ಟ ಕಾಡಿನ ಮಧ್ಯೆ ಸಾಗುತ್ತಿರುವ ಕಾರು ನಾನಾ ಕಥೆಯನ್ನು ಬಿಚ್ಚಿಡುತ್ತಿದೆ. ಸಿನಿಮಾ ಪೋಸ್ಟರ್ ಅನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ನಟ ಶರತ್ ಪದ್ಮನಾಭ್ ಹಂಚಿಕೊಂಡಿದ್ದಾರೆ.
” ಅನಿಮಾ, ನಮ್ಮ ಸಿನಿಮಾ, ನಿಮ್ಮ ಸಿನಿಮಾ ಆಗುವ ಮೊದಲ ಹೆಜ್ಜೆ!! Presenting you the title poster of our movie !! ಒಂದು ರೋಚಕವಾದ ಕಥೆಯನ್ನು ಹೇಳಲು ಆದಷ್ಟು ಬೇಗ ಬರ್ತಾ ಇದೀವಿ !! ನಮ್ಮ ತಂಡಕ್ಕೆ ನಿಮ್ಮ ಬೆಂಬಲವಿರಲಿ” ಎಂದು ಮನವಿ ಮಾಡಿಕೊಂಡಿದ್ದಾರೆ.
ಅನುಷಾ ಕೃಷ್ಣ ನಾಯಕಿ
ಅನಿಮಾ ಚಿತ್ರದಲ್ಲಿ ಶರತ್ ಪದ್ಮನಾಭ್ ಗೆ ನಾಯಕಿಯಾಗಿ ಅನುಷಾ ಕೃಷ್ಣ ಜೊತೆಯಾಗಿದ್ದಾರೆ. ಪಂಕಜ್ ಎಸ್ ನಾರಾಯಣ್, ಯುವ ಶೆಟ್ಟಿ, ವಾಣಿ, ಸೂರಿ, ಸುಷ್ಮಿತಾ ಸೇರಿದಂತೆ ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ. ಎನ್ ಕೆ ರಾಜ್ ಛಾಯಾಗ್ರಹಣ, ವಿರಾಜ್ ವಿಶ್ವ ಸಂಭಾಷಣೆ, ರೋನಾದ ಬಕ್ಕೇಶ್ ಸಂಗೀತ ಚಿತ್ರಕ್ಕಿದೆ.
LATEST NEWS
ಆಭರಣ ಪ್ರಿಯರಿಗೆ ನಿರಾಸೆ….ಇಂದು ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ…!
ಬೆಂಗಳೂರು : ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ನಿನ್ನೆಗಿಂತ ಇಂದು(ಮಾ.29) ಚಿನ್ನದ ದರ ಮತ್ತಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆಯೂ ಕೂಡ ಹೆಚ್ಚಾಗಿದ್ದು, ಶುಭಕಾರ್ಯಗಳಿಗೆ ಚಿನ್ನ ಖರೀದಿಸಬೇಕು ಎಂದುಕೊಂಡವರು ಯೋಚಿಸುವಂತಾಗಿದೆ.
ಮದುವೆ ಸಮಾರಂಭಗಳ ಸೀಸನ್ ಇದು. ಶುಭ ಸಮಾರಂಭಗಳಿಗೆ ಚಿನ್ನಾಭರಣವೂ ಅತೀ ಮುಖ್ಯ. ಹಾಗಾಗಿ ಚಿನ್ನ ಕೊಳ್ಳುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ. ಈ ಸಮಯದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆ ಹಿಂದಿಗಿಂತ ದುಬಾರಿಯೇ ಇದೆ.
ಎಷ್ಟಿದೆ ಬೆಲೆ ?
ಸದ್ಯ ಭಾರತದಲ್ಲಿ 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 61,700 ರೂಪಾಯಿ ಇದ್ದು, 24 ಕ್ಯಾರೆಟ್ನ ಅಪರಂಜಿ ಚಿನ್ನದ ಬೆಲೆ 10 ಗ್ರಾಂ ಬೆಲೆ 67,310 ರೂಪಾಯಿ ಇದೆ. ಇನ್ನು 100 ಗ್ರಾಂ ಬೆಳ್ಳಿಯ ಬೆಲೆ 7,750 ರೂಪಾಯಿ ಇದೆ.
ಒಂದು ಗ್ರಾಂ ಚಿನ್ನದ ದರ
22 ಕ್ಯಾರೆಟ್ ಚಿನ್ನದ ದರ – 6,170 ರೂಪಾಯಿ
24 ಕ್ಯಾರೆಟ್ ಚಿನ್ನದ ದರ – 6,731 ರೂಪಾಯಿ
10 ಗ್ರಾಂ ಚಿನ್ನದ ದರ
22 ಕ್ಯಾರೆಟ್ ಆಭರಣ ಚಿನ್ನದ ದರ – 61,700 ರೂಪಾಯಿ
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – 67,310 ರೂಪಾಯಿ
8 ಗ್ರಾಂ ಚಿನ್ನದ ದರ
22 ಕ್ಯಾರೆಟ್ ಆಭರಣ ಚಿನ್ನದ ದರ – 49,360 ರೂಪಾಯಿ
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
ಬೆಂಗಳೂರು- 61,700 ರೂಪಾಯಿ
ಚೆನ್ನೈ – 62,500 ರೂಪಾಯಿ
ಮುಂಬೈ – 61,700 ರೂಪಾಯಿ
ಕೇರಳ -61,700 ರೂಪಾಯಿ
ಕೋಲ್ಕತ್ತಾ – 61,700 ರೂಪಾಯಿ
ಜೈಪುರ್ -61,850 ರೂಪಾಯಿ
ಭುವನೇಶ್ವರ್- 61,700 ರೂಪಾಯಿ
ಅಹ್ಮದಾಬಾದ್- 61,750 ರೂಪಾಯಿ
ಲಕ್ನೋ – 61,850 ರೂಪಾಯಿ
ನವದೆಹಲಿ – 61,850 ರೂಪಾಯಿ
ವಿವಿಧ ನಗರಗಳಲ್ಲಿ ಬೆಳ್ಳಿ ದರ (100 ಗ್ರಾಂ)
ಬೆಂಗಳೂರು-7,750 ರೂಪಾಯಿ
ಚೆನ್ನೈ- 8,050 ರೂಪಾಯಿ
ಮುಂಬೈ-7,750 ರೂಪಾಯಿ
ಕೋಲ್ಕತ್ತಾ-7,750 ರೂಪಾಯಿ
ನವದೆಹಲಿ-7,750 ರೂಪಾಯಿ
LATEST NEWS
ಏಪ್ರಿಲ್ 3 ರ ವರೆಗೆ ಭಾರೀ ಮಳೆ ಮುನ್ಸೂಚನೆ; ಎಲ್ಲೆಲ್ಲಿ ಮಳೆ?
ದೇಶದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಧಗೆ ಹೆಚ್ಚಾಗಿದೆ. ಮಳೆ ಬಂದರೆ ಸಾಕು ಅನ್ನೋ ಮನೋಭಾವನೆ ಇದೆ. ಈ ನಡುವೆ ಏಪ್ರಿಲ್ 3ರವರೆಗೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ?
ಮಾರ್ಚ್ 29 ಮತ್ತು 30 ರಂದು ಪಶ್ಚಿಮ ಹಿಮಾಲಯ ಪ್ರದೇಶದ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಮಾರ್ಚ್ 29 ರಿಂದ 31 ರ ವರೆಗೆ ವಾಯುವ್ಯ ಮತ್ತು ಈಶಾನ್ಯ ಭಾರತದಲ್ಲಿ ಗುಡುಗು ಸಹಿತ ಸಾಧರಾಣ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಇದನ್ನೂ ಓದಿ : ಈ ದೇವಸ್ಥಾನದಲ್ಲಿ ಒಂದು ಲಿಂಬೆಹಣ್ಣಿಗೆ ಲಕ್ಷಾಂತರ ರೂ. ಬೇಡಿಕೆ..! ಅಂತದ್ದೇನಿದೆ ಈ ಲಿಂಬೆ ಹಣ್ಣಲ್ಲಿ?
ಚಂಡಮಾರುತದ ಪರಿಣಾಮವಾಗಿ, ಬಿಹಾರದ, ದಕ್ಷಿಣ ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಚದುರಿದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪಶ್ಚಿಮ ಬಂಗಾಳ, ಒಡಿಶಾ ಮತ್ತು ಸಿಕ್ಕಿಂನಲ್ಲಿ ಮಾರ್ಚ್ 30 ರಿಂದ ಏಪ್ರಿಲ್ 3ರ ವರೆಗೆ ಆರ್ದ್ರ ವಾತಾವರಣವನ್ನು ನಿರೀಕ್ಷಿಸಲಾಗಿದೆ. ಬಿಹಾರ ಮತ್ತು ಜಾರ್ಖಂಡ್ಗಳು ಮುಂದಿನ ಕೆಲವು ದಿನಗಳವರೆಗೆ ಮಳೆ ಸಾಧ್ಯತೆ ಇದೆ.
ಮಾರ್ಚ್ 31 ರಂದು ಹಿಮಾಲಯ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವ್ಯಾಪಕವಾದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ ಕೆಲವು ದಿನಗಳ ವರೆಗೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.
ಇದಲ್ಲದೆ, ಅರುಣಾಚಲ ಪ್ರದೇಶದದಲ್ಲಿ ಏಪ್ರಿಲ್ 1 ರಂದು ಅಲ್ಲಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
- FILM4 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ವರ್ಯ ರೈ- ಅಭಿಷೇಕ್ ಬಚ್ಚನ್ ಫೋಟೋ!
- DAKSHINA KANNADA3 days ago
ಖತರ್ನಾಕ್ ಲ್ಯಾಪ್ಟಾಪ್ ಕಳ್ಳಿ…! ಈಕೆ ಬ್ಯಾಂಕ್ ಉದ್ಯೋಗಿ… !
- DAKSHINA KANNADA4 days ago
ಪಾರ್ಟ್ ಟೈಮ್ ಜಾಬ್ ಕೊಡಿಸುವುದಾಗಿ ನಂಬಿಸಿ ವಂಚನೆ; ಆರೋಪಿ ರಾಜಸ್ಥಾನದ ಸದ್ದಾಂ ಗೌರಿ ಬಂಧನ
- LATEST NEWS7 days ago
ಕೋಟಾ ಶ್ರೀನಿವಾಸ ಪೂಜಾರಿಗೆ ಅಭಿಮಾನಿ ಕೊಟ್ಟ ಕೊಡುಗೆ ಏನು ಗೊತ್ತಾ…?