Connect with us

DAKSHINA KANNADA

ಸಿಟಿ ಬಸ್‌ ಗಳ ಚಲೋ ಕಾರ್ಡ್ ಚಲೋ ಇಲ್ಲಾರೀ..! ಕಾರ್ಡ್ ತೋರಿಸಿದ ಪ್ರಯಾಣಿಕನಿಗೆ ಅರ್ಧ ಚಂದ್ರ ತೋರಿಸಿದ ನಿರ್ವಾಹಕ..

Published

on

ಸಿಟಿ ಬಸ್‌ ಗಳ ಚಲೋ ಕಾರ್ಡ್ ಚಲೋ ಇಲ್ಲಾರೀ..! ಕಾರ್ಡ್ ತೋರಿಸಿದ ಪ್ರಯಾಣಿಕನಿಗೆ ಅರ್ಧ ಚಂದ್ರ ತೋರಿಸಿದ ನಿರ್ವಾಹಕ..

Chalo card for city buses of Mangalore r Use less..!?

ಮಂಗಳೂರು :  ಮಂಗಳೂರು ನಗರ ಸಾರಿಗೆ ಬಸ್ ಗಳಲ್ಲಿ ಪ್ರಯಾಣಿಕರಿಗೆ ಅನೂಕೂಲವಾಗಲೆಂದು, ದಕಿಣ ಕನ್ನಡ ಜಿಲ್ಲಾಬಸ್ ಮಾಲಕ ಚಾಲಕರ ಸಂಘ ಚಲೋ ಸಂಸ್ಥೆ ಸಹಯೋಗದೊಂದಿಗೆ ಸ್ಮಾಟ್ ಟರ್ಚ್ ನೀಡಿ ಚಲೋ ಕಾರ್ಡ್ ವ್ಯವಸ್ಥೆ ಪರಿಚಯಿಸಿದೆ.

ಆದ್ರೆ ಸದ್ಯ ಈ ಚಲೋ ಕಾರ್ಡ್‍ನಿಂದ ಬಸ್ ಪ್ರಯಾಣಿಕರಿಗೆ ಅನುಕೂಲವಾಗುವ ಬದಲು ಅವಮಾನಕ್ಕೆ ಈಡಾಗುವಂತಹ ಪರಿಸ್ಥಿತಿ ಎದುರಾಗಿದೆ.

ಚಲೋ ಕಾರ್ಡ್ ತೋರಿಸಿದಾಗ ಮುಖವನ್ನು ಸಿಂಡರಿಸ್ತಾ ಇದ್ದು, ಕಾರ್ಡ್ ಬದಲಿಗೆ ದುಡ್ಡು ಕೊಡಿ ಎಂದು ಸಿಟಿ ಬಸ್ ನಿರ್ವಾಹಕರು ಒತ್ತಾಯಿಸುತ್ತಾರೆ.

ಇಲ್ಲದಿದ್ದರೆ ಬಸ್‍ನಿಂದ ಇಳಿಯಿರಿ ಎಂದು ನಿರ್ವಾಹಕರು ಪ್ರಯಾಣಿಕರಿಗೆ ಅವಾಜ್ ಹಾಕುತ್ತಿದ್ದಾರೆ.

ಬಸ್ ನಿರ್ವಾಹಕನ ಈ ವರ್ತನೆಯಿಂದ ಹಲವು ಮಂದಿ ಪ್ರಯಾಣಿಕರು ಬಸ್ಸಿನಲ್ಲಿ ಮಾರ್ಯಾದಿ ಹೋಗುವುದು ಬೇಡ ಎಂದು , ಚಲೋ ಕಾರ್ಡ್ ಇದ್ದರೂ ದುಡ್ಡು ಕೊಟ್ಟು ಹೋಗುತ್ತಿದ್ದಾರೆ.

ಬಸ್ಸಿನಲ್ಲಿ ಆಗುವ ಈ ಸಮಸ್ಯೆಯನ್ನು ಹಲವು ಮಂದಿ ದೂರು ನೀಡದೆ ಸುಮ್ಮನೆ ಇದ್ದಾರೆ.

ಈ ವಿಚಾರದ ಕುರಿತು ದಕ್ಷಿಣ ಕನ್ನಡ ಬಸ್ ಚಾಲಕ ಮಾಲಕ ಸಂಘ ಅಧ್ಯಕ್ಷ ದಿಲ್ ರಾಜ್ ಆಳ್ವ ಅವರ ಗಮನಕ್ಕೆ ತಂದಾಗ ಸಮಸ್ಯೆ ಬಗೆ ಹರಿಸುವುದಾಗಿ ಭರವಸೆ ನೀಡಿದ್ದು,ಸದ್ಯ ಸಿಟಿ ಬಸ್ ಪ್ರಯಾಣಿಕರು ಸಮಸ್ಯೆ ಪರಿಹಾರವಾಗುತ್ತದೆ ಅನ್ನುವ ನಿರೀಕ್ಷೆಯಲ್ಲಿ ಇದ್ದಾರೆ.

ಸಿಟಿ ಬಸ್‍ನಲ್ಲಿ ಚಲೋ ಕಾರ್ಡ್ ಬಗ್ಗೆ ನಿರ್ಲಕ್ಷ್ಯ ವಹಿಸಿ , ಪ್ರಯಾಣಿಕರ ಜೊತೆ ಅಸಭ್ಯ ವರ್ತನೆ ಮಾಡುವ ಇಂತಹ ಕೆಲವು ಕಂಡೆಕ್ಟರ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅವಶ್ಯಕತೆ ಇದೆ.

ಇಂತಹುದೇ ಘಟನೆ ಮಂಗಳೂರು ನಗರದ ಸಿಟಿ ಬಸ್ ನಲ್ಲಿ  ಶುಕ್ರವಾರ ನಡೆದಿದೆ.

ನಗರದಲ್ಲಿ ಓಡಾಡುವ  ರೂಟ್ ನಂಬ್ರ 6 ರ ಸಿಟಿ ಬಸ್ ನಲ್ಲಿ ದಿನನಿತ್ಯ ಕೆಲಸಕ್ಕೆ ಹೋಗುವ ವ್ಯಕ್ತಿ ತಮ್ಮ ಚಲೋ ಕಾರ್ಡನ್ನು ಬಸ್ ನಿರ್ವಾಹಕನಿಗೆ ತೋರಿಸದಾಗ ಉಡಾಫೇಯಿಂದ ವರ್ಥಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬಸ್ ನಿಂದ ಕೆಳಗಿಳಿಸಿದ್ದಾರೆ ಎಂದು ದೂರಿದ್ದಾರೆ.

ನಿರ್ವಾಹಕನ ಈ ರೀತಿಯ ದಬ್ಬಾಳಿಕೆಗೆ ಆಕ್ರೋಶ ವ್ಯಕ್ತವಾಗಿದ್ದು ಬಸ್ ಚಾಲಕ ಮಾಲಕ ಸಂಘಕ್ಕೆ ಮೌಖಿಕ ದೂರನ್ನು ನೀಡಲಾಗಿದ್ದು ಕ್ರಮ ಕೈಗೊಳ್ಳುವ ಭರವಸೆ ನೀಡಲಾಗಿದೆ.

ಸಂಘ ಜಾರಿಗೆ ತಂದ ವ್ಯವಸ್ಥೆ ಮಂಗಳೂರಿನ ಪ್ರಜ್ಞಾವಂತ ಪ್ರಯಾಣಿಕರಿಗೆ ಸಹಕಾರಿಯಾಗಬೇಕಿದ್ದು ಜೊತೆಗೆ ಸಿಟಿ ಬಸ್ ಸಿಬಂದಿಗಳಿಗೆ ಬಸ್ ಏರುವ ಪ್ರಯಾಣಿಕರಲ್ಲಿ ಸೌಜನ್ಯದಿಂದ ವರ್ತಿಸುವ ಪಾಠ ಕೂಡ ಸಂಘ ಹೇಳಬೇಕಾಗಿದೆ.

1 Comment

1 Comment

  1. Anil kumar kankanady

    18/12/2022 at 6:36 AM

    ಜನರಿಗೆ ಪ್ರಯೋಜನ ವಾಗಳೆಂದು ಬಸ್ ಮಾಲಕರ ಸಂಘದ ಒಳ್ಳೆಯ ಬೆಳವಣಿಗೆ. ತಮ್ಮ ಸಂಘದ ಕಾರ್ಯಕ್ಕೆ ಅಭಿನಂದನೆಗಳು.ಜನರಿಗೆ ತೊಂದರೆ ಕೊಡುವ ದುರ್ನಡತೆ ತೋರುವ ಬಸ್ ನಿರ್ವಾಹಕರ ವರ್ತನೆ ಖಂಡನೆ.ಅದಕ್ಕೆ ಸೂಕ್ತ ಸಲಹೆ ನೀಡಿ.ನಿರ್ವಾಹಕರಿಗೆ ಸ್ವಲ್ಪ ನಷ್ಟ ತಮ್ಮ ಜೇಬು ತುಂಬುವ ಹಣ ಮಾಲಕರ ಕೈ ಸೇರುತ್ತದೆ ಎಂಬ ಸಿಟ್ಟು ಇದರಿಂದ ಆಗಿದೆ ಆದರೆ ಬಸ್ ಮಾಲಕರಿಗೆ ಇದು ಲಾಭ ತಂದಿದೆ ಜನರಿಗೂ ತುಂಬಾ ಉಪಯೋಗ ಲಾಭ ಪ್ರಯೋಜನ ಇದೆ ತಪ್ಪುಗಳು ನಡೆಯೋದು ಸಹಜ ನಿರ್ವಾಹಕರಿಗೆ ಸೂಕ್ತ ಸಲಹೆ ತರಬೇತಿ ನೀಡಿ.ಸರಿಪಡಿಸಿ ಜನರಿಗೆ ಉತ್ತಮ ಸೇವೆ ನೀಡಿ ಧನ್ಯವಾದ🙏

Leave a Reply

Your email address will not be published. Required fields are marked *

DAKSHINA KANNADA

ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ

Published

on

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್‌ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್‌ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್‌ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್‌ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

mobile not allowed

ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

ಮತದಾನ ಮಾಡುವಾಗ ಫೋನ್‌ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್‌ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್‌ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending