DAKSHINA KANNADA
‘ಆರ್ಸಿಬಿ’ ಸೂಪರ್ ಕಮ್ಬ್ಯಾಕ್..! ಕ್ರೀಡಾಂಗಣದಲ್ಲಿ ಸ್ಟಾರ್ಸ್ ಕಲರವ
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಒಂದು ಕಡೆ ಮಳೆಯ ಆರ್ಭಟ. ಇನ್ನೊಂದು ಕಡೆ ಸತತ 7 ಪಂದ್ಯಗಳಲ್ಲಿ ಸೋತು ಪ್ಲೇ ಆಫ್ ಕನಸಲ್ಲಿದ್ದ ತಂಡಕ್ಕೆ ಈ ಪದ್ಯ ಅದೃಷ್ಟವನ್ನು ತಂದುಕೊಟ್ಟಿದೆ. ಒಂದು ಕಡೆ ಪ್ಲೇ ಆಫ್ ಗೆ ಹೋಗಲು ರನ್ ಮಾತ್ರ ಅಲ್ಲ, ನಿಗದಿತ ರನ್ನಿನ ಒಳಗಡೆ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಕಟ್ಟಿ ಹಾಕಬೇಕಿತ್ತು.
ಅದೃಷ್ಟ ಹೊತ್ತು ತಂದ ಮಳೆರಾಯ
ಇನ್ನು ವಿಶೇಷ ಅಂದ್ರೆ ಬೆಂಗಳೂರಿನ ಹಲವು ಕಡೆ ಮಳೆರಾಯನ ಆರ್ಭಟ ಜೋರಾಗಿತ್ತು. ಎಡೆಬಿಡದೆ ಸುರಿದ ಮಳೆಯಿಂದ ಸಂಚಾರಕ್ಕೂ ಅಡ್ಡಿ ಉಂಟಾಗಿತ್ತು. ಅದೃಷ್ಟ ಅಂದ್ರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ವಲ್ಪ ಹೊತ್ತಷ್ಟೇ ಮಳೆ ಸುರಿದಿದೆ. ಇದು ಮಳೆರಾಯನ ಕೃಪೆಯೆಂದೇ ನೆಟ್ಟಿಗರು ಹೇಳುತ್ತಿದ್ದಾರೆ. ಒಂದು ವೇಳೆ ಮಳೆಯಬ್ಬರ ಜೋರಾಗಿದ್ದು ಪಂದ್ಯ ಮಳೆಗೆ ಆಹುತಿಯಾಗಿದ್ದರೆ ಆರ್ಸಿಬಿ ಒಂದು ಆಂಕ ಪಡೆದು ಪಂದ್ಯಕೂಟದಿಂದ ನಿರ್ಗಮಿಸಬೇಕಾಗಿತ್ತು.
ಪ್ಲೇಆಫ್ ನಿರೀಕ್ಷೆಯಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಕೊನೆಯ ಮ್ಯಾಚ್ನಲ್ಲಿ ಸೋಲುಣಿಸಿ ಇದೀಗ ಟಾಪ್-4 ಹಂತಕ್ಕೇರಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿ ಗ್ರೇಟೆಸ್ಟ್ ಕಂಬ್ಯಾಕ್ ಮಾಡಿದೆ. ಆರ್ಸಿಬಿ ಫ್ಯಾನ್ಸ್ ಗಳ ಹರ್ಷ ಹೇಳತೀರದು. ಎಲ್ಲೆಡೆ ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಟಾರ್ಸ್ ಕಲರವ
ಇನ್ನೂ ಈ ರೋಚಕ ಪಂದ್ಯ ವನ್ನು ವೀಕ್ಷಿಸಲು ಮಾಜಿ ಕ್ರಿಕೆಟಿಗ ಕ್ರಿಸ್ ಗೇಲ್, ಕಾಂತಾರ ಸಿನೆಮಾ ರಿಷಬ್ ಶೆಟ್ಟಿ ಭಾಗಿಯಾಗಿದ್ದರು. ಇನ್ನೂ ಇವರಿಬ್ಬರು ಜೊತೆಯಾಗಿ ಕಾಣಿಸಿಕೊಂಡು ಚಿಯರ್ ಅಪ್ ಮಾಡಿದ್ದು, ಕ್ಯಾಮೆರಾ ಕಣ್ಣಿಗೆ ಇಬ್ಬರೂ ಪೋಸ್ ನೀಡಿದ್ದಾರೆ. ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡಾ ಆರ್ಸಿಬಿ ಫ್ಯಾನ್ ಆಗಿದ್ದು ನಿನ್ನೆಯ ಪಂದ್ಯ ವನ್ನು ವೀಕ್ಷಣೆ ಮಾಡಿದ್ದಾರೆ.
ಬೆಂಗಳೂರು ರಾಯಲ್ ಚಾಲೆಂಜರ್ಸ್ ನ ಮಹಿಳಾ ತಂಡ ಈ ಬಾರಿಯ ಟ್ರೋಫಿಯನ್ನು ತಂದುಕೊಟ್ಟಿದ್ದಾರೆ. ನಿನ್ನೆಯ ಪಂದ್ಯದಲ್ಲಿ ಮಹಿಳಾ ತಂಡ ಜರ್ಸಿಯನ್ನು ತೊಟ್ಟು ಚಿಯರ್ ಅಪ್ ಮಾಡಿದ್ದಾರೆ.
ಇನ್ನು ಎಲಿಮಿನೇಟರ್ ಪಂದ್ಯಕ್ಕೆ ಅರ್ಹತೆ ಪಡೆದಿರುವ ಆರ್ಸಿಬಿ ಪಾಲಿಗೆ ಮತ್ತೊಂದು ಮಾಡು ಇಲ್ಲವೇ ಮಡಿ ಪಂದ್ಯ ಎದುರಾಗಿದೆ. ಮೇ 22 ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಆರ್ಸಿಬಿ ಜಯ ಗಳಿಸಿದರೆ ಕ್ವಾಲಿಫೈಯರ್-2 ಗೆ ಅರ್ಹತೆ ಗಿಟ್ಟಿಸಿಕೊಳ್ಳಲಿದೆ. ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫೈನಲ್ಗೇರಲಿದೆಯಾ ಎಂದು ಕಾದು ನೋಡಬೇಕಿದೆ.
DAKSHINA KANNADA
ಇನ್ಮುಂದೆ ಪರೀಕ್ಷೆಗಳಲ್ಲಿ ಅಕ್ರಮ, ಪೇಪರ್ ಲೀಕ್ ಮಾಡಿದ್ರೆ 1 ಕೋಟಿ ರೂ ದಂಡ..!
ನವದೆಹಲಿ: National Eligibility Test (NET) ಹಾಗೂ National Eligibility cum Entrance Test (NEET) ಪರೀಕ್ಷೆ ಪತ್ರಿಕೆಗಳು ಸೋರಿಕೆ ಆಗಿರೋದು ದೊಡ್ಡ ವಿವಾದವೇ ಸೃಷ್ಟಿಯಾಗಿದೆ. ಈ ಸಂಬಂಧ ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಸ ಕಾಯ್ದೆ ಜಾರಿಗೆ ತಂದಿದ್ದು, ಕಠಿಣ ಶಿಕ್ಷೆಯ ಜೊತೆಗೆ 1 ಕೋಟಿ ರೂಪಾಯಿ ದಂಡ ಇರುತ್ತದೆ ಎಂದು ಕಾಯ್ದೆ ಹೇಳುತ್ತದೆ.
ನೀಟ್-ಯುಜಿ ಹಾಗೂ ಯುಜಿಸಿ-ನೆಟ್ ಪರೀಕ್ಷೆಗಳನ್ನು ಮೇ 5ರಂದು ನಡೆಸಲಾಗಿತ್ತು. ಈ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಅಕ್ರಮ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಕೇಂದ್ರ ಶಿಕ್ಷಣ ಸಚಿವಾಲಯ ಮತ್ತು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ವಿರುದ್ಧ ಗಂಭೀರ ಆರೋಪಗಳು ಕೇಳಿ ಬಂದಿವೆ. ನೀಟ್-ಯುಜಿ ಹಾಗೂ ಯುಜಿಸಿ-ನೆಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ಸದ್ಯ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತವೆ.
ಬೆನ್ನಲ್ಲೇ ಕೇಂದ್ರ ಸರ್ಕಾರ ಕಠಿಣ ಕಾಯ್ದೆಯನ್ನು ಜಾರಿ ಮಾಡಿದೆ. ಕಾಯ್ದೆ ಪ್ರಕಾರ ಅಪರಾಧಿಗಳಿಗೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಮತ್ತು 1 ಕೋಟಿ ರೂ.ವರೆಗೆ ದಂಡ ವಿಧಿಸಲು ಅವಕಾಶ ಇರುತ್ತದೆ ಎಂದು ಕಾಯ್ದೆ ಹೇಳುತ್ತದೆ. ಇದೇ ಕಾಯ್ದೆ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್ಸಿ), ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ), ರೈಲ್ವೇಸ್, ಬ್ಯಾಂಕಿಂಗ್ ನೇಮಕಾತಿ ಪರೀಕ್ಷೆಗಳು ಮತ್ತು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ) ಇಂತಹ ಸಾರ್ವಜನಿಕ ಪರೀಕ್ಷೆಗಳಲ್ಲಿ ಅಕ್ರಮ ತಡೆಯುವ ಉದ್ದೇಶವನ್ನು ಈ ಕಾಯ್ದೆ ಹೊಂದಿದೆ ಎಂದು ಹೇಳಲಾಗುತ್ತಿದೆ.
ಪರೀಕ್ಷೆಯ ಪತ್ರಿಕೆಗಳನ್ನು ಸೋರಿಕೆ ಮಾಡುವ ಅಥವಾ ಉತ್ತರ ಪತ್ರಿಕೆಗಳನ್ನು ತಿದ್ದುವ ಅಪರಾಧಿಗಳಿಗೆ 3 ವರ್ಷಗಳಿಂದ 5 ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ಕಾಯ್ದೆ ಸೂಚಿಸುತ್ತದೆ. 10 ಲಕ್ಷ ರೂಪಾಯಿವರೆಗೆ ದಂಡ ಕೂಡ ಕಟ್ಟಬೇಕಾಗುತ್ತದೆ.
ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಗೊತ್ತಾದರೆ ಪೊಲೀಸರು ವಾರಂಟ್ ಇಲ್ಲದೆ ವ್ಯಕ್ತಿಗಳನ್ನು ಬಂಧಿಸಬಹುದು. ಅಕ್ರಮ ನಡೆದಿರುವುದು ಸತ್ಯವೆಂದು ತಿಳಿದರೆ ಕೋರ್ಟ್ನಲ್ಲಿ ತಪ್ಪಿತಸ್ತರಿಗೆ ಜಾಮೀನು ಕೂಡ ಸಿಗುವುದಿಲ್ಲ. ಪ್ರಸ್ತುತ ಅಪರಾಧದ ಬಗ್ಗೆ ಗೊತ್ತಿದ್ದರು ಆದರೆ ಅದನ್ನು ವರದಿ ಮಾಡಲು ವಿಫಲರಾಗುವ ಪರೀಕ್ಷಾ ಸೇವಾ ಪೂರೈಕೆದಾರರಿಗೆ ಹಾಗೂ ದುಷ್ಕೃತ್ಯದಲ್ಲಿ ತೊಡಗುವ ಪರೀಕ್ಷಾ ಅಧಿಕಾರಿಗಳು 1 ಕೋಟಿ ರೂ.ಗಳವರೆಗೆ ದಂಡ ವಿಧಿಸಬಹುದು. ಜೊತೆಗೆ ಇವರಿಗೆ 5 ವರ್ಷದಿಂದ 10 ವರ್ಷದವರೆಗೆ ಶಿಕ್ಷೆ ನೀಡಲಾಗುತ್ತದೆ ಎಂದು ಕಾಯ್ದೆ ಹೇಳುತ್ತದೆ.
chikkamagaluru
ಇವೆರಡೂ ತಾಣದಲ್ಲಿ ಟ್ರಕ್ಕಿಂಗ್ ನಿರ್ಬಂಧ..!
ಮಂಗಳೂರು : ಮಳೆಗಾಲದಲ್ಲಿ ಮಲೆನಾಡಿಗೆ ಹೋದಾಗ ಸಿಗುವ ಅನುಭವವೇ ಬೇರೆ ಆದ ಕಾರಣ ಮಲೆನಾಡಿನ ಟೂರಿಸ್ಟ್ ಹಾಟ್ಸ್ಪಾಟ್ ಮಳೆಗಾಲದಲ್ಲಿ ಫುಲ್ ಆಗುತ್ತದೆ. ಇನ್ನು ಹಾಟ್ ಫೇವರೇಟ್ ಸ್ಪಾಟ್ ಆಗಿರುವ ಮುಳ್ಳಯ್ಯನಗಿರಿ, ಎತ್ತಿನಭುಜ ಸೇರಿದಂತೆ ಹಲವಾರು ಪ್ಲೇಸ್ಗಳು ಪ್ರವಾಸಿಗರಿಗೆ ಸ್ವರ್ಗವೇ ಸರಿ. ಹೀಗಾಗಿ ಕಳೆದ ಭಾನುವಾರ ( ಜೂನ್ 16 ) ರಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುಳ್ಳಯ್ಯನಗಿರಿ ಹಾಗೂ ಎತ್ತಿನಭುಜ ಟೂರಿಸ್ಟ್ ಸ್ಪಾಟ್ಗೆ ಸಾವಿರಾರು ಜನ ಪ್ರವಾಸಿಗರು ಭೇಟಿ ನೀಡಿದ್ದಾರೆ. ಕಳೆದ ಭಾನುವಾರ 20 ಸಾವಿರಕ್ಕೂ ಅಧಿಕ ಪ್ರವಾಸಿಗರು ಎತ್ತಿನಭುಜಕ್ಕೆ ಟ್ರಕ್ಕಿಂಗ್ ಮಾಡಿದ್ದರು. ಆದ್ರೆ ಇದೀಗ ಸರ್ಕಾರ ಈ ಎರಡೂ ತಾಣಗಳಿಗೆ ಪ್ರವಾಸಿಗರು ಹೋಗದಂತೆ ನಿಷೇಧ ಹೇರಿದೆ.
ಚಿಕ್ಕಮಗಳೂರು ಜಿಲ್ಲೆಗೆ ಹೋಗುವ ಪ್ರವಾಸಿಗರಿಗೆ ಎತ್ತಿನಭುಜ ಹಾಗೂ ಮುಳ್ಳಯ್ಯನಗಿರಿ ಎರಡೂ ಕೂಡಾ ಹಾಟ್ ಫೇವರೇಟ್ ಜಾಗ. ಆದ್ರೆ ಸರ್ಕಾರ ಈ ಎರಡೂ ಪ್ರವಾಸಿತಾಣಕ್ಕೆ ಹೋಗದಂತೆ ತಾತ್ಕಾಲಿಕ ನಿಷೇಧ ಹೇರಿದೆ. ಈ ಹಿಂದೆಯೇ ರಾಜ್ಯದ ಚಾರಣ ಪಥಗಳಿಗೆ ಆನ್ಲೈನ್ ಬುಕ್ಕಿಂಗ್ ಮಾಡಿ ನಿಯಮಿತ ಸಂಖ್ಯೆಯ ಪ್ರವಾಸಿಗರಿಗೆ ಮಾತ್ರ ಹೋಗಲು ಅನುಮತಿ ನೀಡಿತ್ತು. ಪರಿಸರದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಕಾರಣ ಈ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಹೇಳಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ಕಾರಣ ಪ್ಲಾಸ್ಟಿಕ್ , ಸೇರಿದಂತೆ ತ್ಯಾಜ್ಯಗಳು ಅರಣ್ಯ ವ್ಯಾಪ್ತಿಯಲ್ಲಿ ಸಂಗ್ರಹ ಆಗುವ ಕಾರಣ ಈ ನಿಯಮ ಜಾರಿಗೆ ತಂದಿರುವುದಾಗಿ ಹೇಳಿದ್ದರು.
ಕಳೆದ ಭಾನುವಾರ ಈ ನಿಯಮ ಉಲ್ಲಂಘಿಸಿ ಸಾವಿರಾರು ಜನರು ಎತ್ತಿನಭುಜ ಹಾಗೂ ಮುಳ್ಳಯ್ಯನಗಿರಿಗೆ ಎಂಟ್ರಿ ಕೊಟ್ಟಿದ್ದಾರೆ. ಇದಕ್ಕೆ ಅಲ್ಲಿನ ಅರಣ್ಯ ಅಧಿಕಾರಿಗಳೇ ಕಾರಣವಾಗಿದ್ದು , ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆಯನ್ನು ಅರಣ್ಯ ಸಚಿವರು ನೀಡಿ ಈ ಎರಡೂ ಪ್ರವಾಸಿತಾಣಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದಾರೆ. ಪ್ರವಾಸಿಗರು ಪ್ರಕೃತಿಯ ವೀಕ್ಷಣೆ ಮಾಡುವುದಕ್ಕೆ ಯಾವುದೇ ಆಕ್ಷೇಪ ಇಲ್ಲವಾದ್ರೂ ಪರಿಸರವನ್ನು ಹಾಳು ಮಾಡುವ ಬಗ್ಗೆ ಸಚಿವರು ಆತಂಕ ವ್ಯಕ್ತಪಡಿಸಿದ್ದಾರೆ.
ಇನ್ನು ಮುಂದೆ ಚಾರಣಿಗರಿಂದ ಆಗುವ ಪರಿಸರ ಹಾನಿಯನ್ನು ತಪ್ಪಿಸಲು ಕೆಲವೊಂದು ಕಠಿಣ ನಿರ್ಧಾರ ತೆಗೆದುಕೊಳ್ಳಲು ಸರ್ಕಾರ ತೀರ್ಮಾನಿಸಿದೆ. ಚಾರಣಗರಿಂದ ಮುಂಗಡ ಹಣ ಪಡೆದುಕೊಂಡು ಪ್ಲಾಸ್ಟಿಕ್ ಹಾಗೂ ಇತರ ಏಕಬಳಕೆಯ ವಸ್ತುಗಳನ್ನು ವಾಪಾಸು ತಂದಲ್ಲಿ ಮುಂಗಡ ಹಣ ವಾಪಾಸು ನೀಡಲಾಗುತ್ತದೆ. ಪರಿಸರ ಸಂರಕ್ಷಣೆಗೆ ಮೊದಲ ಆದ್ಯತೆಯಾಗಿ ಈ ರೀತಿಯ ಕಠಿಣ ಕ್ರಮದ ಅಗತ್ಯ ಇದೆ ಎಂದು ಈ ಬಗ್ಗೆ ಚಿಂತಿಸಲಾಗಿದೆ.
BANTWAL
ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ.
ವಿಟ್ಲ: ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಮೂಡಬಿದ್ರೆ ಆಳ್ವಾಸ್ ಕಾಲೇಜಿನ ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನದ ವಿದ್ಯಾರ್ಥಿಗಳಾದ ಸಂಜನಾ ರಜಪೂತ ಹಾಗೂ ಪಿ ಕೆ ವಿಕಾಸ್ ಯೋಗ ಮಾರ್ಗದರ್ಶಕರಾಗಿ ಆಗಮಿಸಿ, ಹಲವಾರು ಯೋಗದ ಆಸನಗಳನ್ನು ಪ್ರದರ್ಶಿಸಿ ಅದರ ಮಹತ್ವವನ್ನು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ್ ಶೆಟ್ಟಿ ಜೆ,ಶಾಲಾ ಪ್ರಾಂಶುಪಾಲರಾದ ರವೀಂದ್ರ ದರ್ಬೆ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಸಂಸ್ಥೆಯ ಸಹ ಶಿಕ್ಷಕಿಯರಾದ ಶೋಭಾ ಎಂ ಶೆಟ್ಟಿ ಹಾಗೂ ಜಯಶೀಲ ಕಾರ್ಯಕ್ರಮ ನಿರ್ವಹಿಸಿದರು.