bangalore
ಸಿನೆಮಾ ತಾರೆಯರ ಸ್ಮಾರಕಕ್ಕೆ ಸರಕಾರದ ದುಡ್ಡು, ಜಾಗ ಬಳಸಬಾರದು-ನಟ ಚೇತನ್ ಅಹಿಂಸಾ
ಬೆಂಗಳೂರು : ಚೇತನ್ ಅಹಿಂಸಾ ಈ ನಡುವೆ ಮಾಡುತ್ತಿರುವ ಅವಾಂತರ,ವಿವಾದಗಳು ಒಂದೆರಡಲ್ಲ. ಇದೀಗ ನಟ ವಿಷ್ಣುವರ್ಧನ್ ಸ್ಮಾರಕ ವಿಚಾರವಾಗಿ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.
ನಟ ವಿಷ್ಣುವರ್ಧನ್ ಕನ್ನಡದ ಅಭಿಮಾನಿಗಳನ್ನು ಅಗಲಿ ಮುಂದಿನ ಡಿಸೆಂಬರ್ 30ಕ್ಕೆ 14 ವರ್ಷ ತುಂಬಲಿದೆ. ಇದರ ನಡುವೆ ಬೆಂಗಳೂರಿನಲ್ಲಿ ಡಾ.ವಿಷ್ಣುವರ್ಧನ್ ಅವರ ಪುಣ್ಯಭೂಮಿ ನಿರ್ಮಾಣವಾಗಬೇಕು ಎನ್ನುವ ನಿಟ್ಟಿನಲ್ಲಿ ಹೋರಾಟ ಆರಂಭವಾಗಿದೆ.
ಈಗಾಗಲೇ ಮೈಸೂರಿನಲ್ಲಿ ವಿಷ್ಣವರ್ಧನ್ ಅವರ ಸ್ಮಾರಕ ಲೋಕಾರ್ಪಣೆಗೊಂಡಿದೆ.ಆದರೆ, ಅವರ ಅಂತ್ಯಸಂಸ್ಕಾರವಾದ ಸ್ಥಳವಾಗಿರುವ ಅಭಿಮಾನ್ ಸ್ಟುಡಿಯೋದಲ್ಲಿ 10 ಗುಂಟೆ ಜಾಗದಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕು ಎನ್ನುವುದು ಅವರ ಅಭಿಮಾನಿಗಳ ಒತ್ತಾಸೆಯಾಗಿದೆ. ಇದಕ್ಕೆ ಅಹಿಂಸಾ ಚೇತನ್ ಟ್ವೀಟ್ ಮಾಡಿ ವಿಷ್ಣು ಅಭಿಮಾನಿಗಳನ್ನು ಕೆಣಕಿದ್ದಾರೆ.
‘ಬೆಂಗಳೂರಿನಲ್ಲಿ ವಿಷ್ಣುವರ್ಧನ್ ಸಮಾಧಿ ಸ್ಥಳದಲ್ಲಿ ಅಭಿಮಾನಿಗಳ ಪ್ರಾಯೋಜಿತ ಸ್ಮಾರಕದ ಸಮಸ್ಯೆಯನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಉತ್ತಮವಾಗಿದೆ. 5 ಎಕರೆ, 11 ಕೋಟಿ ರೂಪಾಯಿ ವೆಚ್ಚದಲ್ಲಿ ಮೈಸೂರು ಸ್ಮಾರಕವನ್ನು ಈಗಾಗಲೇ ನಿರ್ಮಾಣ ಮಾಡಲಾಗಿದೆ. ಈಗ ಮತ್ತೊಮ್ಮೆ ತೆರಿಗೆದಾರರ ನಿಧಿ/ಸರ್ಕಾರಿ ಭೂಮಿಯನ್ನು ನೀಡಬಾರದು, ಇದು ಪ್ರಶ್ನಾರ್ಹವಾಗಿದೆ, ಏಕೆಂದರೆ ಯಾವುದೇ ಚಲನಚಿತ್ರ ತಾರೆಯರ ಸ್ಮಾರಕಗಳಿಗೆ ಸರ್ಕಾರದ ಹಣವನ್ನು ಬಳಸಬಾರದು.
ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ 10 ಗುಂಟೆ ಭೂಮಿ ಒದಗಿಸುವಂತೆ ಈಗಾಗಲೇ ಕರ್ನಾಟಕ ಹೈಕೋರ್ಟ್ ಹೇಳಿದೆ. ಆದರೆ, ರಾಜ್ಯ ಸರ್ಕಾರ ವಿಷ್ಣುವರ್ಧನ್ ಅವರ ಸಮಾಧಿ ವಿಚಾರದಲ್ಲಿ ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಂಡಿಲ್ಲ. ಅವರಿಗೆ ಅನ್ಯಾಯ ಮಾಡುತ್ತಲೇ ಬಂದಿದೆ. ಡಿ.30 ರಂದು ವಿಷ್ಣುವರ್ಧನ್ ಅವರ ಪುಣ್ಯಸ್ಮರಣೆ ನಡೆಯಲಿದೆ. ಇದೇ ಸಂದರ್ಭದಲ್ಲಿ ಭೂಮಿ ವಿವಾದವನ್ನು ಮುಕ್ತಾಯ ಮಾಡಬೇಕು ಎಂದು ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ನ ಅಧ್ಯಕ್ಷ ರಾಜುಗೌಡ ಹೇಳಿದ್ದರು. 2023ರ ಆಗಸ್ಟ್ 21 ರಂದೇ ಈ ಪ್ರಕರಣವನ್ನು ಹೈಕೋರ್ಟ್ ಇತ್ಯರ್ಥ ಮಾಡಿದೆ. ಸರ್ಕಾರ ಕೂಡಲೇ ಅಭಿಮಾನ್ ಸ್ಟುಡಿಯೋದ ಮಾಲೀಕರ ಜೊತೆ ಮಾತನಾಡಿ 10 ಗುಂಟೆ ಜಾಗದ ಪ್ರಕರಣವನ್ನು ಇತ್ಯರ್ಥ ಮಾಡಬೇಕು ಎಂದು ಅವರು ಟ್ವೀಟ್ ಮಾಡಿದ್ದಾರೆ.
bangalore
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ ಮುನ್ಸೂಚನೆ
ಬೆಂಗಳೂರು : ಬಿಸಿಲಿನ ಉರಿಗೆ ಜನರು ಬೆಂದು ಹೋಗಿದ್ದಾರೆ. ವರುಣ ಕೃಪೆ ತೋರಯ್ಯ ಎಂದು ಬೇಡಿಕೊಳ್ಳುತ್ತಿದ್ದಾರೆ. ಈ ನಡುವೆ ಅಲ್ಲಲ್ಲಿ ಮಳೆಯಾಗಿದ್ರೂ ಸೂರ್ಯ ತಾಪವೇನೂ ಕಮ್ಮಿಯಾಗಿಲ್ಲ. ಇದೀಗ 8 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ ?
ರಾಜ್ಯದ ಜನತೆ ಮಳೆರಾಯನಿಗಾಗಿ ಕಾಯುತ್ತಿದ್ದಾರೆ. ಹವಾಮಾನ ಇಲಾಖೆ ಕೆಲವು ಜಿಲ್ಲೆಗಳಿಗೆ ಶುಭ ಸುದ್ದಿ ನೀಡಿದೆ. ಏಪ್ರಿಲ್ 24ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಮೈಸೂರು, ಕೊಡಗು, ಹಾಸನ ಸೇರಿ 8 ಜಿಲ್ಲೆಗಳಲ್ಲಿ ಕೆಲವೆಡೆ ಮಳೆ ಬೀಳಬಹುದು ಎಂದು ಹೇಳಿದೆ.
ತಾಪಮಾನ ಹೆಚ್ಚಳ :
ಭಾರತೀಯ ಹವಾಮಾನ ಇಲಾಖೆ ದೇಶದ ಹಲವು ಭಾಗಗಳಲ್ಲಿ ಬಿಸಿಲಿನ ತಾಪ ತೀವ್ರವಾಗಲಿದೆ ಎಂದು ಕೂಡ ಮಾಹಿತಿ ನಡಿದೆ. ಅದರಲ್ಲೂ ಪೂರ್ವ ಮತ್ತು ದಕ್ಷಿಣ ಭಾರತದ ಹೆಚ್ಚಿನ ಭಾಗಗಳಲ್ಲಿ ಶಾಖದ ಅಲೆಗಳು ಹೆಚ್ಚಲಿವೆ ಎಂದಿದೆ. ಏಪ್ರಿಲ್ 25 ರ ವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಏಪ್ರಿಲ್ 27 ರ ವರೆಗೆ ಈ ಪ್ರದೇಶಗಳಲ್ಲಿ ಉಷ್ಣಾಂಶ 2 ರಿಂದ 2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ : ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಏಪ್ರಿಲ್ 6 ರಂದು ರಾಜಧಾನಿಯಲ್ಲಿ ಗರಿಷ್ಠ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದು ಎಂಟು ವರ್ಷಗಳಲ್ಲಿ ಅತಿ ಹೆಚ್ಚು ಎಂದು ವರದಿಯಾಗಿದೆ.
ಮುಂದಿನವಾರ ನಗರದಲ್ಲಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
bangalore
ಮಹಿಳೆಯ ಅತಿಯಾದ ಕಾಮದಾಹ…! ದಾಹಕ್ಕೆ ಅಂತ್ಯ ಹಾಡಿದ ಯುವಕ..!
ಬೆಂಗಳೂರು : ಆಕೆ 48 ವರ್ಷ ಪ್ರಾಯದ ಮಹಿಳೆಯಾಗಿದ್ದು, ತನ್ನಿಬ್ಬರು ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸಿ ಕೊಟ್ಟಿದ್ದಾಳೆ. ಬೆಂಗಳೂರಿನ ಕೊಡಿಗೆ ಹಳ್ಳಿಯಲ್ಲಿ ಮನೆ ಮಾಡಿಕೊಂಡು ಒಂಟಿಯಾಗಿದ್ದ ಆಕೆಯ ದೇಹ ನಗ್ನವಾಗಿ ಬೆಡ್ರೂಮಿನಲ್ಲಿ ಪತ್ತೆಯಾಗಿತ್ತು. ಎಪ್ರಿಲ್ 19 ರಂದು ನಡೆದಿದ್ದ ಈ ಘಟನೆಯನ್ನು ಭೇದಿಸಿದ ಪೊಲೀಸರಿಗೆ ಶಾಕ್ ಆಗುವಂತ ವಿಚಾರಗಳು ಗೊತ್ತಾಗಿದೆ.
ಕೊಡಿಗೆ ಹಳ್ಳಿಯ ಭದ್ರಪ್ಪ ಲೇಔಟ್ನಲ್ಲಿ ನಡೆದಿದ್ದ ಶೋಭಾ ಎಂಬ ಮಹಿಳೆಯ ಕೊ*ಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಕೊಲೆ ಆರೋಪಿಯಾಗಿರುವ ನವೀನ್ ಎಂಬ ಯುವಕನನ್ನು ಕೊಡಿಗೆ ಹಳ್ಳಿಯ ಪೊಲೀಸರು ಬಂದಿಸಿದ್ದಾರೆ. ವಿಚಾರಣೆ ವೇಳೆ ಬಾಯ್ಬಿಟ್ಟ ವಿಚಾರ ಕೇಳಿ ಪೊಲೀಸರೇ ಸುಸ್ತಾಗಿದ್ದಾರೆ. ಬಳಿಕ ಹೆಚ್ಚಿನ ತನಿಖೆ ನಡೆಸಿದ ಪೊಲೀಸರಿಗೆ ಶೋಭಾಳ ಕಾಮದಾಹ ಬೆಳಕಿಗೆ ಬಂದಿದೆ.
ಇದನ್ನೂ ಓದಿ ಗಂಡ-ಹೆಂಡತಿ ಬೇರೆ ಬೇರೆ ಮಲಗಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ?
ಶೋಭಾಳಿಗೆ ಇನ್ಸ್ಟಾಗ್ರಾಂ ಮೂಲಕ ಪರಿಚಿತನಾಗಿದ್ದ ನವೀನ್ ಬಳಿಕ ಸ್ನೇಹಿತನಾಗಿ, ಅದು ಪ್ರೀತಿಗೆ ತಿರುಗಿ ಬಳಿಕ ಇಬ್ಬರ ನಡುವೆ ಅನೈತಿಕ ಸಂಬಂಧದವರೆಗೂ ಬಂದು ನಿಂತಿತ್ತು. ಮಗನ ವಯಸ್ಸಿನ ಹುಡುಗನ ಜೊತೆಯಲ್ಲಿ ನಿರಂತರ ಸೆಕ್ಸ್ ಮಾಡುತ್ತಿದ್ದ ಶೋಭಾಳ ಅತಿಯಾದ ಕಾಮಧಾಹದಿಂದ ಬೇಸತ್ತು ಆಕೆಯನ್ನು ಕೊಲೆ ಮಾಡಿದ್ದಾಗಿ ಹೇರೋಹಳ್ಳಿ ಮೂಲದ ಆರೋಪಿ ನವೀನ್ ಹೇಳಿಕೆ ನೀಡಿದ್ದಾನೆ.
ಕೊಲೆ ನಡೆದ ದಿನವೂ ಶೋಭಾ ಮನೆಗೆ ನವೀನ್ ಬಂದಿದ್ದ. ಏ.19ರಂದು ಇಬ್ಬರು ದೈಹಿಕ ಸಂರ್ಪಕವನ್ನು ಬೆಳೆಸಿದ್ದರು. ಆ ನಂತರ ಶೋಭಾ ಮತ್ತೆ ನವೀನ್ಗೆ ಸೆಕ್ಸ್ಗೆ ಒತ್ತಾಯಿಸಿದ್ದು ನಿರಾಕರಿಸಿದಾಗ ಬ್ಲ್ಯಾಕ್ಮೇಲ್ ಮಾಡಿದ್ದಾಳೆ. ಈಕೆ ಅತಿಯಾಗಿ ಸೆಕ್ಸ್ಗೆ ಒತ್ತಾಯಿಸಿದ್ದಕ್ಕೆ ಬೇಸರಗೊಂಡ ನವೀನ್ ಬೆಡ್ ರೂಮಿನಲ್ಲೇ ಆಕೆಯ ಕಥೆ ಮುಗಿಸಿದ್ದ.
48ರ ಮಹಿಳೆಗೆ ಯುವಕರ ಮೇಲೆ ಹುಚ್ಚು
48ರ ಶೋಭಾ ಕೇವಲ ನವೀನ್ ಮಾತ್ರವಲ್ಲದೇ ಅನೇಕ ಯುವಕರ ಸಹವಾಸ ಬೆಳೆಸಿದ್ದಳು. ಒಬ್ಬೊಬ್ಬ ಹುಡುಗರಿಗೂ ಒಂದೊಂದು ಹಣ್ಣಿನ ಹೆಸರಿಟ್ಟಿದ್ದು, ನವೀನ್ಗೆ ಆ್ಯಪಲ್ ಎಂದು ಹೆಸರಿಟ್ಟಿದ್ದಳಂತೆ. ಆ್ಯಪಲ್, ಆರೆಂಜ್, ಬನಾನ ಹೆಸರಿನಲ್ಲಿ ಹುಡುಗರ ಹೆಸರು ಸೇವ್ ಮಾಡಿಕೊಳ್ಳುತ್ತಿದ್ದಳು. ಆ್ಯಪ್ಗಳಲ್ಲಿಯೂ ಆ್ಯಕ್ಟಿವ್ ಆಗಿದ್ದ ಶೋಭಾ ಸುಮಾರು 20 ಕ್ಕೂ ಹೆಚ್ಚು ಹುಡುಗರನ್ನು ಖೆಡ್ಡಾಗೆ ಬೀಳಿಸಿಕೊಂಡಿದ್ದಳು. ಈಕೆ ಕರೆದಾಗ ಯುವಕರು ಏನಾದರೂ ಬಾರದೆ ಇದ್ದರೆ ಅವರ ಮನೆ ಬಳಿಯೇ ಹೋಗುತ್ತಿದ್ದಳು. ನಂತರ ಕಾರಿನ ಹಾರ್ನ್ ಜೋರಾಗಿ ಹಾಕುತ್ತಿದ್ದಳು. ಇಷ್ಟಕ್ಕೂ ಜಗ್ಗದೆ ಹೋದರೆ ಮನೆಯವರಿಗೆ ಖಾಸಗಿ ಫೋಟೊವನ್ನು ತೋರಿಸುವುದಾಗಿ ಬೆದರಿಕೆ ಹಾಕುತ್ತಿದ್ದಳು. ಅಷ್ಟೇ ಅಲ್ಲದೆ ಆ ಯುವಕರ ಮದುವೆಗೂ ಅಡ್ಡಿ ಪಡಿಸಿ ಮದುವೆ ನಿಲ್ಲಿಸಿದ್ದಳು.
ಇದನ್ನೂ ಓದಿ ರಿಯಾಲಿಟಿ ಶೋಗಳಲ್ಲೂ ಕಾಸ್ಟಿಂಗ್ ಕೌಚ್! ಡ್ಯಾನ್ಸಿಂಗ್ ಕ್ವೀನ್ ಬಿಚ್ಚಿಟ್ಟ ಸತ್ಯವೇನು?
ಕೊಲೆಯಾದ ದಿನವೂ ನವೀನ್ಗೆ ಬ್ಲಾಕ್ ಮೇಲ್ ಮಾಡಿ ಕರೆಸಿಕೊಂಡಿದ್ದಳು. ನವೀನ್ ಎಡಗೈಗೆ ಗಾಯವಾಗಿತ್ತು, ಗಾಯದ ಮೇಲೆ ಕೂತು ನೀನು ಮದುವೆ ಆಗಬಾರದು, ಹೀಗೆ ನನ್ನ ಜತೆ ಇರಬೇಕು. ಮದುವೆ ಆದರೆ ಅಲ್ಲೆ ಬಂದು ಗಲಾಟೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಳು. ಇದರಿಂದ ಬೇಸತ್ತ ನವೀನ್, ಶೋಭಾಳ ಕತ್ತು ಹಿಸುಕಿ ಕೊ*ಲೆ ಮಾಡಿದ್ದಾಗಿ ವಿಚಾರಣೆ ವೇಳೆ ಹೇಳಿದ್ದಾನೆ.
bangalore
ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!
ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶಿಸಿ ಬಿಜೆಪಿ ಶಿಸ್ತು ಸಮಿತಿ ಈ ನಿರ್ಧಾರ ಕೈಗೊಂಡಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಕೆಎಸ್ ಈಶ್ವರಪ್ಪ, ತಮ್ಮ ನಾಮಪತ್ರವನ್ನು ಹಿಂಪಡೆಯಲು ನಿನ್ನೆ(ಎ.22) ಕೊನೆಯ ದಿನವಾಗಿತ್ತು. ಆದರೆ, ಈಶ್ವರಪ್ಪ ನಾಮಪತ್ರವನ್ನು ಹಿಂಪಡೆಯಲು ನಿರಾಕರಿಸಿದ ಕಾರಣ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ. ಆರು ವರ್ಷಗಳ ಕಾಲ ಅವರು ಬಿಜೆಪಿ ಪಕ್ಷದಡಿ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ.
ಮುಂದೆ ಓದಿ..; ಚೌಟ ಪರ ಪ್ರಚಾರಕ್ಕೆ ಪುತ್ತೂರಿಗೆ ಬರಲಿದ್ದಾರೆ ಅಣ್ಣಾಮಲೈ
ಬಿಜೆಪಿ ಪಕ್ಷದಲ್ಲೇ ಇದ್ದುಕೊಂಡ ಕೆ ಎಸ್ ಈಶ್ವರಪ್ಪ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡು ನಿಂದಿಸುತ್ತಿದ್ದರು. ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ರಾಜಕಾರಣವನ್ನು ಕೆ ಎಸ್ ಈಶ್ವರಪ್ಪ ತೀವ್ರವಾಗಿ ಟೀಕಿಸುತ್ತಿದ್ದರು. ತನ್ನ ಬೆಂಬಲ ಮೋದಿ ಪ್ರಧಾನಿಗೆ ಇದೆ ಎಂದು ಹೇಳಿಕೊಂಡಿದ್ದ ಈಶ್ವರಪ್ಪ ತಾನು ಗೆದ್ದ ಬಳಿಕ ಮೋದಿಗೆ ಬೆಂಬಲ ನೀಡುವುದಾಗಿ ಹೇಳಿಕೆ ನೀಡುತ್ತಿದ್ದರು. ಆದರೆ ಇದೀಗ ಪಕ್ಷದಿಂದಲೇ ಇವರನ್ನು ಉಚ್ಛಾಟಿಸಲಾಗಿದೆ.
- FILM7 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA7 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ