Connect with us

LATEST NEWS

Chikkaballapura: ಮಗನಿಗೆ ಬುದ್ಧಿವಾದ ಹೇಳಿದ ತಾಯಿ- ನೊಂದ ಯುವಕ ಆತ್ಮಹತ್ಯೆ..!

Published

on

ಯುವಕನೋರ್ವ ರಾತ್ರಿ ತಡವಾಗಿ ಬಂದ ಕಾರಣ ತಾಯಿ ಬುದ್ದಿವಾದ ಹೇಳಿದಕ್ಕೆ ನೊಂದ ಯುವಕ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವನಹಳ್ಳಿಯ ವಿಜಯಪುರ ಪಟ್ಟಣದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಯುವಕನೋರ್ವ ರಾತ್ರಿ ತಡವಾಗಿ ಬಂದ ಕಾರಣ ತಾಯಿ ಬುದ್ದಿವಾದ ಹೇಳಿದಕ್ಕೆ ನೊಂದ ಯುವಕ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವನಹಳ್ಳಿಯ ವಿಜಯಪುರ ಪಟ್ಟಣದಲ್ಲಿ ನಡೆದಿದೆ.

ಮೃತ ಯುವಕನನ್ನು ಉಜ್ವಲ್ (18) ಎಂದು ಗುರುತಿಸಲಾಗಿದೆ.

ಉಜ್ವಲ್ ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣನಗೊಂಡ ಬಳಿಕ ಆತ ಮನೆಯಲ್ಲಿ ಮೌನವಾಗಿದ್ದು, ಹೆಚ್ಚಾಗಿ ಮೊಬೈಲ್‍ನಲ್ಲೇ ಕಾಲ ಕಳೆಯುತ್ತಿದ್ದ.

ಹಾಗಾಗಿ ಅನೇಕ ಬಾರಿ ತಾಯಿ ಬುದ್ದಿವಾದ ಹೇಳುತ್ತಿದ್ದರು.

ಉಜ್ವಲ್ ಬುಧವಾರದಂದು ರಾತ್ರಿ ಮನೆಗೆ ತಡವಾಗಿ ಬಂದ ಕಾರಣ ತಾಯಿ ಎಲ್ಲಿಗೆ ಹೋಗಿದ್ದೆ ಎಂದು ಪ್ರಶ್ನಿಸಿ ಬುದ್ದಿವಾದ ಹೇಳಿದ್ದರು.

ಬಳಿಕ ಆತ ರಾತ್ರಿ ಊಟ ಮಾಡಿ, ತನ್ನ ಕೋಣೆಯ ಒಳಗೆ ಹೋಗಿದ್ದ.

ಬೆಳಗ್ಗೆ 7 ಗಂಟೆಯಾದರೂ ಬಾಗಿಲು ತೆರೆಯದಿದ್ದಾಗ ಯುವಕನ ಸಹೋದರ ಬಾಗಿಲು ಬಡಿದಿದ್ದಾನೆ.

ಬಳಿಕ ಬೀಗ ಹಾಕುವ ರಂಧ್ರದಲ್ಲಿ ಇಣುಕಿ ನೋಡಿದಾಗ ನೇಣು ಬಿಗಿದು ಕೊಂಡಿರುವುದು ಕಂಡು ಬಂದಿದೆ.

ಕೂಡಲೇ ಸಹೋದರನು ತನ್ನ ಮಾವಂದಿರಿಗೆ ಮಾಹಿತಿ ನೀಡಿ, ಅಕ್ಕಪಕ್ಕದವರನ್ನು ಕರೆದು ಬಾಗಿಲು ತೆರೆಯಲು ಪ್ರಯತ್ನ ಮಾಡಿದ್ದಾರೆ.

ಒಳಗಿನಿಂದ ಲಾಕ್ ಮಾಡಿದ್ದ ಕಾರಣ ತೆರೆಯಲು ಸಾಧ್ಯವಾಗಿಲ್ಲ. ಬಳಿಕ ಬಾಗಿಲನ್ನು ಒಡೆದಿದ್ದಾರೆ.

ಈ ವೇಳೆ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಸಂಬಂಧ ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LATEST NEWS

ಜಮೀನಿಗೆ ಬಂದ ಹಸುಗಳಿಗೆ ನಾಡಕೋವಿಯಿಂದ ಶೂಟೌಟ್‌- 4 ಹಸುಗಳು ಸಾವು, 6 ಹಸುಗಳಿಗೆ ಗಾಯ..!

Published

on

ಉಡುಪಿ: ಜಮೀನಿಗೆ ಬಂದ ಹಸುಗಳಿಗೆ ನಾಡಕೋವಿಯಿಂದ ಶೂಟ್ ಮಾಡಿದರಲ್ಲಿ ನಾಲ್ಕು ಹಸುಗಳು ಸಾವನ್ನಪ್ಪಿದ್ದು, ಆರು ಹಸುಗಳಿಗೆ ಗಾಯಗಳು ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನಲ್ಲಿ ನಡೆದಿದೆ.

ಬೈಂದೂರು ತಾಲೂಕಿನ ಬೆಳ್ಳಾಲ ಗ್ರಾಮದ ಅಂಗಡಿ ಜಡ್ಡು ಪರಿಸರದಲ್ಲಿ ಈ ಅಮಾನವೀಯ ಕೃತ್ಯ ನಡೆದಿದ್ದು, ಸ್ಥಳೀಯ ನಿವಾಸಿ ನರಸಿಂಹ ಎಂಬಾತನ ಮೇಲೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೂಟೌಟ್‌ ನಿಂದ ಗುಲಾಬಿ ಎಂಬ ಮಹಿಳೆಯ ಎರಡು ಹಸುಗಳು ಸಾವನ್ನಪ್ಪಿದ್ದು, ಆರು ಹಸುಗಳಿಗೆ ಗಾಯಗಳಾಗಿವೆ.

ಗಾಯಗೊಂಡ ದನಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ನಾಡ ಕೋವಿಯಿಂದ ಗುಂಡು ಹಾರಿಸಿದ್ದು, ಈವರೆಗೆ ಒಟ್ಟು ನಾಲ್ಕು ಹಸುಗಳು ಸಾವನ್ನಪ್ಪಿವೆ.

ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ನರಸಿಂಹ ನಾಪತ್ತೆಯಾಗಿದ್ದಾನೆ.

ಹಸುಗಳ ಮಾಲಕರಿಗೆ ಆರೋಪಿ ನರಸಿಂಹ ಜೀವ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ.

ಮೃತ ಹಸುಗಳನ್ನು ಸ್ಥಳೀಯರು ಸೇರಿ ದಫನ ಮಾಡಿದ್ದರು.

ಇಂದು ಪೊಲೀಸರು ಮತ್ತು ಇತರ ಅಧಿಕಾರಿಗಳ ಸಮಕ್ಷಮ ಹಸುಗಳ ಮೃತ ದೇಹಗಳನ್ನು ಮೇಲಕ್ಕೆತ್ತಿ ಮಹಜರು ನಡೆಸಲಾಯಿತು.

Continue Reading

DAKSHINA KANNADA

ಕಿನ್ನಿಗೋಳಿಯಲ್ಲಿ ಮುಸ್ಲಿಂ ಯುವಕನ ಮೇಲೆ ದೈವ ಆವೇಶ- ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂತು ಮಹತ್ವದ ಸತ್ಯ..!

Published

on

ಕಿನ್ನಿಗೋಳಿ: ಒರಿಸ್ಸಾ ಮೂಲದ ಮುಸ್ಲಿಂ ಯುವಕನು  ಪೆರ್ಮುದೆಯಲ್ಲಿನ ಚಾಮುಂಡಿ ದೈವಸ್ಥಾನದ ಕೆಲಸ ನಿರ್ವಹಿಸುವ ಸಂದರ್ಭ ಏಕಾಏಕಿ ಈತನಿಗೆ ದೈವ ಆವೇಶವಾದ ಘಟನೆ ಮಂಗಳೂರಿನ ಕಿನ್ನಿಗೋಳಿಯಲ್ಲಿ ನಡೆದಿದೆ.

ಕಳೆದ ಎರಡು ತಿಂಗಳ ಹಿಂದೆ ದೈವಸ್ಥಾನಕ್ಕೆ ಸಂಬಂಧಪಟ್ಟ ತಡೆಗೋಡೆ ನಿರ್ಮಿಸುವ ಸಂದರ್ಭ ಒರಿಸ್ಸಾ ಮೂಲದ ಯುವಕನ ಮೈಯಲ್ಲಿ ದೈವ ಅವೇಷ ಬಂದಿದ್ದು, ಪ್ರಶ್ನಾ ಚಿಂತನೆಯಲ್ಲಿ ಕಂಡುಕೊಂಡಾಗ ಇದು ಜಿಲ್ಲೆಯ ಪ್ರತಿಷ್ಟಿತ ಕಂಪನಿಯಾದ ಎಂ.ಆರ್.ಪಿ.ಎಲ್ ನಿಂದ ಬಂದ ಸಮಸ್ಯೆ ಎಂದು ಕಂಡು ಬಂದಿದೆ.

ಕಳೆದ ಮೂರು ದಶಕಗಳ ಹಿಂದೆ, ಪ್ರತಿಷ್ಠಿತ ಎಂ.ಆರ್,ಪಿ,ಎಲ್ ಕಂಪನಿಗಾಗಿ ಜಮೀನು ಭೂಸ್ವಾಧೀನಗೊಂಡಿದ್ದು, ಆ ಸಂದರ್ಭ ಅಲ್ಲಿದ್ದ ಪಿಲಿಚಾಮುಂಡಿ ದೈವಸ್ಥಾನ ಹಾಗೂ ಕೊಡಮಣಿತ್ತಾಯ ದೈವಸ್ಥಾನ ಪುನರ್ವಸತಿ ಪ್ರದೇಶದಲ್ಲಿನ ಅಂದರೆ ಪೆರ್ಮುದೆ ಸೋಮನಾಥ ಧಾಮಕ್ಕೆ ಸ್ಥಳಾಂತರಗೊಂಡು ಕಾಲ ಕಾಲಕ್ಕೆ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿತ್ತು.

ಪೆರ್ಮುದೆ ಗ್ರಾಮಕ್ಕೆ ಸಂಬಂಧಿಸಿ ದೈವಗಳ ನಾಲ್ಕು ಗಡು ಇದ್ದು, ಪ್ರಸುತ್ತ ಕಾಯರ್ ಕಟ್ಟೆ ಎಂಬುದು ಕುತ್ತೆತ್ತೂರು ಗ್ರಾಮದ ಪೆರ್ಮುದೆ ಗಡುವಾಗಿದೆ.

ಈ ಗಡು ಸ್ಥಳದಲ್ಲಿ ನಡೆಯುತ್ತಿದ್ದ ದೈವಾರಾಧನೆ ಪ್ರಕ್ರಿಯೆಗಳು ಕಳೆದ 18 ವರ್ಷಗಳಿಂದ ಸ್ಥಗಿತಗೊಂಡಿದೆ.

ಭೂಸ್ವಾಧೀನಗೊಂಡ ಮತ್ತು ಎಂ ಆರ್ ಪಿ ಎಲ್ ಗೆ ಹತ್ತಿರವಾದ ಕಾರಣ ಇಲ್ಲಿ ನೇಮ ನಡೆಸಲು ಆಸಾದ್ಯವಾಗಿತ್ತು.

ಇಲ್ಲಿನ ಬೌಗೋಳಿಕ ಸ್ಥಿತಿಗತಿಗಳೂ ಇದಕ್ಕೆ ಪ್ರಮುಖ ಕಾರಣವಾಗಿತ್ತು.

ನೇಮ ಸ್ಥಗಿತಗೊಂಡ ನಂತರದ ಕಾಲದಲ್ಲಿ ಗ್ರಾಮ ವ್ಯಾಪ್ತಿಯಲ್ಲಿ ಮತ್ತು ಕಂಪನಿ ವ್ಯಾಪ್ತಿಯಲ್ಲಿ ದೋಷ ದೃಷ್ಟಾಂತ ಕಂಡು ಬರಲು ಪ್ರಾರಂಭವಾಯಿತು.

ಪಿಲಿಚಂಡಿ ದೈವಸ್ಥಾನದ ವಾರ್ಷಿಕ ನೇಮೋತ್ಸವ ಸಂದರ್ಭ ಕಾಯರ್ ಕಟ್ಟೆ ಗಡು ಸ್ಥಳದಲ್ಲಿ ನಡೆಯುತ್ತಿದ್ದ ಕಾರ್ಯಗಳು ಯಥಾ ಪ್ರಕಾರ ಮುಂದುವರಿದರೆ ಮಾತ್ರ ದೋಷಗಳಿಗೆ ಪರಿಹಾರ ಎಂಬ ದೈವದ ನುಡಿಯಾಯಿತ್ತು.

ಈ ಪ್ರಕರಣದ ಬಗ್ಗೆ ಗ್ರಾಮಸ್ಥರು ಸಮಾಲೋಚನೆ ನಡೆಸಿ ದೈವ ಸಾನಿದ್ಯಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಸುವ ಮೂಲಕ ದೈವದ ನುಡಿಯ ಬಗ್ಗೆ ಸಂಕಲ್ಪ ಮಾಡಲಾಯಿತು.

ದೈವಾರಧನೆಯಲ್ಲಿ ಮೂಲ ಸ್ವರೂಪ ಕಳೆದುಕೊಂಡ ಕಾರಣದಿಂದಾಗಿ ಎಂ.ಆರ್.ಪಿ.ಎಲ್ ಸಹಿತ ಇತರ ಕೈಗಾರಿಕೆಗಳಿಗೂ ಕೂಡ ಹಲವು ದೋಷ ಕಂಡುಬಂದಿದ್ದು, ಪರಿಹಾರ ಪ್ರಾಯಶ್ಚಿತಕ್ಕಾಗಿ ಕಂಪನಿಯವರು ಕಂಪನಿ ಒಳಗೆ ಚಾಮುಂಡಿ ದೇವಸ್ಥಾನ ನಿರ್ಮಿಸಿ ಅರ್ಚಕರನ್ನು ನೇಮಿಸಿ ತ್ರಿಕಾಲ ಪೂಜೆ ಮಾಡಲಾಗುತ್ತಿದೆ.

ಕಂಪನಿಗಾಗಿ ಭೂಸ್ವಾಧೀನಗೊಂಡ ಕಾರಣ ಈ ಅವ್ಯವಸ್ಥೆಗಳು ಎದುರಾಗಿರುವುದರಿಂದ, ನೇಮೋತ್ಸವಕ್ಕೆ ಸೂಕ್ತವಾಗುವ ರೀತಿಯಲ್ಲಿ ಸ್ಥಳವನ್ನು ಜೀರ್ಣೋದ್ದಾರಗೊಳಿಸುವ ಕಾರ್ಯದಲ್ಲಿ ಕಂಪನಿಯೇ ಮೇಲುಸ್ತುವಾರಿ ವಹಿಸಬೇಕು ಅಲ್ಲದೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕೆಂಬುದು ಗ್ರಾಮಸ್ಥರ ಬೇಡಿಕೆಯಾಗಿದ್ದು, ಕಂಪನಿಯ ನಿಯಮ ನಿಬಂಧನೆಗಳಿಗೆ ಬದ್ದರಾಗಿ ನೇಮೋತ್ಸವ ನಡೆಸಲಾಗುವುದು ಎಂಬುದು ಗ್ರಾಮಸ್ಥರ ಅಭಿಪ್ರಾಯ.

ಒಟ್ಟಿನಲ್ಲಿ ಈ ಪ್ರಕರಣಕ್ಕೆ ಸಾಕಷ್ಟು ಮಹತ್ವ ಬಂದಿದ್ದು ಕಂಪನಿ ಹೇಗೆ ಪ್ರತಿಕ್ರಿಯೆ ನೀಡುತ್ತದೆ ಎಂಬುದು ಕಾದು ನೋಡಬೇಕಾಗಿದೆ.

 

Continue Reading

DAKSHINA KANNADA

Mangaluru: ಎಂಡೋ ಪೀಡಿತರಿಗೆ 1 ಕೋ.ರೂ. ನೆರವು ನೀಡಿದ ಎಂ.ಆರ್‌.ಪಿ.ಎಲ್‌. ಸಂಸ್ಥೆ

Published

on

ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್‌ ಪೆಟ್ರೋ ಕೆಮಿಕಲ್ಸ್ ಲಿಮಿಟೆಡ್- ಎಂ.ಆರ್‌.ಪಿ.ಎಲ್‌. ಸಂಸ್ಥೆಯು ದಕ್ಷಿಣ ಕನ್ನಡ ಜಿಲ್ಲೆಯ ಎಂಡೋ ಸಲ್ಫಾನ್‌ ಪೀಡಿತ ರೋಗಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಒಂದು ಕೋಟಿ ರೂಪಾಯಿ ಸಹಾಯ ಧನ ನೀಡಲು ಮುಂದಾಗಿದೆ.

ಈ ಕುರಿತಂತೆ ಆಶಯ ಪತ್ರವನ್ನು ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಎಂ.ಆರ್‌.ಪಿ.ಎಲ್‌. ಕಂಪೆನಿಯ ಎಕ್ಸಿಕ್ಯೂಟಿವ್‌ ಡೈರೆಕ್ಟರ್‌ ಶ್ಯಾಮ್‌ ಪ್ರಸಾದ್‌ ಕಾಮತ್‌ ಮುಂಡ್ಕೂರು ಅವರು  ಅವರಿಗೆ ಹಸ್ತಾಂತರಿಸಿದರು.

ಎಂ.ಆರ್‌.ಪಿ.ಎಲ್‌. ಸಂಸ್ಥೆಯು ತನ್ನ ಸಿ.ಎಸ್‌.ಆರ್‌. ನಿಧಿಯಿಂದ ಒಂದು ಕೋಟಿ ರೂಪಾಯಿ ನೆರವನ್ನು ಜಿಲ್ಲೆಯ ಅರೋಗ್ಯ ಇಲಾಖೆಗೆ ನೀಡಲಿದ್ದು, ಈ ಮೊತ್ತವನ್ನು ವಿಟ್ಲ, ಸುಳ್ಯ, ಬೆಳ್ತಂಗಡಿ, ಪುತ್ತೂರು, ಮತ್ತು ಮೂಡುಬಿದಿರೆ ತಾಲೂಕುಗಳಲ್ಲಿರುವ ಎಂಡೋ ಪೀಡಿತರ ಪುನರ್ವಸತಿ ಕೇಂದ್ರಗಳಿಗೆ ವೈದ್ಯಕೀಯ ವ್ಯವಸ್ಥೆಗಳಿಗಾಗಿ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ.

ಪ್ರಮುಖವಾಗಿ ನಾಲ್ಕು ಸಂಚಾರಿ ವೈದ್ಯಕೀಯ ವಾಹನಗಳು, ಫಿಸಿಯೋಥೆರಪಿ ಉಪಕರಣಗಳು, ಹಾಸಿಗೆ ಹಿಡಿದ ರೋಗಿಗಳನ್ನು ಪುನರ್ವಸತಿ ಕೇಂದ್ರಗಳಿಗೆ ಕರೆದೊಯ್ಯಲು ಮತ್ತು ವಾಪಸ್ ಕರೆತರಲು 2 ವಾಹನ ಖರೀದಿಸಲು, ಕೊಯಿಲ ಮತ್ತು ಕೊಕ್ಕಡಗಳಲ್ಲಿ ಇರುವ ಪುನರ್ವಸತಿ ಕೇಂದ್ರಗಳಿಗೆ ಎರಡು ಡೀಸೆಲ್‌ ಜನರೇಟರ್‌ ಕೊಂಡುಕೊಳ್ಳಲು ಇದನ್ನು ವಿನಿಯೋಗಿಲಾಗುತ್ತದೆ.

ಆಶಯ ಪತ್ರವನ್ನು ಸ್ವೀಕರಿಸಿದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ತಿಮ್ಮಯ್ಯ ಅವರು ನೆರವು ನೀಡಲು ಮುಂದಾಗಿರುವ ಎಂ.ಆರ್‌.ಪಿ.ಎಲ್‌. ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.

ಈ ಕೊಡುಗೆಯಿಂದ ಜಿಲ್ಲೆಯಲ್ಲಿರುವ 4 ಸಾವಿರಕ್ಕೂ ಅಧಿಕ ಎಂಡೋ ಸಲ್ಫಾನ್‌ ಪೀಡಿತರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯ ಪಟ್ಟರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ತಿಮ್ಮಯ್ಯ, ಎಂಡೋ ಸಲ್ಫಾನ್‌ ಪೀಡಿತರ ಆರೋಗ್ಯ ವಿಭಾಗದ ನೋಡಲ್‌ ಅಧಿಕಾರಿ ಡಾ. ನವೀನ್‌ ಚಂದ್ರ ಕುಲಾಲ್‌, ಎಂ.ಆರ್‌.ಪಿ.ಎಲ್‌. ಚೀಫ್‌ ಜನರಲ್‌ ಮ್ಯಾನೇಜರ್‌ ಮನೋಜ್‌ ಕುಮಾರ್‌ ಎ., ಎಚ್ ಅರ್‌ ವಿಭಾಗದ ಜಿ.ಜಿ.ಎಂ. ಕೃಷ್ಣ ಹೆಗ್ಡೆ ಅವರು ಉಪಸ್ಥಿತರಿದ್ದರು.

Continue Reading

LATEST NEWS

Trending