BELTHANGADY
ಬೆಳ್ತಂಗಡಿ: ವಿಜೃಂಭಣೆಯಿಂದ ಜರುಗಿದ ಮಕ್ಕಳ ‘ಭಕ್ತಿಹೆಜ್ಜೆ’ ಕುಣಿತ ಭಜನೋತ್ಸವ
ಬೆಳ್ತಂಗಡಿ: ಭಕ್ತಿ ಹೆಜ್ಜೆ ಭ್ರಾಮರಿ ಮಕ್ಕಳ ಕುಣಿತ ಭಜನಾ ಮಂಡಳಿ ಗುರುವಾಯನಕೆರೆ ಆಶ್ರಯದಲ್ಲಿ ದ.ಕ ಜಿಲ್ಲೆಯ ಆಹ್ವಾನಿತಾ ಭಜನಾ ಮಂಡಳಿಗಳಿಂದ ‘ನಮ್ಮ ಮನೆ ಹವ್ಯಕ ಭವನ’ ಬೆಳ್ತಂಗಡಿಯ ಗುರುವಾಯನಕೆರೆಯಲ್ಲಿ “ಭಕ್ತಿ ಹೆಜ್ಜೆ” ಕುಣಿತ ಭಜನೋತ್ಸವ ಇತ್ತೀಚೆಗೆ ಅತೀ ವಿಜೃಂಭಣೆಯಿಂದ ಜರುಗಿತು.
ಡಾ. ವೇಣು ಗೋಪಾಲ ಶರ್ಮ ಕುಣಿತ ಭಜನೋತ್ಸವನ್ನು ಉದ್ಘಾಟನೆ ಮಾಡಿದರು. ಹಲವು ಭಜಕರ ಮತ್ತು ಭ್ರಾಮರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಸಹಕಾರದೊಂದಿಗೆ ವಿಜೃಂಭಣೆಯಿಂದ ಜರುಗಿತು.
ಈ ಭಜನಾ ಮಹೋತ್ಸವದಲ್ಲಿ ತಾಲೂಕಿನ ಎಲ್ಲಾ ಧಾರ್ಮಿಕ ಮುಖಂಡರು, ರಾಜಕೀಯ ಮುಖಂಡರು, ಹಾಗೂ ಸಾಮಾಜಿಕ ಮುಖಂಡರುಗಳು ಆಗಮಿಸಿ ತನು, ಮನ,ಧನಗಳ ಸಹಕಾರವನ್ನು ನೀಡಿ ಭಕ್ತಿ ಹೆಜ್ಜೆಯ ವೈಭವಕ್ಕೆ ಸಾಕ್ಷಿಯಾದರು.
ಕಾರ್ಯಕ್ರಮದಲ್ಲಿ ಸಂಯೋಜಕರು ಹಾಗೂ ಭಜನಾ ತರಬೇತಿದಾರರಾದ ಶ್ರೀಯುತ ಸಂದೇಶ್ ಮದ್ದಡ್ಕ ಹಾಗೂ ಶ್ರೀಯುತ ಅಶೋಕ್ ಕಳಸ ಬೈಲುರವರಿಗೆ ಪೋಷಕರು ಮತ್ತು ಭಜಕ ಮಕ್ಕಳು ಗುರುವಂದನೆ ಸಲ್ಲಿಸಿದರು.
ಭಕ್ತಿಹೆಜ್ಜೆಯಲ್ಲಿ ಭಾಗಿಯಾದ ಮಂಡಳಿಯ ಭಜಕರನ್ನು ಭ್ರಾಮರಿ ಮಂಡಳಿಯ ಪುಟ್ಟ ಮಕ್ಕಳು ಹಣೆಗೆ ತಿಲಕವಿತ್ತು ಸಾಂಪ್ರದಾಯಿಕ ವಾಗಿ ಸ್ವಾಗತಿಸಿ ಸಂಸ್ಕಾರ ಸಂಸ್ಕೃತಿಯನ್ನು ಉಳಿಸುವ ಕಾಯಕಕ್ಕೆ ಮುನ್ನುಡಿ ಬರೆದರು.
ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಸಹಕಾರದೊಂದಿಗೆ ಬೆಳಗ್ಗೆ 7ರಿಂದ ರಾತ್ರಿ8ಗಂಟೆಯ ವರೆಗೂ ಊಟ, ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿತ್ತು. ಸಾವಿರಾರು ಭಕ್ತರು ಅನ್ನ ಪ್ರಸಾದ ಸೇವಿಸಿದರು.
ಭ್ರಾಮರಿ ಮಕ್ಕಳ ಭಜನಾ ಮಂಡಳಿಯ ಉದ್ಘಾಟಕರು, ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜಾ ರವರು ಮಂಡಳಿಗೆ ದೀಪವನ್ನು ಕೊಡುಗೆಯಾಗಿ ನೀಡುವ ಮೂಲಕ ಕಾರ್ಯಕ್ರಮದ ಮಂಗಳ ಕಾರ್ಯದಲ್ಲಿ ಭಾಗಿಯಾದರು.
ಭಜನಾ ಮಂಡಳಿಯ ಭಕ್ತಿ ಹೆಜ್ಜೆಯ ಕಾರ್ಯಕ್ರಮ ನಿರೂಪಣೆಯನ್ನು ಭಜನಾ ತರಬೇತುದಾರ ವಿ ಹರೀಶ್ ನೆರಿಯ ರವರು ನಿರ್ವಹಿಸಿದರು.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
BANTWAL
ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.
ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ
ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.
BELTHANGADY
ಬೆಳ್ತಂಗಡಿ: ಕೆರೆಗೆ ಬಿದ್ದು ಕಾಡುಕೋಣ ಸಾ*ವು.. ಸಾರ್ವಜನಿಕರಿಂದ ಅಂತ್ಯಸಂಸ್ಕಾರ
ಬೆಳ್ತಂಗಡಿ: ಇಲ್ಲಿನ ಬೆಳಾಲು ಗ್ರಾಮಕ್ಕೆ ಸಂಬಂಧಪಟ್ಟಂತೆ ಕೊಯ್ಯೂರು ರಸ್ತೆಯ ಬದ್ಯಾರು ಎಂಬಲ್ಲಿ ಹೆಚ್ ಪದ್ಮಗೌಡ ಎಂಬವರ ತೋಟದ ಕೆರೆಯಲ್ಲಿ ಬೃಹತ್ ಗಾತ್ರದ ಕಾಡುಕೋಣದ ಮೃತ*ದೇಹ ಪತ್ತೆಯಾಗಿದೆ.
ಮುಂದೆ ನೋಡಿ..; ಆರು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸದಂತೆ ಕೆಎಸ್ ಈಶ್ವರಪ್ಪ ಬಿಜೆಪಿ ಪಕ್ಷದಿಂದ ಉಚ್ಛಾಟನೆ..!
ಈ ಕೆರೆಗೆ ಸುತ್ತ ಕಾಂಕ್ರೀಟ್ ರಿಂಗ್ ಅಳವಡಿಸಿದ್ದು ನೀರು ಕುಡಿಯಲು ಬಂದ ಕಾಡುಕೋಣ ಮೂರ್ನಾಲ್ಕು ದಿನಗಳ ಹಿಂದೆಯೇ ಬಿದ್ದು ಸಾವನ್ನಪ್ಪಿರುವ ಸಾಧ್ಯತೆ ಇದೆ. ಹೆಚ್ಚೂ ಕಮ್ಮಿ 10 ಕ್ವಿಂಟಾಲ್ ತೂಕ ಹೊಂದಿರಬಹುದೆಂದು ಅಂದಾಜಿಸಲಾಗಿದ್ದು, ಕೊಳೆತು ವಾಸನೆ ಬೀರುತ್ತಿತ್ತು. ಶೌರ್ಯ ವಿಪತ್ತು ತಂಡಕ್ಕೆ ಬಂದ ಮಾಹಿತಿಯಂತೆ ಉಜಿರೆ- ಬೆಳಾಲು ಘಟಕದ ಸಂಯೋಜಕ ಸುಲೈಮಾನ್ ಬೆಳಾಲು, ಮುಳುಗು ಪರಿಣತ ಹರೀಶ ಕೂಡುಗೆ, ಮುಹಮ್ಮದ್ ಶರೀಫ್ ಬೆಳಾಲು, ಅವಿನಾಶ್ ಭಿಡೆ ಅರಸಿಮನಕ್ಕಿ, ರವೀಂದ್ರ ಉಜಿರೆ, ಸುರೇಂದ್ರ ಉಜಿರೆ, ಅನಿಲ್ ಚಾರ್ಮಾಡಿ, ಶೌರ್ಯ ಘಟಕದ ಮಾಸ್ಟರ್ ಪ್ರಕಾಶ್ ಧರ್ಮಸ್ಥಳ, ನಳಿನ್ ಕುಮಾರ್ ಧರ್ಮಸ್ಥಳ ಮೊದಲಾದವರು ಸಾರ್ವಜನಿಕರ ನೆರವಿನೊಂದಿಗೆ ಕಾರ್ಯಾಚರಣೆ ನಡೆಸಿ ಕಾಡುಕೋಣದ ಕಳೇಬರವನ್ನು ಮೇಲೆತ್ತಿದ್ದಾರೆ. ಬಳಿಕ ಪಶುವೈದ್ಯಾಧಿಕಾರಿ ಮರಣೋತ್ತರ ಪರೀಕ್ಷೆ ಪ್ರಕ್ರೀಯೆ ನಡೆಸಿದ್ದು, ತೋಟದಲ್ಲೇ ಹೊಂಡ ತೋಡಿ ಅಂತ್ಯಸಂಸ್ಕಾರ ನಡೆಸಲಾಗಿದೆ.
- FILM5 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA5 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- bangalore7 days ago
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ ಮುನ್ಸೂಚನೆ
- LATEST NEWS7 days ago
ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!