Connect with us

    LATEST NEWS

    ಈ ದೇವಸ್ಥಾನದಲ್ಲಿ ಪ್ರಸಾದ ರೂಪದಲ್ಲಿ ನೀಡಲಾಗುತ್ತೆ ಚೈನೀಸ್ ನೂಡಲ್ಸ್! ಇದರ ಹಿಂದಿನ ಕಥೆ ಏನು ಗೊತ್ತಾ!?

    Published

    on

    ಮಂಗಳೂರು/ಕೊಲ್ಕತ್ತಾ : ಭಾರತದಲ್ಲಿ ಲಕ್ಷಗಟ್ಟಲೆ ದೇವಾಲಯಗಳಿವೆ. ಪ್ರತಿಯೊಂದು ದೇವಾಲಯದಲ್ಲೂ ಅದರದೇ ಆದ ವಿಶೇಷ ಆಚರಣೆಗಳಿವೆ. ಧಾರ್ಮಿಕ ಆಚರಣೆಗಳೂ ವಿಭಿನ್ನ ಆಗಿರುತ್ತವೆ. ಪ್ರಸಾದ ರೂಪದಲ್ಲಿ ದೇವಸ್ಥಾನಗಳಲ್ಲಿ ಅನ್ನ, ಪೊಂಗಲ್, ಲಡ್ಡು, ಪಂಚಕಜ್ಜಾಯ ಹೀಗೆ ನೀಡೋದು ಸಾಮಾನ್ಯ. ಆದ್ರೆ, ಇಲ್ಲೊಂದು ದೇಗುಲದಲ್ಲಿ ನೂಡಲ್ಸ್ ಅನ್ನು ಪ್ರಸಾದ ರೂಪದಲ್ಲಿ ನೀಡ್ತಾರೆ ಅಂದ್ರೆ ನೀವು ನಂಬಲೇಬೇಕು.

    ಈ ಪುರಾತನ ದೇಗುಲದಲ್ಲಿ ಪ್ರಸಾದ ‘ನೂಡಲ್ಸ್’ :


    ಸಾಮಾನ್ಯವಾಗಿ ನೂಡಲ್ಸ್ ಅಂದ್ರೆ ಚೈನೀಸ್ ಫುಡ್. ಅದನ್ನು ಈ ದೇವಾಲಯದಲ್ಲಿ ಪ್ರಸಾದವಾಗಿ ನೀಡ್ತಾರೆ. ಇದೊಂದು ಆಶ್ಚರ್ಯಕರ ಸಂಗತಿಯೂ ಹೌದು. ಪ್ರಸಾದ ರೂಪದಲ್ಲಿ ಲಡ್ಡು, ಪುಳಿಯೊಗರೆ ಸ್ವೀಕರಿಸೋರಿಗೆ ಇದು ಅಚ್ಚರಿ ಅಲ್ಲದೇ ಮತ್ತೇನು ಅಲ್ವಾ?
    ಅಂದಹಾಗೆ, ಈ ದೇವಾಲಯ ಇರೋದು ಕೋಲ್ಕತ್ತಾದಲ್ಲಿ. ಇಲ್ಲಿನ ಕಾಳಿ ಮಾತಾ ದೇವಾಲಯದಲ್ಲಿ ಈ ಸಂಪ್ರದಾಯವಿದೆ. ಇಲ್ಲಿ ಪ್ರಸಾದ ರೂಪದಲ್ಲಿ ನೂಡಲ್ಸ್ ನೀಡಲಾಗುತ್ತೆ. ಕೊಲ್ಕತ್ತಾದಲ್ಲಿನ ಒಂದು ಸಣ್ಣ ಟ್ಯಾಂಗ್ರಾ ಪ್ರದೇಶದಲ್ಲಿ ಈ ಒಂದು ಸಂಪ್ರದಾಯ ಕಾಣಬಹುದಾಗಿದೆ. ವಿಶೇಷ ಅಂದ್ರೆ ಈ ಪ್ರದೇಶ ಚೀನಿ ಹಾಗೂ ಭಾರತದ ಸಂಸ್ಕೃತಿಗಳು ಒಂದಾಗಿ ಬೆರೆಯುವ ಸ್ಥಳವಾಗಿದೆ.

    ಈ ದೇವಾಲಯದಲ್ಲಿ ಕಾಳಿ ದೇವಿ ಹಾಗೂ ಭಗವಾನ್ ಶಿವನ ಪ್ರತಿಮೆಗಳನ್ನು ಕಾಣಬಹುದಾಗಿದೆ. ಈ ಸ್ಥಳದಲ್ಲಿ ನಿತ್ಯ ಪೂಜೆ ನಡೆಯುತ್ತದೆ. ಇಲ್ಲಿ ವಿವಿಧ ಆಹಾರ, ಹೂವುಗಳು, ನೂಡಲ್ಸ್ ಮತ್ತು ಇತರ ಚೀನೀ ಭಕ್ಷಗಳನ್ನು ಅರ್ಪಿಸಲಾಗುತ್ತೆ.

    ಈ ಕ್ಷೇತ್ರದ ಪ್ರತೀತಿ ಏನು?

    ಬಹಳ ಹಿಂದೆ ದೊಡ್ಡ ಮರದ ಬಳಿ ಎರಡು ಕಲ್ಲುಗಳಿದ್ದವಂತೆ. ಜನರು ಪ್ರತಿದಿನ ಕುಂಕುಮವನ್ನು ಹಚ್ಚಿ ಪ್ರಾರ್ಥಿಸುತ್ತಿದ್ದರಂತೆ. ಒಮ್ಮೆ, ಈ ಪ್ರದೇಶದಲ್ಲಿ ವಾಸವಿದ್ದ ಚೀನಿ ಕುಟುಂಬವೊಂದರಲ್ಲಿ ಸಣ್ಣ ಬಾಲಕ ಅನಾರೋಗ್ಯಕ್ಕೆ ಒಳಗಾಗಿದ್ದನಂತೆ. ಆತ ಗುಣಮುಖರಾಗಲಿ ಎಂದು ಪೋಷಕರು ಈ ಕಾಳಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದರಂತೆ. ಇದಾದ ಬಳಿಕ ಕೆಲವೇ ದಿನಗಳಲ್ಲಿ ಆತ ಅನಾರೋಗ್ಯದಿಂದ ಗುಣಮುಖನಾಗಿದ್ದ.

    ಬಳಿಕ ಬಾಲಕ ಕುಟುಂಬವು ಆ ಸ್ಥಳದಲ್ಲಿ ದೇವಾಲಯವನ್ನು ನಿರ್ಮಿಸಿತು. ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಚೀನೀ ಸಮುದಾಯದ ಮಂದಿ ಹಣ ಒಟ್ಟು ಮಾಡಿ ದೊಡ್ಡ ದೇವಾಲಯ ನಿರ್ಮಿಸಿದರು. ಹೀಗಾಗಿ ಈ ಸ್ಥಳ ಎರಡು ಸಂಸ್ಕೃತಿಗಳ ಬೆಸೆಯುವ ಸ್ಥಳವಾಗಿದೆ. ಈ ದೇವಾಲಯದಲ್ಲಿ ಇಂದಿಗೂ ಚೈನೀಸ್ ಫುಡ್ ನೂಡಲ್ಸ್ ಅನ್ನೇ ಪ್ರಸಾದವಾಗಿ ಹಂಚಲಾಗುತ್ತದೆ.

    ಇದನ್ನೂ ಓದಿ : ಕಾರು ಅಪಘಾತ; ಗಾಯಗೊಂಡ ಸ್ಥಿತಿಯಲ್ಲೇ ಸೆಲ್ಫಿಗೆ ಪೋಸ್ ನೀಡಿದ ಯುವತಿಯರು

    ಅಷ್ಟೇ ಅಲ್ಲ, ಇಲ್ಲಿ ದೀಪಾವಳಿ, ಹಬ್ಬಗಳ ಸಮಯದಲ್ಲಿ ಭಕ್ತರ ದಂಡೇ ಹರಿದು ಬರುತ್ತೆ. ದೀಪಾವಳಿ ವೇಳೆ, ಎಣ್ಣೆ ಹಚ್ಚಿ ಸುಗಂಧ ಭರಿತ ಕಾಗದವನ್ನು ಬೆಂಕಿಯಲ್ಲಿ ಸುಡುವ ಪದ್ದತಿಯಿದೆ. ಹಾಗೆಯೇ ಇಲ್ಲಿ ಮತ್ತೊಂದು ವಿಭಿನ್ನ ಸಂಸ್ಕೃತಿಯಿದ್ದು, ಸಾಮಾನ್ಯ ಭಂಗಿಯಲ್ಲಿ ದೇವರಿಗೆ ನಮಸ್ಕರಿಸುವ ಬದಲು ದೇವರಿಗೆ ಬೇರೆಯೇ ವಿಧಾನದಲ್ಲಿ ನಮಿಸುವ ಪದ್ದತಿಯಿದೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending