Connect with us

    LATEST NEWS

    ಈ ದೇವಸ್ಥಾನದಲ್ಲಿ ಪ್ರಸಾದ ರೂಪದಲ್ಲಿ ನೀಡಲಾಗುತ್ತೆ ಚೈನೀಸ್ ನೂಡಲ್ಸ್! ಇದರ ಹಿಂದಿನ ಕಥೆ ಏನು ಗೊತ್ತಾ!?

    Published

    on

    ಮಂಗಳೂರು/ಕೊಲ್ಕತ್ತಾ : ಭಾರತದಲ್ಲಿ ಲಕ್ಷಗಟ್ಟಲೆ ದೇವಾಲಯಗಳಿವೆ. ಪ್ರತಿಯೊಂದು ದೇವಾಲಯದಲ್ಲೂ ಅದರದೇ ಆದ ವಿಶೇಷ ಆಚರಣೆಗಳಿವೆ. ಧಾರ್ಮಿಕ ಆಚರಣೆಗಳೂ ವಿಭಿನ್ನ ಆಗಿರುತ್ತವೆ. ಪ್ರಸಾದ ರೂಪದಲ್ಲಿ ದೇವಸ್ಥಾನಗಳಲ್ಲಿ ಅನ್ನ, ಪೊಂಗಲ್, ಲಡ್ಡು, ಪಂಚಕಜ್ಜಾಯ ಹೀಗೆ ನೀಡೋದು ಸಾಮಾನ್ಯ. ಆದ್ರೆ, ಇಲ್ಲೊಂದು ದೇಗುಲದಲ್ಲಿ ನೂಡಲ್ಸ್ ಅನ್ನು ಪ್ರಸಾದ ರೂಪದಲ್ಲಿ ನೀಡ್ತಾರೆ ಅಂದ್ರೆ ನೀವು ನಂಬಲೇಬೇಕು.

    ಈ ಪುರಾತನ ದೇಗುಲದಲ್ಲಿ ಪ್ರಸಾದ ‘ನೂಡಲ್ಸ್’ :


    ಸಾಮಾನ್ಯವಾಗಿ ನೂಡಲ್ಸ್ ಅಂದ್ರೆ ಚೈನೀಸ್ ಫುಡ್. ಅದನ್ನು ಈ ದೇವಾಲಯದಲ್ಲಿ ಪ್ರಸಾದವಾಗಿ ನೀಡ್ತಾರೆ. ಇದೊಂದು ಆಶ್ಚರ್ಯಕರ ಸಂಗತಿಯೂ ಹೌದು. ಪ್ರಸಾದ ರೂಪದಲ್ಲಿ ಲಡ್ಡು, ಪುಳಿಯೊಗರೆ ಸ್ವೀಕರಿಸೋರಿಗೆ ಇದು ಅಚ್ಚರಿ ಅಲ್ಲದೇ ಮತ್ತೇನು ಅಲ್ವಾ?
    ಅಂದಹಾಗೆ, ಈ ದೇವಾಲಯ ಇರೋದು ಕೋಲ್ಕತ್ತಾದಲ್ಲಿ. ಇಲ್ಲಿನ ಕಾಳಿ ಮಾತಾ ದೇವಾಲಯದಲ್ಲಿ ಈ ಸಂಪ್ರದಾಯವಿದೆ. ಇಲ್ಲಿ ಪ್ರಸಾದ ರೂಪದಲ್ಲಿ ನೂಡಲ್ಸ್ ನೀಡಲಾಗುತ್ತೆ. ಕೊಲ್ಕತ್ತಾದಲ್ಲಿನ ಒಂದು ಸಣ್ಣ ಟ್ಯಾಂಗ್ರಾ ಪ್ರದೇಶದಲ್ಲಿ ಈ ಒಂದು ಸಂಪ್ರದಾಯ ಕಾಣಬಹುದಾಗಿದೆ. ವಿಶೇಷ ಅಂದ್ರೆ ಈ ಪ್ರದೇಶ ಚೀನಿ ಹಾಗೂ ಭಾರತದ ಸಂಸ್ಕೃತಿಗಳು ಒಂದಾಗಿ ಬೆರೆಯುವ ಸ್ಥಳವಾಗಿದೆ.

    ಈ ದೇವಾಲಯದಲ್ಲಿ ಕಾಳಿ ದೇವಿ ಹಾಗೂ ಭಗವಾನ್ ಶಿವನ ಪ್ರತಿಮೆಗಳನ್ನು ಕಾಣಬಹುದಾಗಿದೆ. ಈ ಸ್ಥಳದಲ್ಲಿ ನಿತ್ಯ ಪೂಜೆ ನಡೆಯುತ್ತದೆ. ಇಲ್ಲಿ ವಿವಿಧ ಆಹಾರ, ಹೂವುಗಳು, ನೂಡಲ್ಸ್ ಮತ್ತು ಇತರ ಚೀನೀ ಭಕ್ಷಗಳನ್ನು ಅರ್ಪಿಸಲಾಗುತ್ತೆ.

    ಈ ಕ್ಷೇತ್ರದ ಪ್ರತೀತಿ ಏನು?

    ಬಹಳ ಹಿಂದೆ ದೊಡ್ಡ ಮರದ ಬಳಿ ಎರಡು ಕಲ್ಲುಗಳಿದ್ದವಂತೆ. ಜನರು ಪ್ರತಿದಿನ ಕುಂಕುಮವನ್ನು ಹಚ್ಚಿ ಪ್ರಾರ್ಥಿಸುತ್ತಿದ್ದರಂತೆ. ಒಮ್ಮೆ, ಈ ಪ್ರದೇಶದಲ್ಲಿ ವಾಸವಿದ್ದ ಚೀನಿ ಕುಟುಂಬವೊಂದರಲ್ಲಿ ಸಣ್ಣ ಬಾಲಕ ಅನಾರೋಗ್ಯಕ್ಕೆ ಒಳಗಾಗಿದ್ದನಂತೆ. ಆತ ಗುಣಮುಖರಾಗಲಿ ಎಂದು ಪೋಷಕರು ಈ ಕಾಳಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದರಂತೆ. ಇದಾದ ಬಳಿಕ ಕೆಲವೇ ದಿನಗಳಲ್ಲಿ ಆತ ಅನಾರೋಗ್ಯದಿಂದ ಗುಣಮುಖನಾಗಿದ್ದ.

    ಬಳಿಕ ಬಾಲಕ ಕುಟುಂಬವು ಆ ಸ್ಥಳದಲ್ಲಿ ದೇವಾಲಯವನ್ನು ನಿರ್ಮಿಸಿತು. ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಚೀನೀ ಸಮುದಾಯದ ಮಂದಿ ಹಣ ಒಟ್ಟು ಮಾಡಿ ದೊಡ್ಡ ದೇವಾಲಯ ನಿರ್ಮಿಸಿದರು. ಹೀಗಾಗಿ ಈ ಸ್ಥಳ ಎರಡು ಸಂಸ್ಕೃತಿಗಳ ಬೆಸೆಯುವ ಸ್ಥಳವಾಗಿದೆ. ಈ ದೇವಾಲಯದಲ್ಲಿ ಇಂದಿಗೂ ಚೈನೀಸ್ ಫುಡ್ ನೂಡಲ್ಸ್ ಅನ್ನೇ ಪ್ರಸಾದವಾಗಿ ಹಂಚಲಾಗುತ್ತದೆ.

    ಇದನ್ನೂ ಓದಿ : ಕಾರು ಅಪಘಾತ; ಗಾಯಗೊಂಡ ಸ್ಥಿತಿಯಲ್ಲೇ ಸೆಲ್ಫಿಗೆ ಪೋಸ್ ನೀಡಿದ ಯುವತಿಯರು

    ಅಷ್ಟೇ ಅಲ್ಲ, ಇಲ್ಲಿ ದೀಪಾವಳಿ, ಹಬ್ಬಗಳ ಸಮಯದಲ್ಲಿ ಭಕ್ತರ ದಂಡೇ ಹರಿದು ಬರುತ್ತೆ. ದೀಪಾವಳಿ ವೇಳೆ, ಎಣ್ಣೆ ಹಚ್ಚಿ ಸುಗಂಧ ಭರಿತ ಕಾಗದವನ್ನು ಬೆಂಕಿಯಲ್ಲಿ ಸುಡುವ ಪದ್ದತಿಯಿದೆ. ಹಾಗೆಯೇ ಇಲ್ಲಿ ಮತ್ತೊಂದು ವಿಭಿನ್ನ ಸಂಸ್ಕೃತಿಯಿದ್ದು, ಸಾಮಾನ್ಯ ಭಂಗಿಯಲ್ಲಿ ದೇವರಿಗೆ ನಮಸ್ಕರಿಸುವ ಬದಲು ದೇವರಿಗೆ ಬೇರೆಯೇ ವಿಧಾನದಲ್ಲಿ ನಮಿಸುವ ಪದ್ದತಿಯಿದೆ.

    LATEST NEWS

    ರಾಜ್ಯದಲ್ಲಿ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ..! ವಾಹನ ಸವಾರರಿಗೆ ಬಿಗ್ ಶಾಕ್..

    Published

    on

    ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್‌ ದರ ಏರಿಕೆಗೊಳಿಸಿ ವಾಹನ ಸವಾರರಿಗೆ ಶಾಕ್ ನೀಡಿದೆ.

    ಪೆಟ್ರೋಲ್, ಡಿಸೇಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಿಟೇಲ್‌ ಸೇಲ್ಸ್‌ ಟ್ಯಾಕ್ಸ್‌ ದರ ಹೆಚ್ಚಳ ಮಾಡಲಾಗಿದೆ. ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂಪಾಯಿ ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳ‌ವಾಗಿದೆ. ಈ ಹಿಂದೆ ಟ್ಯಾಕ್ಸ್ ದರ ಪೆಟ್ರೋಲ್- 25.92% ಇದ್ದಿದ್ದು, ಈಗ 29.84% ಗೆ ಏರಿಕೆ ಅಂದರೆ 3.9% ಹೆಚ್ಚಳವಾಗಿದೆ. ಅಂತೆಯೇ ಡೀಸೆಲ್ ಈ‌ ಹಿಂದೆ- 14.34% ಇದ್ದಿದ್ದು, ಈಗ 18.44%ಗೆ ಏರಿಕೆ ಕಂಡಿದೆ. ಅಂದರೆ 4.1% ರಷ್ಟು ಏರಿಕೆಯಾಗಿದೆ. ಟ್ಯಾಕ್ಸ್ ಹೆಚ್ಚಳ ಹಿನ್ನೆಲೆ ಪೆಟ್ರೋಲ್‌ ದರ 100 ರೂಪಾಯಿ ದಾಟಲಿದೆ. ಈಗ ಪೆಟ್ರೋಲ್‌ ದರ 99.54 ರೂ. ಇದ್ದು, ಮುಂದೆ 102 ರೂಪಾಯಿಗೆ ಏರಿಕೆಯಾಗಲಿದೆ. ಇವತ್ತಿನ ಡೀಸೆಲ್‌ ದರ 85.93 ರೂಪಾಯಿ ಇದೆ. ಅದು 89.43 ರೂಪಾಯಿಗೆ ಏರಿಕೆಯಾಗಲಿದೆ.

    Continue Reading

    LATEST NEWS

    ಪ್ರಕಾಶ್ ಶೆಟ್ಟಿ, ರೊನಾಲ್ಡ್‌ ಕೊಲಾಸೋರಿಗೆ ಗೌರವ ಡಾಕ್ಟರೇಟ್ ಪ್ರದಾನ

    Published

    on

    ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವ ಶನಿವಾರ ವಿ.ವಿ.ಯ ಆವರಣದಲ್ಲಿರುವ ಮಂಗಳಾ ಸಭಾಂಗಣದಲ್ಲಿ ಶನಿವಾರ ಜರಗಿತು.

    ಮಂಗಳೂರು ವಿವಿ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಅನಿವಾಸಿ ಭಾರತೀಯ ಉದ್ಯಮಿ ಡಾ। ರೊನಾಲ್ಡ್‌ ಕೊಲಾಸೋ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನಿಸಿದರು. ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ। ತುಂಬೆ ಮೊಯ್ದೀನ್ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದರು.

    155 ಮಂದಿಗೆ ಪಿಎಚ್‌ಡಿ, 58 ಚಿನ್ನದ ಪದಕ ಮತ್ತು 57 ನಗದು ಬಹುಮಾನ ಪ್ರದಾನ ಮಾಡಿದರು.

    ಉನ್ನತ ಶಿಕ್ಷಣ ಸಚಿವ, ಸಹಕುಲಾಧಿಪತಿ ಡಾ। ಎಂ.ಸಿ.ಸುಧಾಕರ್ ಉಪಸ್ಥಿತರಿದ್ದರು. ನವದೆಹಲಿಯ ಅಭಿವೃದ್ಧಿಶೀಲ ರಾಷ್ಟ್ರಗಳ ಸಂಶೋಧನೆ ಮತ್ತು ಮಾಹಿತಿ ವ್ಯವಸ್ಥೆ ಮಹಾನಿರ್ದೇಶಕ ಪ್ರೊ। ಸಚಿನ್ ಚತುರ್ವೇದಿ ಅವರು ಘಟಿಕೋತ್ಸವ ಭಾಷಣ ಮಾಡಿದರು.

    ವಿ.ವಿ. ಕುಲಪತಿ ಪ್ರೊ। ಪಿ.ಎಲ್. ಧರ್ಮ ಪ್ರಸ್ತಾವಿಸಿದರು. ಕುಲಸಚಿವ (ಆಡಳಿತ) ರಾಜು ಮೊಗವೀರ, ಕುಲಸಚಿವ (ಪರೀಕ್ಷಾಂಗ) ಡಾ। ದೇವೇಂದ್ರಪ್ಪ, ವಿ.ವಿ.ಯ, ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯ ಪರಿಷತ್ ಸದಸ್ಯರು, ವಿವಿಧ ನಿಕಾಯಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

    Continue Reading

    DAKSHINA KANNADA

    ಏಕಕಾಲಕ್ಕೆ ಅರಳಿ ನಿಂತ 42 ಬ್ರಹ್ಮಕಮಲ ಪುಷ್ಪ; ಮಧ್ಯರಾತ್ರಿಯೇ ವಿಶೇಷ ಪೂಜೆ ಸಲ್ಲಿಕೆ!

    Published

    on

    ಉತ್ತರ ಕನ್ನಡ: ಶ್ರಾವಣದ ಸಂಜೆಗಳಲ್ಲಿ ಬ್ರಹ್ಮ ಕಮಲ ಅರಳುವುದು ವಾಡಿಕೆ. ಒಮ್ಮೊಮ್ಮೆ ಅದಕ್ಕೆ ವ್ಯತಿರಿಕ್ತವಾಗಿ ಬೇಗವೂ ಬ್ರಹ್ಮ ಕಮಲ ಅರಳುತ್ತದೆ. ಆದರೆ ಒಮ್ಮೆಲೆ ಪುಷ್ಪಗುಚ್ಛದಷ್ಟು ಅಂದವಾಗಿ ಒಂದೆಡೆಗೇ ಅರಳುವ ಬ್ರಹ್ಮಕಮಲದ ಸೊಬಗನ್ನು ನೋಡುವ ಅನುಭವವೇ ಬೇರೆ! ಬ್ರಹ್ಮಕಮಲವು ಅಧ್ಯಾತ್ಮಿಕ ಸ್ಥಾನವನ್ನು ಹಿಂದೂ ಹಾಗೂ ಜೈನ, ಬೌದ್ಧ ಧರ್ಮಗಳಲ್ಲಿ ಹೊಂದಿದೆ. ಹೀಗಾಗಿ ಬ್ರಹ್ಮಕಮಲ ಬರೀ ಹೂವಾಗದೇ ಈ ಹೂವೇ ಆರಾಧನೆಯ ವಸ್ತುವಾಗಿರುವುದು ವಿಶೇಷ!

    ಏಕಕಾಲಕ್ಕೆ 42 ಹೂಗಳು!

    ಯಲ್ಲಾಪುರ ಪಟ್ಟಣದ ರಾಮಾಪುರ ವ್ಯಾಪ್ತಿಯಲ್ಲಿ ವಾಸಿಸುವ ಗಣೇಶ್ ಪಂಡರಾಪುರ ಅವರ ಮನೆಯ ವಿಶೇಷವಾದ ಬ್ರಹ್ಮಕಮಲದ ಹೂವುಗಳು! ಯಾಕೆ ವಿಶೇಷ ಎಂದರೆ, ಹೋದ ವರ್ಷ ಇವರ ಮನೆಯಲ್ಲಿ ಸುಮಾರು 84 ಬ್ರಹ್ಮಕಮಲಗಳು ಒಟ್ಟಿಗೆ ಅರಳಿದ್ದವು. ಈ ವರ್ಷ 42 ಬ್ರಹ್ಮಕಮಲ ಏಕಕಾಲಕ್ಕೆ ಅರಳಿ ನಿಂತಿವೆ.

    ಪುಷ್ಪಕ್ಕೆ ಪೂಜೆ!

    ಮಧ್ಯರಾತ್ರಿ 12: 40 ರ ಸುಮಾರಿಗೆ ಈ ಹೂವುಗಳೆಲ್ಲಾ ಅರಳಿದ್ದವು ತಕ್ಷಣ ಗಣೇಶ್ ಪಂಡರಾಪುರ ಅವರ ಕುಟುಂಬ ವಾಡಿಕೆಯಂತೆ ಪೂಜೆ ಮಾಡಿ ನಂತರ ಮನೆಯವರಿಗೆ ಜನರಿಗೆ ಪ್ರಸಾದ ಹಂಚಿ ಹೂವುಗಳ ಮುಂದೆ ಭಕ್ತಿ ಭಾವದಿಂದ ಪ್ರಾರ್ಥನೆ ಸಲ್ಲಿಸಿದರು, ಬ್ರಹ್ಮಕಮಲ ಅರಳುವ ವೇಳೆ ಕೇಳಿದ ಕೋರಿಕೆಗಳು ಈಡೇರುತ್ತವೆ ಎಂಬುದು ಪ್ರಸಿದ್ಧ ಲೋಕಾರೂಢಿಯ ನಂಬಿಕೆ.

    Continue Reading

    LATEST NEWS

    Trending