ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ: ಮಣ್ಣಲ್ಲಿ ಮಣ್ಣಾದ ಚಿರಂಜೀವಿ ಸರ್ಜಾ..!
ಬೆಂಗಳೂರು: ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ಮಣ್ಣಲ್ಲಿ ಮಣ್ಣಾಗಿದ್ದಾರೆ.
ಯಾರೂ ಊಹಿಸದಂತೆ ದಿಢೀರ್ ಅಂತ ಹೃದಯಾಘಾತಗೊಂಡು ಸಾವನ್ನಪ್ಪಿದ ಕನ್ನಡ ನಟ ಚಿರಂಜೀವಿ ಸರ್ಜಾ ಅವರ ಅಂತ್ಯಕ್ರೀಯೆ ಮುದ್ದು ತಮ್ಮ ಧ್ರುವ ಸರ್ಜಾರ ‘ಬೃಂದಾವನ’ ಪಾರ್ಮ್ ಹೌಸ್ ನಲ್ಲಿ ನೆರವೇರಿದೆ.
ನಟನ ಪಾರ್ಥೀವ ಶರೀರವನ್ನು ಬಸವನಗುಡಿಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು.
ಬಳಿಕ ಕುಟುಂಬಸ್ಥರು ನಿರ್ಧರಿಸಿದಂತೆ ಕನಕಪುರದ ಬಳಿಕ ಅವರ ನೆಚ್ಚಿನ ನೆಲಗುಳಿ ಫಾರ್ಮ್ ಹೌಸ್ ಗೆ ಅಂತಿಮ ಯಾತ್ರೆಯ ಮೂಲಕ ಕೊಂಡೊಯ್ಯಲಾಯಿತು.
ಒಕ್ಕಲಿಗ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನವನ್ನು ನಟ ಚಿರಂಜೀವಿ ಸರ್ಜಾ ಅವರ ತಂದೆ ನೆರವೇರಿಸುವ ಮೂಲಕ, ಮಣ್ಣು ಮಾಡಲಾಯಿತು.
ಈ ಮೂಲಕ ನಟ ಚಿರಂಜೀವಿ ಸರ್ಜಾ ಮಣ್ಣಲ್ಲಿ ಮಣ್ಣಾದರು.
ಹೃದಯಾಘಾತದಿಂದ ನಿನ್ನೆ ಬೆಂಗಳೂರಿನ ಅಪೋಲೋ ಸಾಗರ್ ಆಸ್ಪತ್ರೆಯಲ್ಲಿ ಚಿರಂಜೀವಿ ಸರ್ಜಾ ಕೊನೆಯುಸಿರೆಳೆದಿದ್ದರು.
1980 ರಂದು ಆಕ್ಟೋಬರ್ 17ರಂದು ಬೆಂಗಳೂರಿನಲ್ಲಿ ಜನಿಸಿದ್ದ ಅವರು, ಹಿರಿಯ ನಟ ಶಕ್ತಿ ಪ್ರಸಾದ್ ಅವರ ಮೊಮ್ಮಗ ಮತ್ತು ನಟ ಅರ್ಜುನ್ ಸರ್ಜಾ ಅಳಿಯ.
ಬಾಲ್ಡವಿನ್ ಬಾಲಕರ ಹೈ ಸ್ಕೂಲ್ನಲ್ಲಿ ವಿದ್ಯಾಭ್ಯಾಸ ಮುಗಿಸಿದ್ದರು. ಬಳಿಕ ವಿಜಯ ಕಾಲೇಜಿನಲ್ಲಿ ಪದವಿ ಪಡೆದಿದ್ದರು.
ಅಲ್ಲದೇ 4 ವರ್ಷ ನಟ ಅರ್ಜುನ್ ಸರ್ಜಾ ಜೊತೆ ಸಹ ನಿರ್ದೇಶಕನಾಗಿ ಕೆಲಸ ನಿರ್ವಹಿಸಿದ್ದರು.
ಇವರು ವಾಯುಪುತ್ರ, ಗಂಡೆದೆ, ಚಿರು, ದಂಡಂ ದಶಗುಣಂ, ಕೆಂಪೇಗೌಡ, ವರದನಾಯಕ, ವಿಶಲ್, ಚಂದ್ರಲೇಖ, ಅಜಿತ್, ರುದ್ರತಾಂಡವ,
ಆಟಗಾರ, ರಾಮ್ಲೀಲಾ, ಆಕೆ, ಭರ್ಜರಿ, ಪ್ರೇಮ ಬರಹ, ಸಂಹಾರ, ಅಮ್ಮ ಐ ಲವ್ ಯೂ, ಸಿಂಗ, ಖಾಕಿ, ಆದ್ಯಾ, ಶಿವಾರ್ಜುನ, ರಾಜಮಾರ್ತಾಂಡ, ಏಪ್ರಿಲ್, ರಣಂ, ಕ್ಷತ್ರಿಯಾ ಸಿನಿಮಾಗಳು ಶೂಟಿಂಗ್ ಹಂತದಲ್ಲಿತ್ತು.
2018ರಲ್ಲಿ ನಟಿ ಮೇಘನಾ ರಾಜ್ ಜೊತೆ ಚಿರಂಜೀವಿ ಸರ್ಜಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಮೇಘನಾ ರಾಜ್ ಅವರು ಗರ್ಭಿಣಿಯಾಗಿದ್ದು ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದರು.