Connect with us

LATEST NEWS

ಮಂಗಳೂರು: ಸಂಘನಿಕೇತನದ ಗಣೇಶನಿಗೆ ಕ್ರೈಸ್ತರಿಂದ ಪೂಜೆ

Published

on

ಮಂಗಳೂರು: ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ನೇತೃತ್ವದಲ್ಲಿ ಮಂಗಳೂರು ಕ್ರೈಸ್ತ ಬಂಧುಗಳ ನಿಯೋಗ ಶನಿವಾರ ನಗರದ ಸಂಘನಿಕೇತನ ಪ್ರತಾಪನಗರದಲ್ಲಿ ಕಳೆದ 75 ವರ್ಷದಿಂದ ಆಚರಿಸಿಕೊಂಡು ಬರುತ್ತಿರುವ ಸಾರ್ವಜನಿಕ ಗಣೇಶೋತ್ಸವಕ್ಕೆ ಭೇಟಿ ನೀಡಿ ಫಲ-ಪುಷ್ಪವನ್ನು ಅರ್ಪಿಸಿ ಪೂಜೆ ಸಲ್ಲಿಸಿದರು.


ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಮಂಗಳೂರು ಕ್ರೈಸ್ತ ಸಭಾದ ಸಾರ್ವಜನಿಕ ಸಂಪರ್ಕ ಅಧಿಕಾರಿ ರೋಯ್‌ ಕ್ಯಾಸ್ತಲಿನೋ ಮಾತನಾಡಿ, ಗಣೇಶೋತ್ಸವದ ಸಂದರ್ಭದಲ್ಲಿ ಮಂಗಳೂರಿನಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಸಂಘನಿಕೇತನದಲ್ಲಿ 75ನೇ ವರ್ಷದ ಗಣೇಶೋತ್ಸವವನ್ನು ಆಚರಿಸುತ್ತಿದ್ದು,

ಇಲ್ಲಿಯ ಗಣೇಶೋತ್ಸವವಕ್ಕೆ ಸ್ವಾತಂತ್ರ್ಯ ಚಳುವಳಿಯ ಸಂಬಂಧವಿದೆ. ಬಾಲಗಂಗಾಧರ ತಿಲಕ್ ಅವರು ಮನೆ-ಮನೆಯಲ್ಲಿ ಆಚರಿಸುತ್ತಿದ್ದ ಗಣೇಶ ಚತುರ್ಥಿಯನ್ನು ಸಮಾಜಕ್ಕೆ ತಂದು ಸಾರ್ವತ್ರಿಕವಾಗಿ ಆಚರಿಸಿ, ಸಮಾಜದಲ್ಲಿ ಸಾಮರಸ್ಯದ ಜೀವನ ನಡೆಸುವುದನ್ನು ಕಲಿಸಿಕೊಟ್ಟರು ಎಂದು ಹೇಳಿದರು.


ಕ್ಯಾಥೋಲಿಕ್ ಸಭಾದ ಅಧ್ಯಕ್ಷ ಸ್ಟ್ಯಾನಿ ಲೋಬೊ, ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ಸಂಸ್ಥಾಪಕ ಫ್ರಾಂಕ್ಲಿನ್ ಮೊಂತೆರೊ, ಫ್ರಾನ್ಸಿಸ್ ಪಿಂಟೋ, ಗ್ರೆಗೋರಿ ಡಿ’ಸಿಲ್ವಾ, ಅನಿಲ್ ಪತ್ರಾವೋ, ವಕೀಲೆ ವ್ಯಾನಿ ಮರಿಝಾ ಪಿಂಟೋ ಮಾಜಿ ಜಿಲ್ಲಾ ರೋಟರಿ ಗವರ್ನಾರ್ ರೊನಾಲ್ಡ್ ಗೌನ್ಸ್, ಆರ್‌ಎಸ್‌ಎಸ್ ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘ ಸಂಚಾಲಕ ವಿ. ನಾಗರಾಜ್, ವಿಭಾಗ ಪ್ರಚಾರಕ ಸುರೇಶ್, ಪ್ರಮುಖರಾದ ಪ್ರವಿಣ್ ಕುಮಾರ್, ಸತೀಶ್ ಪ್ರಭು, ರಘುವೀರ್ ಕಾಮತ್, ಯೋಗೀಶ್, ವಿನೋದ್ ಮೊದಲಾದವರಿದ್ದರು.

DAKSHINA KANNADA

Sullia: ನದಿಗೆ ಸ್ನಾನಕ್ಕೆ ತೆರಳಿದ ವ್ಯಕ್ತಿ ಶವವಾಗಿ ಪತ್ತೆ..!

Published

on

ಸುಳ್ಯ: ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸುಳ್ಯದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಎರಡನೇ ಮಣ್ಣಗೇರಿಯ ನಿವಾಸಿ ವೆಂಕಟರಮಣ ಎಂದು ಗುರುತಿಸಲಾಗಿದೆ.

ಸುಳ್ಯದಲ್ಲಿರುವ ಆರಂಬೂರು ಸೇತುವೆ ಬಳಿಯ ಪಯಸ್ವಿನಿ ನದಿಗೆ ಸ್ನಾನಕ್ಕೆಂದು ಹೋದ ವ್ಯಕ್ತಿಯು ಕಾಣೆಯಾಗಿದ್ದಾರೆ. ಬಳಿಕ ಅವರ ಹುಡುಕಾಟ ನಡೆಸಲಾಗಿದೆ. ಆದರೆ ಎಷ್ಟು ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಆ ಕಾರಣದಿಂದ ಸುಳ್ಯದ ಪೈಚಾರ್ ನ ಮುಳುಗು ತಜ್ಞರ ತಂಡವು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ಮೇಳಕ್ಕೆತ್ತುವಲ್ಲಿ ಯಶಸ್ವಿಯಾಗಿದೆ. ಸುಳ್ಯ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ

Continue Reading

DAKSHINA KANNADA

Sullia: ಮದ್ಯ ಸೇವಿಸಿ ಅಡ್ಡಾದಿಡ್ಡಿ ವಾಹನ ಚಲಾವಣೆ- ಎಪಿಎಂಸಿ ಕಾರ್ಯದರ್ಶಿ ಅಮಾನತು

Published

on

ಸುಳ್ಯ: ಮದ್ಯಪಾನ ಮಾಡಿ ಹೆದ್ದಾರಿಯಲ್ಲಿ ಅಡ್ಡಾದಿಡ್ಡಿಯಾಗಿ ಸರಕಾರಿ ವಾಹನ ಚಲಾಯಿಸಿದ ಪ್ರಕರಣದ ಆರೋಪಿ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ನವೀನ್‌ ಕುಮಾರ್‌ನನ್ನು ಅಮಾನತುಗೊಳಿಸಿ ಇಲಾಖೆ ಆದೇಶ ಹೊರಡಿಸಿದೆ.

ನವೀನ್‌ ಕುಮಾರ್ ಮಂಗಳವಾರ ರಾತ್ರಿ ಅರಂಬೂರು ಬಳಿ ರಾಜ್ಯ ಹೆದ್ದಾರಿಯಲ್ಲಿ ಅಪಾಯಕಾರಿಯಾಗಿ ಸರಕಾರಿ ಇಲಾಖೆಯ ನಾಮಫ‌ಲಕವಿರುವ ವಾಹನವನ್ನು ಅಪಾಯಕಾರಿಯಾಗಿ ಚಲಾಯಿಸಿದ್ದನೆಂದು ಆರೋಪಿಸಲಾಗಿದೆ. ಅಡ್ಡಾದಿಡ್ಡಿಯಾಗಿ ವಾಹನ ಚಲಾಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಾಹನವನ್ನು ಬೆನ್ನಟ್ಟಿ ಅಡ್ಡಗಟ್ಟಿ ವಿಚಾರಿಸಿದ್ದರು. ಈ ಸಂದರ್ಭ ತಾನು ಸುಳ್ಯ ಎಪಿಎಂಸಿ ಕಾರ್ಯದರ್ಶಿ, ನನ್ನದು ತಪ್ಪಾಯಿತು ಎಂದು ಕ್ಷಮೆ ಯಾಚಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಎಪಿಎಂಸಿ ಕಾರ್ಯದರ್ಶಿಯವರನ್ನು ಅಮಾನತುಗೊಳಿಸಿ ಆದೇಶ ಮಾಡಲಾಗಿದೆ. ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಅವರಿಗೆ ಸುಳ್ಯ ಎಪಿಎಂಸಿ ಪ್ರಭಾರ ವಹಿಸಲಾಗಿದೆ.

 

Continue Reading

LATEST NEWS

ಕೋಟಿಯ ಒಡೆಯನಾದ 8ನೇ ತರಗತಿ ಪೋರ..!!

Published

on

ನವದೆಹಲಿ: ಕೌನ್ ಬನೇಗಾ ಕರೋಡ್ ಪತಿ ಎಂಬ ಹಿಂದಿ ಶೋ ನಲ್ಲಿ ಕೋಟಿ ಗೆದ್ದ 14ವರ್ಷದ ಪೋರ ಸಣ್ಣ ವಯಸ್ಸಿನಲ್ಲೇ ದಾಖಲೆ ಬರೆದಿದ್ದಾನೆ.

ಬಾಲಿವುಡ್ ಸ್ಟಾರ್ ಅಮಿತಾಭ್ ಬಚ್ಚನ್  ನಡೆಸಿಕೊಡುವಂತಹ ಹಿಂದಿಯ ಕೌನ್ ಬನೇಗಾ ಕರೋಡ್ ಪತಿ ಎಂಬ ಶೋ ನಲ್ಲಿ ಹರಿಯಾಣದ ಮಹೇಂದ್ರಗಢ್ ಮೂಲದ 8ನೇ ತರಗತಿ ವಿದ್ಯಾರ್ಥಿ ಮಯಾಂಕ್ ಭಾಗವಹಿಸಿ 15 ಪ್ರಶ್ನೆಗಳಿಗೆ ಉತ್ತರಿಸಿ ಒಂದು ಕೋಟಿ ಗೆದ್ದು ದಾಖಲೆ ಬರೆದಿದ್ದಾನೆ. ಕೌನ್ ಬನೇಗಾ ಕರೋಡ್ ಪತಿಯಲ್ಲಿ ನಡೆಯುವ ಜನಪ್ರಿಯ ಪ್ರಶ್ನೆಗಳಿಗೆ ಉತ್ತರಿಸಿದ 14 ವರ್ಷದ ಕಿರಿಯ ಪೋರ ಎಲ್ಲರ ಮೆಚ್ಚುಗೆಗೆ ಪಾತ್ರನಾಗಿದ್ದಾನೆ.

ಜನಪ್ರಿಯ ರಸಪ್ರಶ್ನೆ ಕಾರ್ಯಕ್ರಮ ಕೌನ್ ಬನೇಗಾ ಕರೋಡ್‌ಪತಿಯಲ್ಲಿ 1 ಕೋಟಿ ರೂ.ಗೆದ್ದ ಹೆಗ್ಗಳಿಕೆಗೆ ಹರಿಯಾಣದ ಮಹೇಂದ್ರಗಢ್‌ನ 8 ನೇ ತರಗತಿಯ ವಿದ್ಯಾರ್ಥಿ ಮಯಾಂಕ್ ಪಾತ್ರನಾಗಿದ್ದಾನೆ. 14 ವರ್ಷದ ಈ ಬಾಲಕ 1 ಕೋಟಿ ರೂ.ಗೆದ್ದ ಅತ್ಯಂತ ಕಿರಿಯ ಸ್ಪರ್ಧಿಯಾಗಿದ್ದು, ಹೊಸ ಇತಿಹಾಸ ನಿರ್ಮಿಸಿದ್ದಾನೆ. 15 ಪ್ರಶ್ನೆಗಳಿಗೆ ಉತ್ತರ ಕೊಟ್ಟು, 1 ಕೋಟಿ ರೂ ಗೆದ್ದು, 16ನೇ ಪ್ರಶ್ನೆಗೂ ಸರಿಯಾದ ಉತ್ತರ ನೀಡಿದ್ದಾನೆ. ಈತನ ಗುರಿ ಕೇವಲ ಒಂದು ಕೋಟಿ ಆಗಿರಲಿಲ್ಲ. ಏಳು ಕೋಟಿಯನ್ನು ಗುರಿಯಾಗಿಸಿಟ್ಟುಕೊಂಡಿದ್ದ. ಏಳು ಕೋಟಿಯ ಪ್ರಶ್ನೆಗೆ ಉತ್ತರಿಸೋಕೆ ಆಗದೇ ಆಟದಿಂದ ವಾಪಸ್ಸಾಗಿದ್ದಾನೆ. ಈತನ ಸಾಧನೆಗೆ ಹರಿಯಾಣ ಸಿಎಂ ಮನೊಹರ್ ಲಾಲ್ ಖಟ್ಟರ್ ಅಭಿನಂದಿಸಿದ್ದಾರೆ. ಇದು ಮೊದಲ ಬಾರಿ 14 ವರ್ಷದ ಪೋರ ಕೋಟಿಗೆದ್ದ ಇತಿಹಾಸವಾಗಿದೆ.

Continue Reading

LATEST NEWS

Trending