Connect with us

LATEST NEWS

“ಮಂಗಳೂರು ನಗರ ಪೊಲೀಸ್‌ ಆಯುಕ್ತರ ‘ನೇರ ಫೋನ್‌-ಇನ್‌’ ಕಾರ್ಯಕ್ರಮ ಬೇಕೇ ಬೇಕು”

Published

on

ಮಂಗಳೂರು: ರಾಜ್ಯದಲ್ಲೇ ಮೊದಲ ಬಾರಿಗೆ ಜನಸ್ನೇಹಿ ಪೊಲೀಸ್‌ ವ್ಯವಸ್ಥೆ ತಂದಿದ್ದ ಮಂಗಳೂರು ನಗರ ಪೊಲೀಸ್‌ ಆಯುಕ್ತರ ‘ ನೇರ ಫೋನ್‌ ಇನ್‌ ಕಾರ್ಯಕ್ರಮ’ ಇದೀಗ ಹೇಳ ಹೆಸರಿಲ್ಲದಂತೆ ಕಾಣೆಯಾಗಿದೆ.

ಇದೇ ಮಾದರಿಯನ್ನು ಬೆಂಗಳೂರು ನಗರ ಸೇರಿದಂತೆ ಇತರ ಜಿಲ್ಲಾ ಪೊಲೀಸ್‌ ಅಧಿಕಾರಿಗಳು ಜಾರಿಗೆ ತರುವ ಮೂಲಕ ಪೊಲೀಸರು ಹೇಗೆ ಜನಸ್ನೇಹಿಯಾಗಿರಬಹುದೆಂಬುವುದನ್ನು ತೋರಿಸಿಕೊಟ್ಟವರು ಮಂಗಳೂರು ಪೊಲೀಸರು.

100ಕ್ಕೂ ಅಧಿಕ ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಿದ್ದ ಇದೇ ಫೋನ್‌ ಇನ್‌ ಕಾರ್ಯಕ್ರಮ ಇದೀಗ ನಿಂತು ಬರೋಬ್ಬರಿ 2 ವರ್ಷಗಳೇ ಕಳೆದು ಹೋಗಿದೆ. ಆದರೆ ಮಂಗಳೂರು ಮಾದರಿಯನ್ನು ಇಟ್ಟುಕೊಂಡು ಬೇರೆ ಬೇರೆ ಜಿಲ್ಲೆಗಳಲ್ಲಿ ಪ್ರಾರಂಭಿಸಿದ ಈ ಕಾರ್ಯಕ್ರಮ ಇಂದಿಗೂ ಯಶಸ್ವಿಯಾಗಿ ಮುಂದುವರಿಯುತ್ತಿದೆ.


ಮಂಗಳೂರಿಗರು ಈಗಲೂ ನೆನಪಿಡುವ ಅಂದಿನ ನಗರ ಪೊಲೀಸ್‌ ಆಯುಕ್ತರಾದ ಡಾ. ಎಂ.ಚಂದ್ರಶೇಖರ್‌ 2016ರ ಆ.5 ರಂದು ಮೊದಲ ಫೋನ್‌ ಇನ್‌ ಕಾರ್ಯಕ್ರವನ್ನು ಆರಂಭಿಸಿದ್ದರು. ಪ್ರತೀ ಶುಕ್ರವಾರ ಬೆಳಗ್ಗೆ 10 ರಿಂದ 11 ಗಂಟೆವರೆಗಿನ ಒಂದು ಗಂಟೆ ಸಮಯವನ್ನು ಸಾರ್ವಜನಿಕರ ಅಹವಾಲು ಕೇಳಲು ಮೀಸಲಿರಿಸಿದ್ದರು.

ಈ ಮೂಲಕ ಜನಸಾಮಾನ್ಯನ ದುಗುಡ ದುಮ್ಮಾನವನ್ನು ದೊರೆ ಸಮಾನವಾಗಿರುವ ಪೊಲೀಸ್‌ ಆಯುಕ್ತರೇ ಖುದ್ದು ಕೇಳಿ ಅದಕ್ಕೆ ಸೂಕ್ತ ಪರಿಹಾರವನ್ನು ಆನ್‌ ದಿ ಸ್ಪಾಟ್‌ ನೀಡುವುದು ಇದರ ಮುಖ್ಯ ಉದ್ದೇಶವಾಗಿತ್ತು.

ಈ ಉದ್ದೇಶವು ಬಹುತೇಹ ಯಶಸ್ವಿಯಾಗಿ ಮಂಗಳೂರು ನಾಗರೀಕರ ಹಲವು ಸಮಸ್ಯೆಗಳಿಗೆ ಪರಿಹಾರ ಕಾಣುವ ವೇದಿಕೆಯಾಗಿ ಮಾರ್ಪಟ್ಟಿತ್ತು.

ಡಾ. ಚಂದ್ರಶೇಖರ್‌ ಯಾವ ಬದ್ದತೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಿದರೋ ಅದೇ ಬದ್ದತೆಯಿಂದ ತನ್ನ ವರ್ಗಾವಣೆಯವರೆಗೆ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು.

ತದನಂತರ ಬಂದ ಪೊಲೀಸ್‌ ಆಯುಕ್ತರುಗಳಾದ ಟಿ. ಆರ್‌. ಸುರೇಶ್‌, ಸಂದೀಪ್‌ ಪಾಟೀಲ್‌, ಪಿ.ಎಸ್‌ ಹರ್ಷವರೆಗೂ ಈ ಕಾರ್ಯಕ್ರಮ ಚೆನ್ನಾಗಿ ಮೂಡಿಬಂದಿತ್ತು. ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹತೋಟಿಯಲ್ಲಿತ್ತು.

ಮತ್ತು ಜನರ ನೈಜ ದೂರುಗಳಿಗೆ ಪೊಲೀಸ್‌ ಆಯುಕ್ತರೇ ಕೇವಲ ಒಂದು ಫೋನ್‌ ಮೂಲಕ ಪರಿಹಾರ ಸೂಚಿಸುತ್ತಿದ್ದರು. ಈ ಕಾರ್ಯಕ್ರಮ ಪೊಲೀಸ್‌ ಇಲಾಖೆ ಮತ್ತು ಜನರ ಮಧ್ಯೆ ವಿಶ್ವಾಸದ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಿತ್ತು.


ಸಾರ್ವಜನಿಕರ ಅಹವಾಲನ್ನು ಸ್ವತಃ ಪೊಲೀಸ್‌ ಕಮೀಷನರೇ ಕೇಳುತ್ತಿದ್ದುದು ಈ ಕಾರ್ಯಕ್ರಮದ ವಿಶೇಷ. ಇವರ ಜೊತೆ ಡಿಸಿಪಿ, ಎಸಿಪಿ, ಸಂಚಾರಿ ವಿಭಾಗದ ಹಿರಿಯ ಅಧಿಕಾರಿಗಳು, ಬಸ್‌ ಮಾಲಕರ ಸಂಘದ ಪದಾಧಿಕಾರಿಗಳು, ಆರ್‌ಟಿಓ ಅಧಿಕಾರಿಗಳು ಸೇರಿ ವಿವಿಧ ಅಧಿಕಾರಿಗಳ ಸಮ್ಮುಖದಲ್ಲೇ ಸಮಸ್ಯೆಗಳು ಆನ್‌ ದಿ ಸ್ಪಾಟ್‌ ಪರಿಹಾರ ಕಾಣುತ್ತಿದ್ದವು.

ಪ್ರತೀ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಕೇವಲ ಒಂದು ಘಂಟೆಯಲ್ಲೇ ಕಡಿಮೆ ಪಕ್ಷ 30 ರಿಂದ 50 ಕರೆಗಳು ಬರುತ್ತಿತ್ತು. ಜೊತೆಗೆ ಅದಕ್ಕೆ ಅಧಿಕಾರಿಗಳು ಕೂಡಾ ಉತ್ತಮ ಸ್ಪಂದನೆ ನೀಡುತ್ತಿದ್ದರು. ವಿಶೇಷ ಎಂದರೆ ಕಾರ್ಯಕ್ರಮದಲ್ಲಿ ದೂರು ನೀಡಿದ ವ್ಯಕ್ತಿಯ ಗೌಪ್ಯತೆಯನ್ನು ಕಾಪಾಡುತ್ತಿದ್ದುದು ವಿಶೇಷ.

ಜೊತೆಗೆ ಈ ಕಾರ್ಯಕ್ರಮ ಪಾರದರ್ಶಕವಾಗಿದ್ದು, ಸಮಸ್ಯೆಗಳು ಮತ್ತು ಪರಿಹಾರವನ್ನು ರಾಜ್ಯಮಟ್ಟದ ಮಾದ್ಯಮಗಳು ಬಿತ್ತರಿಸುತ್ತಿದ್ದುದರಿಂದ ವಿಶೇಷ ಮಹತ್ವ ಪಡೆದಿತ್ತು.

ಇದಕ್ಕಾಗಿ ಸಾರ್ವಜನಿಕರು ನಿರ್ಭೀತಿಯಿಂದ ಆಯುಕ್ತರಿಗೆ ತಮ್ಮ ದೂರುಗಳನ್ನು ಸಲ್ಲಿಸುತ್ತಿದ್ದರು. ಆದರೆ ಕಳೆದ 2 ವರ್ಷದಿಂದ ಈ ಕಾರ್ಯಕ್ರಮ ನಿಂತು ಸಾರ್ವಜನಿಕರ ದೂರುಗಳಿಗೆ ಅದರಲ್ಲೂ ಹಿರಿಯ ನಾಗರಿಕರಿಗೆ, ಅಶಕ್ತರಿಗೆ, ನೊಂದವರಿಗೆ ಸ್ಪಂದನೆಯೇ ಸಿಗುತ್ತಿಲ್ಲ.

ಇಂದು ತಮ್ಮ ಹಾಗೂ ಸಮಾಜದ ಪ್ರತಿಯೊಂದು ಸಮಸ್ಯೆಗೂ ಪೊಲೀಸ್‌ ಕಚೇರಿಗಳನ್ನು ತಡಕಾಡಬೇಕಿದೆ. ಕೆಲವು ದೂರುಗಳು ಠಾಣೆಯ ಫೈಲ್‌ ಸೇರುವ ಬದಲು ಕಸದ ಬುಟ್ಟಿಗೆ ಸೇರುತ್ತಿದೆ. ಆದ್ದರಿಂದ ಮತ್ತೆ ಪೊಲೀಸ್‌ ಆಯುಕ್ತರು ಜನಸ್ನೇಹಿ ಕಾರ್ಯಕ್ರಮವಾಗಿರುವ ಫೋನ್‌ ಇನ್‌ ಅನ್ನು ಮತ್ತೆ ಆರಂಭಿಸಬೇಕು ಎಂದು ಸಾರ್ವಜನಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಹನುಮಂತ ಕಾಮತ್‌ ಆಗ್ರಹಿಸಿದ್ದಾರೆ.

ಕೇವಲ ಸೋಷಿಯಲ್‌ ಮೀಡಿಯಾಗಳಿಂದ ಜನಸ್ನೇಹಿ ಪೊಲೀಸ್‌ ಆಗಲು ಸಾಧ್ಯವಿಲ್ಲ ಎಂಬುವುದನ್ನು ಹಿರಿಯ ಅಧಿಕಾರಿಗಳು ಮನಗಾಣಬೇಕು. ಎಷ್ಟೋ ಹಿರಿಯ ನಾಗರಿಕರಿಗೆ ಸಾಮಾಜಿಕ ಜಾಲತಾಣಗಳ ಅರಿವೇ ಇಲ್ಲ. ಜಿಲ್ಲಾ ಹಾಗೂ ನಗರ ಮಟ್ಟದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ತುರ್ತು ಸಂದರ್ಭಗಳಲ್ಲಿ ಕರೆ ಮಾಡಬಹುದಾಗಿದ್ದ ಡಯಲ್‌ 100 ಇದೀಗ ಸರಕಾರದ ನಿರ್ದೇಶದನ್ವಯ ಡಯಲ್‌ 112 ಆಗಿದ್ದು, ಈ ವ್ಯವಸ್ಥೆಯನ್ನು ಏಕಗವಾಕ್ಷಿ ಯೋಜನೆಯನ್ನಾಗಿ ರೂಪಿಸಿ ರಾಜ್ಯ ಮಟ್ಟದಲ್ಲಿ ಜಾರಿಗೊಳಿಸಿದ್ದಾರೆ.

ಆದರೆ ಈ ಸಂಖ್ಯೆಗೆ ಕರೆ ಮಾಡಿದಾಗ ಅದು ಬೆಂಗಳೂರು ಪೊಲೀಸ್‌ ಇಲಾಖೆ ನಿರ್ವಹಿಸುವ ಕಾಲ್‌ ಸೆಂಟರ್‌ಗೆ ತಲುಪಿ ಬಳಿಕ ಆಯಾಯ ಜಿಲ್ಲಾ ವ್ಯಾಪ್ತಿಗೆ ವರ್ಗಾವಣೆಯಾಗುತ್ತಿದೆ. ಈ ವ್ಯವಸ್ಥೆ ಜನಸಾಮಾನ್ಯನಿಗೆ ತೀರಾ ತ್ರಾಸದಾಯಕ.

ಆದ್ದರಿಂದ ತಮ್ಮ ಅಹವಾಲುಗಳನ್ನು ನೇರವಾಗಿ ಪೊಲೀಸ್‌ ಆಯುಕ್ತರಿಗೆ ತಿಳಿಸುವ ನೇರ ಫೋನ್‌ ಕಾರ್ಯಕ್ರಮದಂತಹ ವೇದಿಕೆ ಅತ್ಯಗತ್ಯ.
ಸದ್ಯ ಮಂಗಳೂರು ನಗರದಲ್ಲಿ ಸಮಸ್ಯೆಗಳ ರಾಶಿ ಇದೆ. ಬಸ್‌ ಸಂಚಾರ, ಟ್ರಾಫಿಕ್‌, ಫುಟ್‌ಪಾತ್‌, ಅಪರಾಧ, ಡ್ರಗ್‌ ಮಾಫಿಯಾ, ಕಳ್ಳತನ, ಅಕ್ರಮ ಗೋಸಾಟ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಆದ್ದರಿಂದ ಶೀಘ್ರವಾಗಿ ಮಂಗಳೂರಿನ ಪೊಲೀಸ್‌ ಆಯುಕ್ತರು ಫೋನ್‌ ಇನ್‌ ಕಾರ್ಯಕ್ರಮ ಬೇಕೇ ಬೇಕು ಎನ್ನುತ್ತಿದ್ದಾರೆ.

FILM

ಕ್ಲಿಕ್ ಆಯ್ತು ‘ಪುಷ್ಪ ಪುಷ್ಪ’…ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ ಗೆ ಫ್ಯಾನ್ಸ್ ಫಿದಾ

Published

on

ಟಾಲಿವುಡ್ : ಸದ್ಯ ಟಾಲಿವುಡ್ ಅಂಗಳದಲ್ಲಿ ‘ಪುಷ್ಪ 2 : ದಿ ರೂಲ್‌’ ಸೌಂಡ್ ಜೋರಾಗಿದೆ. ಅಲ್ಲು ಅರ್ಜುನ್ ಸಿನಿಮಾ ಅಂದ್ರೆ ಹೇಳ್ಬೇಕಾ..ಮೊದಲೇ ಕ್ರೇಜ್ ಹೆಚ್ಚಿಸಿರುತ್ತೆ. ಪುಷ್ಪ ಈಗಾಗಲೇ ಫಸ್ಟ್ ಲುಕ್, ಟೀಸರ್ ಎಲ್ಲದರ ಮೂಲಕಾನೂ ನಿರೀಕ್ಷೆ ಹೆಚ್ಚಿಸುತ್ತಿದೆ. ಇದೀಗ ಹಾಡಿನ ಸರದಿ.


ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್  ಸ್ಟೆಪ್ಸ್ :

‘ಪುಷ್ಪ 2 : ದಿ ರೂಲ್‌’ ಸಿನಿಮಾದ ಕುರಿತು ಯಾವ ಅಪ್ಡೇಟ್ ಕೊಡುತ್ತದೆ ಎಂದು ಅಲ್ಲು ಅರ್ಜುನ್ ಅಭಿಮಾನಿಗಳು ಕಾಯುತ್ತಿರುತ್ತಾರೆ. ಇದೀಗ ಮೇ 1 ರಂದು ಸಿನೆಮಾದ ಹಾಡೊಂದನ್ನು ರಿಲೀಸ್ ಮಾಡಲಾಗಿದೆ. ಪುಷ್ಪ ಪುಷ್ಪ ಅನ್ನೋ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಡಿನಲ್ಲಿ ಅಲ್ಲು ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಮಾಸ್ ಲುಕ್ ನಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗೆ ಫ್ಯಾನ್ಸ್ ಫಿದಾ ಆಗಿರೋದಂತೂ ಸುಳ್ಳಲ್ಲ. ಎಂದಿನಂತೆ ಅಲ್ಲು ಡ್ಯಾನ್ಸ್ ಸಕತ್ತಾಗಿಯೇ ಇದೆ. ಟೀ ಗ್ಲಾಸ್ ಹಿಡಿದು ಅಲ್ಲು ಅರ್ಜುನ್ ವ್ಹಾವ್ ಎಂದೆನಿಸುವಂತೆ ಸ್ಟೆಪ್ ಹಾಕಿದ್ದಾರೆ.

ಬಿಡುಗಡೆಯಾದ ಕೆಲವೇ ಘಂಟೆಯಲ್ಲಿ ಲಕ್ಷಾಂತರ ಜನರು ವೀಕ್ಷಣೆ ಮಾಡಿದ್ದಾರೆ. ಸದ್ಯ 9.7 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಮೂಲಕ ಭಾರತದಲ್ಲಿನ ಸಂಗೀತ ಪಟ್ಟಿಯಲ್ಲಿ ಈ ಹಾಡು ಅಗ್ರಸ್ಥಾನ ಪಡೆದುಕೊಂಡಿದೆ.

ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಅಲ್ಲು ಅರ್ಜುನ್ ಪಾತ್ರದ ಮೇಲೆ ಚಿತ್ರಿಸಲಾಗಿದೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು ,ನಕಾಶ್ ಅಜೀಜ್, ದೀಪಕ್ ಬ್ಲೂ ದನಿಯಾಗಿದ್ದಾರೆ.  ‘ಪುಷ್ಪ ಪುಷ್ಪ’ ಹಾಡು ತೆಲುಗು, ಹಿಂದಿ, ತಮಿಳು, ಕನ್ನಡ, ಮಲಯಾಳಂ ಮತ್ತು ಬೆಂಗಾಲಿ ಎಂಬ ಆರು ಭಾಷೆಗಳಲ್ಲಿ ಬಿಡುಗಡೆಯಾಗಿದೆ.

ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ತೆರೆಗೆ ಯಾವಾಗ?

ಅಲ್ಲು ಅರ್ಜುನ್ ಜೊತೆ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹಾದ್ ಫಾಸಿಲ್ , ಡಾಲಿ ಧನಂಜಯ್, ಜಗದೀಶ್ ಪ್ರತಾಪ್ ಭಂಡಾರಿ, ರಾವ್ ರಮೇಶ್, ಜಗಪತಿ ಬಾಬು, ಅಜಯ್, ಸುನಿಲ್, ಮೈಮ್ ಗೋಪಿ, ಅನಸೂಯಾ ಭಾರದ್ವಾಜ್, ಶ್ರೀತೇಜ್, ಬ್ರಹ್ಮಾಜಿ ಮೊದಲಾದವರು ಪಾತ್ರವಾಗಿದ್ದಾರೆ.

‘ಪುಷ್ಪ 2: ದಿ ರೂಲ್’ ಆಗಸ್ಟ್ 15, 2024 ರಂದು ವಿಶ್ವದಾದ್ಯಂತ ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಪುಷ್ಪಾದಲ್ಲಿದ್ದ ಆಕ್ಷನ್‌ ಗಿಂತ ಹೆಚ್ಚಿನ ಆಕ್ಷನ್ ಪುಷ್ಪಾ 2 ನಲ್ಲಿ ಇರಲಿದೆಯಂತೆ. ಪುಷ್ಪಾದಲ್ಲಿ ಮರಗಳ್ಳತನದ ಕಥೆ ಇದ್ರೆ, ಪುಷ್ಪಾ2 ನಲ್ಲಿ ಕೆಂಪು ಮರಳು ಕಳ್ಳಸಾಗಾಟದ ಬಗ್ಗೆ ಹೇಳಲಾಗಿದೆ.

Continue Reading

LATEST NEWS

ಹೊಸ ಅಪ್​ಡೇಟ್ ನೊಂದಿಗೆ ಬರುತ್ತಿದೆ ವಾಟ್ಸ್ಆ್ಯಪ್; ಏನದು ಗೊತ್ತಾ!?

Published

on

ಮಂಗಳೂರು : ಆ್ಯಪ್ ಗಳು ಅಂದ್ರೆ ಹೊಸ ಹೊಸ ಫೀಚರ್ ಗಳ ಅನಾವರಣ ಮಾಡುತ್ತಿರುತ್ತವೆ. ಬಳಕೆದಾರರಿಗೆ ಅನುಕೂಲತೆಯನ್ನು ಸೃಷ್ಟಿಸಲು ನವೀನ ಫೀಚರ್ ಗಳನ್ನು ಅಳವಡಿಸಲಾಗುತ್ತದೆ. ವಾಟ್ಸ್ ಆ್ಯಪ್ ಕೂಡ ಹೊಸ ಹೊಸ ಫೀಚರ್ ಗಳನ್ನು ಪರಿಚಯಿಸುತ್ತಿರುತ್ತದೆ. ಇದೀಗ ಮತ್ತೊಂದು ಹೊಸ ಫೀಚರ್ ಪರಿಚಯಿಸುತ್ತಿದೆ.


ಏನಿದು ಫೀಚರ್ ?

ವಾಟ್ಸ್ ಆ್ಯಪ್ ಗೆ ಅತ್ಯಂತ ಹೆಚ್ಚಿನ ಬಳಕೆದಾರರಿದ್ದಾರೆ. ಈಗಾಗಲೇ ನೂತನ ಫೀಚರ್ ಗಳನ್ನು ವಾಟ್ಸ್ ಆ್ಯಪ್ ಪರಿಚಯಿಸುತ್ತಿರುತ್ತದೆ. ಇದೀಗ ಹೊಸ ಫೀಚರ್​ವೊಂದನ್ನು ಪರಿಶೀಲಿಸುತ್ತಿದೆ. ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸಾಪ್​ನಲ್ಲಿ ಫೋಟೋ, ವೀಡಿಯೋ ಇತ್ಯಾದಿ ಫೈಲ್ ಶೇರಿಂಗ್ ಮಾಡಲು ಅವಕಾಶ ಕೊಡುವ ಫೀಚರ್ ಇದಾಗಿದೆ. ಬೀಟಾ ಆವೃತ್ತಿಯಲ್ಲಿ ಇದನ್ನು ಪರೀಕ್ಷಿಸಲಾಗುತ್ತಿದೆ. ಶೀಘ್ರದಲ್ಲಿ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ.

ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

ನಿಯರ್ ​ಬೈ ಡಿವೈಸ್, ಕ್ವಿಕ್ ಶೇರಿಂಗ್ ಇತ್ಯಾದಿ ಫೀಚರ್ ರೀತಿಯಲ್ಲಿ ಇದು ಇರಬಹುದು ಎನ್ನಲಾಗಿದೆ.
ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಟ್ಸ್ ಆ್ಯಪ್ ಜನಪ್ರಿಯ. ಜನರಿಗೆ ಹೆಚ್ಚಿನ ಖಾಸಗಿತನ ಮತ್ತು ಭದ್ರತೆಯನ್ನು ಒದಗಿಸಲು ಕೂಡ ವಾಟ್ಸ್​​ಆ್ಯಪ್ ಸಹಾಯ ಮಾಡುತ್ತದೆ.

Continue Reading

LATEST NEWS

123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!

Published

on

ದೆಹಲಿ: ಭಾರತೀಯ ಹವಾಮಾನ ಇಲಾಖೆ ಮೇ ತಿಂಗಳ ಹವಾಮಾನ ಮುನ್ಸೂಚನೆ ಬಿಡುಗಡೆ ಮಾಡಿದ್ದು ಇದೀಗ ಅಚ್ಚರಿ ಮೂಡಿಸಿದೆ. 1901ರ ನಂತರ ಏಪ್ರಿಲ್‌ನಲ್ಲಿ ಇಷ್ಟೊಂದು ತಾಪಮಾನವನ್ನು ದಾಖಲಿಸಿರುವುದು ಇದೇ ಮೊದಲು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.

havamana

ಎಲ್ಲಾ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಎಪ್ರಿಲ್‌ ತಿಂಗಳಿನಲ್ಲಿ ಹೆಚ್ಚು ತಾಪಮಾನ ದಾಖಲಾಗಿದೆ. ದೇಶದಲ್ಲಿ 1901ರ ನಂತರ ಇದೇ ಮೊದಲ ಬಾರಿಗೆ ಹೆಚ್ಚು ತಾಪಮಾನ ಏರಿಕೆಯಾಗಿರುವುದು. ಎಪ್ರಿಲ್ ತಿಂಗಳಿನಲ್ಲಿ ಕೆಲವು ಕಡೆ ಆಲಿಕಲ್ಲು ಸಹಿತೆ ಮಳೆ ಬಂದಿದ್ದು, ಮೇ ತಿಂಗಳಿನಲ್ಲಿ ಹೆಚ್ಚಿನ ಉರಿಬಿಸಿಲು, ಶಾಖ ಮತ್ತು ಆಲಿಕಲ್ಲು ಮುಂದವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿದೆ. ಇನ್ನು ಮೇ ತಿಂಗಳಿನಲ್ಲಿ ಬಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದ್ದು, ಇನ್ನು 11 ದಿನಗಳ ಕಾಲ ಬಿಸಿಗಾಳಿ ಮುಂದುವರಿಯಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

ಮುಂದೆ ಓದಿ..; ನಾಯಿಗಳಿಗೂ ಬಂತು ಆಧಾರ್‌ ಕಾರ್ಡ್‌.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?

ಏಪ್ರಿಲ್ 5 ರಿಂದ 7 ರವರೆಗೆ, ನಂತರ 15 ರಿಂದ 30 ರವರೆಗೆ ಹೆಚ್ಚಿನ ತಾಪಮಾನ ಮತ್ತು ಆಲಿಕಲ್ಲು ಮಳೆಯಾಗಿದೆ. ಸರಾಸರಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಏಪ್ರಿಲ್ ತಿಂಗಳಲ್ಲಿ ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಸರಾಸರಿ ಕನಿಷ್ಠ ತಾಪಮಾನ 28.12 ಡಿಗ್ರಿ ಸೆಲ್ಸಿಯಸ್ ಎಂದು ಮೊಹಾಪಾತ್ರ ಹೇಳಿದ್ದಾರೆ. ದಕ್ಷಿಣ ಪರ್ಯಾಯ ದ್ವೀಪದ ಭಾರತದಲ್ಲಿ 1980 ರ ದಶಕದಿಂದಲೂ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ ಎಂದು ಅವರು ವರದಿ ಮಾಡಿದ್ದಾರೆ.

ಮುಂದಿನ 11 ದಿನದ ಶಾಖದ ಅಲೆ, ಆಲಿಕಲ್ಲು ಮಳೆ:

ದಕ್ಷಿಣ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಮರಾಠವಾಡ ಮತ್ತು ಗುಜರಾತ್‌ನಲ್ಲಿ ಮೇ ತಿಂಗಳಲ್ಲಿ 8-11 ದಿನಗಳವರೆಗೆ ಶಾಖದ ಅಲೆಗಳು ಇರಬಹುದೆಂದು ಮಹಾಪಾತ್ರ ಹೇಳಿದ್ದಾರೆ. ರಾಜಸ್ಥಾನ, ಪೂರ್ವ ಮಧ್ಯಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ಪ್ರದೇಶ, ಛತ್ತೀಸ್‌ಗಢ, ಆಂತರಿಕ ಒಡಿಶಾ, ಗಂಗಾನದಿ ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಉತ್ತರ ಒಳಭಾಗ ಕರ್ನಾಟಕ, ತೆಲಂಗಾಣದಲ್ಲಿ 5-5 ವರೆಗೆ ಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಉತ್ತರ ಭಾರತ, ಮಧ್ಯ ಭಾರತ ಮತ್ತು ಪೆನಿನ್ಸುಲಾರ್ ಭಾರತದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು ಮೂರು ದಿನಗಳ ಕಾಲ ಆಲಿಕಲ್ಲು ಮಳೆಯಾಗುತ್ತದೆ ಎಂದು ಹೇಳಿದ್ದಾರೆ.

Continue Reading

LATEST NEWS

Trending