Connect with us

MANGALORE

ಅಧಿಕಾರ, ಹಣ, ಪ್ರಚಾರ ಗಿಟ್ಟಿಸುವ ಉದ್ದೇಶ ಇಟ್ಟುಕೊಂಡು ನಾಗರಿಕ ಸೇವೆಯನ್ನು ಆಯ್ಕೆ ಮಾಡಬಾರದು: ವಿವೇಕ್‌ರಾಜ್ ಸಲಹೆ

Published

on

ಮಂಗಳೂರು: ‘ಅಧಿಕಾರ, ಹಣ ಅಥವಾ ಪ್ರಚಾರ ಗಿಟ್ಟಿಸುವ ಉದ್ದೇಶ ಇಟ್ಟುಕೊಂಡು ನಾಗರಿಕ ಸೇವೆಯನ್ನು ಆಯ್ಕೆ ಮಾಡಬಾರದು. ಪ್ರಜಾಪ್ರಭುತ್ವದ ಮೌಲ್ಯ, ಜಾತ್ಯತೀತ ತತ್ವಗಳನ್ನು ರಕ್ಷಿಸುವ ಕಾಳಜಿಯುಳ್ಳವರು ಮಾತ್ರ ಇದನ್ನು ಆಯ್ಕೆ ಮಾಡಬೇಕು ಎಂದು ಯುವ ಉದ್ಯಮಿ, ‘ಪನಾಮಾ ಕಾರ್ಪೊರೇಷನ್’ ಅಧ್ಯಕ್ಷ ವಿವೇಕ್‌ರಾಜ್ ಸಲಹೆ ನೀಡಿದರು.


‘ಪ್ರಜಾವಾಣಿ’ ಮತ್ತು ‘ಡೆಕ್ಕನ್ ಹೆರಾಲ್ಡ್‌’ ಪತ್ರಿಕೆಗಳ ಆಶ್ರಯದಲ್ಲಿ ‘ಇನ್‌ಸೈಟ್ಸ್‌ ಐಎಎಸ್’ ಸಂಸ್ಥೆಯ ಸಹಯೋಗದಲ್ಲಿ ನಗರದ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಶುಕ್ರವಾರ ನಡೆದ ‘ಯುಪಿಎಸ್‌ಸಿ ಪರೀಕ್ಷೆ; ಯಶಸ್ಸಿನ ಮಂತ್ರ’ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಅಧಿಕಾರ, ಹಣ ಅಥವಾ ಪ್ರಚಾರ ಗಿಟ್ಟಿಸುವ ಉದ್ದೇಶ ಇಟ್ಟುಕೊಂಡು ನಾಗರಿಕ ಸೇವೆಯನ್ನು ಆಯ್ಕೆ ಮಾಡಬಾರದು. ಪ್ರಜಾಪ್ರಭುತ್ವದ ಮೌಲ್ಯ,

ಜಾತ್ಯತೀತ ತತ್ವಗಳನ್ನು ರಕ್ಷಿಸುವ ಕಾಳಜಿಯುಳ್ಳವರು ಮಾತ್ರ ಇದನ್ನು ಆಯ್ಕೆ ಮಾಡಬೇಕು. ನಾಗರಿಕ ಸೇವೆಯಲ್ಲಿರುವರಿಗೆ ರಾಜಕೀಯ ಒತ್ತಡಗಳು ಸಾಮಾನ್ಯ.

ಅದಕ್ಕೆ ಜಗ್ಗದೆ, ಸಂವಿಧಾನದ ಮೌಲ್ಯಗಳಿಗೆ ಬದ್ಧರಾಗಿ ಕೆಲಸ ಮಾಡುವ ಮನೋಭಾವ ಇರಬೇಕು. ಪ್ರಚಾರ ಪಡೆಯಲು, ಹಣ ಗಳಿಸಲು ಬೇರೆ ಉದ್ಯೋಗಗಳಿವೆ’ ಎಂದರು.

 

‘ನಾನೂ 2010ರಲ್ಲಿ ನಾಗರಿಕ ಸೇವೆ ಪರೀಕ್ಷೆಯನ್ನು ಎದುರಿಸಿದ್ದೆ.

ಆದರೆ, ತೇರ್ಗಡೆ ಹೊಂದಲು ಸಾಧ್ಯವಾಗಲಿಲ್ಲ. ನಂತರ ಸ್ವಂತ ಉದ್ಯಮ ಆರಂಭಿಸಿ ಇಂದು ಯಶಸ್ವಿ ಉದ್ಯಮಿಯಾಗಿ ಬೆಳೆದಿದ್ದೇನೆ’ ಎಂದರು.

ಸಂತ ಅಲೋಶಿಯಸ್ ಕಾಲೇಜಿನ ಪ್ರಾಚಾರ್ಯ ಡಾ. ಪ್ರವೀಣ್ ಮಾರ್ಟಿಸ್ ಮಾತನಾಡಿ, ‘ನಾಗರಿಕ ಸೇವೆ ದೇಶಸೇವೆ ಮಾಡಲು ಸಿಗುವ ಬಹುದೊಡ್ಡ ಅವಕಾಶ.

ಕಾಲೇಜು ಹಂತದಲ್ಲಿ ಸಮಯ ವ್ಯರ್ಥ ಮಾಡದೆ, ಅವಕಾಶಗಳನ್ನು ಬಳಸಿಕೊಂಡು ನಾಗರಿಕ ಸೇವೆಗೆ ಸಿದ್ಧತೆ ಮಾಡಬೇಕು. ಸಮಾಜ ಸೇವೆಗೆ ಇದಕ್ಕಿಂತ ದೊಡ್ಡ ಅವಕಾಶ ಸಿಗುವುದಿಲ್ಲ’ ಎಂದರು.
ಮಂಗಳೂರು ಡಿಸಿಪಿ ಹರಿರಾಂ ಶಂಕರ್‌, ‘ಇನ್‌ಸೈಟ್ಸ್‌ ಐಎಎಸ್’ ಸಂಸ್ಥೆಯ ಸ್ಥಾಪಕ ವಿನಯ್ ಕುಮಾರ್ ಜಿ.ಬಿ ಇದ್ದರು.

BELTHANGADY

ಕಾಂಗ್ರೆಸ್ ಹಿರಿಯ ಮುಖಂಡ ವಸಂತ ಬಂಗೇರ ವಿಧಿವಶ

Published

on

ಬೆಳ್ತಂಗಡಿ: ಕಾಂಗ್ರೆಸ್ ಹಿರಿಯ ಮುಖಂಡ ಬೆಳ್ತಂಗಡಿ ಮಾಜಿ ಶಾಸಕ, ಸಚಿವ ವಸಂತ ಬಂಗೇರ(79 ವ) ಇಂದು(ಮೇ.8) ಸಂಜೆ 4 ಗಂಟೆಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಇವರು ಬೆಳ್ತಂಗಡಿಯಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

vasanth bangera

ಮುಂದೆ ಓದಿ..; ಹೆಚ್.ಡಿ.ರೇವಣ್ಣಗೆ ಬಿಗ್ ಶಾಕ್; 7 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

1946 ಜನವರಿ 15 ರಂದು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದಲ್ಲಿ ಜನಿಸಿದ ಇವರು ದಿ. ಕೇದೆ ಸುಬ್ಬ ಪೂಜಾರಿ ಹಾಗೂ ದಿ. ದೇವಕಿ ದಂಪತಿ ಪುತ್ರ. 1972 ರಲ್ಲಿ ಪಂಚಾಯತ್ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆ ಆಗುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. 1983 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ, 1985 ರಲ್ಲಿ ಮತ್ತೆ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 1989 ರಲ್ಲಿ ಬಿಜೆಪಿ ತೊರೆದು ಜೆಡಿಎಸ್‌ನಿಂದ ಸ್ಪರ್ಧಿಸಿ ಸೋಲನ್ನು ಅನುಭವಿಸಿದ್ದರು. ಮತ್ತೆ 1994 ರಲ್ಲಿ  ಜೆಡಿಎಸ್‌ನಿಂದ ಸ್ಪರ್ಧಿಸಿ ಮೂರನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಸುಮಾರು 52 ವರ್ಷಗಳ ಕಾಲ ರಾಜಕೀಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು.

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಎಂಟು ಬಾರಿ ಸ್ಪರ್ಧಿಸಿ ಐದು ಬಾರಿ ಶಾಸಕರಾಗಿ, ಸರಕಾರದ ಮುಖ್ಯ ಸಚೇತಕರಾಗಿ ಸೇವೆಸಲ್ಲಿಸಿದ್ದ ಬಂಗೇರರು, ಶ್ರೀ ಗುರುನಾರಾಯಣ ಸೇವಾ ಸಂಘದ ಗೌರವಾಧ್ಯಕ್ಷರಾಗಿ, ಗುರುದೇವ ಕಾಲೇಜಿನ ಅಧ್ಯಕ್ಷರಾಗಿ, ಗುರುದೇವ ಸಹಕಾರಿ ಸಂಘದ ಸ್ಥಾಪಕರಲ್ಲಿ ಓರ್ವರಾಗಿ ಕೊಡುಗೈ ದಾನಿಯಾಗಿಯಾಗಿದ್ದರು. ಮೃತರು ಪತ್ನಿ ಸುಜಿತಾ ವಿ. ಬಂಗೇರ ಹಾಗೂ ಇಬ್ಬರು ಪುತ್ರಿಯರು, ಬಂಧು ವರ್ಗದವರನ್ನು ಅಗಲಿದ್ದಾರೆ.

ಮೇ. 9ರಂದು ಮುಂಜಾನೆ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

 

Continue Reading

DAKSHINA KANNADA

ಮೇ 9 ರಂದು SSLC ಫಲಿತಾಂಶ ಪ್ರಕಟ…!

Published

on

ಮಂಗಳೂರು : 2023-24 ರ SSLC ಪರೀಕ್ಷೆಯ ಫಲಿತಾಂಶ ಮೇ 9 ರ ಬೆಳಗ್ಗೆ 10.30ಕ್ಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ. ಮಾರ್ಚ್‌ 25 ರಿಂದ ಎಪ್ರಿಲ್ 6 ರ ವರೆಗೆ ಪರೀಕ್ಷೆ ನಡೆಸಲಾಗಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದೆ. ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಈ ಬಾರಿ ಫಲಿತಾಂಶ ಬಿಡುಗಡೆಗೆ ವಿಳಂಭವಾಗಿದೆ ಎಂದು ಹೇಳಿದೆ


2023- 24ರ SSLC ಪರೀಕ್ಷೆಯಲ್ಲಿ ಈ ಬಾರಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಸಾಮಾನ್ಯ ವಿದ್ಯಾರ್ಥಿಗಳ ಜೊತೆಯಲ್ಲಿ 18,225 ಖಾಸಗಿ ವಿದ್ಯಾರ್ಥಿಗಳು ಮತ್ತು 41,375 ವಿದ್ಯಾರ್ಥಿಗಳು ರೀ ಎಕ್ಸಾಂ ಬರೆದಿದ್ದಾರೆ. ಇದರಲ್ಲಿ 4.41 ಲಕ್ಷ ಬಾಲಕರು ಮತ್ತು 4.28 ಲಕ್ಷ ಬಾಲಕಿಯರು ಇದ್ದಾರೆ.

ಫಲಿತಾಂಶವನ್ನು ನೋಡಲು ಈ ವೆಬ್‌ಸೈಟ್ ಬಳಸಿ..!

ಪರೀಕ್ಷಾ ಪ್ರವೇಶ ಪತ್ರದಲ್ಲಿ ನೀಡಿರುವ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ನಮೂದಿಸುವ ಮೂಲಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ವೀಕ್ಷಿಸಬಹುದು. kseab.karnataka.gov.in ಹಾಗೂ karresults.nic.in ವೆಬ್‌ಸೈಟ್‌ನಲ್ಲೂ ಫಲಿತಾಂಶ ವೀಕ್ಷಿಸಬಹುದಾಗಿದೆ.

Continue Reading

DAKSHINA KANNADA

ಹರಕೆ ತೀರಿಸಿದ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ; ಅಭಯವಿತ್ತ ದೈವ!

Published

on

ಮಂಗಳೂರು : ತುಳುನಾಡು ದೈವಾರಾಧನೆಯ ನೆಲೆಬೀಡು. ಇಲ್ಲಿ ದೈವಗಳ ಮೇಲೆ ಅತೀವ ನಂಬಿಕೆಯಿದೆ. ನಂಬಿದವರ ಕೈಬಿಡದು ದೈವ ಎಂಬ ನಂಬಿಕೆ ತುಳವರದು. ಸೆಲೆಬ್ರಿಟಿಗಳೂ ದೈವಗಳನ್ನು ನಂಬುತ್ತಾರೆ. ಊರಿಗೆ ಬಂದು ದೈವಗಳಿಗೆ ಕೈ ಮುಗಿಯುತ್ತಾರೆ. ನಟಿ ಶ್ರೀನಿಧಿ ಶೆಟ್ಟಿ ಸಿನಿರಂಗದಲ್ಲಿ ಯಶಸ್ಸು ಬಾಚಿಕೊಳ್ಳುತ್ತಿದ್ದರೂ ಕೂಡ ದೈವಾರಾಧನೆ ಮರೆತಿಲ್ಲ. ಅವರು ತಾವು ಹೊತ್ತ ಹರಕೆಯನ್ನು ಪೂರೈಸಿದ್ದಾರೆ.

ಅಭಯವಿತ್ತ ದೈವ :


ಕೆಜಿಎಫ್ ಖ್ಯಾತಿಯ ಶ್ರೀನಿಧಿ ಶೆಟ್ಟಿ ಅವರ ಹರಕೆಯ ನೇಮೋತ್ಸವ ಕಿನ್ನಿಗೋಳಿಯ ಅವರ ಕುಟುಂಬದ ಮನೆ ತಾಳಿಪಾಡಿಗುತ್ತುವಿನಲ್ಲಿ ನಡೆಯಿತು. ಈ ಹಿಂದೆ ತಾನು ಹರಕೆ ಹೊತ್ತಂತೆ ಸೋಮವಾರ ಕಿನ್ನಿಗೋಳಿ ಸಮೀಪ ತಾಳಿಪಾಡಿಗುತ್ತುವಿನಲ್ಲಿ ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆದಿದ್ದು, ಶ್ರೀ ನಿಧಿ ಶೆಟ್ಟಿಯವರ ಕುಟುಂಬ ವರ್ಗದವರು ಸಂಬಂಧಿಕರು ಪಾಲ್ಗೊಂಡರು.

ಇದನ್ನೂ ಓದಿ : ಮತ್ತೆ ಡೀಪ್ ಫೇಕ್ ಗೆ ಬಲಿಯಾದ ಆಲಿಯಾ ಭಟ್; ನಟಿಯ ವೀಡಿಯೋ ನೋಡಿ ಫ್ಯಾನ್ಸ್ ಶಾಕ್!


‘ಮುಂದೆ ಇನ್ನಷ್ಟು ಎತ್ತರಕ್ಕೆ ಏರುತ್ತೀರಿ’ ಎಂದು ದೈವಗಳು ಇದೇ ಸಂದರ್ಭ ಶ್ರೀನಿಧಿ ‌ಶೆಟ್ಟಿಗೆ ಅಭಯ ನೀಡಿವೆ. ಸದ್ಯ ಶ್ರೀನಿಧಿ ಶೆಟ್ಟಿ ಸಿನಿಮಾಗಳಲ್ಲು ಬಿಝಿ ಆಗಿದ್ದಾರೆ. ಸಕತ್ ಚ್ಯೂಸಿ ಕೂಡ ಆಗಿದ್ದಾರೆ. ಕೆಜಿಎಫ್ 2 ಚಿತ್ರದಲ್ಲೂ ಬಿಝಿ ಆಗಿದ್ದಾರೆ. ಅತ್ತ ತೆಲುಗು ಸಿನಿರಂಗಕ್ಕೂ ಪದಾರ್ಪಣೆ ಮಾಡಿದ್ದಾರೆ. ಜೊತೆಗೆ ಕಿಚ್ಚ ಸುದೀಪ್ ಅವರ 47 ನೇ ಚಿತ್ರದಲ್ಲಿ ನಟಿಸುತ್ತಿದ್ದಾರೆ.

Continue Reading

LATEST NEWS

Trending