ಕಾಸರಗೋಡು: ಸಹೋದರರೊಳಗೆ ಜಗಳ ನಡೆದಿದ್ದು ಅದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕಾಸರಗೋಡಿನ ಪೆರ್ಲ ಸಮೀಪದ ಶೇಣಿ ಉಪ್ಪಳಿಗೆಯಲ್ಲಿ ನಡೆದಿದೆ.
ಉಪ್ಪಳಿಗೆಯ ಥೋಮಸ್ ಡಿಸೋಜ (45) ಕೊಲೆಗೀಡಾದ ದುರ್ದೈವಿಯಾಗಿದ್ದಾರೆ. ಈತನ ಸಹೋದರ ರಾಜೇಶ್ (37) ಕೃತ್ಯ ನಡೆಸಿದ್ದಾನೆ.
ರಾತ್ರಿ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಇಬ್ಬರ ನಡುವಿನ ಜಗಳವನ್ನು ತಡೆಯಲು ಬಂದ ಥೋಮಸ್ ನ ಸಂಬಂಧಿಕ ವಿಲ್ಫ್ರೆಡ್ ಗೂ ಗಾಯಗಳಾಗಿವೆ.
ಜಗಳ ವಿಕೋಪಕ್ಕೆ ತಿರುಗಿ ರಾಜೇಶನು ಥೋಮಸ್ನನ್ನು ಇರಿದಿದ್ದು , ಬೊಬ್ಬೆ ಕೇಳಿ ಸ್ಥಳೀಯರು ಬಂದು ರಕ್ತದ ಮಡುವಿನಲ್ಲಿ ಬಿದ್ದಿದ್ದ ಥೋಮಸ್ರನ್ನು ಕಾಸರಗೋಡು ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ.
ಸದ್ಯ ರಾಜೇಶ್ ಬದಿಯಡ್ಕ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಗಾಯಗೊಂಡ ವಿಲ್ಫ್ರೆಡ್’ನನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.