Connect with us

    DAKSHINA KANNADA

    ಗುಜ್ಜರೆಕೆರೆ ಪರಿಸರದಲ್ಲಿ ಸ್ವಚ್ಛತಾ ಶ್ರಮದಾನ, ನೂರು ಗಿಡ ನೆಡುವ ಕಾರ್ಯಕ್ರಮ

    Published

    on

    ಮಂಗಳೂರು:  ಶ್ರೀ ಅಂಬಾ‌ಮಹೇಶ್ವರಿ ಸೇವಾ ಟ್ರಸ್ಟ್ (ರಿ)ಜೆಪ್ಪು ಇದರ ‘ನಮ್ಮ ಊರು – ನಮ್ಮ ಹೆಮ್ಮೆ’ ಮಾದರಿ ವಾರ್ಡ್ ಯೋಜನೆಯ ಪ್ರಯುಕ್ತ ತನ್ನ 13 ನೇ ತಿಂಗಳ ಸ್ವಚ್ಛತಾ ಶ್ರಮದಾನ ಹಾಗೂ ನಗರ ಹಸಿರೀಕರಣದ ಭಾಗವಾಗಿ ಮೂರು ವಾರ್ಡ್‌ಗಳಲ್ಲಿ ನೂರು ಗಿಡ ನೆಡುವ ಕಾರ್ಯಕ್ರಮ ಜೂ.2ರಂದು ಗುಜ್ಜರೆಕೆರೆ ಪರಿಸರದಲ್ಲಿ ನಡೆಯಿತು.

    ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದಜಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
    ಮಂಗಳೂರು ವಲಯದ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶ್ರೀ ಅಂಬಾಮಹೇಶ್ವರಿ ಸೇವಾ ಟ್ರಸ್ಟ್‌ನ ಅಧ್ಯಕ್ಷರಾದ ಸೀತಾರಾಮ ಎ ಅವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಪರಿಸರ ಪ್ರೇಮಿ ಮಾಧವ ಉಳ್ಳಾಲ್‌ರವರ ಮಾರ್ಗದರ್ಶನದಲ್ಲಿ ಸುಮಾರು 30 ಗಿಡಗಳನ್ನು ನೆಡಲಾಯಿತು.

    ಬಳಿಕ ಮಾತನಾಡಿದ ಸ್ವಾಮಿ ಜಿತಕಾಮಾನಂದಜಿ ಅಂಬಾಮಹೇಶ್ವರಿ ಟ್ರಸ್ಟ್‌ನ ಕಾರ್ಯ‌ವನ್ನು ಶ್ಲಾಘಿಸಿ ಆಶೀರ್ವಚನ ನೀಡಿದರು.
    ಹಸಿರೀಕರಣದ ಪ್ರಯುಕ್ತ ಮೂರು ವಾರ್ಡ್‌ಗಳಲ್ಲಿ ನೂರು ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ತುಂಬಾ ಶ್ಲಾಘನೀಯ ಟ್ರಸ್ಟ್‌ನ ವತಿಯಿಂದ ನಡೆಯುವ ಸಮಾಜಸೇವೆ ಹೊರ ಜಗತ್ತಿಗೆ ತಿಳಿದಿದೆಯೊ ಇಲ್ಲವೂ ಆದರೆ ಅವರ ಕೆಲಸ ಅಭಿನಂದನೀಯ ಎಂದರು. ಅದಲ್ಲದೆ ನಗರಗಳಲ್ಲೂ ಕಾಡು ಬೆಳೆಸಬಹುದು ಎಂಬುದಕ್ಕೆ ನಿದರ್ಶನ ನಮ್ಮ ರಾಮಕೃಷ್ಣ ಮಠದ‌ ಸುಪರ್ದಿಯಲ್ಲಿ ಮಿಯವಾಕಿ ಅಥವಾ ಅರ್ಬನ್ ಫಾರೆಸ್ಟ್‌ನ್ನು ಮೂರು ಸೆಂಟ್ಸ್ ಜಾಗದಲ್ಲಿ ಸುಂದರವಾಗಿ ಬೆಳೆಸಿದ್ದಾರೆ ಎಂದು ತಿಳಿಸಿದರು. ಗಿಡಗಳನ್ನು ನೆಡುವುದು ಮುಖ್ಯ‌ವಲ್ಲ ಅದನ್ನು ಸಂರಕ್ಷಿಸಿಕೊಂಡು ಬರುವುದು ತುಂಬಾ ಮುಖ್ಯ. ನಮ್ಮ ಊರು ನಮ್ಮ ನಾಡು ನಮ್ಮ ದೇಶವನ್ನು ಸ್ವಚ್ಚವಾಗಿ ಇಡೋಣ ಎಂದು ಹೇಳಿದರು.

    ಅರಣ್ಯಾಧಿಕಾರಿಗಳಾದಂತ ರಾಜೇಶ್ ಬಳಿಗಾರ್ ಅವರು ಮಾತನಾಡಿ ರಸ್ತೆಗಳ ಪಕ್ಕದಲ್ಲಿ, ಮನೆ ಸುತ್ತಮುತ್ತ, ಉದ್ಯಾನವನಗಳಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕು ಎಂದರು. ಇಲ್ಲವಾದಲ್ಲಿ ನಮ್ಮ ಭೂಮಿ ಕೂಡಾ ಜೀವಿಗಳಿಲ್ಲದ ಗ್ರಹ ಆಗುತ್ತದೆ. ನಾವು ನಡೆಯುವಾಗ, ಸುತ್ತಾಡುವಾಗ ಅಕ್ಕಪಕ್ಕ ಮರಗಳಿದ್ದರೆ ನಮ್ಮ ಮನಸ್ಸಿಗೆ ಆಹ್ಲಾದಕರ ಭಾವನೆ ಉಂಟಾಗುತ್ತದೆ. ಉತ್ತಮ ಮಾನಸಿಕ ಶಕ್ತಿ ನಮ್ಮ ಶರೀರದಲ್ಲಿ ಸಂಚರಿಸುತ್ತದೆ. ಬೇಸಿಗೆ ಬಿಸಿಲಲ್ಲಿ ತಂಪು ನೀಡುತ್ತದೆ. ಮಳೆ ನೀರು ಇಂಗಲು ಸಹಾಯ ಆಗುತ್ತದೆ. ಮರಗಳು ಹೆಚ್ಚುತ್ತಾ ಹೋದಂತೆ ಅಂತರ್‌ಜಲ ಮಟ್ಟ ವೃದ್ಧಿಯಾಗುತ್ತದೆ ಎಂದರು. ಟ್ರಸ್ಟ್‌ನ ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತಾ ಸೀತಾ ಅಶೋಕ ಔಷಧ ಗುಣ ಇರುವ ಗಿಡ ಮತ್ತು ಈ ಪರಿಸರಕ್ಕೆ ಹೊಂದಿಕೊಳ್ಳುವಂತದ್ದು. ಇಂತಹ ಗಿಡಗಳನ್ನು ನೆಡುವುದರಿಂದ ನೀರು-ಗಾಳಿ ಸ್ವಚ್ಛವಾಗಿ ಇರುತ್ತದೆ. ಅರಣ್ಯ ಇಲಾಖೆಯ ವನಮಹೋತ್ಸವ ಕಾರ್ಯಕ್ರಮಕ್ಕೆ ಇದು ಮೊದಲ ಕಾರ್ಯಕ್ರಮ. ಹಾಗೆ ಅರಣ್ಯ ಇಲಾಖೆಯನ್ನು ಭಾಗಿಯನ್ನಾಗಿಸಿದ್ದು ತುಂಬಾ ಸಂತೋಷ ತಂದಿದೆ ಎಂದರು. ಅರಣ್ಯ ಇಲಾಖೆಯ ಪೂರ್ಣ ಸಹಕಾರ ನಿಮ್ಮೊಂದಿಗೆ ಇದೆ ಎಂದು ಭರವಸೆ ನೀಡಿದರು.

    ಮುಂದೆ ಓದಿ..; ರೋಹನ್ ಕಾರ್ಪೊರೇಷನ್‌ನಲ್ಲಿ ಪರಿಸರ ದಿನಾಚರಣೆ

    ನಂತರ ಡಾ. ಪ್ರವೀಣ್ ರವರು ಧನ್ಯವಾದ ಸಮರ್ಪಣೆ ಮಾಡಿದರು. ಗಿಡ ನೆಡುವ ಕಾರ್ಯಕ್ರಮದ ನಂತರ ಎಲ್ಲರೂ ತಮ್ಮ ಸ್ವಚ್ಛತಾ ಶ್ರಮದಾನವನ್ನು ಪೂರ್ತಿಗೊಳಿಸಿದರು. ಕಾರ್ಯಕ್ರಮದಲ್ಲಿ ಹಿಂದೂ ಪತ್ರಿಕೆಯ ಅನಿಲ್ ಶಾಸ್ತ್ರೀ , ಸ್ಥಳೀಯ ಕಾರ್ಪೊರೇಟರ್ ಭಾನುಮತಿ , ಸೇವಾ ಟ್ರಸ್ಟ್‌ನ ಸದಸ್ಯರುಗಳಾದ ಡಾ. ಪ್ರವೀಣ್, ದಿನೇಶ್ ಕರ್ಕೇರ, ಪುನೀತ್, ನಿಕೇತನ್ , ಆರ್.ಕೆ.ನಿರಂಜನ್ , ದಿನೇಶ್ ಬೇಕಲ್ ಮತ್ತು ಇತರರು ಭಾಗವಹಿಸಿದ್ದರು. ಡಾ. ಪ್ರವೀಣ್ ಅತಿಥಿಗಳನ್ನು ಸ್ವಾಗತಿಸಿದರು.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    DAKSHINA KANNADA

    ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!

    Published

    on

    ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.

    ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.

    ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.

    ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.

    ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.

    Continue Reading

    LATEST NEWS

    Trending