‘ವಿಶು’ಗೆ ತುಳುವಿನಲ್ಲೇ ವಿಶ್.. ತುಳುವರ ಹೃದಯ ಕದ್ದ ಮುಖ್ಯಮಂತ್ರಿ ಹಾಗೂ ಕಮಿಷನರ್.!
ತುಳುವರ ‘ಬಿಸು’ ಪರ್ಬಕ್ಕೆ ತುಳುವಿನಲ್ಲೇ ಶುಭ ಕೋರಿದ ಸಿ.ಎಂ ಹಾಗೂ ಕಮಿಷನರ್ ಹರ್ಷ.!
ಮಂಗಳೂರು: ಸೌರಮಾನ ಯುಗಾದಿಯೆಂದೇ ಪ್ರಸಿದ್ದವಾಗಿರವ ವಿಷು ಹಬ್ಬ, ಹೊಸ ವರ್ಷಕ್ಕೆ ಹೊಸ ಚೈತನ್ಯ ತುಂಬುವ ಹೊಸ ಸಂವತ್ಸರವನ್ನು ಸ್ವಾಗತಿಸುವ ಸುದಿನ.
ಮೇಷಮಾಸದ ಮೊದಲ ದಿನ ಸುವಸ್ತುಗಳನ್ನು ಕಣಿಯಿಟ್ಟು ಸಿರಿ ಸಂಪತ್ತಿನ ಸೊಬಗಿಗೆ ಮುನ್ನುಡಿ ಬರೆದು ನವಚೇತನ ಬಾಳಲ್ಲಿ ತುಂಬಲೆಂದು ಹಿರಿಯರ ಆಶೀರ್ವಾದ ಪಡೆಯುವ ಈ ದಿನ ಪರ್ವದಿನ ಕೂಡ ಹೌದು.
ಆದ್ರೆ ಈ ಬಾರಿ ಕೊರೊನಾ ಮಹಾಮಾರಿ ವಕ್ಕರಿಸಿದ ಹಿನ್ನಲೆ ಬಿಸುಪರ್ಬವನ್ನು ಎಲ್ಲರೂ ಮನೆಯಲ್ಲಿಯೇ ಆಚರಿಸುವಂತಾಗಿದೆ.
ಜನ ಮನೆಯಲ್ಲಿದ್ದುಕೊಂಡೇ ಹಬ್ಬ ಆಚರಿಸಿ ಅಂತ ಖುದ್ದು ಪ್ರಧಾನಿ ಮೋದಿಯೇ ಕರೆ ಕೊಟ್ಟಿದ್ದಾರೆ.
ಇದೀಗ ರಾಜ್ಯದ ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪ ಹಾಗೂ ಮಂಗಳೂರು ಪೊಲೀಸ್ ಆಯುಕ್ತ ಡಾ.ಹರ್ಷ ಅವರು ತುಳುವರ ಹಬ್ಬ ‘ಬಿಸು’ಗೆ ವಿಶೇಷವಾಗಿ ತುಳುವಿನಲ್ಲಿಯೇ ಶುಭಾಶಯ ಕೋರುವ ಮೂಲಕ ತುಳು ಭಾಷಾ ಪ್ರೇಮ ಮೆರೆದಿದ್ದಾರೆ.
“ಬಿಸುತ ದಿನ ಪೊಸತ್ ಮನಸ್’
ಪೊಸತ್ ಕನಸ್ ಪೊಸತ್ ತೆನಸ್
ಮಾತಲಾ ಪೊಸತ್ ಪೊಸತ್ ಆವಡ್
ಪೊಸ ವರ್ಷೊಡು ಪರತ್ ಮಹಾಮಾರಿ
ದೂರ ಆದ್ ಸುಖ ಸಂತೋಸ ನೆಲೆಸಡ್
ಮಾತೆರೆಗ್ ಬಿಸುತ ಸುಭಾಸುಯೊಲು.1/2”
ಅಂತ ಅಚ್ಛ ತುಳು ಭಾಷೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸಮಸ್ತ ತುಳುವರಿಗೆ ಬಿಸು ಹಬ್ಬದ ಶುಭಾಶಯ ಕೋರಿದ್ದಾರೆ.
ಇತ್ತ ಕರಾವಳಿ ಜನತೆಗೆ ಹಾಗೆ ತುಳುವರಿಗೆ ಮಂಗಳೂರು ಪೊಲೀಸ್ ಆಯುಕ್ತ ಡಾ.ಪಿ.ಎಸ್ ಹರ್ಷ ಅವರು ಕೂಡ ತುಳು ಭಾಷೆಯಲ್ಲಿಯೇ ಹಬ್ಬದ ಶುಭ ಕೋರಿದ್ದಾರೆ.
‘ನಮಸ್ಕಾರ.. ತುಳುನಾಡ್ ದ ಮಾತಾ ತುಳುವ ಬಂಧುವುಲೆಗ್ ಪೊಸ ವರ್ಷದ “ಬಿಸು ಪರ್ಬದ” ಉಡಲ್ ದಿಂಜಿನ ಎಡ್ಡೆಪ್ಪು..
ಅಂಚನೆ ಊರುಗು ಬತ್ತಿನ ಮಹಾಮಾರಿ ಕೊರೊನ;ನ್ ನಮ ಮಾತಾ ಸೇರ್ದ್ ನಮ್ಮ ದೇಶೋಡ್ದೇ ಗಿಡಪುಗ’ – #ಇಲ್ಲಡ್_ಉಪ್ಪುಗ_ಜಾಗ್ರತೆಡ್_ಉಪ್ಪುಗ
ಅಂತ ಪೊಲೀಸ್ ಕಮಿಷನರ್ ಹರ್ಷ ಟ್ವೀಟಿಸಿ ಶುಭಾಶಯ ಕೋರಿದ್ದಾರೆ.
ಒಟ್ನಲ್ಲಿ ಕರೆಯದೇ ಬಂದ ಅತಿಥಿ ಕೊರೊನಾ ವೈರಸ್ ಅನ್ನು ನಾವೆಲ್ಲರೂ ಒಟ್ಟಾಗಿ ಈ ದೇಶದಿಂದಲೇ ಒದ್ದೋಡಿಸಬೇಕಾಗಿದೆ. ಹಾಗಾಗಿ ಹೊರಗೆಲ್ಲೂ ಸುತ್ತಾಡದೇ, ಮನೆಯಲ್ಲಿದ್ದುಕೊಂಡೇ ಹಬ್ಬ ಆಚರಿಸೋಣ ಅಲ್ಲವೇ….
DAKSHINA KANNADA
ಹಳ್ಳ ಹಿಡಿದ ಸ್ಮಾರ್ಟ್ ಸಿಟಿಯ ಕಾಮಗಾರಿ; ಕುಂಟುತ್ತಾ ಸಾಗಿದ ಮಹಾಕಾಳಿ ಪಡ್ಪು ಅಂಡರ್ ಪಾಸ್
ಮಂಗಳೂರು: ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೈಗೆತ್ತಿಕೊಂಡಿರುವ ಮಹಾಕಾಳಿ ಪಡ್ಪುವಿನ ರೈಲ್ವೇ ಅಂಡರ್ ಪಾಸ್ ಕಾಮಗಾರಿ ಸದ್ಯಕ್ಕಂತು ಮುಗಿಯುವ ಲಕ್ಷಣ ಕಾಣಿಸುತ್ತಿಲ್ಲ. ಈ ಕಾಮಗಾರಿ ಕೈಗೆತ್ತಿಕೊಂಡು ವರ್ಷಗಳೇ ಕಳೆದರೂ ಕಾಮಗಾರಿ ಮುಗಿಸಬೇಕು ಅನ್ನೋ ಇಚ್ಚೆ ಸ್ಮಾರ್ಟ್ ಸಿಟಿ ಯೋಜನೆಯವರಿಗೂ ಇದ್ದಂತಿಲ್ಲ.
ಕೆಲ ತಿಂಗಳ ಹಿಂದೆ ಕಳಪೆ ಕಾಮಗಾರಿಯಿಂದಾಗಿ ಇಲ್ಲಿ ಕಾಮಗಾರಿ ಕುಸಿತ ಕೂಡಾ ಉಂಟಾಗಿತ್ತು. ಇದೀಗ ಕೆಲ ದಿನಗಳಿಂದ ಯಾವುದೇ ಕಾಮಗಾರಿ ನಡೆಸದೆ ಕಾರ್ಮಿಕರು ಕೂಡಾ ಕೆಲಸ ಇಲ್ಲದೆ ಸುಮ್ಮನೆ ಕುಳಿತಿರುವ ದೃಶ್ಯ ಇಲ್ಲಿ ಮಾಮೂಲಾಗಿದೆ. ಮಾರ್ಗನ್ ಗೇಟ್ ಮೂಲಕವಾಗಿ ಜೆಪ್ಪಿನ ಮೊಗೆರು ಹೈವೆ ಸಂಪರ್ಕಿಸುವ ಈ ರಸ್ತೆಯಲ್ಲಿ ನಿತ್ಯ ಸಾವಿರಾರು ವಾಹನಗಳು ಓಡಾಡುತ್ತಿದೆ. ಸದ್ಯ ಈ ಕಾಮಗಾರಿ ಆರಂಭವಾದ ಬಳಿಕ ಇಲ್ಲಿ ದ್ವಿಚಕ್ರ ವಾಹನಕ್ಕಷ್ಟೇ ಓಡಾಡಲು ವ್ಯವಸ್ಥೆ ಮಾಡಲಾಗಿದೆ.
ಉಪ್ಪಳದಲ್ಲಿ 3.5 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶ; ಓರ್ವ ಬಂಧನ
ಹೀಗಾಗಿ ಈ ರಸ್ತೆಯ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಕಾಮಗಾರಿ ಯಾವಾಗ ಮುಗಿಸ್ತೀರಿ ಅಂತ ಪ್ರಶ್ನೆ ಮಾಡುತ್ತಿದ್ದಾರೆ. ಆದರೆ ಇಲ್ಲಿ ನಡಿಯುತ್ತಿರುವ ಕಾಮಗಾರಿಯ ವೇಗ ನೋಡಿದರೆ ಇದು 2024 ರಲ್ಲಿ ಪೂರ್ಣಗೊಳ್ಳುವ ಯಾವುದೇ ಲಕ್ಷಣ ಇಲ್ಲ ಅನ್ನೋದು ಸ್ಪಷ್ಟವಾಗುತ್ತಿದೆ. ಹೀಗಾಗಿ ತಕ್ಷಣ ಅಂಡರ್ ಪಾಸ್ ಕೆಲಸ ಮಗಿಸಿ ಅಂತ ಜನ ಒತ್ತಾಯಿಸಿದ್ದಾರೆ.
LATEST NEWS
11 ವರ್ಷದ ಬಾಲಕ ಹೃದಯಘಾ*ತಕ್ಕೆ ಬ*ಲಿ
ಹಾಸನ : ಹೃದಯಾಘಾ*ತ ಎಂಬುದು ಇತ್ತೀಚೆಗೆ ಸಾಮಾನ್ಯವಾಗಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರೂ ಹೃದಯಾ*ಘಾತಕ್ಕೆ ಒಳಗಾಗುತ್ತಿದ್ದಾರೆ. ರಾಜ್ಯದಲ್ಲಿ ಮತ್ತೊಂದು ಕಳವಳಕಾರಿ ಘಟನೆ ನಡೆದಿದ್ದು, 11 ವರ್ಷದ ಬಾಲಕ ಹೃದಯಾ*ಘಾತಕ್ಕೆ ಬ*ಲಿಯಾಗಿದ್ದಾನೆ. ಈ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಚನ್ನಾಪುರ ಗ್ರಾಮದಲ್ಲಿ ನಡೆದಿದೆ. ಸಚಿನ್ ಮೃ*ತ ಬಾಲಕ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದ ಸಚಿನ್, ಮನೆಯಲ್ಲಿ ಟಿವಿ ನೋಡುತ್ತಿದ್ದ ವೇಳೆ ಹೃದಯಾ*ಘಾತವಾಗಿದೆ.
ಇದನ್ನೂ ಓದಿ : ಮನೆಯಲ್ಲಿ ಹಲ್ಲಿ ಕಾಟವೇ? ಈ ಸಿಂಪಲ್ ಮನೆಮದ್ದು ಟ್ರೈ ಮಾಡಿ
ಟಿವಿ ನೋಡುತ್ತಲೇ ಕುಸಿ*ದು ಬಿದ್ದ ಮಗನನ್ನು ಮಾತನಾಡಿಸಲು ಮನೆಯವರು ಪ್ರಯತ್ನಿಸಿದ್ದು, ಏನು ಮಾತನಾಡದೆ ಇರೋದನ್ನು ಗಮನಿಸಿ ಪೋಷಕರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಲೂಕು ಸರ್ಕಾರಿ ಆಸ್ಪತ್ರೆಗೆ ಕರೆತರುವ ಮುನ್ನವೇ ಬಾಲಕ ಸಾ*ವನ್ನಪ್ಪಿದ್ದ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ತಿಳಿದು ಬಂದಿದೆ.
FILM
ಕನ್ನಡದ ಸೀರಿಯಲ್ನಲ್ಲಿ ಮಿಂಚುತ್ತಿರುವ ಉಡುಪಿಯ ಬೆಡಗಿ
ಬೆಂಗಳೂರು/ಮಂಗಳೂರು: ಸಿನೆಮಾದಲ್ಲಿ ನಟಿಸಬೇಕು ಅನ್ನೋದು ಎಲ್ಲರ ಕನಸು. ಆದರೆ ಇಲ್ಲೊಬ್ಬಾಕೆ ನಟಿಗೆ ಸೀರಿಯಲ್ನಲ್ಲಿ ನಟಿಸಬೇಕು ಎಂಬ ಆಸೆ. ಆದರೆ ಆಕೆಗೆ ಮಾತ್ರ ಮೊದಲು ಒಲಿದು ಬಂದಿದ್ದು ಸಿನೆಮಾದಲ್ಲಿ ನಟಿಸುವ ಅವಕಾಶ. ಇದೀಗ ಆ ನಟಿ ಸುರ್ವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಅವನು ಮತ್ತು ಶ್ರಾವಣಿ’ ಧಾರವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹೌದು, ಈ ಧಾರಾವಾಹಿಯಲ್ಲಿ ಶ್ರಾವಣಿಯಾಗಿ ಕಾಣಿಸಿಕೊಂಡಿರುವ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದಾರೆ.
ಶ್ರಾವಣಿ ಪಾತ್ರದ ಇಶಿಕಾ ಶೆಟ್ಟಿಗಾರ್ ಮೂಲತಃ ಉಡುಪಿಯವರಾಗಿದ್ದು ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈಕೆ 9 ನೇ ತರಗತಿಯಲ್ಲಿದ್ದಅಗಲೇ ಸಿನೆಮಾ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಊರ್ವಿ, ಗರುಡ, ಮನದ ಮರೆಯಲಿ ಸೇರಿದಂತೆ ನಾಳ್ಕೈದು ಸಿನೆಮಾಗಳಲ್ಲಿ ನಟಿಸಿದ್ದಾರೆ. ಬಳಿಕ ಕಾನೂನು ಪದವಿ ಮುಗಿಸಿರುವ ಇವರು ಸೀರಿಯಲ್ ನಲ್ಲಿ ಆಭಿನಯಿಸುವತ್ತ ಒಲವು ಮಾಡಿದ್ದಾರೆ. ಹೀಗಾಗಿ ಲುಕ್ ಟೆಸ್ಟ್ ಕೂಡಾ ಕೊಟ್ಟಿದ್ದಾರೆ.
ಜಾನಿ ಮಾಸ್ಟರ್ ಪತ್ನಿಗೂ ಬಂತು ಕಂಟಕ..! ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್..!!
ಇದೇ ವೇಳೆ ‘ಅವನು ಮತ್ತು ಶ್ರಾವಣಿ’ ಧಾರಾವಾಹಿಗೆ ರಿಪ್ಲೇಸ್ಮೆಂಟ್ ಪಾತ್ರಕ್ಕೆ ಕರೆ ಬರುತ್ತದೆ. ರಿಪ್ಲೇಸ್ಮೆಂಟ್ ಪಾತ್ರ ಆಗಿದ್ದರಿಂದ ಜನರಿಗೆ ಇಷ್ಟ ಆಗ್ಬೋದಾ ಅನ್ನುವ ಮೈಂಡ್ ಸೆಟ್ ನಲ್ಲಿ ಇವರು ಕೊನೆಗೂ ಪಾತ್ರಕ್ಕೆ ಸೈ ಎಂದು ಹೇಳಿದ್ದಾರೆ. ಇದೀಗ ಧಾರಾವಾಹಿ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ. ಈ ಧಾರಾವಾಹಿಯಲ್ಲಿ ನಟನೆ ಆರಂಭಿಸಿದ ಮೇಲೆ ಆಫರ್ಗಳು ಬರುತ್ತಿದೆ ಎಂದು ಇಶಿಕಾ ಶೆಟ್ಟಿಗಾರ್ ಹೇಳಿದ್ದಾರೆ.