LATEST NEWS
ಅಪಘಾತಕ್ಕೀಡಾದವರ ರಕ್ಷಣೆಗೆ “ಆಪತ್ಕಾಲಯಾನ”: 65 ನೂತನ ಅಂಬುಲೆನ್ಸ್ ಗೆ ಚಾಲನೆ ನೀಡಿದ ಸಿಎಂ
ಬೆಂಗಳೂರು: ಅಪಘಾತಕ್ಕೆ ಒಳಗಾಗುವ ಜನರ ರಕ್ಷಣೆಗೆ ಮುಖ್ಯಮಂತ್ರಿಗಳ ಹೆಸರಿನಲ್ಲೇ “ಆಪತ್ಕಾಲಯಾನ” ಎಂಬ ಅಂಬುಲೆನ್ಸ್ಗಳ ಸೇವೆಯನ್ನು ಒದಗಿಸುತ್ತಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರಸ್ತೆ ಅಪಾಘಾತಕ್ಕೀಡಾದವರ ಗೋಲ್ಡನ್ ಅವಧಿಯ ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ 65 ನೂತನ ಅಂಬುಲೆನ್ಸ್ಗಳ ಸೇವೆಗೆ ಇಂದು (ಸೆ.23ರಂದು) ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ರಾಜ್ಯದಲ್ಲಿ ಪ್ರತಿ ವರ್ಷ 40 ಸಾವಿರ ಅಪಘಾತ ಪ್ರಕರಣಗಳು ನಡೆಯುತ್ತಿವೆ. ಸರಾಸರಿ 10 ಸಾವಿರ ಜನರು ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ಅಪಘಾತಕ್ಕೆ ಒಳಗಾಗುವ ಜನರ ರಕ್ಷಣೆಗೆ ಪ್ರತ್ಯೇಕವಾಗಿ ಮುಖ್ಯಮಂತ್ರಿಗಳ ಹೆಸರಿನಲ್ಲೇ “ಆಪತ್ಕಾಲಯಾನ” ಅಂಬುಲೆನ್ಸ್ಗಳ ಸೇವೆಯನ್ನು ಒದಗಿಸುತ್ತಿದ್ದೇವೆ. ಮುಂಬರುವ ವರ್ಷದಲ್ಲಿ ರಾಜ್ಯದ ಎಲ್ಲ ತಾಲೂಕು ಆಸ್ಪತ್ರೆಗಳಿಗೂ ಈ ಯೋಜನೆ ವಿಸ್ತರಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ಅಂಬುಲೆನ್ಸ್ಗಳು ಹೇಗೆ ಕಾರ್ಯನಿರ್ವಹಿಸಲಿವೆ?
- ಹೆಚ್ಚು ಅಪಘಾತ ಸಂಭವಿಸುವ ಸ್ಥಳಗಳ ಹತ್ತಿರದ ಆಸ್ಪತ್ರೆಗಳಲ್ಲಿ ಅಂಬುಲೆನ್ಸ್ಗಳು ತಂಗಲಿವೆ.
- 65 ಹಾಟ್ಸ್ಪಾಟ್ಗಳನ್ನ ಗುರುತಿಸಲಾಗಿದ್ದು, ಆ ಸ್ಥಳಗಳ ಹತ್ತಿರದ ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗಳಿಗೆ ಅಂಬುಲೆನ್ಸ್ಗಳನ್ನು ನೀಡಲಾಗಿದೆ.
- ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಅಡ್ವಾನ್ಸ್ ಲೈಫ್ ಸಪೋರ್ಟ್ (ALS) ಅಂಬ್ಯುಲೆನ್ಸ್ ಸೇವೆ ಲಭ್ಯವಾಗಲಿದೆ.
- ಜಿಲ್ಲಾಸ್ಪತ್ರೆಗಳ ಮಟ್ಟದಲ್ಲಿ ಚಿಕಿತ್ಸೆ ಅಗತ್ಯವಾದಲ್ಲಿ ಆರೋಗ್ಯ ಇಲಾಖೆಯ ಸ್ಟಾಫ್ ನರ್ಸ್ನ್ನು ಅಂಬುಲೆನ್ಸ್ಗಳಿಗೆ ಡೆಪ್ಯೂಟ್ ಮಾಡಲಾಗುವುದು.
- ವೆಂಟೀಲೇಟರ್ ಸಹಾಯದೊಂದಿಗೆ ಜಿಲ್ಲಾಸ್ಪತ್ರೆಗಳಿಗೆ ರೋಗಿಗಳನ್ನ ಕರೆದೊಯ್ದು ಚಿಕಿತ್ಸೆ ಕೊಡಿಸುವ ಸೌಲಭ್ಯ ಒದಗಿಸಲಾಗಿದೆ.
- ಅಂಬುಲೆನ್ಸ್ಗಳು ಸುಸಜ್ಜಿತ ಉಪಕರಣಗಳು, ಔಷಧಿ ಹಾಗೂ ಉಪಭೋಗ್ಯ ವಸ್ತುಗಳನ್ನು ಹೊಂದಿರಲಿವೆ. ಈ ಪ್ರಕ್ರಿಯೆಯು ಅಪಘಾತಕ್ಕೆ ಒಳಗಾದ ವ್ಯಕ್ತಿಯ ಜೀವ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿವೆ. ಅಲ್ಲದೇ ಸ್ಥಳಾಂತರಕ್ಕೆ ರೋಗಿಗಳ ಸ್ವಂತ ಹಣದ ವ್ಯಯವನ್ನು ತಪ್ಪಿಸಲಿದೆ.
BANTWAL
ವಗ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬಸ್; ಹಲವರಿಗೆ ಗಾಯ
ಬಂಟ್ವಾಳ ತಾಲೂಕಿನ ವಗ್ಗದ ಸಮೀಪ ಕೊಪ್ಪಳ ಎಂಬಲ್ಲಿ ಸರ್ಕಾರಿ ಬಸ್ ಉರುಳಿ ಬಿದ್ದಿದ್ದು, ಹಲವರು ಗಾಯಗೊಂಡಿದ್ದಾರೆ.
ಧರ್ಮಸ್ಥಳ ಮಂಗಳೂರು ನಡುವೆ ಸಂಚರಿಸುವ ಸರ್ಕಾರಿ ಬಸ್ ಇದಾಗಿದ್ದು, ಕೊಪ್ಪಳ ಎಂಬಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ರಸ್ತೆಯ ಪಕ್ಕದ ಗುಂಡಿಗೆ ಬಸ್ ಉರುಳಿ ಬಿದ್ದಿದ್ದು ಬಸ್ನಲ್ಲಿದ್ದ ಹಲವರಿಗೆ ಗಾಯಗಳಾಗಿದೆ. ತಕ್ಷಣ ಸ್ಥಳೀಯ ಯುವಕರು ಸೇರಿ ಬಸ್ ಒಳಗಿದ್ದ ಪ್ರಯಾಣಿಕರನ್ನು ಬಸ್ ನಿಂದ ಹೊರ ತೆಗೆದಿದ್ದಾರೆ.
ಗಾಯಾಳುಗಳನ್ನು ಖಾಸಗಿ ವಾಹನಗಳ ಮೂಲಕ ಸಮೀಪದ ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದ್ದಾರೆ. ಬಸ್ ಬರುತ್ತಿರುವ ವೇಳೆ ಬೈಕ್ ಒಂದು ಅಡ್ಡ ಬಂದಿದ್ದು ಈ ವೇಳೆ ಬಸ್ ನಿಯಂತ್ರಿಸುವ ವೇಳೆ ರಸ್ತೆಯಿಂದ ಪಕ್ಕಕ್ಕೆ ಉರುಳಿದೆ ಎಂದು ಬಸ್ ಚಾಲಕ ಮಾಹಿತಿ ನೀಡಿದ್ದಾರೆ . ಆದರೆ ಸ್ಥಳಿಯರು ಇದನ್ನು ನಿರಾಕರಿಸಿದ್ದು ಬಸ್ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಿದ್ದಾರೆ.
ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದು, ಮಾಹಿತಿ ಪಡೆದುಕೊಂಡು ಘಟನೆಗೆ ಕಾರಣ ಏನು ಎಂಬ ಬಗ್ಗೆ ವಿಚಾರಣೆ ಮುಂದುವರೆಸಿದ್ದಾರೆ.
LATEST NEWS
ತಿರುಪತಿ ಲಡ್ಡು ಸೂಪರ್.. ಲಡ್ಡು ತಿಂದು ಖುಷಿ ಹಂಚಿಕೊಂಡ ಭಕ್ತರು..!
ಆಂಧ್ರಪ್ರದೇಶ/ಮಂಗಳೂರು: ತಿರುಪತಿಯಲ್ಲಿ ಶ್ರೀ ವೆಂಕಟರಮಣನ ಲಡ್ಡು ಪ್ರಸಾದದಲ್ಲಿ ಪ್ರಾಣಿ ಕೊಬ್ಬು ಕಲಬೆರಕೆ ವಿಚಾರದ ಬಳಿಕ ಕರ್ನಾಟಕದ ಕೆಎಮ್ಎಫ್ನಿಂದ ನಂದಿನಿ ತುಪ್ಪವನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಇದೀಗ ನಂದಿನಿ ತುಪ್ಪ ಬಳಸಿ ತಯಾರಾಗುತ್ತಿರುವ ಲಡ್ಡು ತಿಂದು ಭಕ್ತಾದಿಗಳು ಖುಷಿಪಟ್ಟಿದ್ದಾರೆ.
ಪ್ರಸಾದಕ್ಕೆ ಕಲಬೆರಕೆ ಬೆನ್ನಲ್ಲೇ ದೇವಸ್ಥಾನವನ್ನು ಶುದ್ದೀಕರಿಸಲಾಗಿದೆ. ಜೊತೆಗೆ ನಂದಿನಿ ತುಪ್ಪವನ್ನು ಪ್ರಸಾದಕ್ಕೆ ಬಳಸುತ್ತಿರುವ ಬಳಿಕ ಭಕ್ತಾಧಿಗಳು ತಿರುಪತಿಗೆ ದೇವರ ದರ್ಶನಕ್ಕೆ ತೆರಳುತ್ತಿದ್ದಾರೆ. ಜೊತೆಗೆ ಅಪಾರ ಸಂಖ್ಯೆಯಲ್ಲಿ ಲಡ್ಡು ಪ್ರಸಾದವನ್ನು ಸ್ವೀಕಾರ ಮಾಡುತ್ತಿದ್ದಾರೆ.
ಈ ಬಗ್ಗೆ ಭಕ್ತರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದು ನಾವು ಲಡ್ಡು ತೆಗೆದುಕೊಂಡು ತಿಂದೆವು. ಟೇಸ್ಟ್ ಸೂಪರ್ ಆಗಿದೆ. ನಮ್ಮ ಕೆಎಂಎಫ್.. ನಮ್ಮ ಬೆಂಗಳೂರು. ನಮಗೂ ಖುಷಿ ತಂದಿದೆ. ತುಂಬಾ ಚೆನ್ನಾಗಿದೆ ಎಂದು ಖುಷಿ ಹಂಚಿಕೊಂಡಿದ್ದಾರೆ. ನಮ್ಮ ನಾಡಿನ ನಂದಿನಿ ತುಪ್ಪ ಬಳಸಿ ಲಡ್ಡು ಮಾಡುತ್ತಿರುವುದು ತುಂಬಾ ಖುಷಿ ವಿಚಾರ. ಮಧ್ಯದಲ್ಲಿ ಈ ರೀತಿಯ ವಿವಾದ ಎದ್ದಿದ್ದಕ್ಕೆ ಬೇಜಾರಾಯ್ತು. ನಮ್ಮ ಕರ್ನಾಟಕ ನಮ್ಮ ಹೆಮ್ಮೆ. ನಂದಿನಿ ನಮ್ಮ ಹೆಮ್ಮೆ. ನಂದಿನಿ ಬಳಸಿ ಸ್ವಾಧಿಷ್ಟಕರವಾದ ಲಡ್ಡು ಸವಿಯಿರಿ ಎಂದು ಖುಷಿ ವ್ಯಕ್ತಪಡಿಸಿದ್ದಾರೆ.
LATEST NEWS
ಆಟದ ಮೈದಾನದ ಗೇಟ್ ಬಿದ್ದು ಬಾಲಕ ಸಾ*ವು; ಕುಟುಂಬಕ್ಕೆ ಪರಿಹಾರ ಘೋಷಣೆ
ಮಂಗಳೂರು/ಬೆಂಗಳೂರು : ಮಲ್ಲೇಶ್ವರಂನಲ್ಲಿ ಬಿಬಿಎಂಪಿ ವ್ಯಾಪ್ತಿಯ ಆಟದ ಮೈದಾನದ ಗೇಟ್ ಬಿದ್ದು ಬಾಲಕ ಸಾ*ವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ವಿಜಯಕುಮಾರ್ ಮತ್ತು ಪ್ರಿಯಾ ದಂಪತಿ ಪುತ್ರ ನಿರಂಜನ್(10) ಮೃ*ತ ಬಾಲಕ. ಆಟ ಆಡಲು ಮೈದಾನದ ಗೇಟ್ ಓಪನ್ ಮಾಡುತ್ತಿದ್ದಂತೆ ಮಗುವಿನ ಮೇಲೆಯೇ ಗೇಟ್ ಬಿದ್ದಿದೆ. ಈ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಕೂಡಲೇ ಸ್ಥಳೀಯರು ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೇ ಬಾಲಕ ಕೊನೆ*ಯುಸಿರೆಳೆದಿದ್ದಾನೆ.
ಮೃ*ತ ನಿರಂಜನ್ ಮಲ್ಲೆಶ್ವರಂನ ಬಿಬಿಎಂಪಿ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದ. ಜೊತೆಗೆ ತಂದೆ ವಿಜಯಕುಮಾರ್ ಆಟೋ ಚಾಲಕರಾಗಿದ್ದು, ಮಲ್ಲೇಶ್ವರನ ಪೈಪ್ಲೈನ್ನಲ್ಲಿ ಈ ಕುಟುಂಬ ವಾಸವಾಗಿತ್ತು. ಇನ್ನು ಘಟನಾಸ್ಥಳಕ್ಕೆ ಮಲ್ಲೇಶ್ವರಂ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : WATCH : ಎಸಿ ಕೋಚ್ನಲ್ಲಿ ಟಿಕೇಟ್ ಇಲ್ಲದೆ ಪ್ರಯಾಣಿಸಿದ ಹಾವು; ವೀಡಿಯೋ ವೈರಲ್
ಪರಿಹಾರ ಘೋಷಣೆ :
ನಿರಂಜನ್ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೃತ ಬಾಲಕನ ಕುಟುಂಬಕ್ಕೆ ರಾಜ್ಯ ಸರ್ಕಾರ, ಬಿಬಿಎಂಪಿಯಿಂದ 5 ಲಕ್ಷ ರೂಪಾಯಿ ಮತ್ತು ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ 5 ಲಕ್ಷ ರೂಪಾಯಿ ಸೇರಿ ಒಟ್ಟು 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದರು.
- FILM5 days ago
ಬಿಗ್ ಬಾಸ್ ಕನ್ನಡ ಸೀಸನ್ -11 ರ ಸ್ಪರ್ಧಿಗಳ ಹೆಸರು ರಿವೀಲ್..?
- NATIONAL4 days ago
ಶ್ವಾನ ನೆಗೆದು ಗರ್ಭಪಾತ; ಮಾಲಿಕನಿಗೆ 10 ಲಕ್ಷ ದಂಡ
- NATIONAL4 days ago
ವಿಶ್ವದ ಶ್ರೀಮಂತ ಭಿಕ್ಷುಕ ಇವರೇ ನೋಡಿ ! ಭರತ್ ಜೈನ್ ಒಟ್ಟು ಆಸ್ತಿ ಎಷ್ಟು ಗೊತ್ತಾ ???
- LATEST NEWS4 days ago
ಟಾರ್ಗೆಟ್ ತಲುಪೋ ಭರದಲ್ಲಿ ರಾತ್ರಿ ಹಗಲೆನ್ನದೇ ಕೆಲಸ ಮಾಡಿ ಯುವತಿ ಸಾ*ವು