DAKSHINA KANNADA
ಗೋ ಹತ್ಯೆ-ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ಸರ್ಕಾರದ ನಿಲುವಿಗೆ ಕರಾವಳಿ ಸಂತರ ಖಂಡನೆ..!
ಗೋ ಹತ್ಯೆ-ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ಸರ್ಕಾರದ ನಿಲುವನ್ನು ಕರಾವಳಿ ಸಾಧು ಸಂತರು, ಮಠಾಧೀಶರು ತೀವ್ರವಾಗಿ ಖಂಡಿಸಿದ್ದು ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.
ಮಂಗಳೂರು : ಗೋ ಹತ್ಯೆ-ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ಸರ್ಕಾರದ ನಿಲುವನ್ನು ಕರಾವಳಿ ಸಾಧು ಸಂತರು, ಮಠಾಧೀಶರು ತೀವ್ರವಾಗಿ ಖಂಡಿಸಿದ್ದು ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಮಂಗಳೂರಿನಲ್ಲಿ ಸಭೆ ಸೇರಿದ ಕರಾವಳಿಯ ಸಾಧು ಸಂತರು ಸರ್ಕಾರದ ನಿಲುವಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬಳಿಕ ಸುದ್ದಿಗೋಷ್ಟಿ ನಡೆಸಿದ ವಿವಿಧ ಮಠಾಧೀಶರು ಗೋಹತ್ಯೆ ನಿಷೇಧ ಕಾಯ್ದೆ ಹಿಂದಕ್ಕೆ ಪಡೆದುಕೊಳ್ಳುವುದು, ಮತಾಂತರ ಕಾಯ್ದೆಯನ್ನು ರದ್ದುಪಡಿಸುವುದು, ಲವ್ ಜಿಹಾದ್ ಪ್ರಕರಣಗಳನ್ನು ಹತ್ತಿಕ್ಕದಿರುವುದು, ಹಿಂದೂ ಸಂಘಟನೆ ನಾಯಕರ ವಿರುದ್ಧ ಗಡೀಪಾರು ಪ್ರಕ್ರಿಯೆ ನಡೆಸುತ್ತಿರುವುದು ಸೇರಿದಂತೆ ರಾಜ್ಯದ ಕಾಂಗ್ರೆಸ್ ಸರಕಾರ ಕೆಲವೊಂದು ಹಿಂದು ವಿರೋಧಿ ನೀತಿಗಳನ್ನು ಕೈಗೊಂಡಿರುವುದು ಸರಿಯಲ್ಲ. ಇದನ್ನು ಇಡೀ ಸಂತ ಸಮುದಾಯ ಖಂಡಿಸುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಣಿಲ ಕ್ಷೇತ್ರದ ಮೋಹನ ದಾಸ ಸ್ವಾಮೀಜಿ, ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 10ರ ಬಳಿಕ ನಮ್ಮ ಒಕ್ಕೊರೊಲ ಮನವಿಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ,ರಾಜ್ಯಪಾಲರಿಗೆ, ಗೃಹ ಸಚಿವರಿಗೆ ಸಲ್ಲಿಸುತ್ತೇವೆ.
ನಾವೆಲ್ಲರೂ ಸಂತ ಸಮುದಾಯದ ಒಟ್ಟು ಸೇರಿ ಅವರನ್ನು ಮುಖತಃ ಭೇಟಿ ಮಾಡಲಿದ್ದೇವೆ ಎಂದರು.
ಒಡಿಯೂರು ಕ್ಷೇತ್ರದ ಗುರುದೇವಾನಂದ ಸ್ವಾಮೀಜಿ ಮಾತನಾಡಿ, ನಾವೆಲ್ಲರೂ ಒಟ್ಟು ಸೇರಿ ಹಿಂದು ಸಮುದಾಯದ ಮೇಲೆ ಆಗುವ ಕೆಲವು ಸರಕಾರದ ನಿರ್ಣಯಗೊಳಿಂದ ಗೊಂದಲ ಆಗುವುದರಿಂದ ಸಂತರು ಎಲ್ಲಾ ಒಗ್ಗಟ್ಟಾಗಿ ಹೋರಾಟಕ್ಕೆ ಸಿದ್ಧತೆ ಮಾಡಿದ್ದಾರೆ ಎಂದರು.
ಸಮಾಜಕ್ಕೆ ತೊಂದರೆ ಆದಾಗ ಸಂತ ಸಮುದಾಯ ಒಗ್ಗಟ್ಟಾಗಿ ನಿಲ್ಲುತ್ತದೆ ಎಂದರು.
ಗುರುಪುರ ಮಠದ ವಜ್ರದೇಹಿ ಸ್ವಾಮೀಜಿ ಮಾತನಾಡಿ, ಲವ್ ಜಿಹಾದ್ಗೆ ಸೂಕ್ತ ಕಡಿವಾಣ ಹಾಕಲು ಪೊಲೀಸರು ಮುಂದಾಬೇಕು.
ಆದರೆ ಆಂಟಿ ಕಮ್ಯೂನಲ್ ವಿಂಗ್ ಮೂಲಕ ಹಿಂದು ಯುವಕರನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ.
ವಿನಾಃ ಕಾರಣ ಹಿಂದೂ ಯುವಕರನ್ನು ಗಡೀಪಾರು ಮಾಡುವ ಬಗ್ಗೆಯೂ ನಮ್ಮ ಗಮನಕ್ಕೆ ಬಂದಿದೆ.
ವಿನಾಕಾರಣ ಹಿಂದು ಯುವಕರಿಗೆ ಕಿರುಕುಳ ನೀಡಿದರೆ ಈ ಬಗ್ಗೆಯೂ ನಾವೂ ತೀವ್ರ ಹೋರಾಟ ಮಾಡಲಿದ್ದೇವೆ ಎಂದರು.
ಸಮಾನ ನಾಗರಿಕ ಸಂಹಿತೆ ವಿಚಾರದಲ್ಲೂ ನಾವು ಜಾಗೃತಿ ಮೂಡಿಸುತ್ತಿದ್ದೇವೆ.
ಹಿಂದು ಸಮಾಜದ ಇಡೀ ನಿರ್ಣಯವನ್ನು ಮಾಡಿಕೊಂಡು ನಾವು ಸಂಘಟಿತರಾಗಿ ಹೋರಾಟ ಮಾಡಲಿದ್ದೇವೆ.
ಎಲ್ಲಾ ಮಠಾಧೀಶರನ್ನೂ ಭೇಟಿ ಮಾಡಿ ಒಕ್ಕೊರಳ ನಿರ್ಣಯ ಮಾಡಿ ಇಡೀ ಕರ್ನಾಟಕ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲು ಸಂತ ಸಮುದಾಯ ಒಕ್ಕೊರಳ ನಿರ್ಣಯ ಮಾಡಿದ್ದೇವೆ ಎಂದರು.
ಹಿಂದುಗಳಿಗೆ ಅನ್ಯಾಯವಾಗುವ ಯಾವುದೇ ವಿಚಾರ ಬಂದಾಗಲೂ ಸಂತ ಸಮುದಾಯ ಒಗ್ಗಟ್ಟಿನಿಂದ ಹೋರಾಟವನ್ನು ಮಾಡಿದ್ದೇವೆ.
ನಮಗೆ ಸರಕಾರದಿಂದ ನ್ಯಾಯ ಸಿಗದೇ ಇದ್ದಲ್ಲಿ ನ್ಯಾಯಾಲಯದ ಮೆಟ್ಟಲೇರಲೂ ಸಂತ ಸಮುದಾಯ ಮುಂದಾಗಲಿದೆ ಎನ್ನುವ ನಿರ್ಣಯವನ್ನು ಮಾಡಿದ್ದೇವೆ ಎಂದರು.
ಕಣಿಯೂರು ಕ್ಷೇತ್ರದ ಮಹಾಬಲ ಸ್ವಾಮೀಜಿ, ಕೊಂಡೆವೂರು ನಿತ್ಯಾನಂದ ಪೀಠದ ಶ್ರೀಗಳು, ಈಶ ವಿಠಲದಾಸ ಸ್ವಾಮೀಜಿ, ವಿದ್ಯಾನಂದ ಸರಸ್ವತೀ ಸ್ವಾಮೀಜಿ, ಹಿಂದು ಮುಖಂಡರಾದ ಎಂ ಬಿ ಪುರಾಣಿಕ್, ಪ್ರಕಾಶ್ ಪಿ ಎಸ್ ಮೊದಲಾದವರು ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
DAKSHINA KANNADA
ಮಂಗಳೂರು : ಮೇ 25 ರಂದು ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ
ಮಂಗಳೂರು : ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.), ಮಂಗಳೂರು ಮತ್ತು ನಾರಾಯಣ ಗುರು ಕಾಲೇಜು ಇದರ ಆಶ್ರಯದಲ್ಲಿ ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಸಹಕಾರದಿಂದ ಹಿಂದುಳಿದ ಸಮಾಜದ ಸಾಮಾಜಿಕ ಕ್ರಾಂತಿಯ ಹರಿಕಾರ ದಿ.ದಾಮೋದರ ಆರ್.ಸುವರ್ಣ ಜನ್ಮಶತಾಬ್ದಿ ಪ್ರಯುಕ್ತ ಮೇ 25 ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನ ದಾಮೋದರ ಆರ್.ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆ ತನಕ ಈ ಕಾರ್ಯಕ್ರಮ ನಡೆಯಲಿದೆ.
ವೈದ್ಯಕೀಯ ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಎಲುಬು, ಕೀಲು ಮತ್ತು ಸಾಮಾನ್ಯ ರೋಗ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ರೀಡಿಂಗ್ ಕನ್ನಡಕ ಅಗತ್ಯ ಇದ್ದವರಿಗೆ ಉಚಿತವಾಗಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸುವವರಿಗೆ ಕೆ.ಎಮ್.ಸಿ.ಯ ಹಸಿರು ಕಾರ್ಡ್ ನೀಡಲಾಗುವುದು.
ಇದನ್ನೂ ಓದಿ : ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್
ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯಬೇಕು. ಅದೇ ರೀತಿ ರಕ್ತದಾನದಲ್ಲೂ ಸ್ವಯಂ ಸ್ಪೂರ್ತಿಯಿಂದ ಭಾಗವಹಿಸಬೇಕೆಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.
DAKSHINA KANNADA
ಈ 7 ರೈಲು ನಿಲ್ದಾಣಗಳಲ್ಲಿ ಸಿಗುತ್ತೆ ಅತೀ ಕಡಿಮೆ ಬೆಲೆಗೆ ತಿಂಡಿ, ಊಟ
ಮಂಗಳೂರು: ಭಾರತೀಯ ರೈಲ್ವೆ ಮಂಡಳಿಯು ಕರ್ನಾಟಕದ ಏಳು ನಿಲ್ದಾಣಗಳು ಸೇರಿದಂತೆ ದೇಶದ 100ಕ್ಕೂ ಹೆಚ್ಚು ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ಕಂಪಾರ್ಟ್ಮೆಂಟ್ ಕೋಚ್ಗಳ ಬಳಿ ಕಡಿಮೆ ದರದಲ್ಲಿ ಉತ್ತಮ ಆಹಾರವನ್ನು ಒದಗಿಸುವ ಕೌಂಟರ್ಗಳನ್ನು ತೆರೆದಿದೆ.
ಕರ್ನಾಟಕದಲ್ಲಿ ದಕ್ಷಿಣ ರೈಲ್ವೆ ಅಡಿಯಲ್ಲಿ ಮಂಗಳೂರು ಸೆಂಟ್ರಲ್ ಮತ್ತು ಜಂಕ್ಷನ್ ರೈಲ್ವೆ ವಿಭಾಗಗಳಲ್ಲಿ ಸಬ್ಸಿಡಿ ಆಹಾರ ಕೌಂಟರ್ಗಳನ್ನು ತೆರೆಯಲಾಗಿದೆ. ಹಾಗೆಯೇ ನೈರುತ್ಯ ರೈಲ್ವೆಯ ಅಡಿಯಲ್ಲಿ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ರೈಲು ನಿಲ್ದಾಣಗಳಲ್ಲಿ ಈ ಆಹಾರ ಕೌಂಟರ್ಗಳನ್ನು ತೆರೆಯಲಾಗಿದೆ.
ಈ ಯೋಜನೆಯು ಭಾರತೀಯ ರೈಲ್ವೆಯ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ ಮತ್ತು ಭಾರತೀಯ ರೈಲ್ವೆಯ ಜಂಟಿ ಉಪಕ್ರಮವಾಗಿದೆ. ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಹಿಂದೆ ಜನತಾ ಊಟದ ಸೇವೆಯ ಅಡಿಯಲ್ಲಿ ರೈಲ್ವೆ ನಿಲ್ದಾಣದ ರೆಸ್ಟೋರೆಂಟ್ಗಳಲ್ಲಿ ಕಡಿಮೆ ದರದ ಆಹಾರ ಲಭ್ಯವಿತ್ತು. ಈಗ ಕೌಂಟರ್ಗಳು ನೇರವಾಗಿ ಪ್ಲಾಟ್ಫಾರ್ಮ್ಗಳಲ್ಲಿ ಈ ಸೇವೆಯನ್ನು ಆರಂಭಿಸಲಾಗಿದೆ.
ಪ್ರಸ್ತುತ 100 ರೈಲು ನಿಲ್ದಾಣಗಳಲ್ಲಿ 150 ಪ್ಲಾಟ್ಫಾರ್ಮ್ಗಳು ಈ ಸೌಲಭ್ಯವನ್ನು ನೀಡುತ್ತವೆ. ಬೆಳಗಿನ ಉಪಹಾರ 20 ರೂ., ಲಘು ಊಟ 50 ರೂ., 3 ರೂ.ಗೆ 200 ಎಂಎಲ್ ನೀರು ನೀಡಲಾಗುತ್ತದೆ. ಈ ಮಾಹಿತಿಯನ್ನು ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಒಟ್ಟಾರೆ ಈ ಯೋಜನೆಯು ರೈಲು ಪ್ರಯಾಣಿಕರ ಆಹಾರ ಸಮಸ್ಯೆಯನ್ನು ಪರಿಹರಿಸಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮೇ 19, 20ರಂದು ಆರೆಂಜ್ ಅಲರ್ಟ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇದೇ 18 ರಿಂದ 21 ರವರೆಗೆ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ 19 ಮತ್ತು 20 ರಂದು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಆರೆಂಜ್ ಅಲರ್ಟ್ ಇರುವ ದಿನಗಳಲ್ಲಿ ಮಿಂಚು, ಗುಡುಗು, ಸಿಡಿಲುಗಳಿಂದ ಕೂಡಿದ ಭಾರಿ ಮಳೆಯಾಗಲಿದೆ. ಜಿಲ್ಲೆಯ ಕೆಲವೆಡೆ 11.55 ಸೆಂ.ಮೀ ನಿಂದ 20.44 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಇದೇ 18 ಮತ್ತು 21ರಂದು ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕೆಲವೆಡೆ 6.45 ಸೆಂ.ಮೀ ನಿಂದ 11.55 ಸೆಂ.ಮೀವರೆಗೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
- LATEST NEWS6 days ago
ವರ್ತೂರು ಸಂತೋಷ್ ತೋಟದಲ್ಲಿ ಮತ್ತೆ ಸೇರಿದ ಬಿಗ್ಬಾಸ್ ಸ್ಪರ್ಧಿಗಳು
- LATEST NEWS5 days ago
ಖಾಲಿ ಬಿಯರ್ ಬಾಟಲಿಗಳಿಂದ ಲಕ್ಷಾಧಿಪತಿಯಾದ ವ್ಯಕ್ತಿ..!
- LATEST NEWS5 days ago
ಪ್ರೇಯಸಿಯ ಜೊತೆ ಗೋವಾ ಟೂರ್..! ಕ್ಷೌರಿಕನಿಗೆ ದುಬಾರಿಯಾದ ಟೂರ್..!
- DAKSHINA KANNADA5 days ago
ದೇವರಿಗೆ ಇಟ್ಟ ಹೂವುಗಳನ್ನು ಒಣಗಿದ ನಂತರ ಹೀಗೆ ಮಾಡಿ..!