Connect with us

DAKSHINA KANNADA

ಬಾಯಲ್ಲಿ ನೀರೂರಿಸೋ ಕೊಕೋ ಹಾಗೂ ಅಡಕೆಯ ಹೋಳಿಗೆ

Published

on

ಇತ್ತೀಚೆಗೆ ಹಲಸಿನ ಹಣ್ಣಿನ ಚಾಕೋಲೇಟ್‌ ಸುದ್ದಿಯಾದ ಬೆನ್ನಲ್ಲೇ ಕರಾವಳಿಯಲ್ಲೇ ಸಿಗುವ ಕೊಕೋ ಹಾಗೂ ಅಡಕೆಯ ಮೂಲಕ ಹೋಳಿಗೆ ತಯಾರಿಸಲು ಸಾಧ್ಯ ಎಂಬುದನ್ನು ಕರಾವಳಿಗರೊಬ್ಬರು ತಿಳಿಸಿ ಕೊಟ್ಟಿದ್ದಾರೆ.


ದ.ಕ. ಜಿಲ್ಲೆಯ ಪುತ್ತೂರಿನ ಗುರಿಮೂಲೆ ಪಾಕತಜ್ಞ ಶ್ರೀಕೃಷ್ಣ ಶಾಸ್ತ್ರಿ ಅವರು ಅಡಕೆ ಹಾಗೂ ಕೊಕೋ ಬಳಸಿ ಸ್ವಾದಿಷ್ಟವಾದ ಹೋಳಿಗೆ ತಯಾರಿಸಿದ್ದಾರೆ. ಸದ್ಯ ಇದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿ ಹಲವರು ಈ ಹೋಳಿಗೆ ಸವಿಯಲು ತುದಿಗಾಲಲ್ಲಿ ನಿಂತಿದ್ದಾರೆ. ಕೆಲವೇ ದಿನಗಳಲ್ಲಿ ಖಾಸಗಿ ಮಾರುಕಟ್ಟೆಗೆ ಈ ಹೋಳಿಗೆ ಕಾಲಿಡಲಿದೆ ಎಂದು ಶ್ರೀಕೃಷ್ಣ ಶಾಸ್ತ್ರಿ ಹೇಳಿದ್ದಾರೆ.
ಹೋಳಿಗೆ ತಯಾರಿ ಹೇಗೆ?
ಒಣ ಕೋಕೋ ಬೀನ್ಸನ್ನು ಹುರಿದು ಹಿಟ್ಟು ಮಾಡಿ ಅದಕ್ಕೆ ರವೆ ಹಾಗೂ ಸಕ್ಕರೆ ಪಾಕ ಸೇರಿಸಿ ಉಂಡೆ ಮಾಡಿ ಕನಕ(ಮೈದಾ ಹಿಟ್ಟಿನ ಉಂಡೆ ರಚನೆ) ಜೊತೆ ಲಟ್ಟಿಸಿ ತಯಾರಿಸಲಾಗುತ್ತದೆ. ಅಡಕೆ ಹೋಳಿಗೆಗೆ 2 ವರ್ಷ ಹಿಂದಿನ ಹಳೆ ಅಡಕೆ(ಡಬ್ಬಲ್‌ ಚೋಲ್‌) ಅತ್ಯುತ್ತಮ. ಹಳೆ ಅಡಕೆಯನ್ನು ಸಣ್ಣ ತುಂಡು ಮಾಡಿ ತುಪ್ಪದ ಜೊತೆ ಮಿಕ್ಸಿಯಲ್ಲಿ ಅರೆದು ನೀರು ಹಾಕಿ ಬೇಯಿಸಬೇಕು. ಬಳಿಕ ರವೆಯನ್ನು ಮಿಶ್ರಣ ಮಾಡಿ ಸಕ್ಕರೆ ಪಾಕ ಸೇರಿಸಿ ಉಂಡೆ ಕಟ್ಟಿಕನಕ ಜೊತೆ ಹೋಳಿಗೆ ತಯಾರಿಸಿದ್ದಾರೆ. ಇದನ್ನು ಪ್ರಾಯೋಗಿಕವಾಗಿ ಮಾಡಿದ್ದು, 250 ಗ್ರಾಂ ಹಳೆ ಅಡಕೆ ಬಳಸಿ 52 ಹೋಳಿಗೆ ತಯಾರಿಸಲಾಗಿದೆ. ಕೋಕೋ ಹೋಳಿಗೆಗೆ 1 ಕೇಜಿ ಕೋಕೋ ಬೀನ್ಸ್‌ ಬಳಸಿದ್ದು, 130 ಹೋಳಿಗೆ ತಯಾರಾಗಿದೆ. ಪ್ರಸಕ್ತ ಕೋಕೋ ಹೋಳಿಗೆ ಒಂದಕ್ಕೆ 15 ರು. ಹಾಗೂ ಅಡಕೆ ಹೋಳಿಗೆಗೆ 22 ರು. ದರ ನಿಗದಿಪಡಿಸಲಾಗಿದೆ.

DAKSHINA KANNADA

ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!

Published

on

ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್‌ ಬೆರೆಸಿರುವ ಘಟನೆ ನಡೆದಿದೆ.

feed

ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್‌ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ.  ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!

ಕೋಮಾಗೆ ಜಾರಿದ ಮಗು:

ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

 

 

Continue Reading

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

LATEST NEWS

Trending