BANTWAL
ಬಂಟ್ವಾಳ: ಕಡಿಯುತ್ತಿದ್ದ ತೆಂಗಿನಮರ ಮೈಮೇಲೆ ಬಿದ್ದು ದುರಂತ ಸಾವು
ಬಂಟ್ವಾಳ: ತೆಂಗಿನಮರ ಕಡಿಯುವ ವೇಳೆ ಯುವಕನೋರ್ವನ ಮೇಲೆ ಮರ ಬಿದ್ದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಶಂಭೂರು ಗ್ರಾಮದ ನಾಯಿಲದಲ್ಲಿ ನಡೆದಿದೆ.
ನಾಯಿಲ ಬೆಟ್ಟುಗದ್ದೆ ನಿವಾಸಿ ದಿ.ಪೂವಪ್ಪ ಪೂಜಾರಿ ಅವರ ಪುತ್ರ ಯತಿರಾಜ್(37) ಮೃತಪಟ್ಟ ಯುವಕ.
ಸ್ಥಳೀಯ ಕೃಷಿಕರೋರ್ವರ ತೋಟದಲ್ಲಿ ತೆಂಗಿನಮರ ಕಡಿಯುವ ವೇಳೆ ಘಟನೆ ನಡೆದಿದ್ದು, ತಕ್ಷಣ ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುಲಾಯಿತ್ತಾದರೂ ಆದಾಗಲೇ ಮೃತಪಟ್ಟಿದ್ದರು. ಯತಿರಾಜ್ ಗೆ ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದು, ಅವರು ಮರ ಕಡಿಯುವ ಕೆಲಸದ ಗುತ್ತಿಗೆ ವಹಿಸುತ್ತಿದ್ದರು.
BANTWAL
ದೊಡ್ಮನೆಗೆ ಎಂಟ್ರಿ ಕೊಟ್ಟ ಕರಾವಳಿಯ ಖ್ಯಾತ ಯೂಟ್ಯೂಬರ್ ಧನರಾಜ್ ಆಚಾರ್ಯ
ಬಂಟ್ವಾಳ : ಖ್ಯಾತ ಯುಟ್ಯೂಬರ್ ಧನರಾಜ್ ಆಚಾರ್ಯ ಈ ಬಾರಿ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದಾರೆ.
ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ಮಾಮೇಶ್ವರ ನಿವಾಸಿಯಾಗಿರುವ ಧನರಾಜ್ ಆಚಾರ್ಯ ತಮ್ಮ ಕಾಮಿಡಿ ಮ್ಯಾನರಿಸಂನಿಂದಲೇ ಫೇಮಸ್. ಹಾಸ್ಯಮಯ ವೀಡಿಯೋಗಳನ್ನು ಮಾಡಿ ಜನಮನಕ್ಕೆ ಹತ್ತಿರವಾಗಿದ್ದಾರೆ. ಜರ್ನಲಿಸಂ ಪದವೀಧರನಾಗಿರುವ ಧನರಾಜ್, ಆರಂಭದಲ್ಲಿ ಸಂಸಾರ ಜೋಡುಮಾರ್ಗ ತಂಡದ ಕಲಾವಿದನಾಗಿದ್ದು ಬಳಿಕ ಮೈಸೂರಿನ ರಂಗಾಯಣದಲ್ಲಿ ರಂಗಭೂಮಿ ಪದವಿಯನ್ನೂ ಪಡೆದಿದ್ದಾರೆ.
ಟಿಕ್ ಟಾಕ್ ನಲ್ಲಿ ಕಾಮಿಡಿ ವೀಡಿಯೋ ಮಾಡಿ ಪ್ರಸಿದ್ದಿ ಪಡೆದಿದ್ದ ಧನರಾಜ್ ಬಳಿಕ ಯೂಟ್ಯೂಬ್ ಹಾಗೂ ಇನ್ಸ್ಟಾಗ್ರಾಂ ನಲ್ಲಿ ಕಾಮಿಡಿ ವಿಡಿಯೋಗಳನ್ನು ಮಾಡಿ ಖ್ಯಾತಿ ಗಳಿಸಿದ್ದಾರೆ. ಕಲರ್ಸ್ ಕನ್ನಡದಲ್ಲಿ ಬಿತ್ತರವಾಗುವ ಗಿಚ್ಛಿಗಿಲಿಗಿಲಿ ಸೀಸನ್ 2 ರ ಸ್ಪರ್ಧಿಯಾಗಿಯೂ ಗಮನ ಸೆಳೆದಿದ್ದರು.
ವಿವಾಹದ ಬಳಿಕವೂ ಪತ್ನಿ ಪ್ರಜ್ಞಾ ಆಚಾರ್ಯ ಜೊತೆಗೂಡಿ ವೀಡಿಯೋಗಳನ್ನು ಮಾಡುತ್ತಿರುವ ಧನರಾಜ್ ಆಚಾರ್ಯ ಇತ್ತೀಚೆಗಷ್ಟೇ ಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ.
BANTWAL
ಹಿರಿಯ ಸಾಮಾಜಿಕ ಮುಂದಾಳು ಉದ್ಯಮಿ ರಘು ಸಪಲ್ಯ ನಿ*ಧನ
ಮಂಗಳೂರು: ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯದಲ್ಲಿ ಸಕ್ರೀಯರಾಗಿದ್ದ ಮತ್ತು ಹಲವು ದೇವಸ್ಥಾನಗಳ ಅಧ್ಯಕ್ಷರಾಗಿ, ದೇವಸ್ಥಾನಗಳ ಅಭಿವೃದ್ದಿಗೆ ಕಾರಣೀಕರ್ತರಾಗಿದ್ದ ಉದ್ಯಮಿ ರಘು ಸಪಲ್ಯ ನಿ*ಧನರಾಗಿದ್ದಾರೆ.
ಬಂಟ್ವಾಳ ತಾಲೂಕು ಗಾಣಿಗ ಸಂಘದ ಅಧ್ಯಕ್ಷರಾಗಿ, ಸುಮಂಗಲ ಹಾಲ್ ಹಾಗೂ ಸುಮಂಗಲ ಕೋ ಅಪರೇಟ್ ಬ್ಯಾಂಕ್ ಸ್ಥಾಪನೆಯ ಮೂಲಕ ಸಹಕಾರಿ ಕ್ಷೇತ್ರಕ್ಕೂ ತಮ್ಮ ಕೊಡುಗೆ ನೀಡಿದ್ದಾರೆ. ಜ್ಯೋತಿ ಬೀಡಿ ಎಂಬ ಬೀಡಿ ಉದ್ಯಮದ ಮೂಲಕ ಅನೇಕ ಬಡ ಕುಟುಂಬಗಳಿಗೆ ಬದುಕು ಕಟ್ಟಿಕೊಟ್ಟ ಹೆಗ್ಗಳಿಕೆ ಇವರದ್ದು. ಬಡವರಿಗೆ ಅಶಕ್ತರಿಗೆ ಹಾಗೂ ಸಾಮಾಜಿಕ ಮತ್ತು ಧಾರ್ಮಿಕ ಕಾರ್ಯಗಳಿಗೆ ಕೊಡುಗೈ ಧಾನಿಯಾಗಿ ಇವರು ಗುರುತಿಸಿಕೊಂಡಿದ್ದರು.
ಅಪಾರ ದೈವ ಭಕ್ತರಾಗಿದ್ದ ರಘು ಸಪಲ್ಯ ಅವರು ಜಿಲ್ಲೆಯಲ್ಲಿ ಮಾತ್ರವಲ್ಲದೆ ಹೊರ ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳ ಅಭಿವೃದ್ದಿಗೆ ಸಹಕಾರ ನೀಡಿದ್ದರು. ನೇರ ನಡೆನುಡಿಯವರಾಗಿದ್ದರೂ ಅಜಾತ ಶತ್ರು ಎಂಬ ಹೆಸರು ಗಳಿಸಿದ್ದ ಇವರು ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಸಂಘದ ಸ್ವಯಂ ಸೇವಕರಾಗಿ ಹೋರಾಟದಲ್ಲಿ ಭಾಗಿಯಾಗಿದ್ದರು.
ಪಾಣೆ ಮಂಗಳೂರು ಭಯಂಕೇಶ್ವರಿ ದೇವಸ್ಥಾನದ ಆಡಳಿತ ಮಂಡಳಿಯ ಟ್ರಸ್ಟ್, ಉಳಿಯ ಕ್ಷೇತ್ರ, ಅತ್ತಾವರ ಉಮಾಮಹೇಶ್ವರ ಕ್ಷೇತ್ರ, ಕೀರ್ತಿಶ್ವರ ಕ್ಷೇತ್ರ ಮಂಜೇಶ್ವರ, ಕೋದಂಡ ರಾಮ ಭಜನಾ ಮಂದಿರ ಹೀಗೆ ಹಲವಾರು ಧಾರ್ಮಿಕ ಕ್ಷೇತ್ರದಲ್ಲಿ ಇವರು ಸೇವೆ ಸಲ್ಲಿಸಿದ್ದಾರೆ.
BANTWAL
ವಗ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬಸ್; ಹಲವರಿಗೆ ಗಾಯ
ಬಂಟ್ವಾಳ ತಾಲೂಕಿನ ವಗ್ಗದ ಸಮೀಪ ಕೊಪ್ಪಳ ಎಂಬಲ್ಲಿ ಸರ್ಕಾರಿ ಬಸ್ ಉರುಳಿ ಬಿದ್ದಿದ್ದು, ಹಲವರು ಗಾಯಗೊಂಡಿದ್ದಾರೆ.
ಧರ್ಮಸ್ಥಳ ಮಂಗಳೂರು ನಡುವೆ ಸಂಚರಿಸುವ ಸರ್ಕಾರಿ ಬಸ್ ಇದಾಗಿದ್ದು, ಕೊಪ್ಪಳ ಎಂಬಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ. ಈ ವೇಳೆ ರಸ್ತೆಯ ಪಕ್ಕದ ಗುಂಡಿಗೆ ಬಸ್ ಉರುಳಿ ಬಿದ್ದಿದ್ದು ಬಸ್ನಲ್ಲಿದ್ದ ಹಲವರಿಗೆ ಗಾಯಗಳಾಗಿದೆ. ತಕ್ಷಣ ಸ್ಥಳೀಯ ಯುವಕರು ಸೇರಿ ಬಸ್ ಒಳಗಿದ್ದ ಪ್ರಯಾಣಿಕರನ್ನು ಬಸ್ ನಿಂದ ಹೊರ ತೆಗೆದಿದ್ದಾರೆ.
ಗಾಯಾಳುಗಳನ್ನು ಖಾಸಗಿ ವಾಹನಗಳ ಮೂಲಕ ಸಮೀಪದ ಆಸ್ಪತ್ರೆಗೆ ರವಾನಿಸುವ ಕೆಲಸ ಮಾಡಿದ್ದಾರೆ. ಬಸ್ ಬರುತ್ತಿರುವ ವೇಳೆ ಬೈಕ್ ಒಂದು ಅಡ್ಡ ಬಂದಿದ್ದು ಈ ವೇಳೆ ಬಸ್ ನಿಯಂತ್ರಿಸುವ ವೇಳೆ ರಸ್ತೆಯಿಂದ ಪಕ್ಕಕ್ಕೆ ಉರುಳಿದೆ ಎಂದು ಬಸ್ ಚಾಲಕ ಮಾಹಿತಿ ನೀಡಿದ್ದಾರೆ . ಆದರೆ ಸ್ಥಳಿಯರು ಇದನ್ನು ನಿರಾಕರಿಸಿದ್ದು ಬಸ್ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ಹೇಳಿದ್ದಾರೆ.
ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿದ್ದು, ಮಾಹಿತಿ ಪಡೆದುಕೊಂಡು ಘಟನೆಗೆ ಕಾರಣ ಏನು ಎಂಬ ಬಗ್ಗೆ ವಿಚಾರಣೆ ಮುಂದುವರೆಸಿದ್ದಾರೆ.
- LATEST NEWS6 days ago
ಸೆಪ್ಟಂಬರ್ 29 ರಿಂದ ಆಕಾಶದಲ್ಲಿ ಎರಡು ಚಂದ್ರ ಗೋಚರ..! ಏನಿದು ವಿಸ್ಮಯ..?
- LATEST NEWS5 days ago
ಲಕ್ಷ್ಮೀ ಹೆಬ್ಬಾಳ್ಕರ್ಗೆ 1 ಕೆಜಿ ಬಂಗಾರದ ಆಫರ್ ನೀಡಿದ ಮಾಜಿ ಸಚಿವ
- LATEST NEWS6 days ago
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃ*ತ್ಯು
- LATEST NEWS6 days ago
ಬಜೆಟ್ ಬೆಲೆಯ ಐಫೋನ್ ಹುಡುಕುತ್ತಿದ್ದೀರಾ? ಸದ್ಯದಲ್ಲೇ ಬರಲಿದೆ iPhone SE4