ಕೊರೊನಾಗೆ ಔಷಧಿ ಕಂಡುಹಿಡಿದ ಪತಂಜಲಿ ಸಂಸ್ಥೆ ಹಾಗೂ ರಾಮ್ ದೇವ್ ವಿರುದ್ಧ ದೂರು ದಾಖಲು..!!
ಕೊರೊನಾಗೆ ಔಷಧಿ ಕಂಡುಹಿಡಿದ ಪತಂಜಲಿ ಸಂಸ್ಥೆ ಹಾಗೂ ರಾಮ್ ದೇವ್ ವಿರುದ್ಧ ದೂರು ದಾಖಲು..!!
ಬಿಹಾರ: ಯೋಗಗುರು ರಾಮದೇವ್ ಮತ್ತು ಪತಂಜಲಿ ಆಯುರ್ವೇದ ಸಂಸ್ಥೆಯ ಆಡಳಿತ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರ ವಿರುದ್ಧ ಬಿಹಾರ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.
ಅವರು ಕೋವಿಡ್-19ನ್ನು ಗುಣ ಪಡಿಸಬಲ್ಲ ‘ಕೊರೊನಿಲ್ ’ಹೆಸರಿನ ಔಷಧಿಯನ್ನು ಕಂಡು ಹಿಡಿದಿರುವುದಾಗಿ ಹೇಳಿಕೊಳ್ಳುವ ಮೂಲಕ ಲಕ್ಷಾಂತರ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ.
ಮತ್ತು ಅವರ ಜೀವಗಳನ್ನು ಅಪಾಯಕ್ಕೆ ತಳ್ಳುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಜೂ.30ರಂದು ದೂರಿನ ವಿಚಾರಣೆ ನಡೆಯಲಿದೆ.
ತಮನ್ನಾ ಹಾಶ್ಮಿ ಎನ್ನುವವರು ರಾಮದೇವ್ ಮತ್ತು ಬಾಲಕೃಷ್ಣ ಅವರ ವಿರುದ್ಧ ವಂಚನೆ, ಕ್ರಿಮಿನಲ್, ಒಳಸಂಚು ಮತ್ತು ಇತರ ಆರೋಪಗಳಲ್ಲಿ ಎಫ್.ಐ.ಆರ್ ದಾಖಲಿಸುವಂತೆ ಕೋರಿ ಈ ದೂರು ಅರ್ಜಿಯನ್ನು ಸಲ್ಲಿಸಿದ್ದಾರೆ.
ಪತಂಜಲಿ ಸಂಶೋಧನಾ ಸಂಸ್ಥೆಯ ಸಂಚಾಲಕ ರಾಮದೇವ್ ಮತ್ತು ಅವರ ಸಹಾಯಕ ಹಾಗೂ ಸಂಸ್ಥೆಯ ಅಧ್ಯಕ್ಷ ಬಾಲಕೃಷ್ಣ ಅವರನ್ನು ಆರೋಪಿಗಳೆಂದು ದೂರಿನಲ್ಲಿ ಹೆಸರಿಸಲಾಗಿದೆ.
‘ಕೊರೊನಿಲ್’ ಮಾತ್ರೆಗಳ ಕುರಿತು ಜಾಹೀರಾತುಗಳನ್ನು ನಿಲ್ಲಿಸುವಂತೆ ಕೇಂದ್ರ ಆಯುಷ್ ಸಚಿವಾಲಯವು ಪತಂಜಲಿ ಸಂಸ್ಥೆಗೆ ಸೂಚಿಸಿರುವುದನ್ನು,
ಹಾಗೂ ಔಷಧಿಯ ಸಂಯೋಜನೆಯ ವಿವರಗಳ ಕುರಿತು ಯಾವುದೇ ಮಾಹಿತಿಯನ್ನು ತನಗೆ ಒದಗಿಸಿಲ್ಲ ಎಂದು ಹೇಳಿರುವುದನ್ನು ಹಾಶ್ಮಿ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
‘ಕೊರೊನಿಲ್ ಮಾತ್ರೆ ಮತ್ತು ಸ್ವಾಸರಿ ವಟಿ’ ಔಷಧಿಗಳನ್ನು ಬಿಡುಗಡೆಗೊಳಿಸಿರುವ ಪತಂಜಲಿ ಸಂಸ್ಥೆಯು, ಇವು ಏಳು ದಿನಗಳಲ್ಲಿ ಕೊರೊನಾ ವೈರಸ್ ಸೋಂಕನ್ನು ಗುಣಪಡಿಸುತ್ತವೆ ಎಂದು ಹೇಳಿಕೊಂಡಿದೆ.
DAKSHINA KANNADA
ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು
ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.
ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.
Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ
LATEST NEWS
ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ
ಬೆಳಗಾವಿ: 25 ರಿಂದ 30 ವರ್ಷದ ಯುವತಿಯೊಬ್ಬಳನ್ನು ಬರ್ಬರವಾಗಿ ಹ*ತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ನಡೆದಿದೆ. ಇಲ್ಲಿನ ಗ್ರಾಮೀಣ ಪೊಲೀಸ್ ಠಾಣ ವ್ಯಾಪ್ತಿಯ ಮಮದಾಪುರ ಗ್ರಾಮದಲ್ಲಿ ಈ ಕೃತ್ಯ ನಡೆದಿದ್ದು ಕೊ*ಲೆ ಮಾಡಿದವರಾರು? ಹ*ತ್ಯೆ ಆದವಳು ಯಾರು? ಎಂಬುದಾಗಲಿ ಗೊತ್ತಾಗಿಲ್ಲ. ನಿನ್ನೆ(ಎ.18) ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲುವೆ ಪಕ್ಕದಲ್ಲಿ ಹೊಗೆಯಾಡುತ್ತಿರುವುದನ್ನು ಜನರು ಗಮನಿಸಿದ್ದಾರೆ. ಬಿಸಿಲಿನ ತಾಪಕ್ಕೆ ಹುಲ್ಲು ಇರುವ ಜಾಗಕ್ಕೆ ಬೆಂಕಿ ಬಿದ್ದಿರಬಹುದು ಎಂದು ಕೆಲವರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದಾಗ ಯುವತಿಯ ಮೃತದೇಹ ಕಂಡು ಬಂದಿದೆ.
ಯುವತಿಯ ಕತ್ತು ಕೊಯ್ದು ಬಳಿಕ ಆಕೆಯ ಗುರುತು ಪತ್ತೆಯಾಗದಂತೆ ಸುಟ್ಟು ಹಾಕಿರಬೇಕು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ತಂಡ ಹಾಗೂ ಪೊಲೀಸರು ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಯುವತಿಯನ್ನು ಬೇರೆಡೆ ಕೊಲೆ ಮಾಡಿ ಇಲ್ಲಿ ತಂದು ಸುಟ್ಟು ಹಾಕುವ ಪ್ರಯತ್ನ ನಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಆದರೆ ಈ ಯುವತಿ ಯಾರು ಹಾಗೂ ಯಾರು ಕೊಲೆ ಮಾಡಿದ್ದಾರೆ ಅನ್ನೋದು ತನಿಖೆಯಿಂದ ಗೊತ್ತಾಗಬೇಕಾಗಿದೆ.
Read More..: ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು
LATEST NEWS
ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು
ಉಡುಪಿ : ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವನ್ನಪ್ಪಿರುವ ಘಟನೆ ಉಡುಪಿಯ ಹೇರೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕೃಷ್ಣ ಗಾಣಿಗ ಮೃ*ತ ದುರ್ದೈವಿ. ಉಡುಪಿ ನಗರ ಸಭೆಯಲ್ಲಿ ಎಲೆಕ್ಟ್ರಿಷನ್ ಆಗಿ ಕೃಷ್ಣ ಕೆಲಸ ಮಾಡುತ್ತಿದ್ದರು. ಸಂತೆಕಟ್ಟೆ ಮಾರ್ಗವಾಗಿ ಬ್ರಹ್ಮಾವರದ ಕಡೆಗೆ ಸಾಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಲಾರಿ ಅಡಿಗೆ ಸಿಲುಕಿ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾರೆ.
ಲಾರಿ ಕೃಷ್ಣ ಅವನ್ನು ಕೆಲ ದೂರ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ. ಘಟನೆ ಬಳಿಕ ರಸ್ತೆಯಲ್ಲಿ ಕೆಲ ಕಾಲ ಸಂಚಾರ ದಟ್ಟನೆ ಉಂಟಾಗಿತ್ತು.
ಬ್ರಹ್ಮಾವರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.