BIG BOSS
BBK11: ಬಿಗ್ಬಾಸ್ ಮನೆಯಲ್ಲಿರೋ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆ; ಶೋ ವಿರುದ್ಧ ದೂರು ದಾಖಲು
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಭಾನುವಾರ ಗ್ರ್ಯಾಂಡ್ ಆಗಿ ಓಪನಿಂಗ್ ಕಂಡಿದೆ. ಹೊಸ ಅಧ್ಯಾಯದೊಂದಿಗೆ ಶುರುವಾದ ಬಿಗ್ಬಾಸ್ಗೆ ಕಂಟಕವೊಂದು ಎದುರಾಗಿದೆ.
ಹೌದು, ಮೊನ್ನೆಯಷ್ಟೇ ಬಹಳ ಅದ್ಧೂರಿಯಾಗಿ ಬಿಗ್ಬಾಸ್ ಸೀಸನ್ 11 ಓಪನಿಂಗ್ ಪಡೆದುಕೊಂಡಿತ್ತು. ಒಟ್ಟು 17 ಸ್ಪರ್ಧಿಗಳು ಬಿಗ್ಬಾಸ್ ಮನೆಗೆ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ. ಅದರಲ್ಲೂ ಹೊಸ ಅಧ್ಯಾಯದೊಂದಿಗೆ ಶುರುವಾದ ಈ ಶೋನಲ್ಲಿ ಸ್ವರ್ಗ ಹಾಗೂ ನರಕ ಎಂಬ ಎರಡು ಕಾನ್ಸೆಪ್ಟ್ ಇಟ್ಟುಕೊಂಡಿದೆ. ಆದರೆ ಶುರುವಾಗಿ ಒಂದೇ ವಾರಕ್ಕೆ ಬಿಗ್ಬಾಸ್ ಶೋ ವಿರುದ್ಧ ವಕೀಲೆಯೊಬ್ಬರು ದೂರು ದಾಖಲಿಸಿದ್ದಾರೆ. ರಾಜ್ಯ ಮಹಿಳಾ ಆಯೋಗಕ್ಕೆ ವಕೀಲೆ ದೂರು ಕೊಟ್ಟಿದ್ದಾರೆ.
ದೂರಿನಲ್ಲಿ ಏನಿದೆ?
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರೋ ಹಾಗೂ ನಟ ಸುದೀಪ್ ಅವರು ನಿರೂಪಣೆ ಮಾಡುವ ಬಿಗ್ಬಾಸ್ ಸೀಸನ್ 11 ಕಾರ್ಯಕ್ರಮದಲ್ಲಿ ಮಹಿಳೆಯರು ಮತ್ತು ಪುರುಷ ಸ್ಪರ್ಧಿಗಳು ಭಾಗವಹಿಸುತ್ತಿದ್ದಾರೆ. ಬಿಗ್ಬಾಸ್ 11ರ ಕಾರ್ಯಕ್ರಮದಲ್ಲಿ ಸ್ವರ್ಗ ಮತ್ತು ನರಕ ಎಂಬ ಎರಡು ವಿಚಾರದ ಮೇಲೆ ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಭಾರತದ ನಾಗರಿಕರನ್ನು ಖಾಸಗಿ ವ್ಯಕ್ತಿಗಳು ಬಂಧನದಲ್ಲಿರಿಸುವ ಹಕ್ಕನ್ನು ಹೊಂದಿರುವುದಿಲ್ಲ. ಪ್ರಸ್ತುತ ಪ್ರಸಾರವಾಗುತ್ತಿರುವ ಈ ಕಾರ್ಯಕ್ರಮದಲ್ಲಿ ಪುರುಷ ಮತ್ತು ಮಹಿಳೆಯರನ್ನು ಒಂದು ಜೈಲಿನ ರೂಪದಲ್ಲಿರುವ ಬಂದಿಖಾನೆಯಂತಹ ಕೊಠಡಿಯಲ್ಲಿ ನೂರಾರು ಕ್ಯಾಮೆರಾಗಳಲ್ಲಿ ರೆಕಾರ್ಡ್ ಆಗುವಂತೆ ಅಕ್ರಮ ಬಂಧನದಲ್ಲಿ ಇರಿಸಲಾಗಿದೆ.
ಆ ಸ್ಪರ್ಧಿಗಳಿಗೆ ಕೇವಲ ಗಂಜಿಯನ್ನು ಆಹಾರವಾಗಿ ನೀಡಲಾಗುತ್ತಿರುವುದು ಸಂವಿಧಾನ ಪ್ರಕಾರ ನಾಗರಿಕರಿಗೆ ಪೌಷ್ಟಿಕ ಆಹಾರವನ್ನು ಕೊಡದಿರುವುದು ಅಪರಾಧವಾಗುತ್ತದೆ. ಅದರಲ್ಲೂ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಮಲಗುವ ವ್ಯವಸ್ಥೆ ನೀಡದೆ ಅವರನ್ನು ದೈಹಿಕ ಬಾದ ತೀರಿಸಿಕೊಳ್ಳಲು ಮತ್ತೊಬ್ಬರ ಅನುಮತಿ ಮೇರೆಗೆ ಶೌಚಾಲಯ ಉಪಯೋಗಿಸಲು ಬಲವಂತಕ್ಕೆ ಒಳಪಡಿಸುವುದು ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ. ಬಿಗ್ಬಾಸ್ 11ರ ಕಾರ್ಯಕ್ರಮದಲ್ಲಿ ಸ್ಪರ್ಧಿಗಳೊಂದಿಗೆ ಕಾನೂನು ಬದ್ಧವಾಗಿ ಒಪ್ಪಂದ ಮಾಡಿಕೊಂಡಿದ್ದು ಇಂತಹ ನಿರ್ಬಂಧಗಳನ್ನು ಹೇರುವುದು ಸಂವಿಧಾನ ಬಾಹಿರವಾಗಿದೆ.
BIG BOSS
ಕನ್ನಡ ಬಿಗ್ಬಾಸ್ನಿಂದ ಲಾಯರ್ ಜಗದೀಶ್ ಎಲಿಮಿನೇಷನ್..!
ಬಿಗ್ ಬಾಸ್ ಕನ್ನಡ ಸೀಸನ್ 11 ಕ್ಕೆ 17 ಸ್ಪರ್ಧಿಗಳು ಬಂದಿದ್ದಾರೆ. ಆ ಪೈಕಿ ಲಾಯರ್ ಜಗದೀಶ್ ಅವರು ಮಿತಿಮೀರಿ ವರ್ತಿಸುತ್ತಿದ್ದಾರೆ. ಇದನ್ನು ಸುದೀಪ್ ಅವರು ಖಂಡಿಸಿ, ಹಿಂದಿ ಬಿಗ್ ಬಾಸ್ ರೀತಿಯೇ ಇಲ್ಲಿಯೂ ಮಾಡಲಿ ಎಂದು ಕೋರಿಕೊಳ್ಳಲಾಗುತ್ತಿದೆ.
ಹಿಂದಿ ಬಿಗ್ ಬಾಸ್ ನ 10ನೇ ಸೀಸನ್ ನಲ್ಲಿ ಪ್ರಿಯಾಂಕಾ ಜಗ್ಗಾ ಎಂಬುವವರು ದರ್ಪ ತೋರಿದ್ದರು. ‘ಬಿಗ್ ಬಾಸ್ ಶೋ ನನ್ನ ಲೆವೆಲ್ಲ ಅಲ್ಲವೇ ಅಲ್ಲ’ ಎಂದಿದ್ದರು.ವೀಕೆಂಡ್ ನಲ್ಲಿ ಸಲ್ಮಾನ್ ಖಾನ್ ಅವರು ನೇರವಾಗಿ ಹೊರಹೋಗುವಂತೆ ಹೇಳಿದ್ದರು. ಜೊತೆಗೆ ಕಲರ್ಸ್ ವಾಹಿನಿಯ ಜೊತೆ ಅವರು ಕೆಲಸ ಮಾಡಿದರೆ ನಾನು ಕಲರ್ಸ್ ಜೊತೆಗಿನ ಸಂಬಂಧ ಕಡಿದುಕೊಳ್ಳುತ್ತೇನೆ ಎಂದು ಹೇಳಿದ್ದರು ಸಲು. ತಕ್ಷಣವೇ ಪ್ರಿಯಾಂಕಾನ ಹೊರಹಾಕಲಾಯಿತು.
ಕನ್ನಡದಲ್ಲೂ ಬಿಗ್ ಬಾಸ್ ಗೆ ಅವಮಾನ ಮಾಡುವ ರೀತಿಯ ಘಟನೆ ನಡೆದಿದೆ. ಜಗದೀಶ್ ಅವರು ‘ಬಿಗ್ ಬಾಸ್ ಕಿತ್ತೋಗಿರೋ ಪ್ರೋಗ್ರಾಂ’, ‘ಬಿಗ್ ಬಾಸ್ನೇ ಖರೀದಿ ಮಾಡುತ್ತೇನೆ’, ‘ನನ್ನ ಎದುರಾಕ್ಕೊಂಡು ಬಿಗ್ ಬಾಸ್ ನಡೆಸ್ತೀರಾ’ ಎಂದೆಲ್ಲ ಪ್ರಶ್ನೆ ಮಾಡಿದ್ದರು. ಮನೆಯಲ್ಲಿದ್ದುಕೊಂಡೇ ಸ್ಪರ್ಧಿ ಹೇಳುವ ಮಾತು ಇದಲ್ಲ. ಹೀಗಾಗಿ, ಜಗದೀಶ್ ಅವರನ್ನು ಸುದೀಪ್ ನೇರವಾಗಿ ಹೊರಕ್ಕೆ ಹಾಕಲಿ ಎಂದು ಅನೇಕರು ಬಯಸಿದ್ದಾರೆ.
BIG BOSS
BBK11: ದೊಡ್ಮನೆಗೆ ಬಂದ 4 ದಿನಕ್ಕೆ ಸ್ಪರ್ಧಿಗಳ ಕಣ್ಣೀರು; ಕಾರಣವೇನು?
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಶುರುವಾಗಿ 4 ದಿನಕ್ಕೆ ಕಾಲಿಟ್ಟಿದೆ. ಬಿಗ್ಬಾಸ್ ಸೀಸನ್ 11 ಬಹಳ ಅದ್ಧೂರಿಯಾಗಿ ಓಪನಿಂಗ್ ಕಂಡಿದೆ. ಆದರೆ ಕಳೆದ 10 ಸೀಸನ್ಗೂ ಈಗಿನ ಸೀಸನ್ 11ಗೂ ತುಂಬಾನೇ ವ್ಯತ್ಯಾಸವಿದೆ.
ಕಳೆದ ಸೀಸನ್ ಸ್ಪರ್ಧಿಗಳು ಬಿಗ್ಬಾಸ್ ಮನೆಯಲ್ಲಿ ಅಷ್ಟೂ ಜನ ಇದ್ದರು ನನಗೆ ಒಂಟಿತನ ಕಾಡುತ್ತಿದೆ ಬಿಗ್ಬಾಸ್. ನನಗೆ ಮನೆಗೆ ಕಳುಹಿಸಿ ಬಿಗ್ಬಾಸ್, ನನಗೆ ಕುಟುಂಬಸ್ಥರ ನೆನಪಾಗುತ್ತದೆ ಅಂತ ಹೇಳುತ್ತಿದ್ದರು. ಆದರೆ ಈ ಬಾರಿಯ ಬಿಗ್ಬಾಸ್ ಸೀಸನ್ 11 ಶುರುವಾಗಿ ಎರಡೇ ದಿನಕ್ಕೆ ಸ್ಪರ್ಧಿಗಳು ಕಣ್ಣೀರು ಹಾಕುತ್ತಿದ್ದಾರೆ.
ಅದರಲ್ಲೂ ಬಿಗ್ಬಾಸ್ಗೆ ಬಂದ ಮೊದಲ ದಿನವೇ ಧನರಾಜ್ ಆಚಾರ್ಯ ಅವರು ಕಣ್ಣೀರು ಹಾಕಿದ್ದರು. ಇದಾದ ಬಳಿಕ ಅನುಷಾ ರೈ ಅವರು ಊಟಕ್ಕೆ ತೊಂದರೆ ಆಗ್ತಾ ಇದೆ ಅಂತ ಅತ್ತಿದ್ದರು. ಬಳಿಕ ಪುಟ್ಟಕ್ಕನ ಮಕ್ಕಳು ಸೀರಿಯಲ್ ನಟಿ ಹಂಸ ನಾರಾಯಣ್ ಕೂಡ ಬಿಗ್ಬಾಸ್ಮನೆಯ ವಾತಾವರಣಕ್ಕೆ ಕ್ಯಾಮೆರಾ ಮುಂದೆ ಬಂದು ಕಣ್ಣೀರು ಹಾಕಿದ್ರು. ಜೊತೆಗೆ ಮಾನಸಾ ಲಾಯರ್ ಜಗದೀಶ್ ಮಾತಿಗೆ ಬೇಸರದಿಂದ ಕಣ್ಣೀರು ಹಾಕಿದ್ದಾರೆ. ಇದೀಗ ಐಶ್ವರ್ಯ ಸಿಂಧೋಗಿ ಅವರು ಜೋರಾಗಿ ಅತ್ತುಕೊಂಡು ಆಚೆ ಬಂದಿದ್ದಾರೆ.
ಕಲರ್ಸ್ ಕನ್ನಡ ಶೇರ್ ಮಾಡಿಕೊಂಡ ಹೊಸ ಪ್ರೋಮೋದಲ್ಲಿ ಐಶ್ವರ್ಯ ಜೋರಾಗಿ ಅಳುತ್ತಾ ಬಂದಿದ್ದಾರೆ. ಐಶ್ವರ್ಯಾ ಅವರ ಕಣ್ಣೀರಿಗೆ ಕಾರಣ ಏನಂತ ಇಂದಿನ ಸಂಚಿಕೆಯಲ್ಲಿ ಗೊತ್ತಾಗಲಿದೆ. ಇನ್ನೂ ಜೋರಾಗಿ ಅಳುತ್ತಾ ಕುಳಿತುಕೊಂಡಿದ್ದ ಐಶ್ವರ್ಯಾಗೆ ಗೌತಮಿ ಜಾಧವ್, ಭವ್ಯಾ ಗೌಡ ಅವರು ಸಮಾಧಾನ ಮಾಡಿದ್ದಾರೆ. ನಮ್ಮ ಮನೆಯ ಕೆಲಸದವರಿಗೂ ನಾನು ಈ ರೀತಿ ಮಾತುಗಳನ್ನು ಹೇಳಲ್ಲ ಅಂತ ಐಶ್ವರ್ಯಾ ಅವರು ಕಣ್ಣೀರು ಸುರಿಸಿದ್ದಾರೆ. ಸದ್ಯ ಇದಕ್ಕೆಲ್ಲ ವೀಕ್ಷಕರು ಕಿಚ್ಚನ ಪಂಚಾಯ್ತಿಗಾಗಿ ಕಾಯುತ್ತಿದ್ದಾರೆ.
BIG BOSS
ಬಿಗ್ ಬಾಸ್ನಿಂದ ಚೈತ್ರಾರನ್ನು ಹೊರಗೆ ಹಾಕಿ, ಇಲ್ಲದಿದ್ರೆ ಕಾರ್ಯಕ್ರಮ ಸ್ಥಗಿತ ಮಾಡಿಸುತ್ತೇನೆ ಎಂದ ವಕೀಲ!
BBK11: ಕನ್ನಡ ಮಾಧ್ಯಮ ಲೋಕದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ 11 ಸೀಸನ್ ನ 14 ನೇ ಸ್ಪರ್ಧಿ ಚೈತ್ರಾ ಕುಂದಾಪುರ ಅವರನ್ನು ತಕ್ಷಣವೇ ಶೋ ನಿಂದ ಹೊರಗೆ ಹಾಕಬೇಕು ಇಲ್ಲವಾದಲ್ಲಿ ಕಲರ್ಸ್ ಕನ್ನಡ ತಂಡದ ವಿರುದ್ಧ ಉಚ್ಚ ನ್ಯಾಯಾಲಯದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ವಕೀಲ ಕೆ ಎಲ್ ಭೋಜರಾಜ್ ತಿಳಿಸಿದ್ದಾರೆ.
ನಿನ್ನೆ ಸಾಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಕನ್ನಡ ಮಾಧ್ಯಮ ಲೋಕದ ಬಹು ದೊಡ್ಡ ರಿಯಾಲಿಟಿ ಶೋ ಹಾಗೂ ಕನ್ನಡ ಚಿತ್ರರಂಗದ ಮೇರು ನಟ ಕಿಚ್ಚ ಸುದೀಪ್ ಹೋಸ್ಟಿಂಗ್ ಮಾಡುತ್ತಿರುವ ರಿಯಾಲಿಟಿ ಶೋ ಅತ್ಯಂತ ಜನಪ್ರಿಯವಾಗಿದೆ. ಬಿಗ್ ಬಾಸ್ 11ರ ಸೀಜನ್ ಸೆಪ್ಟೆಂಬರ್ 29 ರಂದು ಪ್ರಾರಂಭಗೊಂಡಿದ್ದು ರಿಯಾಲಿಟಿ ಶೋನಲ್ಲಿ 17 ಸ್ಪರ್ಧಿಗಳು ಭಾಗವಹಿಸಿದ್ದಾರೆ ಅದರಲ್ಲಿ 14ನೇ ಸ್ಪರ್ಧಿಯಾಗಿ ಕುಂದಾಪುರದ ಚೈತ್ರಾ ಆಯ್ಕೆಯಾಗಿದ್ದಾರೆ.
ಚೈತ್ರಾ ಅವರ ವಿರುದ್ಧ ವಿವಿಧ ಪೋಲಿಸ್ ಠಾಣೆಗಳಲ್ಲಿ ಕೇಸುಗಳು ದಾಖಲಾಗಿದೆ. ಒಟ್ಟು 11 ಕೇಸ್ ದಾಖಲಾಗಿರುವ ಚೈತ್ರಾ ಕುಂದಾಪುರ ಬಿಗ್ ಬಾಸ್ ಗೆ ಬಂದಿರುವುದು ಒಳ್ಳೆಯದಲ್ಲ. ತಕ್ಷಣ ಕಲರ್ಸ್ ಕನ್ನಡದ ತಂಡ ಚೈತ್ರಾ ಕುಂದಾಪುರ ಅವರನ್ನು ಹೊರಕ್ಕೆ ಹಾಕಬೇಕು ಎಂದು ಈಗಾಗಲೇ ನೋಟಿಸ್ ನೀಡಲಾಗಿದೆ, ಇನ್ನು ಎರಡು ಮೂರು ದಿನದಲ್ಲಿ ನಮ್ಮ ನೋಟಿಸ್ ಗೆ ಉತ್ತರ ನೀಡದೆ ಇದ್ದಲ್ಲಿ ಹೈಕೋರ್ಟ್ ಹಾಗೂ ಸ್ಥಳೀಯ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿ ಬಿಗ್ ಬಾಸ್ ಹನ್ನೊಂದರ ಸೀಸನ್ ಸ್ಥಗಿತ ಮಾಡಲಾಗುವುದು ಎಂದು ಎಚ್ಚರಿಸಿದ್ದಾರೆ.
- BIG BOSS4 days ago
BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?
- BIG BOSS4 days ago
ಭ್ರಷ್ಟರ ವಿರುದ್ಧ ಗುಡುಗಿದ ಸ್ಪರ್ಧಿ ಲಾಯರ್ ಜಗದೀಶ್ಗೆ ಕಿಚ್ಚ ವಾರ್ನಿಂಗ್..!
- LATEST NEWS3 days ago
Watch Video: ಕೋಚಿಂಗ್ ಸೆಂಟರ್ನಲ್ಲಿ ವಿದ್ಯಾರ್ಥಿನಿಯೊಂದಿಗೆ ಬಯಾಲಜಿ ಶಿಕ್ಷಕನ ರೊಮ್ಯಾನ್ಸ್
- BIG BOSS4 days ago
ಚೈತ್ರಾ ಕುಂದಾಪುರಗೆ ಮೊದಲ ದಿನವೇ ಹೊಸ ಬಿರುದು ಕೊಟ್ಟ ಲಾಯರ್ ಜಗದೀಶ್