Connect with us

LATEST NEWS

ಉಡುಪಿಯಲ್ಲಿ ಟೈಮಿಂಗ್ಸ್ ವಿಚಾರಕ್ಕೆ ಗಲಾಟೆ-ರೋಡಲ್ಲೇ ಕಿತ್ತಾಡಿಕೊಂಡ ನಿರ್ವಾಹಕರು

Published

on

ಉಡುಪಿ: ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ನಿರ್ವಾಹಕರು ಬೆಳ್ಳಂ ಬೆಳಗ್ಗೆ ರೋಡಲ್ಲೇ ಕಿತ್ತಾಡಿಕೊಂಡ ಘಟನೆ ಉಡುಪಿ ಕಾಪು ಎಂಬಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗ್ತಾ ಇದೆ.


ಇನ್ನು ಇಲ್ಲಿನ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಐದು ನಿಮಿಷಕ್ಕೊಂದು ಬಸ್ ಗಳು ಮಂಗಳೂರು ಕಡೆ ಪ್ರಯಾಣವನ್ನು ಮಾಡುತ್ತದೆ.

ಅದರಲ್ಲೂ ಬೆಳಗ್ಗಿನ ಹೊತ್ತು ಶಾಲೆ ಕಾಲೇಜು‌ ಮತ್ತು ಉದ್ಯೋಗಕ್ಕೆ ತೆರಳುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಈ ವೇಳೆ ಬಸ್ ಗಳ ನಡುವೆ ಪೈಪೋಟಿ ಇರುವುದು ಸಾಮಾನ್ಯವಾಗಿದೆ.

ಮುಂದಿನ‌ ಬಸ್ ನವ ತಮ್ಮ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಾನೆ ಎಂಬ ತಕರಾರು ಹಿಂದೆ ಬರುವ ಬಸ್ ನವರದ್ದು. ಇವತ್ತು ಇದೇ ರೀತಿ ಪ್ರಸಂಗ ನಡೆದು ಎರಡು ಬಸ್ ಗಳ ಕಂಡಕ್ಟರ್ ಗಳು ರಸ್ತೆಗಿಳಿದು ಕೈ ಕೈ ಮಿಲಾಯಿಸುವ ಹಂತ ತಲುಪಿದ್ದಾರೆ.


ಇದರಿಂದ ಪ್ರಯಾಣಿಕರಿಗೂ ತೊಂದರೆ ಉಂಟಾಗಿದ್ದು ನಮಗೆ ತಡವಾಗುತ್ತದೆ. ನಿಮ್ಮ ಜಗಳ ಮತ್ತೆ ಮಾಡಿ ಎಂದು ಗದರಿಸಿದ ಪ್ರಸಂಗ ನಡೆಯಿತು.

ಬಳಿಕ ನಿರ್ವಾಹಕರು ತಮ್ಮ ಪಾಡಿಗೆ ತಾವು ಕರ್ತವ್ಯಕ್ಕೆ ಹಾಜರಾಗಿದ್ದು,ತಾರಕಕ್ಕೇರಿದ ಪ್ರಕರಣ ಸುಖಾಂತ್ಯ ಕಂಡಿತು.

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

LATEST NEWS

ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

Published

on

ಚಿತ್ರದುರ್ಗ : ಮತ ಕೇಂದ್ರದಲ್ಲಿ ಚುನಾವಣಾ ಕರ್ತವ್ಯ ನಿರತ ಶಿಕ್ಷಕಿಯೊಬ್ಬರು ಕುಸಿದು ಬಿದ್ದು ಸಾ*ವನ್ನಪ್ಪಿರುವ ಘಟನೆ ಚಳ್ಳಕೆರೆ ತಾಲೂಕಿನಲ್ಲಿ ನಡೆದಿದೆ. ಚಳ್ಳಕೆರೆ ನಗರದ ವಿಠಲನಗರದ ನಿವಾಸಿ ಯಶೋದಮ್ಮ ( 55) ಅವರು ಮೃ*ತ ಶಿಕ್ಷಕಿ.


ಯಶೋದಮ್ಮ ಹೊಟ್ಲೆಪನಹಳ್ಳಿ 202 ಮತ ಕೇಂದ್ರದಲ್ಲಿ ಚುನಾವಣಾ ಕರ್ತವ್ಯ ನಿರತರಾಗಿದ್ದರು. ಈ ಸಂದರ್ಭ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಸರ್ಕಾರಿ ಆಸ್ಪತ್ರೆಗೆ ಕರೆತರುವ ವೇಳೆ ದಾರಿ‌ಮಧ್ಯದಲ್ಲಿ ಸಾ*ವನಪ್ಪಿದ್ದಾರೆ. ಮೃ*ತ ಶಿಕ್ಷಕಿ ಯಶೋಧ ಅವರು ಬೊಮ್ಮಸಂದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಚುನಾವಣಾ ಕರ್ತವ್ಯ ನಿಮಿತ್ತ ಯಶೋದಮ್ಮ ಹೊಟ್ಲೆಪನಹಳ್ಳಿ ಮತಗಟ್ಟೆಗೆ ಬಂದಿದ್ದರು. ಸಹಾಯಕ ಪೋಲಿಂಗ್‌ ರಿಟರ್ನಿಂಗ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮತದಾನ ಆರಂಭವಾದಾಗ ಆರೋಗ್ಯವಾಗಿದ್ದ ಯಶೋದಮ್ಮ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಈ ಬಗ್ಗೆ ರಿಟರ್ನಿಂಗ್ ಆಫೀಸರ್ ಗಮನಕ್ಕೆ ತಂದಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ, ಆಸ್ಪತ್ರೆ ತಲುಪುವ ಮೊದಲೇ ಯಶೋದಮ್ಮ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : ಇವಿಎಂನಲ್ಲಿ ಪ್ರಧಾನಿ ಮೋದಿ ಚಿತ್ರ ಕಾಣದೆ ಕಂಗಾಲಾದ ಮಹಿಳೆ; ಅಧಿಕಾರಿಗಳೊಂದಿಗೆ ಜಗಳ!

ಘಟನೆಯ ಮಾಹಿತಿ ಪಡೆದ ಶಾಸಕ ಟಿ.ರಘುಮೂರ್ತಿ ಹಾಗೂ ಚುನಾವಣಾ ಅಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಮೃ*ತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Continue Reading

FILM

ಮತ್ತೆ ಬಾಯ್‌ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!

Published

on

ಮಂಗಳೂರು : ಪ್ರೀತಿ ಎಂಬ ಎರಡಕ್ಷರವನ್ನ ಬಣ್ಣದ ಲೋಕದಲ್ಲಿರುವ ಅನೇಕರು ಗಂಭೀರವಾಗಿ ಪರಿಗಣಿಸಿಯೇ ಇಲ್ಲ. ಹೀಗಾಗಿಯೇ ದಿನಕ್ಕೊಂದು ಸಂಬಂಧ ಇಲ್ಲಿ ಬದಲಾಗುತ್ತೆ. ಲವ್ ಬೆನ್ನಲ್ಲಿಯೇ ಬ್ರೇಕ್‌ಪ್ ಆಗುತ್ತೆ. ಇದಕ್ಕೆ ಮತ್ತೊಂದು ಉದಾಹರಣೆ ಶ್ರುತಿ ಹಾಸನ್ ಮತ್ತು ಶಾಂತನು ಹಜಾರಿಕಾ.

ಹೌದು, ನಿಮಗೆ ಗೊತ್ತಿರಲಿ.. ಮೂರ್ನಾಲ್ಕು ವರ್ಷಗಳ ಹಿಂದೆ, ಕಮಲ ಹಾಸನ್ ಅವರ ಮುದ್ದಿನ ಮಗಳು ಶ್ರುತಿ ಹಾಸನ್, ಬ್ರಿಟಿಷ್ ನಟ ಮೈಕಲ್ ಕೋರ್ಸೆಲ್ ಜೊತೆ ಪ್ರೇಮದ ಖಾತೆ ತೆರೆದಿದ್ದರು. ಜೊತೆ ಜೊತೆಯಲ್ಲಿ ಇಬ್ಬರು ಅನೇಕ ಕಡೆ ಕಾಣಿಸಿಕೊಂಡಿದ್ದರು. ಆದರೆ ಆ ನಂತರ ಏನಾಯಿತೋ ಗೊತ್ತಿಲ್ಲ. ಸಂಬಂಧ ಮುರಿದು ಬಿತ್ತು.

ಎರಡನೇ ಬಾಯ್‌ಫ್ರೆಂಡ್‌:

ಮೈಕಲ್ ಕೋರ್ಸೆಲ್ ಅವರಿಂದ ದೂರವಾದ ನಂತರ ಶ್ರುತಿ ಹಾಸನ್ ಬದುಕಿನಲ್ಲಿ ಬಂದ ವ್ಯಕ್ತಿ ಶಾಂತನು ಹಜಾರಿಕಾ. ಶಾಂತನು ಜೊತೆ ಎರಡು ವರ್ಷ ಪ್ರೇಮದ ತಪಸ್ಸು ಮಾಡಿದ್ದ ಶ್ರುತಿ ಹಾಸನ್ ಅನೇಕ ಸಲ ತಮ್ಮ ಈ ಪ್ರೇಮ ಕಥೆಯನ್ನ ಹೆಮ್ಮೆಯಿಂದ ಹೇಳಿಕೊಂಡಿದ್ದರು. ತನ್ನ ಮೇಲೆ ಶಾಂತನುಗೆ ಇರುವ ಕಾಳಜಿ ಪ್ರೀತಿಯನ್ನೂ ಮೆಚ್ಚಿ ಮಾತನಾಡಿದ್ದರು. ಇನ್ನು ಎರಡು ವರ್ಷದ ಹಿಂದೆ ಅಂದರೆ 2022ರ ಸಮಯದಲ್ಲಿ ತಮ್ಮ ಮದುವೆ ಆಗಿದೆ ಎಂಬ ವಿಚಾರವನ್ನ ಕದ್ದು ಶಾಂತನು ಹೇಳಿದ್ದರು.

ಮದುವೆ ಆದ ನಂತರದಿಂದ ನಮ್ಮ ಸಂಬಂಧ ಇನ್ನು ಗಟ್ಟಿಯಾಗಿದೆ ಹಾಗೂ ಉತ್ತಮವಾಗಿದೆ. ಒಬ್ಬರಿಗೊಬ್ಬರು ಪರಸ್ಪರ ಅರ್ಥ ಮಾಡಿಕೊಂಡು ಜೀವನ ನಡೆಸಲು ನಮ್ಮ ಮದುವೆ ನಮಗೆ ದಾರಿ ಮಾಡಿಕೊಟ್ಟಿದೆ. ಮುಂದೆಯೂ ಹೀಗೆ ಸಂತೋಷದಿಂದ ದಿನಗಳನ್ನು ಕಳೆಯಲು ತೀರ್ಮಾನಿಸಿದ್ದೇವೆ ಎಂದಿದ್ದರು.

ಇದನ್ನೂ ಓದಿ  “ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?

ಆದರೆ ಈಗ ಶ್ರುತಿ ಹಾಸನ್ ಮತ್ತು ಶಾಂತನು ನಡುವೆ ಇದ್ದ ಪ್ರೇಮ ಸೇತುವೆ ಮುರಿದು ಬಿದ್ದಿದೆ ಅನ್ನುವ ಎಂಬ ಸುದ್ದಿ ಎಲ್ಲೆಡೆ ಕೇಳಿ ಬರುತ್ತಿದೆ. ಇದಕ್ಕೆ ಪೂರಕವಾಗಿ ಶ್ರುತಿ ಹಾಸನ್ ಸಾಮಾಜಿಕ ಜಾಲತಾಣದಲ್ಲಿ ಶಾಂತನು ಜೊತೆ ಫೋಟೋಗಳೆಲ್ಲ ಮಾಯವಾಗಿವೆ. ಶಾಂತನು ಅವರನ್ನ ಶ್ರುತಿ ಹಾಸನ್ ಅನ್ ಫ್ರೆಂಡ್ ಮಾಡಿದ್ದಾರೆ. ಒಟ್ಟಿನಲ್ಲಿ

ಸದ್ಯಕ್ಕೆ ಶ್ರುತಿ ಹಾಸನ್ ಮತ್ತು ಶಾಂತನು ನಡುವೆ ಮೊಳಕೆಯೊಡೆದಿದ್ದ ಪ್ರೀತಿ ಈಗ ಕಮರಿಹೋಗಿದೆ ಅನ್ನುವ ಮಾತು ಎಲ್ಲೆಡೆ ಕೇಳಿ ಬರುತ್ತಿದೆ. ಹರಿದಾಡುತ್ತಿರುವ ಈ ಸುದ್ದಿಯ ಬಗ್ಗೆ ಶ್ರುತಿ ಹಾಸನ್ ಸ್ಪಷ್ಟೀಕರಣ ಕೊಡ್ತಾರಾ ಅನ್ನುವುದನ್ನ ಕಾದು ನೋಡಬೇಕಿದೆ.

Continue Reading

LATEST NEWS

Trending