HomeBANTWALಬಂಟ್ವಾಳದಲ್ಲಿ ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಧ್ಯೆ ಹೊಯೈ ಕೈ : ಲಾಟಿ ಬೀಸಿದ ಪೊಲೀಸರು

ಬಂಟ್ವಾಳದಲ್ಲಿ ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಧ್ಯೆ ಹೊಯೈ ಕೈ : ಲಾಟಿ ಬೀಸಿದ ಪೊಲೀಸರು

ಬಂಟ್ವಾಳ: ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಜಮಾಯಿಸಿದ್ದ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯ ಕರ್ತರ ನಡುವೆ ವಾಗ್ವಾದ ನಡೆದು ಪರಸ್ಪರ ಹೊಯೈ ಕೈ ನಡೆದ ಘಟನೆ ಕಾವಳಕಟ್ಟೆಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.


ಘಟನೆಯ ವಿವರ

ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ದತೆ ನಡೆಸಿದ್ದರು. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಾವಳಮೂಡೂರು ಗ್ರಾ.ಪಂ. ನೀರು ಹಾಗೂ ಮನೆ ತೆರಿಗೆ ಯನ್ನು ಏಕಾಏಕಿ ಏರಿಕೆಯನ್ನು ವಿರೋಧಿಸಿ ಪ್ರತಿಭಟನೆಗೆ ಮುಂದಾಗಿದ್ದರು.


ಈ ಹಂತದಲ್ಲಿ ಆರ್.ಟಿ.ಐ .ಕಾರ್ಯಕರ್ತ ಪದ್ಮನಾಭ ಮಯ್ಯ  ಬಿಜೆಪಿ ನಡೆಸಿದ ಪ್ರತಿಭಟನೆ ಯಲ್ಲಿ ಕಾಣಿಸಿಕೊಂಡಿದ್ದು ಕಾಂಗ್ರೆಸ್ ಕಾರ್ಯಕರ್ತರು ಪ್ರಶ್ನಿಸಿದಾಗ ಬಿಜೆಪಿ ಕಾರ್ಯಕರ್ತರು ಆಕ್ಷೇಪಿಸಿದರು.
ಈ ಸಂದರ್ಭದಲ್ಲಿ ಉಭಯ ಪಕ್ಷದ ಕಾರ್ಯಕರ್ತರ ನಡುವೆ ನೂಕಾಟ, ಪರಸ್ಪರ ತಳ್ಳಾಟ ನಡೆಯಿತು.
ಇದೇ ವೇಳೆ ಆರ್.ಟಿ.ಐ.ಕಾರ್ಯಕರ್ತ ಪದ್ಮನಾಭ ಮಯ್ಯ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಪ್ರತಿಭಟನೆ ರೂಪ ಬದಲಾಯಿತು.
ಉಭಯ ಪಕ್ಷದ ಕಾರ್ಯಕರ್ತರು ಧಿಕ್ಕಾರ ಕೂಗಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾದ ಹಿನ್ನೆಲೆಯಲ್ಲಿ ಪುಂಜಾಲಕಟ್ಟೆ ಎಸ್.ಐ.ಸೌಮ್ಯ ಅವರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಉಭಯ ಪಕ್ಷದ ನಾಯಕ ರ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯಿತು.

ಈ ಸಂದರ್ಭದಲ್ಲಿ ಸ್ಥಳದಲ್ಲಿ ಜಮಾಯಿಸಿದ್ದ ಕಾರ್ಯಕರ್ತರ ನ್ನು ಪೋಲೀಸರು ಲಾಟಿ ಬೀಸಿ ಚದುರಿಸಿದರು. ಆರ್.ಟಿ.ಐ ಕಾರ್ಯಕರ್ತ ಪದ್ಮನಾಭ ಮಯ್ಯ ಅವರು ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದರೆ, ಕಾಂಗ್ರೆಸ್ ಕಾರ್ಯ ಕರ್ತರಾದ
ಸದಾನಂದ ಶೆಟ್ಟಿ, ಬಿ.ಆರ್.ಅಂಚನ್ ಬಂಟ್ವಾಳ ಸರಕಾರಿ ಆಸ್ಪತ್ರೆಯ ಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಪುಂಜಾಲಕಟ್ಟೆ ಪೋಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ, ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಸ್ಥಳಕ್ಕಾಗಮಿಸಿ ಕಾವಳಮೂಡೂರು ಸೊಸೈಟಿ ಆಧ್ಯಕ್ಷ ಪದ್ಮಶೇಖರ್ ಜೈನ್ , ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಸುದರ್ಶನ ಬಜ ಅವರಿಂದ ಮಾಹಿತಿ ಪಡೆದುಕೊಂಡರು.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...