BANTWAL
ಬಂಟ್ವಾಳದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಧ್ಯೆ ಹೊಯೈ ಕೈ : ಲಾಟಿ ಬೀಸಿದ ಪೊಲೀಸರು
ಬಂಟ್ವಾಳ: ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಜಮಾಯಿಸಿದ್ದ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯ ಕರ್ತರ ನಡುವೆ ವಾಗ್ವಾದ ನಡೆದು ಪರಸ್ಪರ ಹೊಯೈ ಕೈ ನಡೆದ ಘಟನೆ ಕಾವಳಕಟ್ಟೆಯಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.
ಘಟನೆಯ ವಿವರ
ಕಾವಳಮೂಡೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಗೆ ಸಿದ್ದತೆ ನಡೆಸಿದ್ದರು. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕಾವಳಮೂಡೂರು ಗ್ರಾ.ಪಂ. ನೀರು ಹಾಗೂ ಮನೆ ತೆರಿಗೆ ಯನ್ನು ಏಕಾಏಕಿ ಏರಿಕೆಯನ್ನು ವಿರೋಧಿಸಿ ಪ್ರತಿಭಟನೆಗೆ ಮುಂದಾಗಿದ್ದರು.
ಈ ಹಂತದಲ್ಲಿ ಆರ್.ಟಿ.ಐ .ಕಾರ್ಯಕರ್ತ ಪದ್ಮನಾಭ ಮಯ್ಯ ಬಿಜೆಪಿ ನಡೆಸಿದ ಪ್ರತಿಭಟನೆ ಯಲ್ಲಿ ಕಾಣಿಸಿಕೊಂಡಿದ್ದು ಕಾಂಗ್ರೆಸ್ ಕಾರ್ಯಕರ್ತರು ಪ್ರಶ್ನಿಸಿದಾಗ ಬಿಜೆಪಿ ಕಾರ್ಯಕರ್ತರು ಆಕ್ಷೇಪಿಸಿದರು.
ಈ ಸಂದರ್ಭದಲ್ಲಿ ಉಭಯ ಪಕ್ಷದ ಕಾರ್ಯಕರ್ತರ ನಡುವೆ ನೂಕಾಟ, ಪರಸ್ಪರ ತಳ್ಳಾಟ ನಡೆಯಿತು.
ಇದೇ ವೇಳೆ ಆರ್.ಟಿ.ಐ.ಕಾರ್ಯಕರ್ತ ಪದ್ಮನಾಭ ಮಯ್ಯ ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ಹಿನ್ನೆಲೆಯಲ್ಲಿ ಪ್ರತಿಭಟನೆ ರೂಪ ಬದಲಾಯಿತು.
ಉಭಯ ಪಕ್ಷದ ಕಾರ್ಯಕರ್ತರು ಧಿಕ್ಕಾರ ಕೂಗಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾದ ಹಿನ್ನೆಲೆಯಲ್ಲಿ ಪುಂಜಾಲಕಟ್ಟೆ ಎಸ್.ಐ.ಸೌಮ್ಯ ಅವರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದರು. ಉಭಯ ಪಕ್ಷದ ನಾಯಕ ರ ನಡುವೆ ಆರೋಪ ಪ್ರತ್ಯಾರೋಪಗಳು ನಡೆಯಿತು.
ಈ ಸಂದರ್ಭದಲ್ಲಿ ಸ್ಥಳದಲ್ಲಿ ಜಮಾಯಿಸಿದ್ದ ಕಾರ್ಯಕರ್ತರ ನ್ನು ಪೋಲೀಸರು ಲಾಟಿ ಬೀಸಿ ಚದುರಿಸಿದರು. ಆರ್.ಟಿ.ಐ ಕಾರ್ಯಕರ್ತ ಪದ್ಮನಾಭ ಮಯ್ಯ ಅವರು ಪುಂಜಾಲಕಟ್ಟೆ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದರೆ, ಕಾಂಗ್ರೆಸ್ ಕಾರ್ಯ ಕರ್ತರಾದ
ಸದಾನಂದ ಶೆಟ್ಟಿ, ಬಿ.ಆರ್.ಅಂಚನ್ ಬಂಟ್ವಾಳ ಸರಕಾರಿ ಆಸ್ಪತ್ರೆಯ ಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಪುಂಜಾಲಕಟ್ಟೆ ಪೋಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಸ್ಥಳಕ್ಕೆ ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ, ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಸ್ಥಳಕ್ಕಾಗಮಿಸಿ ಕಾವಳಮೂಡೂರು ಸೊಸೈಟಿ ಆಧ್ಯಕ್ಷ ಪದ್ಮಶೇಖರ್ ಜೈನ್ , ಜಿಲ್ಲಾ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ಸುದರ್ಶನ ಬಜ ಅವರಿಂದ ಮಾಹಿತಿ ಪಡೆದುಕೊಂಡರು.
BANTWAL
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕ ಮೃ*ತ್ಯು
ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಜೆ ಮೃ*ತಪಟ್ಟಿದ್ದಾರೆ.
ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕೇನಿಕ್ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ( 22) ಮೃ*ತಪಟ್ಟವರು.
ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೇನ್ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದ, ಗುರುವಾರ ಬೆಳಿಗ್ಗೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಮೃ*ತಪಟ್ಟಿದ್ದಾರೆ
BANTWAL
ಬಂಟ್ವಾಳ: ಭಾರೀ ಗಾಳಿ ಮಳೆಗೆ ತಾಲೂಕಿನ ಕೆಲ ಭಾಗಗಳಲ್ಲಿ ಹಾನಿ
ಬಂಟ್ವಾಳ: ರಾತ್ರಿ ಬೀಸಿದ ಗಾಳಿ ಮಳೆಗೆ ಬಂಟ್ವಾಳ ತಾಲೂಕಿನ ಕೆಲವು ಭಾಗದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಹಾನಿಯಾದ ಘಟನೆ ವರದಿಯಾಗಿದೆ.
ಬಿಸಿ ರೋಡಿನ ಸರ್ಕಲ್ ಸಹಿತ ಅನೇಕ ಭಾಗದಲ್ಲಿ ವಿದ್ಯುತ್ ಕಂಬ, ಕಾಂಪೌಂಡ್, ಮರಗಳು ಉರುಳಿಬಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಂಗಳವಾರ ರಾತ್ರಿ ಸುಮಾರು 9.30ರ ವೇಳೆ ಭಾರಿ ಗಾಳಿ ಮಳೆಯಾಗಿದ್ದು, ಇದರಿಂದ ಬಿ.ಸಿ.ರೋಡ್ ಸರ್ಕಲ್ ಬಳಿ ಸಹಿತ ಹಲವೆಡೆ ಒಟ್ಟು 5 ವಿದ್ಯುತ್ ಕಂಬಗಳು ಉರುಳಿಬಿದ್ದು ಮೆಸ್ಕಾಂ ಇಲಾಖೆಗೆ ಲಕ್ಷಾಂತರ ರೂ ನಷ್ಟ ಸಂಭವಿಸಿದೆ. ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಅನಾಹುತವನ್ನೇ ಉಂಟುಮಾಡಿದೆ.
ಇನ್ನು ಬಂಟ್ವಾಳ ತಾಲೂಕಿನ ಮಾಧ್ವ ಬಳಿ ಮನೆಯ ಕಾಂಪೌಂಡ್ ಕುಸಿದು ಬಿದ್ದಿದ್ದು, ಅಪಾರ ಹಾನಿಯಾಗಿದೆ.
BANTWAL
ವಿಟ್ಲ: ಯುವಕ ನೇಣು ಬಿಗಿದು ಆತ್ಮಹ*ತ್ಯೆ..!
ವಿಟ್ಲ: ವಿಟ್ಲ ಬುಡೋಳಿ ಮಡಲ ನಿವಾಸಿ ಸುಶಾಂತ್(25 ವ) ಮನೆಯಲ್ಲಿ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಸುಶಾಂತ್ ರವರು ಇತ್ತೀಚೆಗೆ ಮಿನಿ ಬಸ್ ಖರೀದಿಸಿದ್ದು ಬಸ್ಸನ್ನು ತಾನೇ ಚಾಲನೆ ಮಾಡಿಕೊಂಡು ಕೆಲಸ ನಿರ್ವಹಿಸುತ್ತಿದ್ದರು. ಈತ ಸಂಘಟನೆಯ ಜೊತೆಗೆ ಸಾಮಾಜಿಕ ಸೇವಾಕಾರ್ಯಗಳನ್ನು ಮಾಡಿಕೊಂಡಿದ್ದರು. ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ ಈತನ ಸಾವಿಗೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ವಿಟ್ಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ