LATEST NEWS
ಮಹಿಳಾ ಮಣಿಗಳದೇ ‘ಕೈ’ ಮೇಲು; ಒಂದೆಡೆ ಮಗಳು…ಮತ್ತೊಂದೆಡೆ ಪತ್ನಿ; ನಾಲ್ಕು ಕ್ಷೇತ್ರಗಳಿಗಿದೆ ಪೈಪೋಟಿ…
ಬೆಂಗಳೂರು : ಲೋಕಸಭಾ ಚುನಾವಣೆಯ ಕರ್ನಾಟಕದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆಗೊಂಡಿದೆ. ಸಾಕಷ್ಟು ಅಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವ ಎಐಸಿಸಿ ಎರಡನೇ ಪಟ್ಟಿಯಲ್ಲಿ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಘೋಷಣೆ ಮಾಡಿದೆ. ವಿಶೇಷ ಅಂದ್ರೆ ಎರಡನೇ ಪಟ್ಟಿಯಲ್ಲಿ ಘೋಷಣೆಯಾದ 17 ಅಭ್ಯರ್ಥಿಗಳಲ್ಲಿ 5 ಜನ ಮಹಿಳೆಯರಿಗೆ ಮಣೆ ಹಾಕಲಾಗಿದೆ. ಮೊದಲ ಪಟ್ಟಿಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಗೀತಾ ಶಿವರಾಜ್ ಕುಮಾರ್ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ಬಳ್ಳಾರಿಯಿಂದ ಸೌಪರ್ಣಿಕಾ ತುಕಾರಾಂ ರೇಸ್ ನಲ್ಲಿದ್ದು ಅವರಿಗೂ ಟಿಕೆಟ್ ಸಿಕ್ಕರೆ ಕರ್ನಾಟಕದಿಂದ 7 ಜನ ಮಹಿಳೆಯರು ಲೋಕಸಮರದಲ್ಲಿ ಸೆಣೆಸಾಡಲಿದ್ದಾರೆ.
ಕುಟುಂಬ ಸದಸ್ಯರಿಗೆ ಮಣೆ :
ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ ಘೋಷಣೆ ಮಾಡಿರುವ 17 ಕ್ಷೇತ್ರಗಳಲ್ಲಿ ಬೆಳಗಾವಿಯಿಂದ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ, ಮೃಣಾಲ್ ಹೆಬ್ಬಾಳ್ಕರ್, ಚಿಕ್ಕೊಡಿಯಿಂದ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ, ಬೀದರ್ನಿಂದ ಈಶ್ವರ್ ಖಂಡ್ರೆ ಪುತ್ರ ಸಾಗರ್ ಖಂಡ್ರೆ ಗೆ ಟಿಕೇಟ್ ನೀಡಲಾಗಿದೆ. ಇದಿಷ್ಟೇ ಅಲ್ಲದೆ ರಾಮಲಿಂಗ ರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ, ಶಿವಾನಂದ ಪಾಟೀಲ್ ಪತ್ರಿ ಸಂಯುಕ್ತಾ ಪಾಟೀಲ್, ಎಸ್.ಎಸ್. ಮಲ್ಲಿಕಾರ್ಜುನ್ ಪತ್ನಿ ಪ್ರಭಾ ಮಲ್ಲಿಕಾರ್ಜುನ್, ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಕೃಷ್ಣ ಅವರಿಗೆ ಟಿಕೆಟ್ ನೀಡುವ ಮೂಲಕ ಬಹುತೇಕರು ತಮ್ಮ ಮಕ್ಕಳಿಗೆ ಹಾಗೂ ಕುಟುಂಬದವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಿಳಾ ಅಭ್ಯರ್ಥಿಗಳು
ಶಿವಮೊಗ್ಗ ಕ್ಷೇತ್ರದಿಂದ ಗೀತಾ ಶಿವರಾಜ್ ಕುಮಾರ್ (ಮಧು ಬಂಗಾರಪ್ಪ ಸಹೋದರಿ )
ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ (ರಾಮಲಿಂಗಾ ರೆಡ್ಡಿ ಪುತ್ರಿ)
ಬಾಗಲಕೋಟೆ – ಸಂಯುಕ್ತಾ ಶಿವಾನಂದ ಪಾಟೀಲ್ (ಶಿವಾನಂದ ಪಾಟೀಲ್ ಪುತ್ರಿ)
ದಾವಣಗೆರೆ – ಡಾ.ಪ್ರಭಾ ಮಲ್ಲಿಕಾರ್ಜುನ್ (ಎಸ್.ಎಸ್. ಮಲ್ಲಿಕಾರ್ಜುನ್ ಪತ್ನಿ)
ಚಿಕ್ಕೋಡಿ – ಪ್ರಿಯಾಂಕ ಜಾರಕಿಹೊಳಿ ( ಸತೀಶ್ ಜಾರಕಿಹೊಳಿ ಪುತ್ರಿ )
ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್
(ಬಳ್ಳಾರಿಯಿಂದ ಟಕೆಟ್ ರೇಸ್ನಲ್ಲಿರುವ – ಸೌಪರ್ಣಿಕಾ ತುಕಾರಾಂ )
4 ಕ್ಷೇತ್ರಗಳಿಗೆ ಪೈಪೋಟಿ :
ಈಗಾಗಲೆ 24 ಕ್ಷೇತ್ರಗಳ ಟಿಕೆಟ್ ಘೋಷಣೆ ಮಾಡಿರುವ ಕಾಂಗ್ರೆಸ್ ಇನ್ನು ನಾಲ್ಕು ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ. ಈ ನಾಲ್ಕು ಕ್ಷೇತ್ರಗಳಲ್ಲಿ ಟಿಕೆಟ್ಗಾಗಿ ಪ್ರಬಲ ಪೈಪೋಟಿ ಇರುವ ಕಾರಣ ಈ ಕ್ಷೇತ್ರಗಳಲ್ಲಿ ಇರುವ ಆಕಾಂಕ್ಷಿಗಳ ಜೊತೆ ಮತ್ತೊಂದು ಸುತ್ತಿನ ಮಾತುಕತೆ ನಡೆಸಲು ಮುಂದಾಗಿದೆ. ಯಾವುದೇ ಕಾರಣಕ್ಕೂ ಭಿನ್ನಮತಕ್ಕೆ ಅವಕಾಶ ನೀಡದಂತೆ ಪ್ರಯತ್ನವನ್ನು ನಡೆಸಿದೆ. ಈ ಬಾರಿ ಕನಿಷ್ಟ 20 ಸೀಟ್ ಗೆಲ್ಲಲೇ ಬೇಕು ಎಂದು ಪಣ ತೊಟ್ಟಿರುವ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡಬಲ್ಲವರಿಗಷ್ಟೇ ಮಣೆ ಹಾಕುತ್ತಿದೆ.
ಬಾಕಿ ಉಳಿದಿರುವ ಕ್ಷೇತ್ರ ಹಾಗೂ ಆಕಾಂಕ್ಷಿಗಳು
ಚಿಕ್ಕಬಳ್ಳಾಪುರ – ರಕ್ಷಾ ರಾಮಯ್ಯ, ಶಿವಶಂಕರ್ ರೆಡ್ಡಿ, ವೀರಪ್ಪ ಮೊಯ್ಲಿ
ಕೋಲಾರ – ಚಿಕ್ಕಪೆದ್ದಣ್ಣ, ಎಲ್.ಹನುಮಂತಯ್ಯ,
ಚಾಮರಾಜನಗರ – ಸುನೀಲ್ ಬೋಸ್, ದರ್ಶನ್ ಧ್ರುವ ನಾರಾಯಣ
ಬಳ್ಳಾರಿ – ಸೌಪರ್ಣಿಕಾ ತುಕಾರಾಂ, ವೆಂಕಟೇಶ್ ಪ್ರಸಾದ್, ವಿ.ಎಸ್. ಉಗ್ರಪ್ಪ
ಎರಡನೇ ಪಟ್ಟಿಯಲ್ಲಿರುವ 17 ಕ್ಷೇತ್ರಗಳ ಅಭ್ಯರ್ಥಿಗಳು
ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ (ರಾಮಲಿಂಗಾ ರೆಡ್ಡಿ ಪುತ್ರಿ)
ಬೆಂಗಳೂರು ಕೇಂದ್ರ- ಮನ್ಸೂರ್ ಅಲಿಖಾನ್
ಬೆಂಗಳೂರು ಉತ್ತರ – ಪ್ರೊ.ರಾಜೀವ್ ಗೌಡ
ಮೈಸೂರು – ಕೊಡಗು – ಎಂ.ಲಕ್ಷ್ಮಣ್
ಉಡುಪಿ-ಚಿಕ್ಕಮಗಳೂರು – ಜಯಪ್ರಕಾಶ್ ಹೆಗ್ಡೆ
ದಕ್ಷಿಣ ಕನ್ನಡ – ಪದ್ಮರಾಜ್
ಉತ್ತರ ಕನ್ನಡ – ಅಂಜಲಿ ನಿಂಬಾಳ್ಕರ್
ಬಾಗಲಕೋಟೆ – ಸಂಯುಕ್ತಾ ಶಿವಾನಂದ ಪಾಟೀಲ್ (ಶಿವಾನಂದ ಪಾಟೀಲ್ ಪುತ್ರಿ)
ರಾಯಚೂರು – ಕುಮಾರ್ ನಾಯಕ್
ಚಿತ್ರದುರ್ಗ – ಬಿ.ಎನ್. ಚಂದ್ರಪ್ಪ
ಬೆಳಗಾವಿ – ಮೃಣಾಲ್ ಹೆಬ್ಬಾಳ್ಕರ್ (ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ)
ಚಿಕ್ಕೋಡಿ- ಪ್ರಿಯಾಂಕಾ ಜಾರಕಿಹೊಳಿ (ಸತೀಶ್ ಜಾರಕಿಹೊಳಿ ಮಗಳು)
ಹುಬ್ಬಳ್ಳಿ-ಧಾರವಾಡ – ವಿನೋದ್ ಅಸೂಟಿ
ಬೀದರ್ – ಸಾಗರ್ ಖಂಡ್ರೆ (ಈಶ್ವರ್ ಖಂಡ್ರೆ ಪುತ್ರ)
ಕೊಪ್ಪಳ – ರಾಜಶೇಖರ್ ಹಿಟ್ನಾಳ್
ದಾವಣಗೆರೆ – ಡಾ.ಪ್ರಭಾ ಮಲ್ಲಿಕಾರ್ಜುನ್ (ಎಸ್.ಎಸ್. ಮಲ್ಲಿಕಾರ್ಜುನ್ ಪತ್ನಿ)
ಕಲಬುರಗಿ – ರಾಧಾಕೃಷ್ಣ ದೊಡ್ಡಮನಿ (ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ)
ಮೊದಲ ಪಟ್ಟಿಯಲ್ಲಿ ಟಿಕೆಟ್ ಗಿಟ್ಟಿಸಿಕೊಂಡವರು
ತುಮಕೂರು – ಮುದ್ದಹನುಮೇಗೌಡ – ಒಕ್ಕಲಿಗ
ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್ – ಈಡಿಗ
ಹಾಸನ – ಶ್ರೇಯಸ್ ಪಟೇಲ್ – ಒಕ್ಕಲಿಗ
ವಿಜಯಪುರ – ರಾಜು ಆಲಗೂರು – ಎಸ್.ಸಿ
ಮಂಡ್ಯ – ವೆಂಕಟರಮಣೇಗೌಡ (ಸ್ಟಾರ್ ಚಂದ್ರು) – ಒಕ್ಕಲಿಗ
ಬೆಂಗಳೂರು ಗ್ರಾಮಾಂತರ – ಡಿ.ಕೆ. ಸುರೇಶ್ – ಒಕ್ಕಲಿಗ
ಹಾವೇರಿ – ಆನಂದಸ್ವಾಮಿ ಗಡ್ಡದೇವರಮಠ
BELTHANGADY
ಪಂಚಭೂತಗಳಲ್ಲಿ ಲೀನವಾದ ಜನ ಮೆಚ್ಚಿದ ನಾಯಕ…!
ಮಂಗಳೂರು : ಮೇಲ್ನೋಟಕ್ಕೆ ಕೋಪಿಷ್ಟನಂತೆ ಕಂಡರೂ ಒಳಗಡೆ ಮಗುವಿನಂತಹ ಮನಸ್ಸು…ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನವಾದ್ರೆ ಬಡವರ ಪಾಲಿಗೆ ಇವರು ಬಂಗಾರದ ವ್ಯಕ್ತಿ. ಇದ್ದಿದ್ದು ಇದ್ದ ಹಾಗೆ ಖಡಕ್ ಆಗಿ ಮಾತನಾಡೋ ಕಾರಣ ಸಾಕಷ್ಟು ಜನರ ವಿರೋಧಿಯಾದ್ರೂ, ಒಳಗೊಳಗೆ ಅವರಿಂದಲೇ ಪ್ರೀತಿಯನ್ನು ಕೂಡಾ ಪಡಿತಾ ಇದ್ದ ಜನಪ್ರೀಯ ಜನನಾಯಕ. ಜನರನ್ನು ತನ್ನವರೆಂದೇ ಒಬ್ಬ ಜನಪ್ರತಿನಿಧಿಯಾಗಿ ಜನರ ಸಂಕಷ್ಟಕ್ಕೆ ಸ್ಪಂದಿಸ್ತಾ ಇದ್ದ ವಸಂತ ಬಂಗೇರ ಇನ್ನು ನೆನಪು ಮಾತ್ರ…
ಸದಾ ತನ್ನ ಮಾತಿನ ಮೂಲಕವೇ ಸುದ್ದಿಯಾಗುತ್ತಿದ್ದ ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಶಾಶ್ವತವಾಗಿ ಮಾತು ಮುಗಿಸಿ ಇಹಲೋಕದ ಯಾತ್ರೆ ಮುಗಿಸಿದ್ದಾರೆ. ತನ್ನ ಕ್ಷೇತ್ರದ ಜನರ ಸೇವೆಗಾಗಿ ತನ್ನ ಜೀವನ ಮುಡಿಪಾಗಿಟ್ಟ ವಸಂತ ಬಂಗೇರ ನಿಜವಾಗಿಯೂ ಒಬ್ಬ ಜನನಾಯಕರಾಗಿದ್ದರು. ತನ್ನ ಬಳಿ ಕಷ್ಟ ಹೇಳಿಕೊಂಡು ಯಾರೇ ಬಂದ್ರೂ ಹಿಂದೂ ಮುಂದು ನೋಡದೆ ಸಹಾಯ ಮಾಡ್ತಾ ಇದ್ರು. ತನ್ನ ಕೈ ಖಾಲಿ ಮಾಡಿ ಮತ್ತೊಬ್ಬರಿಗೆ ಕೈ ಎತ್ತಿ ದಾನ ಮಾಡ್ತಾ ಇದ್ದ ವಸಂತ ಬಂಗೇರ ಇದೇ ಕಾರಣಕ್ಕೆ ಜನಾನುರಾಗಿಯಾಗಿದ್ದರು.
ಇದೀಗ ಅವರಿಲ್ಲಾ ಅನ್ನೋ ಸುದ್ದಿ ಅವರ ಅಭಿಮಾನಿಗಳನ್ನ ಕಣ್ಣೀರಿನ ಕಡಲಿನಲ್ಲಿ ಮುಳುಗಿಸಿದೆ. ಅವರ ಪಾರ್ಥಿವ ಶರೀರ ಬೆಳ್ತಂಗಡಿಗೆ ಆಗಮಿಸುತ್ತಿದ್ದಂತೆ ಅವರ ಮನೆಗೆ ಅಭಿಮಾನಿಗಳ ದಂಡೇ ಹರಿದು ಬಂದಿದೆ. ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದ ತಾಲೂಕು ಕ್ರೀಡಾಂಗಣಕ್ಕೂ ಸಾವಿರಾರು ಅಭಿಮಾನಿಗಳು ಆಗಮಿಸಿ ಅವರಿಗೆ ಅಂತಿನ ನಮನ ಸಲ್ಲಿಸಿದ್ದಾರೆ. ನೇರವಾಗಿ ನಿಷ್ಠೂರವಾಗಿ ತಪ್ಪುಗಳನ್ನು ಖಂಡಿಸುತ್ತಿದ್ದ ತಮ್ಮ ಪರ ಧ್ವನಿಯಾಗಿದ್ದ ನಾಯಕ ಇನ್ನಿಲ್ಲ ಅನ್ನೋದನ್ನು ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾದ್ಯವಾಗಿಲ್ಲ. ಬಡವರಿಗೆ ಅನ್ಯಾಯ ಆಗ್ತಾ ಇದೆ ಅಂತ ಗೊತ್ತಾದ್ರೆ ಮುಲಾಜಿಲ್ಲದೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ತಾ ಇದ್ದ ವಸಂತ ಬಂಗೇರ ಅವರ ಆ ಸ್ಟೈಲ್ ಯಾವತ್ತೂ ಮರೆಯಲು ಸಾದ್ಯವಿಲ್ಲ.
ರಾಜ್ಯ ರಾಜಕಾರಣದಲ್ಲಿ ಸರಿಸುಮಾರು 40 ವರ್ಷಗಳ ಕಾಲ ಚಾಲ್ತಿಯಲ್ಲಿದ್ದ ಹೆಸರು ವಸಂತ ಬಂಗೇರ. ಬೆಳ್ತಂಗಡಿ ಕ್ಷೇತ್ರದಲ್ಲಿ ಮೂರು ಪಕ್ಷಗಳಿಂದ ಶಾಸಕರಾಗಿದ್ದ ವಸಂತ ಬಂಗೇರ ಕೊನೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಭದ್ರವಾಗಿ ನೆಲೆಯೂರಿದ್ದರು. ಬಿಜೆಪಿಯಿಂದ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದ ವಸಂತ ಬಂಗೇರ ಬಳಿಕ ನಡೆದ ರಾಜಕೀಯ ದ್ರುವೀಕರಣದಲ್ಲಿ ಜೆಡಿಎಸ್ ಮತ್ತು ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಜಾತ್ಯಾತೀತ ನಾಯಕನಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಒಡನಾಡಿಯಾಗಿ ರಾಜ್ಯದ ಅಪಾರ ರಾಜಕೀಯ ನಾಯಕರು ಮೆಚ್ಚಿಕೊಂಡಿದ್ದ ವ್ಯಕ್ತಿ ಇವರು. ವಿಪರ್ಯಾಸ ಅಂದ್ರೆ ರಾಜಕೀಯದ ಉತ್ತುಂಗಕ್ಕೆ ಏರಿದ್ರೂ ಸಚಿವರಾಗುವ ಅವಕಾಶ ವಸಂತ ಬಂಗೇರ ಅವರಿಗೆ ಸಿಗಲೇ ಇಲ್ಲ ಅನ್ನೋದು. 2013 ರಲ್ಲಿ ಕಾಂಗ್ರೆಸ್ ಪಕ್ಷ ಪೂರ್ಣ ಬಹುಮತದಲ್ಲಿ ಅಧಿಕಾರಕ್ಕೆ ಬಂದಿದ್ರೂ ವಸಂತ ಬಂಗೇರ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ಆದ್ರೆ ಯಾವೊಬ್ಬ ಸಚಿವನಿಗೂ ಸಾದ್ಯವಾಗದ ಕೆಲಸವನ್ನು ಸಿಎಂ ಆಗಿದ್ದ ಸಿದ್ಧರಾಮಯ್ಯ ಮೂಲಕ ಮಾಡಿಸೋ ತಾಕತ್ತು ಇದ್ದಿದ್ದು ವಸಂತ ಬಂಗೇರ ಅವರಿಗೆ ಮಾತ್ರ ಅನ್ನೋದನ್ನ ಮರೆಯುವ ಹಾಗಿಲ್ಲ.
ಮನಸ್ಸಿನಲ್ಲಿ ಏನನ್ನೂ ಇಟ್ಟುಕೊಳ್ಳದೆ ಇದ್ದಿದ್ದು ಇದ್ದಹಾಗೇ ಹೇಳೋ … ಬಡವರು ಅಂದ್ರೆ ನನ್ನವರು ಎಂದು ಪ್ರೀತಿ ಮಾಡೋ ಜನ ನಾಯಕ ಇಂದು ಎಲ್ಲರ ಪ್ರೀತಿಗೆ ವಿದಾಯ ಹೇಳಿ ಮೌನವಾಗಿದ್ದಾರೆ. ” ನನ್ನನ್ನು ಆರಿಸಿದವರು ನೀವು .. ನೀವು ನನ್ನನ್ನು ಆಯ್ಕೆ ಮಾಡಿದ್ದಕ್ಕೆ ನಾನು ಮೋಸ ಮಾಡಿಲ್ಲ. ಹಣ ಮಾಡದೆ ಸ್ವಚ್ಚವಾಗಿ ಜನ ಸೇವೆ ಮಾಡಿದ ತೃಪ್ತಿ ಇದೆ” ಅಂತಲೇ ರಾಜಕೀಯಕ್ಕೆ ವಿದಾಯ ಹೇಳಿದ್ದ ವಸಂತ ಬಂಗೇರ ಇಂದು ಎಲ್ಲವನ್ನೂ ಬಿಟ್ಟು ತಮ್ಮ ಅಂತಿಮಯಾತ್ರೆ ಮುಗಿಸಿದ್ದಾರೆ.
ವಸಂತ ಬಂಗೇರ ಅವರ ಅಂತ್ಯಕ್ರೀಯೆ ಅವರ ಕುವೆಟ್ಟು ಕೇದೆ ಮನೆಯಲ್ಲಿ ನಡೆಸಲಾಗಿದೆ. ತಂದೆಯ ಚಿತೆಗೆ ಮಗಳು ಅಗ್ನಿ ಸ್ಪರ್ಷ ಮಾಡುವ ಮೂಲಕ ಅಂತಿಮ ವಿಧಿಯನ್ನು ಪೂರೈಸಿದ್ದಾರೆ. ಪಂಚಭೂತಗಳಲ್ಲಿ ಲೀನವಾಗಿರುವ ಮಾಜಿ ಶಾಸಕ ವಸಂತ ಬಂಗೇರ ಇನ್ನು ನೆನಪು ಮಾತ್ರ. ಆದ್ರೆ ವಸಂತ ಬಂಗೇರ ಅವರು ಅವರ ಅಭಿಮಾನಿಗಳ ಹೃದಯದಲ್ಲಿ ಎಂದಿಗೂ ಜನನಾಯಕರಾಗಿರುತ್ತಾರೆ.
ವಿಡಿಯೋ ನೋಡಿ : ವಸಂತ ಬಂಗೇರ ಅವರ ರಾಜಕೀಯ ಜೀವನ ಕುರಿತಾದ ಸ್ಟೋರಿ
LATEST NEWS
8 ಜನರ ಆಹುತಿ ಪಡೆದ ಪಟಾಕಿ ಸ್ಪೋಟ…! 9 ಜನ ಗಂಭೀರ
ಮಂಗಳೂರು (ಶಿವಕಾಶಿ) : ಪಟಾಕಿ ಫ್ಯಾಕ್ಟರಿಯಲ್ಲಿ ನಡೆದ ಭೀಕರ ಸ್ಫೋಟದಿಂದ 8 ಜನರು ಇಹಲೋಕ ತ್ಯಜಿಸಿದ್ದು, 9 ಜನ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮೇ9 ರ ಮದ್ಯಾಹ್ನ ಊಟದ ವಿರಾಮದಲ್ಲಿ ಈ ಸ್ಫೋಟ ನಡೆದಿರುವ ಕಾರಣ ಹಲವು ಕಾರ್ಮಿಕರು ಬದುಕಿ ಉಳಿದಿದ್ದಾರೆ.
ತಮಿಳುನಾಡಿನ ಶಿವಕಾಶಿಯಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಈ ಭೀಕರ ಸ್ಪೋಟ ಸಂಭವಿಸಿದೆ. ಶ್ರೀ ಸುಧರ್ಶನ್ ಫೈರ್ ವರ್ಕ್ಸ್ ಅನ್ನೋ ಫ್ಯಾಕ್ಟರಿ ಇದಾಗಿದ್ದು, ಮದ್ಯಾಹ್ನ ಊಟದ ವೇಳೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಫ್ಯಾಕ್ಟರಿಯಲ್ಲಿ ಸುಮಾರು 50 ಕಾರ್ಮಿಕರು ಕೆಲಸ ಮಾಡುತ್ತಿದ್ದು, ಬಹುತೇಕರು ಊಟ ಮಾಡಿ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾಗ ಈ ಸ್ಫೋಟ ನಡೆದಿದೆ. ವಿಪರೀತವಾಗಿ ಏರಿದ್ದ ತಾಪಮಾನದಿಂದ ಪಟಾಕಿ ಸ್ಫೋಟಗೊಂಡಿದೆ ಎನ್ನಲಾಗಿದೆ.
ವೃದುನಗರ ಜಿಲ್ಲೆಯಲ್ಲಿರುವ ಶಿವಕಾಶಿಯ ಸೆಂಗಮಲೆಪೆಟ್ಟಿ ಎಂಬಲ್ಲಿ ಈ ಅವಘಡ ಸಂಭವಿಸಿದೆ. ಇದೊಂದು ದೊಡ್ಡ ಪ್ರಮಾಣದಲ್ಲಿ ಪಟಾಕಿ ತಯಾರಿಸುವ ಫ್ಯಾಕ್ಟರಿಯಾಗಿದೆ. ಸ್ಫೋಟದ ತೀವ್ರತೆಗೆ 7 ಕೊಠಡಿಯ ಕಟ್ಟಡ ಸಂಪೂರ್ಣ ನೆಲಸಮವಾಗಿ ಹೋಗಿದೆ. ಇಲ್ಲಿ ಪೂರ್ಣವಾಗಿ ಸಿದ್ಧಗೊಂಡಿದ್ದ ಪಟಾಕಿಗಳನ್ನು ಶೇಖರಿಸಿ ಇಡಲಾಗಿತ್ತು ಮತ್ತು ಪಕ್ಕದಲ್ಲೇ ಅರ್ಧ ತಯಾರಿಸಿದ್ದ ಪಟಾಕಿಗಳೂ ಕೂಡಾ ಇಡಲಾಗಿತ್ತು. ಪಟಾಕಿ ತಯಾರಿಸಲು ಇಟ್ಟಿದ ಮದ್ದಿಗೆ ಬೆಂಕಿ ತಗುಲಿ ಭಾರಿ ಸ್ಫೋಟ ಸಂಭವಿಸಿದೆ. 8 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಂಭತ್ತು ಜನ ಗಂಭೀರ ಪರಿಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 9 ಜನರಲ್ಲಿ ಇಬ್ಬರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಊಟಕ್ಕೆ ರೆಸ್ಟ್ ಇದ್ದ ಕಾರಣ ಇನ್ನಷ್ಟು ಜೀವ ಹಾನಿಯಾಗುವುದು ತಪ್ಪಿದ್ದು , ಘಟನೆ ನಡೆಯುವ ಸಮಯದಲ್ಲಿ ಕಟ್ಟಡದ ಸಮೀಪ ಕೇವಲ 17 ಜನ ಮಾತ್ರ ಇದ್ದರು ಅನ್ನೋ ಮಾಹಿತಿ ಲಭ್ಯವಾಗಿದೆ. ಪಟಾಕಿ ಸ್ಫೋಟವಾಗುತ್ತಿದ್ದಂತೆ ಸ್ಥಳದಿಂದ ಓಡಿ ರಕ್ಷಿಸಿಕೊಳ್ಳುವ ವೇಳೆ ಕಟ್ಟಡ ಉರುಳಿ ಅದರ ಅಡಿಗೆ ಬಿದ್ದು 8 ಜನ ಮೃತ ಪಟ್ಟಿದ್ದಾರೆ ಎಂದು ಮಾಹಿತಿ ಲಭಿಸಿದೆ. ಘಟನೆ ನಡೆಯುತ್ತಿದ್ದಂತೆ ರಕ್ಷಣೆಗೆ ಉಳಿದ ಕಾರ್ಮಿಕರು ಧಾವಿಸಿದ್ರೂ ಯಾರನ್ನೂ ರಕ್ಷಣೆ ಮಾಡುವ ಪರಿಸ್ಥಿತಿ ಅಲ್ಲಿ ಇರಲಿಲ್ಲ . ಹೀಗಾಗಿ ಸುಮಾರು 1 ಗಂಟೆಯ ಬಳಿಕ ಅಲ್ಲಿ ರಕ್ಷಣಾ ಕಾರ್ಯ ನಡೆಸಲಾಗಿದ್ದು, ಆ ವೇಳೆಗಾಗಲೇ 8 ಜನ ಮೃತ ಪಟ್ಟಿದ್ದಾರೆ.
LATEST NEWS
ಎಸ್ಎಸ್ಎಲ್ಸಿ ಅಲ್ಲಿ ಫೇಲ್ ಎಂದು ತಿಳಿದು ಆತ್ಮಹತ್ಯೆ ಮಾಡಿದ ಯುವತಿ
ಮಂಡ್ಯ: ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಯ ರಿಸಲ್ಟ್ ಇಂದು ಪ್ರಕಟಗೊಂಡಿದೆ. ಆದರೆ ಮಂಡ್ಯದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಪಾಸ್ ಆಗಿದ್ದರೂ ಫೇಲ್ ಎಂದು ತಪ್ಪಾಗಿ ತಿಳಿದು ನೇಣಿಗೆ ಶರಣಾಗಿದ್ದಾಳೆ.
ಅಮೃತ (16) ನೇಣಿಗೆ ಶರಣಾದ ವಿದ್ಯಾರ್ಥಿನಿ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಅಮೃತ ನಗರಕೆರೆ ಗ್ರಾಮದ ಸರ್ಕಾರಿ ಅನುದಾನಿತ ಪೂರ್ಣಿಮಾ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದ ಅಮೃತ ಶೇ.57 ಅಂಕ ಪಡೆದು ತೇರ್ಗಡೆ ಹೊಂದಿದ್ದಳು.
ಆದರೆ ಪರೀಕ್ಷೆಯಲ್ಲಿ ಫೇಲ್ ಆಗಿಬಿಟ್ಟೆ ಎಂದು ತಪ್ಪಾಗಿ ತಿಳಿದು ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣಿಗೆ ಶರಣಾಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.
- DAKSHINA KANNADA6 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- LATEST NEWS6 days ago
ಎರಡು ಬಾರಿ ಅಕ್ರಮವಾಗಿ ಗರ್ಭಿಣಿಯಾದ ಅಪ್ರಾಪ್ತೆ..! ಪೋಷಕರ ವಿರುದ್ಧ ದೂರು.!!ಮುಂದೇನಾಯ್ತು?
- LATEST NEWS6 days ago
ಅಜೆಕಾರು : ಮನೆ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾ*ವು
- DAKSHINA KANNADA5 days ago
ಮನೆಯಲ್ಲಿ ಒಂದಕ್ಕಿಂತ ಹೆಚ್ಚು ತುಳಸಿ ಗಿಡ ನೆಟ್ಟರೆ ಏನಾಗುತ್ತದೆ ನೋಡಿ..!