Thursday, March 23, 2023

ಮಂಗಳೂರು: ‘ಕಾಂತಾರ’ ಫಿಲ್ಮ್‌ಗೆ ತೆರಿಗೆ ವಿನಾಯಿತಿ ನೀಡಲು CMನಲ್ಲಿ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮನವಿ

ಮಂಗಳೂರು: ರಾಜ್ಯದಲ್ಲಿ ಸೆನ್ಸೇಷನ್ ತೋರಿಸಿದ ತುಳುನಾಡಿನ ದೈವಾರಾಧನೆಯ ಬಗೆಯನ್ನು ಬಿಚ್ಚಿಡುವ ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ಕಾಂತಾರ ಚಿತ್ರವನ್ನು ತೆರಿಗೆ ಮುಕ್ತಗೊಳಿಸಲು ಯೂತ್ ಕಾಂಗ್ರೆಸ್ ಮುಖಂಡ ಮಿಥುನ್ ರೈ ರಾಜ್ಯದ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ.


ಈ ಚಿತ್ರ ಇಡೀ ಕರ್ನಾಟಕದ ಜನ ನೋಡಬೇಕೆನ್ನುವ ಹಿನ್ನಲೆ ಟ್ವೀಟ್ ಮಾಡಿರುವ ಅವರು ‘ಇಡೀ ಜಗತ್ತಿನಲ್ಲಿ “ದೈವಾರಾಧನೆ”ಗೆ ಇವತ್ತು ಒಂದು ಪ್ರಮುಖವಾದ ಪ್ರಾಶ್ಯಸ್ತತೆ ಇದೆ, ಅದು ಹುಟ್ಟಿಕೊಂಡಿದ್ದು ನಮ್ಮ ತುಳುನಾಡಿನ ಮಣ್ಣಿನಲ್ಲಿ … ದೈವಾರಾಧನೆಯ ವಿಶಿಷ್ಟತೆ ಹಾಗೂ ಪ್ರಾಮುಖ್ಯತೆಯ ಬಗ್ಗೆ ಜನರ ಮನಮುಟ್ಟಿಸುವ ಪ್ರಯತ್ನ ಇವತ್ತು “ಕಾಂತಾರ” ಚಿತ್ರದ ಮೂಲಕ ಫಲಿಸಿದೆ.


ಸನ್ಮಾನ ಮುಖ್ಯಮಂತ್ರಿಗಳಲ್ಲಿ ವಿನಮ್ರತೆಯಿಂದ ಮನವಿ ಮಾಡುತ್ತಾ ಇದ್ದೇನೆ, “ಕಾಂತಾರ” ಚಲನಚಿತ್ರ ಪ್ರತಿ ಮನೆಮನೆಗೆ ಮುಟ್ಟಬೇಕು.

ಈ ಚಿತ್ರಕ್ಕೆ ತೆರಿಗೆ ಮುಕ್ತ ಮಾಡಬೇಕು. ತುಳುನಾಡಿನ ದೈವಾರಾಧನೆಯ ಮಹತ್ವ ಸಮಸ್ತ ಕರ್ನಾಟಕದಲ್ಲಿ ತಿಳಿಯಬೇಕೆಂದು ಸಮಸ್ತ ತುಳುವೆರ ಕೋರಿಕೆ. ಎಂದು ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

40 ವರ್ಷಗಳಿಂದ ಅದೇ ಪೊಳ್ಳು ಭರವಸೆ : ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಸುಳ್ಯ ಅರಮನೆಗಾಯದ ಜನತೆ..!

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಈ ಗ್ರಾಮದ ಜನ ಕಳೆದ 40 ವರ್ಷಗಳಿಂದ ಬಿದಿರಿನ ತೂಗು ಸೇತುವೆಯ ಮುಖಾಂತರ ಜೀವ ಭಯದಲ್ಲಿ ಜೀವನ ನಡೆಸುತಿದ್ದಾರೆ.ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ...

ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಜಿನೈಕ್ಯ..!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಆವರು ಜಿನೈಕ್ಯರಾಗಿದ್ದಾರೆ.ಹಾಸನ : ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಸ್ವಸ್ತಿ ಶ್ರೀ...

ಕಲಬುರಗಿಯಲ್ಲಿ ಹಾಡು ಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ..!

ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ ಹತ್ಯೆ ಮಾಡಲಾದ ಘಟನೆ ಕಲಬುರಗಿಯ ಹಾಗರಗಾ ಕ್ರಾಸ್ ಬಳಿ ನಡೆದಿದೆ. ಮಜತ್ ಸುಲ್ತಾನ್ (35) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಲಬುರಗಿ : ಹಾಡುಹಗಲೇ ಸಾಮಾಜಿಕ ಕಾರ್ಯಕರ್ತೆಯ ಭೀಕರ...