LATEST NEWS
ನೈಟ್ ಕ್ಲಬ್ನಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ: ವೀಡಿಯೋ ವೈರಲ್ ಪ್ರತಿಪಕ್ಷಗಳಿಂದ ಟೀಕೆ
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೈಟ್ ಕ್ಲಬ್ವೊಂದರಲ್ಲಿ ಕಾಣಿಸಿಕೊಂಡಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಾಹುಲ್ ಗಾಂಧಿ ಪಾರ್ಟಿಯಲ್ಲಿ ಭಾಗವಹಿಸಿದ್ದು, ಅವರ ಸುತ್ತಮುತ್ತಲಿನ ಜನರು ಮದ್ಯ ಸೇವಿಸುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. ಸದ್ಯ ಕಠ್ಮಂಡುವಿನಲ್ಲಿರುವ ರಾಹುಲ್ ಗಾಂಧಿ ಸ್ನೇಹಿತರೊಬ್ಬರ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂದು ವರದಿಯಾಗಿದೆ.
‘ಪಪ್ಪು ಜೀ (ರಾಹುಲ್ ಗಾಂಧಿ) ಪೂರ್ಣಾವಧಿಯ ಪ್ರವಾಸಿಯಾಗಿದ್ದು, ಅರೆಕಾಲಿಕ ರಾಜಕಾರಣಿಯಾಗಿದ್ದಾರೆ. ಅವರ ನಡೆ ಬೂಟಾಟಿಕೆಯಿಂದ ಕೂಡಿದೆ.
ರಾಹುಲ್ ಗಾಂಧಿಯವರು ನಕಲಿ ಕಥೆಗಳು ಮತ್ತು ಟೀಕೆಗಳ ಮೂಲಕ ದೇಶದ ಜನರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಟೀಕಿಸಿದ್ದಾರೆ.
ರಾಹುಲ್ ಗಾಂಧಿ ಹೇಳಿಕೆಗಳು ಅವರ ಸ್ವಂತ ಪಕ್ಷದ ಸದಸ್ಯರನ್ನೇ ದಾರಿ ತಪ್ಪಿಸುವಂತಿರುತ್ತವೆ ಎಂದು ನಖ್ವಿ ವಾಗ್ದಾಳಿ ನಡೆಸಿದ್ದಾರೆ.
अब सही है pic.twitter.com/LBDwNZmDL9
— Tejinder Pall Singh Bagga (@TajinderBagga) May 3, 2022
FILM
ಕನ್ನಡಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಟಾಲಿವುಡ್ ನ ಜನಮನಗೆದ್ದ ನಟಿ..!! ಡಾಲಿಯ ‘ಉತ್ತರಾಕಾಂಡ’ಕ್ಕೆ ನಟಿ ಯಾರು ಗೊತ್ತಾ?
ಮೋಹಕತಾರೆ ರಮ್ಯ.. ಇವರ ಚಿತ್ತ ಯಾವತ್ತ ಅನ್ನೋದೆ ಇನ್ನೂ ಖಚಿತ ಆಗಿಲ್ಲ. ಈ ಮಧ್ಯೆ ಕೆಲವೊಂದು ಸಿನೆಮಾಕ್ಕೆ ನಟಿಯಾಗಿ ಕಾಣಿಸಿಕೊಳ್ಳಬೇಕಿದ್ದ ಇವರು ಹಲವು ಸಿನೆಮಾದಿಂದ ಕೈ ಬಿಟ್ಟಿದ್ದಾರೆ. ಇದರಲ್ಲಿ ಉತ್ತರಾಕಾಂಡ ಸಿನೆಮಾ ನಟನೆಯಿಂದ ಹೊರ ಬಂದಿರುವುದು ಈಗಾಗಲೇ ಸುದ್ದಿಯಾಗಿದೆ. ಆದರೆ ಇವರ ಬದಲಿಗೆ ಕಾಲಿವುಡ್ ನಟಿ ಬರಲಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಹಬ್ಬಿದೆ.
ರೊಹೀತ್ ಪದಕಿ ನಿರ್ದೇಶನದಲ್ಲಿ ಅನಾವರಣವಾಗಲಿರುವ ಬಯಲು ಸೀಮೆಯ ಉತ್ತರಾಕಾಂಡ ಕಥೆಗೆ ಕಾಲಿವುಡ್ ನ ಐಶ್ವರ್ಯ ರಾಜೇಶ್ ಬಣ್ಣ ಹಚ್ಚಲಿದ್ದಾರೆ ಎಂದು ಹೇಳಲಾಗಿದೆ. ಕಾಕ ಮುತ್ತೈ , ವಡಾ ಚೆನ್ನೈ, ಕನಾ, ನಮ್ಮ ಮನೆ ಪಿಳ್ಳೈ ಹೀಗೆ ಹತ್ತಾರು ಚಿತ್ರ, ವೈವಿಧ್ಯಮಯ ಪಾತ್ರದ ಮೂಲಕ ಚಂದನವನದ ಚೆಂದದ ನಾಯಕಿಯರಿಗೆಲ್ಲರಿಗೂ ತನ್ನ ನಟನೆಯ ಮೂಲಕ ಜನ ಮನ ಗೆದ್ದ ಐಶ್ವರ್ಯ ರಾಜೇಶ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಸ್ಯಾಂಡಲ್ವುಡ್ ನಲ್ಲಿ ಸಂಚಲನ ಮೂಡಿಸ್ತಾರ ಅನ್ನೋ ಗಾಸಿಪ್ ಹರಿದಾಡ್ತಾ ಇದೆ.
ಈ ಚಿತ್ರದಲ್ಲಿ ಚೈತ್ರಾ ಆಚಾರ್ ಲಚ್ಚಿ ಪಾತ್ರಕ್ಕೆ ಬಣ್ಣ ಹಚ್ತಿದ್ದಾರೆ. ದೂದ್ ಪೇಡಾ ದಿಗಂತ್ ಮಿರ್ಚಿ ಮಲ್ಲಿಗೆ ಎಂಬ ಹೆಸರಿನಿಂದ ಬಣ್ಣ ಹಚ್ಚಲಿದ್ದಾರೆ. ಸದಾ ಬಬ್ಲಿ ಕ್ಯಾರೆಕ್ಟರ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದ ದಿಗಂತ್ ಈ ಸಿನೆಮಾದಲ್ಲಿ ಡಿಫೆರೆಂಟ್ ಲುಕ್ನಲ್ಲಿ ಕಾಣಿಸಲಿದ್ದಾರೆ.
ಮಲಯಾಳಂನ ನಿರ್ಮಾಪಕ ಮತ್ತು ಆಕ್ಟರ್ ವಿಜಯ್ ಬಾಬು ಕೂಡ ಇದೇ ಚಿತ್ರದ ಮೂಲಕ ಕನ್ನಡಕ್ಕೆ ಪಾಪಾರ್ಪಣೆ ಮಾಡಲಿದ್ದಾರಂತೆ. ಡಾಲಿ ಧನಂಜಯ್ ಜೊತೆ ಕರುನಾಡ ಚಕ್ರವರ್ತಿ ಕೂಡ ಚಿತ್ರದಲ್ಲಿದ್ದಾರೆ ಅನ್ನುವ ವಿಚಾರ ಈಗಾಗಲೇ ಸಿನಿ ಪ್ರಿಯರ ಕನಸಿಗೆ ಬಣ್ಣ ಹಚ್ಚಿದಂತಾಗಿದೆ.
LATEST NEWS
UDUPI : ಕಾಂಗ್ರೆಸ್ ಪರ ದರ್ಶನ್ ಪ್ರಚಾರ; ಸುಮಲತಾ ಏನಂದ್ರು?
ಉಡುಪಿ : ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಉಡುಪಿಯಲ್ಲಿ ಪ್ರಚಾರ ಮಾಡಲು ನಟಿ ಸಂಸದೆ ಸುಮಲತಾ ಅವರು ಆಗಮಿಸಿದ್ದಾರೆ. ಮಹಿಳಾ ಸಮಾವೇಶದಲ್ಲಿ ಭಾಗವಹಿಸಿದ ಸುಮಲತಾ ಕೋಟ ಪರ ಮತಯಾಚನೆ ಮಾಡಿದ್ದಾರೆ.
ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸುಮಲತಾ ನಟಿಯಾಗಿದ್ದಾಗ ಉಡುಪಿಗೆ ಶೂಟಿಂಗ್ ಅಂತ ಬರ್ತಾ ಇದ್ದದ್ದೇ, ಈ ಬಾರಿ ಚುನಾವಣಾ ಪ್ರಚಾರಕ್ಕೆ ಬಂದಿದ್ದೇನೆ. ಈ ಬಾರಿ ಮಂಡ್ಯದಲ್ಲಿ ಬಿಜೆಪಿಗೆ ಗೆಲುವಾಗಲಿದ್ದು, ಮೈಸೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ.
ದರ್ಶನ್ ಬಗ್ಗೆ ಏನಂದ್ರು?
ಈ ವೇಳೆ ಮಂಡ್ಯದಲ್ಲಿ ನಟ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸುಮಲತಾ, ಅದು ದರ್ಶನ್ ಅವರ ವೈಯಕ್ತಿಕ ವಿಚಾರ. ನಾವು ಪ್ರತಿದಿನ ರಾಜಕೀಯ ವಿಚಾರ ಚರ್ಚೆ ಮಾಡುವುದಿಲ್ಲ. ಮಾತ್ರವಲ್ಲ, ಇಂತಹ ವಿಚಾರಗಳನ್ನು ದರ್ಶನ್ ಜೊತೆ ಚರ್ಚೆ ಮಾಡುವುದಿಲ್ಲ. ನಾನು ಹೋಗು ಅಥವಾ ಹೊಗಬೇಡ ಅನ್ನಲು ನಾನು ಯಾರು ಎಂದು ಕೇಳಿದ್ದಾರೆ.
ಕೆಲವರು ನಾನೇ ದರ್ಶನ್ ನನ್ನು ಕಾಂಗ್ರೆಸ್ ಪರ ಪ್ರಚಾರಕ್ಕೆ ಕಳುಹಿಸಿದ್ದಾಗಿ ಹೇಳ್ತಾರೆ, ಆದ್ರೆ ಅದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ನಾನು ನನ್ನ ಇಚ್ಚೆಯಿಂದ ಬಿಜೆಪಿ ಪಕ್ಷಕ್ಕೆ ಬಂದಿದ್ದೇನೆ. ಇನ್ನು ಕುಮಾರಸ್ವಾಮಿ ಪರ ಪ್ರಚಾರ ಮಾಡಬೇಕಾ ಬೇಡ್ವಾ ಅಂತ ಪಕ್ಷ ತೀರ್ಮಾನಿಸುತ್ತದೆ ಎಂದು ಹೇಳಿದ್ದಾರೆ.
FILM
ಆತ್ಮಗಳ ಜೊತೆ ಮಾತಾಡ್ತಾರಂತೆ ಕನ್ನಡದ ಈ ನಟಿ..!! ಸಿನೆಮಾ ಬಿಟ್ಟು ಕನಸುಗಳನ್ನು ಟ್ಯ್ರಾಕ್ ಮಾಡಲು ಹೊರಟಿದ್ದು ಯಾಕೆ ಗೊತ್ತಾ?
ಕನ್ನಡ ಚಿತ್ರರಂಗದಲ್ಲಿ ನಟಿಯಾಗಿ ಕಾಣಿಸಿಕೊಂಡಿದ್ದ ನೀತು ಗಾಳಿಪಟ ಸೇರಿದಂತೆ ಕೆಲವು ಬೆರಳೆಣಿಕೆಯ ಹಿಟ್ ಸಿನೆಮಾಗಳಲ್ಲಿ ಕಾಣಿಸಿಕೊಂಡಿದ್ದರು. ಆದಾದ ಬಳಿಕ ಖಾಸಗಿ ಯೂಟ್ಯೂಬ್ ಸಂದರ್ಶನಗಳಲ್ಲಿ ಬಿಟ್ಟರೆ ನೀತು ಸಿನೆಮಾಗಳಿಂದ ದೂರ ಉಳಿದಿದ್ದಾರೆ. ಇದೀಗ ನೀತು ಹೊಸ ವಿದ್ಯೆಯೊಂದನ್ನು ಕಲಿತಿದ್ದಾರಂತೆ. ಸಿನೆಮಾ ಬಿಟ್ಟು ನೀತು ಏನು ಮಾಡುತ್ತಿದ್ದಾರೆ ಅನ್ನೋರಿಗೆ ನೀತು ಹೊಸ ವಿಷಯವೊಂದನ್ನು ಬಿಚ್ಚಿಟ್ಟಿದ್ದಾರೆ. ಹೌದು, ಇವರು ಆತ್ಮಗಳ ಜೊತೆ ಸಂಪರ್ಕಿಸುವ ವಿದ್ಯೆಯನ್ನು ಕಲಿತಿದ್ದು, ಕನಸುಗಳನ್ನು ಟ್ರ್ಯಾಕ್ ಮಾಡುವಲ್ಲಿ ಬಿಸಿಯಾಗಿದ್ದಾರಂತೆ. ಈ ವಿದ್ಯೆಯನ್ನು ಶಮನಿಸಂ ಎಂದು ಕರೀತಾರೆ.
ಈ ಕುರಿತಾಗಿ ಸ್ವತಃ ನೀತುರವರು ಖಾಸಗಿ ಯೂಟ್ಯೂಬ್ ಚಾನೆಲ್ವೊಂದಕ್ಕೆ ಸಂದರ್ಶನ ನೀಡುವ ವೇಳೆ ತಿಳಿಸಿದ್ದಾರೆ. ‘ನಾನು ಶಮನಿಸಂ ಕೋರ್ಸ್ ಮಾಡಿದ್ದೇನೆ ಆದ್ರೆ ಅದು ಡ್ರೀಮ್ ಟ್ರ್ಯಾಕ್ ಅಂತ ಹೋಳೋಕೆ ಆಗಲ್ಲ. ಶಮನಿಸಂ ಅನ್ನೋ ವಿದ್ಯೆಯಲ್ಲಿ ಇದೊಂದು ಭಾಗವಾಗಿರುತ್ತೆ. ಆದ್ರೆ ಇಲ್ಲಿ ಓಜಾ ಬಾಕ್ಸ್ ಇಟ್ಟುಕೊಂಡು ಆತ್ಮಗಳನ್ನು ಕರೆಯೋದಿಲ್ಲ. ಇದೊಂದು ಕೋರ್ಸ್ ಆಗಿದ್ದು ನಾನು ಇದನ್ನು ಇಷ್ಟು ಪ್ರೊಫೆಷನಲ್ ಆಗಿ ತೆಗೆದುಕೊಳ್ತೇನೆ ಅಂತ ಅಂದುಕೊಂಡಿರಲಿಲ್ಲ’ಎಂದು ಹೇಳಿದ್ರು.
ಮರಣದ ಬಳಿಕ ಮಗಳಿಗೆ ಕಾಣಿಸಿಕೊಂಡ ತಂದೆ..!
ನೀತು ತಂದೆಯ ಮರಣದ ಬಳಿಕ ಸಾಕಷ್ಟು ಕಷ್ಟಗಳನ್ನು ಅನುಭವಿಸಿದ್ರಂತೆ. ರಾತ್ರಿ ಮಲಗೋ ವೇಳೆ ಯಾರೋ ಮುಂದೆ ಬಂದು ನಿಂತ ಹಾಗೆ ಅನುಭವ. ಆದ್ರೆ ಅದು ಕನಸಾಗಿರಲಿಲ್ಲ ಅಸಲಿಗೆ ಅದು ನನಸಾಗಿತ್ತಂತೆ. ಕಪ್ಪು ಬಣ್ಣದಲ್ಲಿ ಕಾಣಿಸಿಕೊಂಡ ವ್ಯಕ್ತಿ ಕೈ ಕಟ್ಟಿಕೊಂಡು ತಲೆ ಕೆಳಗೆ ಹಾಕಿ ನಿಂತಿದ್ದರಂತೆ. ನೀತು ಅವರಿಗೆ ರಾತ್ರಿ ವೇಳೆ ನಿದ್ದೆ ಮಾಡಲು ಭಯವಾಗುತ್ತಿತ್ತಂತೆ. ಒಂದು ಕಡೆ ತಂದೆ ಕುರಿತು ಕೇಳುವಾಗ ತಂದೆಗೆ ಇನ್ನೂ ಮೋಕ್ಷ ಸಿಗಲಿಲ್ಲ ಎಂದು ತಿಳಿಯಿತು. ಗುರುವಾಯೂರಿಗೆ ಹೋಗಿ ಅಲ್ಲಿ ತಂದೆಗೆ ಮೋಕ್ಷ ದೊರಕುವಂತೆ ಮಾಡಿದ್ದಾರೆ. ಇದಾದ ನಂತರ ಕನಸುಗಳನ್ನು ಟ್ರ್ಯಾಕ್ ಮಾಡಲು ಪ್ರಾರಂಭಿಸಲು ಮನಸ್ಸು ಮಾಡಿದ್ರಂತೆ.
ಕನಸುಗಳ ಬೆನ್ನುಹತ್ತಿದ್ದ ನೀತು:
ತನಗಾಗಿರುವ ಅನುಭವಗಳಿಂದ ನೀತು ಕನಸುಗಳನ್ನು ಟ್ರ್ಯಾಕ್ ಮಾಡಲು ಬಯಸಿದ್ರಂತೆ. ಈ ವೇಳೆ ಹೈದರಾಬಾದ್ ನ ದಂಪತಿಯ ಭೇಟಿ ಮಾಡ್ತಾರೆ. ಇವರು ಈ ವಿದ್ಯೆಯನ್ನು ಕಲಿಸುತ್ತಾರೆ ಎಂದು ಗೊತ್ತಾಗಿ ಅವರ ಸಂಪರ್ಕದಲ್ಲಿದ್ರಂತೆ ನೀತು. ಇದು ಕೆಲವರು ಇದನ್ನು ಮೂಡನಂಬಿಕೆ ಎಂದು ಹೆಳ್ತಾರೆ. ಆದರೆ ನಾನು ಇದಕ್ಕೆ ತಲೆ ಕೆಡಿಸಿಕೊಳ್ಳೋದಿಲ್ಲ ಅಂತ ಹೇಳ್ತಾರೆ ನೀತು. ನಂಬಿಕೆ ಹಾಗೂ ವಿಜ್ಞಾನಕ್ಕೆ ಅದರದ್ದೇ ಆದ ಗರುತು ಇದೆ. ಹಾಗಾಗಿ ಯಾರು ಏನು ಅಂದರೂ ನಾನು ತಲೆ ಕೆಡಿಸಿಕೊಳ್ಳೋದಿಲ್ಲ ಎಂದು ಹೇಳಿದ್ರು.