ಬ್ರೇಕಿಂಗ್ ನ್ಯೂಸ್: ಗೋಲ್ಡ್ ಫಿಂಚ್ ಖಾಸಗಿ ಮೈದಾನದಲ್ಲಿ ಕಾಂಗ್ರೆಸ್ ನಾಯಕರ ಹೈಡ್ರಾಮಾ
ಬ್ರೇಕಿಂಗ್ ನ್ಯೂಸ್: ಗೋಲ್ಡ್ ಫಿಂಚ್ ಖಾಸಗಿ ಮೈದಾನದಲ್ಲಿ ಕಾಂಗ್ರೆಸ್ ನಾಯಕರ ಹೈಡ್ರಾಮಾ
ಮಂಗಳೂರು: ಊರಿಗೆ ಹೊರಟು ನಿಂತಿದ್ದ ವಲಸೆ ಕಾರ್ಮಿಕರು ಹಾಗೂ ಮಂಗಳೂರಿನ ಕೂಳುರಿನಲ್ಲಿರುವ ಗೋಲ್ಡ್ ಫಿಂಚ್ ಮೈದಾನದ ವಾಚ್ ಮೆನ್ ನಡುವೆ ಕೆಲ ಕಾಲ ಗೊಂದಲ ಉಂಟಾದ ಘಟನೆ ಇಂದು (ಮೇ 5) ಕೂಳೂರಿನ ಗೋಲ್ಡ್ ಫಿಂಚ್ ಖಾಸಗಿ ಮೈದಾನದಲ್ಲಿ ನಡೆದಿದೆ.
ತಮ್ಮ-ತಮ್ಮ ಊರಿಗೆ ಹೊರಟು ನಿಂತಿದ್ದ ಕಾರ್ಮಿಕರನ್ನು ಕಳುಹಿಸಿಕೊಡುವ ನಿಟ್ಟಿನಲ್ಲಿ, ವಲಸೆ ಕಾರ್ಮಿಕರನ್ನು ಮಂಗಳೂರು ಕೂಳೂರಿನ ಗೋಲ್ಡ್ ಫಿಂಚ್ ಖಾಸಗಿ ಮೈದಾನಕ್ಕೆ ಆಗಮಿಸಲು ಜಿಲ್ಲಾಡಳಿತ ಸೂಚನೆ ನೀಡಿತ್ತು.
ಆದ್ರೆ ಅಲ್ಲಿ ಕಾರ್ಮಿಕರಿಗೆ ಮೈದಾನಕ್ಕೆ ಪ್ರವೇಶ ನೀಡದ ಮೈದಾನದ ವಾಚ್ ಮೆನ್ ತಡೆದು ನಿಲ್ಲಿಸಿದ್ದ. ಇದರಿಂದ ರೊಚ್ಚಿಗೆದ್ದ ಕಾರ್ಮಿಕರು ರಸ್ತೆಯಲ್ಲೇ ಗಲಾಟೆ ಮಾಡಿದ್ದಾರೆ.
ಇತ್ತ ಗಲಾಟೆ ಜೋರಾಗುತ್ತಿದ್ದಂತೆ ಕೆಎಸ್ ಆರ್ ಟಿ ಸಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಈ ನಡುವೆ ಕೂಡಲೇ ಸ್ಥಳಕ್ಕಾಗಮಿಸಿದ ಕಾಂಗ್ರೆಸ್ ಮುಖಂಡರಾದ ಶಾಸಕ ಯು ಟಿ ಖಾದರ್, ಎಂಎಲ್ ಸಿ ಐವಾನ್ ಡಿಸೋಜಾ, ಮಾಜಿ ಶಾಸಕ ಮೋಯಿದ್ದಿನ ಭಾವ ಮಿಥುನ್ ರೈ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಅಧಿಕಾರಿಗಳ ಜೊತೆ ಯು ಟಿ ಖಾದರ್ ಮಾತಿನ ಚಕಮಕಿ ನಡೆದಿದ್ದಲ್ಲದೇ, ಸರಿಯಾಗಿ ಮಾಹಿತಿ ನೀಡದ ತಸಿಲ್ದಾರ್ ಗೆ ತರಾಟೆ ತೆಗೆದುಕೊಂಡರು.
ಮಾತ್ರವಲ್ಲದೇ ಸರ್ಕಾರದ ವಿರುದ್ದ ಸ್ಥಳದಲ್ಲೇ ಕಾಂಗ್ರೆಸ್ ಪ್ರತಿಭಟನೆ ಕೂಡ ನಡೆಸಿದ್ದು, ಸರ್ಕಾರ ಮತ್ತು ಅಧಿಕಾರಿಗಳ ಕ್ರಮಕ್ಕೆ ಕೈ ನಾಯಕರು.ಧಿಕ್ಕಾರದ ಘೋಷಣೆ ಕೂಗಿದರು.
ಬಳಿಕ ಅಧಿಕಾರಿಗಳು ಸ್ಥಳದಲ್ಲೇ ಬಸ್ ವ್ಯವಸ್ಥೆ ಮಾಡಿಸಿದ ಅಧಿಕಾರಿಗಳು ಸುಮಾರು 1000 ಕ್ಕೂ ಹೆಚ್ಚು ಕಾರ್ಮಿಕರನ್ನ ಕಳುಹಿಸಿಕೊಟ್ಟಿದ್ದಾರೆ.
ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಿಂದ ಕಾರ್ಮಿಕರಿಗೆ ಉಚಿತ ಊಟದ ವ್ಯವಸ್ಥೆ ಕೂಡ ಮಾಡಲಾಗಿತ್ತು.
LATEST NEWS
ಅಣ್ಣನ ಪ್ರೀತಿಗೆ ತಮ್ಮ ಬ*ಲಿ; ತಾಯಿಯ ಮುಂದೆಯೇ ಮಗನ ಕೊ*ಲೆ
ಮಂಗಳೂರು/ಕಲಬುರಗಿ: ಯುವ ಸಮಾಜದ ಪ್ರೀತಿಗೆ ಮನೆಯಲ್ಲಿ ವಿರೋಧ ಬರುವುದು ಸಹಜ. ಅದರಲ್ಲೂ ಹುಡುಗಿಯ ವಿಚಾರದಲ್ಲಿ ಇದು ಹೆಚ್ಚಾಗಿಯೇ ಕಾಣಬಹುದು. ವಿಪರ್ಯಾಸವೆಂದರೆ ಅಣ್ಣನ ಪ್ರೇಮದ ವಿಚಾರದಲ್ಲಿ ತಮ್ಮ ಬಲಿ*ಯಾದ ಘಟನೆ ನಡೆದಿದೆ.
ಕಲಬುರಗಿ ನಗರದ ಹೊರವಲಯದಲ್ಲಿರುವ ನಾಗನಹಳ್ಳಿ ಗ್ರಾಮದಲ್ಲಿ ಸುಮಿತ್ ಮಲ್ಲಾಬಾದ್ ಎಂಬ 19 ವರ್ಷದ ಯುವಕನನ್ನು ಭೀಕ*ರವಾಗಿ ಕೊ*ಲೆ ಮಾಡಲಾಗಿದೆ. ತಂದೆ-ತಾಯಿಯೊಂದಿಗೆ ಮುಂಬೈನಲ್ಲಿ ವಾಸವಾಗಿದ್ದ ಸುಮಿತ್, ಮುಂಬೈನಲ್ಲಿ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ. ಕಳೆದ ವಾರವಷ್ಟೇ ತಾಯಿಯೊಂದಿಗೆ ಕಲಬುರಗಿಗೆ ಆಗಮಿಸಿದ್ದ. ಊರಲ್ಲಿ ಸುಮಿತ್ ಸಹೋದರ ಸಚಿನ್ ಮನೆಯಲ್ಲಿ ವಾಸವಾಗಿದ್ದ. ಸಚಿನ್ ನಾಗನಹಳ್ಳಿ ಗ್ರಾಮದ ತನ್ನದೆ ಏರಿಯಾದ ಯುವತಿಯನ್ನು ಪ್ರೀತಿಸುತ್ತಿದ್ದನಂತೆ. ಈ ವಿಚಾರ ಯುವತಿಯ ಮನೆಯವರಿಗೆ ಗೊತ್ತಾಗಿ ಸಾಕಷ್ಟು ಭಾರಿ ನ್ಯಾಯ ಪಂಚಾಯಿತಿ ಮಾಡಿದ್ದರಂತೆ. ಆದರೆ ಅದು ಬಗೆಹರೆದಿರಲಿಲ್ಲ. ನಿನ್ನೆ ಸಂಜೆ (ಸೆ.21) ಸಚಿನ್ ಮನೆಗೆ ಯುವತಿಯ ಸಹೋದರ ಮತ್ತು ಆತನ ಕೆಲ ಸ್ನೇಹಿತರು ಬಂದಿದ್ದಾಗ ಸಚಿನ್ ಮನೆಯಲ್ಲಿರದ ಕಾರಣ ಆತನ ತಾಯಿ ಮತ್ತು ಸಹೋದರನ ಜೊತೆ ಗಲಾಟೆ ತೆಗೆದಿದ್ದಾರೆ. ಬಳಿಕ ಗಲಾಟೆ ವಿಕೋಪಕ್ಕೆ ತೆರಳಿ ಸುಮಿತ್ನನ್ನ ಚಾ*ಕುವಿನಿಂದ ಚು*ಚ್ಚಿ ಎಸ್ಕೇಪ್ ಆಗಿದ್ದಾರೆ.
ಇತ್ತ ಸುಮಿತ್ಗೆ ಚಾ*ಕು ಚುಚ್ಚಿ*ದ್ದನ್ನು ಕಂಡ ತಾಯಿ, ಮಗನನ್ನ ಉಳಿಸಿಕೊಳ್ಳಲು ಕಲಬುರಗಿ ನಗರದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹನ್ನೆರೆಡು ಗಂಟೆಗಳ ಕಾಲ ನಡೆದ ಚಿಕಿತ್ಸೆ ಫಲಕಾರಿಯಾಗಿದೆ ಇಂದು ಬೆಳಗ್ಗೆ (ಸೆ.22) ಸಾವನ್ನ*ಪ್ಪಿದ್ದಾನೆ.
ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಅದೇನೆ ಆಗಲಿ ಯುವತಿಯ ವಿಚಾರದಲ್ಲಿ ಏನು ಮಾಡದ ಅಮಾಯಕ ಯುವಕ ಬಲಿಯಾಗಿರೋದು ನಿಜಕ್ಕೂ ದುರಂತವೆ ಸರಿ.
LATEST NEWS
ತಿರುಪತಿಯಿಂದ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ತುಪ್ಪ ಸಾಗಿಸುವ ಟ್ಯಾಂಕರ್ಗಳಿಗೆ ಜಿಪಿಎಸ್ ಅಳವಡಿಕೆ
ಆಂಧ್ರಪ್ರದೇಶ/ಮಂಗಳೂರು: ತಿರುಪತಿ ತಿರುಮಲದಲ್ಲಿ ಲಡ್ಡು ವಿವಾದ ಉಂಟಾದ ಬಳಿಕ ಸರಕಾರ ನಂದಿನಿ ತುಪ್ಪಕ್ಕೆ ಬೇಡಿಕೆ ಇಟ್ಟಿದೆ. ಒಂದು ತಿಂಗಳ ಹಿಂದೆ ಟಿಟಿಡಿ ಕೆಎಂಎಫ್ಗೆ ಟೆಂಡರ್ ನೀಡಿದ ನಂತರ ನಂದಿನಿ ತುಪ್ಪ ಪೂರೈಕೆಯನ್ನು ಪುನಃ ಆರಂಭಿಸಲಾಗಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ ಕೆ ಜಗದೀಶ್ ಹೇಳಿದ್ದಾರೆ.
ತಿರುಪತಿ ಲಡ್ಡು ವಿವಾದದ ಬಳಿಕ ಕೆಎಮ್ಎಫ್ ಹೈ ಅಲರ್ಟ್:
“ನಾವು ಒಂದು ತಿಂಗಳ ಹಿಂದೆ ತುಪ್ಪವನ್ನು(ಟಿಟಿಡಿಗೆ) ಸರಬರಾಜು ಮಾಡುತ್ತಿದ್ದೇವೆ. ನಾವು ವಾಹನಗಳಿಗೆ ಜಿಪಿಎಸ್ ಸಿಸ್ಟಮ್ ಮತ್ತು ಜಿಯೋ ಲೊಕೇಶನ್ ಸಾಧನಗಳನ್ನು ಅಳವಡಿಸಿದ್ದೇವೆ. ಇದರಿಂದ ವಾಹನ ಎಲ್ಲಿ ನಿಲ್ಲುತ್ತವೆ ಎಂಬುದನ್ನು ನಾವು ಕಂಡುಹಿಡಿಯಬಹುದು. ಇದು ಎಲ್ಲಿಯೂ ಕಲಬೆರಕೆ ಮಾಡದಂತೆ ನೋಡಿಕೊಳ್ಳಲು ಸಹಾಯಕವಾಗುತ್ತದೆ” ಎಂದು ಜಗದೀಶ್ ತಿಳಿಸಿದ್ದಾರೆ.
ಕೆಎಂಎಫ್, ಟಿಟಿಡಿಗೆ 350 ಟನ್ ತುಪ್ಪ ಪೂರೈಸುವ ಗುತ್ತಿಗೆ ಪಡೆದುಕೊಂಡಿದೆ. ಅಗತ್ಯ ಬಿದ್ದಾಗ ತುಪ್ಪ ಪೂರೈಕೆ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ. ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಮುಖ್ಯಮಂತ್ರಿ ಆರೋಪ ಮಾಡಿದ್ದರು. ಅಲ್ಲದೆ ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.
LATEST NEWS
ಪಂಚೆ ಉಟ್ಟು ದೇಸೀ ಸ್ಟೈಲ್ ಅಡುಗೆ ಮಾಡಿದ ಬ್ರಿಟಿಷ್ ಬಾಣಸಿಗ..! ಫಿದಾ ಆದ ನೆಟ್ಟಿಗರು
ಹೆಲ್ಸ್ ಕಿಚನ್ ಹಾಗೂ ಮಾಸ್ಟರ್ ಚೆಫ್ ನಂತಹ ಜನಪ್ರಿಯ ಕಾರ್ಯಕ್ರಮಗಳ ನಿರೂಪಕ ಗಾರ್ಡನ್ ರಾಮ್ಸೆ ಇದೀಗ ತನ್ನ ವೇಷಭೂಷಣದ ಮೂಲಕ ಗಮನ ಸೆಳೆದಿದ್ದಾರೆ. ಬ್ರಿಟಿಷ್ ಸೆಲೆಬ್ರಿಟಿ ಬಾಣಸಿಗ ಗಾರ್ಡನ್ ಜೇಮ್ಸ್ ರಾಮ್ಸೆ ಅವರು ತಮ್ಮ ಡಿಫರೆಂಟ್ ಶೈಲಿಯ ಕುಕಿಂಗ್ ಗಳಿಗೆ ಹೆಸರುವಾಸಿಯಾಗಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೊಸ ಹೊಸ ಅವತಾರದಲ್ಲಿ ಅಡುಗೆ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಸ್ಟೈಲ್ಆಗಿ ಪಂಚೆ ತೊಟ್ಟು ದಕ್ಷಿಣ ಕನ್ನಡ ಭಾರತೀಯ ಶೈಲಿಯ ಅಡುಗೆಗಳನ್ನು ಮಾಡಿದ್ದು ಈ ಕುರಿತ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಕಾಶ್ಮೀರದಿಂದ ಕರ್ನಾಟಕಕ್ಕೆ ಬರುತ್ತಿದ್ದ ಸೇನೆಯ ರೈಲನ್ನು ಸ್ಫೋಟಿಸಲು ಯತ್ನ
ಈ ಕುರಿತ ವಿಡಿಯೋವನ್ನು historyinmemes(ಹಿಸ್ಟೋರಿ ಇನ್ ಮೀಮ್ಸ್) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಸ್ಥಳೀಯ ಭಾರತೀಯ ಉಡುಗೆ ತೊಟ್ಟು ಅಡುಗೆ ಮಾಡಿದ ಗಾರ್ಡನ್ ರಾಮ್ಸೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಸೆ.20ರದು ಹಂಚಿಕೊಂಡಿದ್ದ ವೀಡಿಯೋ 12 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದೆ.